Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 4:14 - ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ಪರಲೋಕಗಳನ್ನು ದಾಟಿಹೋದ ದೇವಪುತ್ರ ಯೇಸು ಎಂಬ ಶ್ರೇಷ್ಠ ಮಹಾಯಾಜಕರು ನಮಗಿರುವುದರಿಂದ ನಾವು ಅರಿಕೆಮಾಡುವ ವಿಶ್ವಾಸವನ್ನು ಬಿಗಿಯಾಗಿ ಹಿಡಿಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಕಾಶಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿದ್ದಾನೆ. ಆದುದರಿಂದ ನಮಗಿರುವ ನಂಬಿಕೆಯನ್ನು ದೃಢವಾಗಿ ಹಿಡಿಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಕಾಶಮಂಡಲಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಪ್ರತಿಜ್ಞೆಯನ್ನು ಬಿಡದೆ ಹಿಡಿಯೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಪರಲೋಕಕ್ಕೆ ಏರಿಹೋದ ಪ್ರಧಾನ ಯಾಜಕನೊಬ್ಬನು ನಮಗಿದ್ದಾನೆ. ಆತನೇ ದೇವರ ಮಗನಾದ ಯೇಸು. ಆದ್ದರಿಂದ ನಮಗಿರುವ ನಂಬಿಕೆಯಲ್ಲೇ ದೃಢವಾಗಿ ಸಾಗೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತಸೆ ಹೊಲ್ಯಾರ್ ಅಮಿ ಬೊಲುನ್ ಸಾಂಗ್ತಾಂವ್ ತೊ ವಿಶ್ವಾಸ್ ಅಮಿ ಘಟ್ ಸಂಬಾಳುನ್ ಘೆವ್ನ್ ರ್‍ಹಾವ್ವಾ; ಕಶ್ಯಾಕ್ ಮಟ್ಲ್ಯಾರ್, ಅಮ್ಕಾ ಎಕ್ ಶ್ರೆಸ್ಟ್ ಮೊಟೊ ಯಾಜಕ್ ಹಾಯ್‍, ದೆವಾಚ್ಯಾ ಇದ್ರಾಕ್ ಗೆಲ್ಲೊ ಜೆಜು ದೆವಾಚೊ ಲೆಕ್ ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 4:14
31 ತಿಳಿವುಗಳ ಹೋಲಿಕೆ  

ಏಕೆಂದರೆ ಕ್ರಿಸ್ತ ಯೇಸು ನಿಜ ದೇವಾಲಯದ ಪ್ರತಿರೂಪದಂತಿರುವ, ಕೈಯಿಂದ ಕಟ್ಟಿದ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವಂತೆ ಪರಲೋಕದಲ್ಲಿಯೇ ಪ್ರವೇಶಿಸಿದರು.


ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


ನಾವು ನಮ್ಮ ನಿರೀಕ್ಷೆಯ ಅರಿಕೆಯನ್ನು ಚಂಚಲರಾಗದೆ ಬಿಗಿಯಾಗಿ ಹಿಡಿಯೋಣ. ಏಕೆಂದರೆ ವಾಗ್ದಾನ ಮಾಡಿದವರು ನಂಬಿಗಸ್ತರು.


ಕ್ರಿಸ್ತ ಯೇಸು ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವರಾಗಿ ಒಂದೇ ಸಾರಿ ಮಹಾ ಪವಿತ್ರ ಸ್ಥಳದೊಳಗೆ ಪ್ರವೇಶಿಸಿದರು.


ಯೇಸು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಮಹಾಯಾಜಕರಾಗಿ ಅತಿ ಪರಿಶುದ್ಧ ಸ್ಥಳಕ್ಕೆ ಮುಂದಾಗಿ ಹೋಗಿ ಯೇಸು ನಮ್ಮ ಪರವಾಗಿ ಪ್ರವೇಶಿಸಿದ್ದಾರೆ.


ಇಳಿದು ಬಂದ ಅವರೇ ಮೇಲಣ ಎಲ್ಲಾ ಆಕಾಶಗಳಿಗಿಂತ ಉನ್ನತವಾಗಿ ಏರಿಹೋಗಿ, ಇಡೀ ವಿಶ್ವವನ್ನೇ ತುಂಬಿಕೊಳ್ಳುವುದಕ್ಕಾಗಿ ಮೇಲೆ ಏರಿ ಹೋಗಿದ್ದಾರೆ.


ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ, ಜೀವಿತರಾಗಿ ಎದ್ದು ದೇವರ ಬಲಗಡೆಯಲ್ಲಿ ಇದ್ದಾರೆ ಮತ್ತು ಅವರೇ ನಮಗೋಸ್ಕರ ವಿಜ್ಞಾಪಿಸುವವರಾಗಿರುತ್ತಾರೆ.


ಮೊದಲಿನಿಂದಿರುವ ನಮ್ಮ ನಿರೀಕ್ಷೆಯನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡಿದುಕೊಳ್ಳುವುದಾದರೆ ಕ್ರಿಸ್ತ ಯೇಸುವಿನ ಭಾಗಿಗಳಾಗಿದ್ದೇವಲ್ಲಾ!


ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.


ಕ್ರಿಸ್ತ ಯೇಸುವು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡರು.


ನಾವು ಈಗ ಹೇಳುವ ವಿಷಯಗಳ ಮುಖ್ಯಾಂಶ ಇದು: ಪರಲೋಕದೊಳಗೆ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಕುಳಿತುಕೊಂಡಿರುವಂಥ ಮಹಾಯಾಜಕ ಒಬ್ಬರು ನಮಗಿದ್ದಾರೆ.


“ಗಲಿಲಾಯದವರೇ, ಆಕಾಶವನ್ನೇ ನೋಡುತ್ತಾ ಇಲ್ಲಿ ಏಕೆ ನಿಂತಿರುವಿರಿ? ನಿಮ್ಮ ಬಳಿಯಿಂದ ಪರಲೋಕಕ್ಕೆ ಏರಿಹೋದ ಈ ಯೇಸುವು ಪರಲೋಕಕ್ಕೆ ಹೋಗುವುದನ್ನು ನೀವು ನೋಡಿದ ರೀತಿಯಲ್ಲಿಯೇ ಹಿಂದಿರುಗಿ ಬರುವರು,” ಎಂದು ಹೇಳಿದರು.


ತಂದೆ ದೇವರು ತಮ್ಮ ಪುತ್ರ ಆಗಿರುವವರ ವಿಷಯದಲ್ಲಿ ಹೀಗೆ ಹೇಳಿದ್ದಾರೆ: “ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿಮ್ಮ ರಾಜದಂಡವಾಗಿದೆ.


ದೇವರು ತಮ್ಮ ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲದ ಹಿಂದೆಯೇ ವಾಗ್ದಾನಮಾಡಿದ ಪ್ರಕಾರ, ಅವರು ಸಮಸ್ತವನ್ನು ಪುನಃಸ್ಥಾಪಿಸಿದರು. ಆ ಕಾಲ ಬರುವವರೆಗೆ ಕ್ರಿಸ್ತ ಯೇಸು ಪರಲೋಕದಲ್ಲಿಯೇ ಇರುವರು.


ಯೇಸು ಅವರನ್ನು ಆಶೀರ್ವದಿಸುತ್ತಿರುವಾಗಲೇ ಅವರನ್ನು ಬಿಟ್ಟು ಮೇಲೆ ಪರಲೋಕಕ್ಕೆ ಏರಿದರು.


ಕರ್ತ ಯೇಸು ಅವರೊಂದಿಗೆ ಮಾತನಾಡಿದ ನಂತರ, ಅವರು ಪರಲೋಕಕ್ಕೆ ಏರಿ ದೇವರ ಬಲಪಾರ್ಶ್ವದಲ್ಲಿ ಕುಳಿತುಕೊಂಡರು.


ಆದ್ದರಿಂದ ದಾರಿಬಿಟ್ಟು ಹೋಗದಂತೆ, ನಾವು ಕೇಳಿದ ಸಂಗತಿಗಳಿಗೆ ಹೆಚ್ಚು ಲಕ್ಷ್ಯ ಕೊಡುವವರಾಗಿರಬೇಕು.


ದೇವಪುತ್ರರಾದ ಯೇಸುಕ್ರಿಸ್ತರ ಸುವಾರ್ತೆಯ ಆರಂಭ.


ಆಗ ಶೋಧಕನು ಯೇಸುವಿನ ಬಳಿ ಬಂದು, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲುಗಳು ರೊಟ್ಟಿಗಳಾಗುವಂತೆ ಆಜ್ಞಾಪಿಸು,” ಎಂದನು.


ನಿಮ್ಮ ಸ್ವಭಾವವನ್ನು ರುಜುಪಡಿಸಿದ ಈ ಸೇವೆಯ ನಿಮಿತ್ತವಾಗಿಯೂ, ಕ್ರಿಸ್ತ ಯೇಸುವಿನ ಸುವಾರ್ತೆಯ ಅರಿಕೆಯನ್ನು ಅನುಸರಿಸುವ ನಿಮ್ಮ ವಿಧೇಯತೆಗಾಗಿಯೂ ಇತರರು ದೇವರನ್ನು ಸ್ತುತಿಸುವರು. ಹೀಗೆ, ನೀವು ಅವರಿಗೂ ಪ್ರತಿಯೊಬ್ಬರಿಗೂ ಎಷ್ಟು ಉದಾರಿಗಳಾಗಿದ್ದೀರಿ ಎಂಬುದನ್ನು ತಿಳಿದುಕೊಳ್ಳುವರು.


ಕ್ರಿಸ್ತ ಯೇಸುವಿನಲ್ಲಿ ಒಬ್ಬನನ್ನು ನಾನು ಬಲ್ಲೆನು. ಹದಿನಾಲ್ಕು ವರ್ಷಗಳ ಹಿಂದೆ ನಾನು ಮೂರನೆಯ ಸ್ವರ್ಗಕ್ಕೆ ಒಯ್ಯಲಾದೆನು. ನಾನು ದೇಹ ಸಹಿತವಾಗಿ ಹೋದೆನೋ, ದೇಹ ರಹಿತನಾಗಿ ಹೋದೆನೋ ನನಗೆ ಗೊತ್ತಿಲ್ಲ ದೇವರಿಗೇ ಗೊತ್ತು.


ಆದ್ದರಿಂದ ಪರಿಶುದ್ಧರಾದ ಪ್ರಿಯರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಅರಿಕೆಮಾಡುವ ಅಪೊಸ್ತಲರೂ ಮಹಾಯಾಜಕರೂ ಆಗಿರುವ ಯೇಸುವನ್ನೇ ಆಲೋಚಿಸಿರಿ.


ಬಿದ್ದುಹೋದರೆ, ಅವರನ್ನು ತಿರುಗಿ ಪಶ್ಚಾತ್ತಾಪಕ್ಕೆ ನಡೆಸುವುದು ಅಸಾಧ್ಯ. ಏಕೆಂದರೆ ಅವರು ತಾವಾಗಿಯೇ ದೇವರ ಪುತ್ರ ಆಗಿರುವವರನ್ನು ಪುನಃ ಶಿಲುಬೆಗೆ ಹಾಕುವವರೂ ಅವರನ್ನು ಬಹಿರಂಗವಾಗಿ ಅವಮಾನ ಪಡಿಸುವವರೂ ಆಗಿರುತ್ತಾರೆ.


ಈ ಮೆಲ್ಕಿಜೆದೇಕನಿಗೆ ತಂದೆಯೂ, ತಾಯಿಯೂ, ವಂಶಾವಳಿಯೂ ಇಲ್ಲ. ಅವನ ಜನ್ಮಕ್ಕೆ ಆದಿಯಾಗಲಿ, ಜೀವನಕ್ಕೆ ಅಂತ್ಯವಾಗಲಿ ಇಲ್ಲ. ಅವನು ದೇವರ ಪುತ್ರ ಆಗಿರುವವರಿಗೆ ಹೋಲಿಕೆಯಾಗಿರುವ ನಿತ್ಯ ಯಾಜಕನಾಗಿ ಉಳಿಯುತ್ತಾನೆ.


ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ.


ಕ್ರಿಸ್ತ ಯೇಸು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾರೆ, ದೇವದೂತರೂ ಪ್ರಭುತ್ವಗಳೂ ಅಧಿಕಾರಗಳೂ ಅವರಿಗೆ ಅಧೀನವಾಗಿವೆ.


ರಾಜಕುಮಾರನು ಅವರ ಮಧ್ಯದಲ್ಲೆ ಅವರು ಒಳಗೆ ಹೋಗುವಾಗ ಒಳಗೆ ಹೋಗಬೇಕು, ಹೊರಗೆ ಹೋಗುವಾಗ ಹೊರಗೆ ಬರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು