Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 5:1 - ಕನ್ನಡ ಸಮಕಾಲಿಕ ಅನುವಾದ

1 ಪ್ರತಿಯೊಬ್ಬ ಮಹಾಯಾಜಕ ಮನುಷ್ಯರೊಳಗಿಂದ ಆರಿಸಲಾಗಿ ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗಾಗಿ ಸಮರ್ಪಿಸಲು ಮನುಷ್ಯರ ಪರವಾಗಿ ದೇವರ ಕಾರ್ಯಗಳಿಗಾಗಿ ನೇಮಿಸಲಾಗುತ್ತಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮನುಷ್ಯರೊಳಗಿಂದ ಪ್ರತಿಯೊಬ್ಬ ಮಹಾಯಾಜಕನೂ ಆರಿಸಲ್ಪಟ್ಟು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ನಡೆಸುವುದಕ್ಕಾಗಿ ನೇಮಿಸಲಾಗಿದ್ದು. ಅವನು ಪಾಪಗಳ ನಿವಾರಣೆಗಾಗಿ ಕಾಣಿಕೆಗಳನ್ನು ಮತ್ತು ಯಜ್ಞಗಳನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪ್ರತಿಯೊಬ್ಬ ಪ್ರಧಾನಯಾಜಕ ಜನರ ಮಧ್ಯದಿಂದ ಆರಿಸಲಾದವನು; ಜನರ ಪರವಾಗಿ ದೇವರ ಸನ್ನಿಧಿಯಲ್ಲಿ ಸೇವೆಸಲ್ಲಿಸಲು ಮತ್ತು ಪಾಪಪರಿಹಾರಕ್ಕಾಗಿ ಬಲಿಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಲು ನೇಮಕಗೊಂಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪ್ರತಿಯೊಬ್ಬ ಮಹಾಯಾಜಕನು ಮನುಷ್ಯರೊಳಗಿಂದ ಆರಿಸಲ್ಪಟ್ಟವನಾಗಿದ್ದು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ಜರಗಿಸುವದಕ್ಕಾಗಿ ನೇವಿುಸಲ್ಪಡುತ್ತಾನಲ್ಲಾ. ಅವನು ಅವರಿಗೋಸ್ಕರ ಕಾಣಿಕೆಗಳನ್ನೂ ಪಾಪನಿವಾರಣಕ್ಕಾಗಿ ಯಜ್ಞಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಪ್ರತಿಯೊಬ್ಬ ಯೆಹೂದ್ಯ ಪ್ರಧಾನಯಾಜಕನೂ ಮನುಷ್ಯರೊಳಗಿಂದ ಆರಿಸಲ್ಪಟ್ಟು ದೇವರಿಗೆ ಸಂಬಂಧಿಸಿದ ಕಾರ್ಯಗಳನ್ನು ಮನುಷ್ಯರಿಗೋಸ್ಕರ ಮಾಡಲು ನೇಮಿಸಲ್ಪಡುತ್ತಾನೆ. ಆ ಯಾಜಕನು ಪಾಪಗಳಿಗಾಗಿ ದೇವರಿಗೆ ಕಾಣಿಕೆಗಳನ್ನೂ ಯಜ್ಞಗಳನ್ನೂ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹರ್ ಎಕ್ಲ್ಯಾ ಶ್ರೆಸ್ಟ್ ಯಾಜಕಾಕ್ ಮಾನ್ಸಾಂಚ್ಯಾ ಮದ್ನಾ ಯೆಚುನ್ ಕಾಡ್ತ್ಯಾತ್, ಅನಿ ಮಾನ್ಸಾಂಚ್ಯಾ ತರ್ಪೆನ್ ದೆವಾಚ್ಯಾ ಇದ್ರಾಕ್ ಸೆವಾ ಕರುಕ್, ಪಾಪಾಂಚ್ಯಾ ಸಾಟ್ನಿ ದೆನ್ಗಿಯಾ ಅನಿ ಬಲಿಯಾ ಭೆಟ್ಟುಕ್ ಮನುನ್ ನೆಮ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 5:1
17 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಯೇಸುವಿಗೆ ಸಹ ಏನಾದರೂ ಇರುವುದು ಅವಶ್ಯವಾಗಿದೆ.


ಇದಲ್ಲದೆ ಪ್ರತಿ ಯಾಜಕನು ಅನುದಿನವೂ ಸೇವೆಮಾಡುತ್ತಾ ನಿಂತಿರುವನು. ಆದರೆ ಎಂದಿಗೂ ಪಾಪಗಳನ್ನು ತೆಗೆದುಹಾಕಲಾರದಂಥ ಯಜ್ಞಗಳನ್ನು ಪದೇಪದೇ ಅರ್ಪಿಸುತ್ತಿದ್ದನು.


ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಉತ್ತಮ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ಅವನು ನೀತಿವಂತನೆಂದು ಸಾಕ್ಷಿಹೊಂದಿದನು. ದೇವರು ಸಹ ಅವನ ಕಾಣಿಕೆಗಳನ್ನು ಸ್ವೀಕಾರಮಾಡಿದರು. ಅವನು ಸತ್ತು ಹೋಗಿದ್ದರೂ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.


ಈ ಗುಡಾರವು ಈ ಕಾಲವನ್ನು ಸೂಚಿಸುವ ಒಂದು ಮಾದರಿಯಾಗಿದೆ. ಆಗ ಆರಾಧಿಸುವವರ ಮನಸ್ಸಾಕ್ಷಿಯನ್ನು ಪರಿಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲಾಗುತ್ತಿದ್ದವು.


ಮೊದಲು ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಾರ್ಪಣೆ ಮಾಡುವ ಆ ಮಹಾಯಾಜಕರಂತೆ ಯೇಸು ಪ್ರತಿದಿನವೂ ಬಲಿ ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಇವರು ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡಾಗ ಅದನ್ನು ಒಂದೇ ಸಾರಿ ಮಾಡಿ ಮುಗಿಸಿದರು.


ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.


ಮೋಶೆಯು ಆರೋನನಿಗೆ, “ಬಲಿಪೀಠದ ಕಡೆಗೆ ಹೋಗಿ, ಯೆಹೋವ ದೇವರು ಆಜ್ಞಾಪಿಸಿದಂತೆಯೇ ನಿನ್ನ ಪಾಪ ಪರಿಹಾರದ ಬಲಿಯನ್ನೂ ದಹನಬಲಿಯನ್ನೂ ಅರ್ಪಿಸು. ನಿನಗಾಗಿ ಪ್ರಾಯಶ್ಚಿತ್ತವನ್ನು ಮಾಡು, ಜನರ ಸಮರ್ಪಣೆಗಳನ್ನು ಸಮರ್ಪಿಸಿ, ಅವರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು,” ಎಂದನು.


“ಆರೋನನನ್ನೂ, ಅವನೊಂದಿಗೆ ಅವನ ಪುತ್ರರನ್ನೂ, ಉಡುಪುಗಳನ್ನೂ, ಅಭಿಷೇಕ ತೈಲವನ್ನೂ, ಪಾಪ ಪರಿಹಾರದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೋ.


ಆದ್ದರಿಂದ ಕ್ರಿಸ್ತ ಯೇಸುವಿನಲ್ಲಿ ದೇವರ ಸೇವೆಯ ವಿಷಯವಾಗಿ ಹೊಗಳಿಕೊಳ್ಳುತ್ತೇನೆ.


ಏಕೆಂದರೆ ನಾನು ಪಡೆದುಕೊಂಡಿದ್ದರಲ್ಲಿ ಬಹು ಪ್ರಾಮುಖ್ಯವಾದದ್ದನ್ನೇ ನಿಮಗೆ ಕೊಟ್ಟಿದ್ದೇನೆ. ಅದೇನೆಂದರೆ, ಪವಿತ್ರ ವೇದದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತರು,


ಯೇಸು ಭೂಮಿಯ ಮೇಲೆ ಇರುವುದಾದರೆ ಯಾಜಕರೇ ಆಗುತ್ತಿರಲಿಲ್ಲ. ಏಕೆಂದರೆ ಮೋಶೆಯ ನಿಯಮದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ.


ಕ್ರಿಸ್ತ ಯೇಸುವು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು