Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 5:13 - ಕನ್ನಡ ಸಮಕಾಲಿಕ ಅನುವಾದ

13 ಹಾಲು ಕುಡಿಯುವವರು ಕೂಸಿನಂತಿದ್ದು ನೀತಿ ಬೋಧನೆಯಲ್ಲಿ ಅನುಭವ ಇಲ್ಲದವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಹಾಲು ಕುಡಿಯುವವನು ಕೂಸಿನಂತಿದ್ದು ನೀತಿಯ ಸಂದೇಶದಲ್ಲಿ ಅನುಭವ ಇಲ್ಲದವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹಾಲು ಕುಡಿಯಬೇಕಾದವನು ಹಸುಗೂಸು. ನ್ಯಾಯನೀತಿಯ ಅನುಭವ ಅವನಿಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಹಾಲು ಬೇಕಾದವನು ಕೂಸಿನಂತಿದ್ದು ನೀತಿವಾಕ್ಯದಲ್ಲಿ ಅನುಭವವಿಲ್ಲದವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಹಾಲು ಕುಡಿಯುವ ಮಕ್ಕಳಂತಿರುವಿರಿ. ನಿಮಗೆ ಯೋಗ್ಯ ಬೋಧನೆಗಳ ಬಗ್ಗೆ ಏನೂ ತಿಳಿದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜೆ ಕೊನ್ ದುದ್ದ್ ಎವ್ಡೆಚ್ ಫಿತಾ ತೊ ಅಜುನ್‍ಬಿ ಬಾರಿಕ್ಲ್ಯಾ ದುದ್ದ್ ಫಿತಲ್ಯಾ ಪೊರಾ ಸಾರ್ಕೊಚ್; ನ್ಯಾಯ್‍ನಿತಿಚೊ ತೆಕಾ ಅನ್‍ಬೊಗ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 5:13
15 ತಿಳಿವುಗಳ ಹೋಲಿಕೆ  

ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ರಕ್ಷಣೆಯಲ್ಲಿ ಬೆಳೆಯುವ ಹಾಗೆ ಆತ್ಮಿಕವಾದ ಶುದ್ಧಹಾಲನ್ನು ಬಯಸಿರಿ.


ಸಹೋದರರೇ, ಮಕ್ಕಳಂತೆ ಯೋಚಿಸುವುದನ್ನು ಬಿಟ್ಟುಬಿಡಿರಿ. ಕೇಡಿನ ವಿಷಯದಲ್ಲಿ ಶಿಶುಗಳಂತೆ ಇದ್ದರೂ, ನಿಮ್ಮ ಯೋಚನೆಯಲ್ಲಿ ಪ್ರಾಯಸ್ಥರಾಗಿರಿ.


ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ.


ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಮತ್ತು ಯಾರಿಗೆ ಬೋಧನೆಯನ್ನು ತಿಳಿದುಕೊಳ್ಳುವ ಹಾಗೆ ಮಾಡುತ್ತಾನೆ? ಆಗತಾನೇ ಹಾಲು ಬಿಟ್ಟ ಕೂಸುಗಳಿಗೋ, ಎಳೆಯ ಮಕ್ಕಳಿಗೋ?


ಆಗ, ನಾವು ಚಿಕ್ಕಮಕ್ಕಳಂತೆ ಇರುವುದಿಲ್ಲ: ಮನುಷ್ಯರ ವಿವಿಧ ಬೋಧನೆಗಳಿಂದ ಗಾಳಿಯಿಂದ ತೂರಾಡಿಕೊಳ್ಳುವಂತಾಗುವುದಿಲ್ಲ. ಮನುಷ್ಯರ ಕುಯುಕ್ತಿಗೆ, ತಂತ್ರಕ್ಕೆ, ಒಳಸಂಚಿಗೆ ಒಳಗಾಗುವುದಿಲ್ಲ. ಅವರ ಪ್ರತಿಯೊಂದು ಬೋಧನೆಯ ಗಾಳಿಯಿಂದಲೂ ತೂರಾಡಿಕೊಂಡು ಅತ್ತಿತ್ತ ಅಲೆದಾಡುವ ಚಿಕ್ಕಮಕ್ಕಳಂತೆ ಇರಬಾರದು.


ಪ್ರಿಯರೇ, ನೀವು ದೇವರಾತ್ಮರಿಗೆ ತಕ್ಕಂತೆ ಬಾಳುವವರಾಗಿ ನಾನು ನಿಮ್ಮ ಸಂಗಡ ಮಾತನಾಡುತ್ತಾ ಇಲ್ಲ. ನೀವು ಇನ್ನೂ ಕ್ರಿಸ್ತ ಯೇಸುವಿನಲ್ಲಿ ಕೂಸುಗಳೂ ಪ್ರಾಪಂಚಿಕರೂ ಆಗಿರುವಿರೆಂದು ಭಾವಿಸಿ ನಿಮ್ಮ ಸಂಗಡ ಮಾತನಾಡಬೇಕಾಯಿತು.


ಮನುಷ್ಯರನ್ನು ದಂಡನಾ ತೀರ್ಪಿಗೆ ಒಳಪಡಿಸುವಂಥ ಸೇವೆಯೇ ಮಹಿಮೆಯುಳ್ಳದ್ದಾಗಿದ್ದರೆ, ನೀತಿವಂತರೆಂದು ನಿರ್ಣಯಿಸುವ ಸೇವೆಯು ಇನ್ನೆಷ್ಟು ಮಹಿಮೆಯುಳ್ಳದ್ದಾಗಿರಬೇಕು!


ನಾನು ಬಾಲಕನಾಗಿದ್ದಾಗ, ಬಾಲಕನ ಮಾತುಗಳನ್ನಾಡಿದೆನು, ಬಾಲಕನಂತೆ ಯೋಚಿಸಿದೆನು, ಬಾಲಕನಂತೆಯೇ ತರ್ಕಿಸಿದೆನು. ಪ್ರೌಢನಾದಾಗ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.


ನಿಮ್ಮ ರಕ್ಷಣೆಯನ್ನೂ ನಿಮ್ಮ ನೀತಿಯ ವಾಗ್ದಾನವನ್ನೂ ಕಾಯುತ್ತಾ, ನನ್ನ ಕಣ್ಣುಗಳು ಮಂದವಾದವು.


ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ,” ಎಂದರು.


ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.


ತಿಳುವಳಿಕೆಯಿಲ್ಲದವರಿಗೆ ಶಿಕ್ಷಕನೂ ಬಾಲಕರಿಗೆ ಉಪಾಧ್ಯಾಯನೂ ಆಗಿದ್ದೀಯೆಂದು ಧೈರ್ಯವಾಗಿದ್ದೀಯಲ್ಲಾ?


ಏಕೆಂದರೆ ಅವರಿಗೆ “ವಂದನೆ” ಎಂದು ಹೇಳುವವರು ಅವರ ದುಷ್ಕೃತ್ಯಗಳಲ್ಲಿ ಪಾಲುಗಾರರಾಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು