Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 5:4 - ಕನ್ನಡ ಸಮಕಾಲಿಕ ಅನುವಾದ

4 ಆರೋನನಂತೆ ದೇವರಿಂದ ಕರೆ ಹೊಂದದ ಹೊರತು ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಲ್ಲದೆ, ಪ್ರಧಾನಯಾಜಕನೆಂಬ ಗೌರವಪದವಿಯನ್ನು ತನ್ನಷ್ಟಕ್ಕೆ ತಾನೇ ಯಾರೂ ವಹಿಸಿಕೊಳ್ಳರು. ಆರೋನನಂತೆ ಅವರೂ ದೇವರಿಂದ ಕರೆ ಹೊಂದಿದವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ದೇವರಿಂದ ನೇವಿುಸಲ್ಪಟ್ಟು ವಹಿಸಿಕೊಳ್ಳುತ್ತಾನೆ; ಆರೋನನು ಸಹ ದೇವರಿಂದಲೇ ನೇವಿುಸಲ್ಪಟ್ಟು ಆ ಗೌರವವನ್ನು ವಹಿಸಿಕೊಂಡನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಪ್ರಧಾನಯಾಜಕನಾಗಿ ನೇಮಿಸಲ್ಪಡುವುದು ಒಂದು ಗೌರವ. ಆದರೆ ಯಾರೂ ತಮ್ಮನ್ನು ತಾವೇ ಈ ಕಾರ್ಯಕ್ಕೆ ಆರಿಸಿಕೊಳ್ಳುವುದಿಲ್ಲ. ದೇವರು ಆರೋನನನ್ನು ಕರೆದಂತೆ, ಆ ವ್ಯಕ್ತಿಯನ್ನು ಕರೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಆರೊನಾಚ್ಯಾ ಸಾರ್ಕೆ ದೆವಾನ್ ಬಲ್ವಲ್ಲ್ಯಾ ಶಿವಾಯ್ ಖಲ್ಯಾಬಿ ಮಾನ್ಸಾನ್ ಹೆ ಮೊಟ್ಯಾ ಯಾಜಕಾಚೆ ಕಾಮ್ ಮೊಟೆಪಾನ್ ಅಪ್ನಿಚ್ ಹಾತಿತ್ ಘೆವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 5:4
16 ತಿಳಿವುಗಳ ಹೋಲಿಕೆ  

“ನನಗೆ ಯಾಜಕ ಸೇವೆ ಮಾಡುವುದಕ್ಕೆ ನೀನು ಇಸ್ರಾಯೇಲರಿಂದ ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಎಂಬುವರನ್ನು ನಿನ್ನ ಹತ್ತಿರ ಬರಮಾಡಬೇಕು.


ಆರೋನನ ಸಂತಾನವಲ್ಲದ ಪರಕೀಯನು ಯೆಹೋವ ದೇವರ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸಬಾರದು, ಅರ್ಪಿಸಿದರೆ ಕೋರಹ ಮತ್ತು ಅವನ ಸಮೂಹಕ್ಕೆ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವದಕ್ಕಾಗಿ ಅದು ಗುರುತಾಯಿತು.


ಕೋರಹನಿಗೂ, ಅವನ ಸಮಸ್ತ ಸಮೂಹಕ್ಕೂ, “ಯೆಹೋವ ದೇವರು ತಮ್ಮ ಹತ್ತಿರ ಬರಮಾಡಿಕೊಳ್ಳುವ ಹಾಗೆ ತನ್ನವರು ಯಾರಾರೆಂಬುದನ್ನು ಮತ್ತು ಪರಿಶುದ್ಧ ಯಾರು ಎಂಬುದನ್ನು ನಾಳೆ ತೋರಿಸುವರು. ಅವರು ಯಾರನ್ನು ಆಯ್ದುಕೊಳ್ಳುವರೋ, ಅವರನ್ನು ಹತ್ತಿರ ಬರಮಾಡಿಕೊಳ್ಳುವರು. ನೀವು ಇದನ್ನು ಮಾಡಿರಿ:


ಅವನನ್ನು ಎದುರಿಸಿ, “ಉಜ್ಜೀಯನೇ, ಯೆಹೋವ ದೇವರಿಗೆ ಧೂಪ ಸುಡುವುದು ಪ್ರತಿಷ್ಠಿತರಾದ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು. ನೀನು ಪರಿಶುದ್ಧ ಸ್ಥಳದಿಂದ ಹೊರಟು ಹೋಗು, ಅಪರಾಧ ಮಾಡಿದೆ. ದೇವರಾದ ಯೆಹೋವ ದೇವರಿಂದ ನಿನಗೆ ಗೌರವ ದೊರಕದು,” ಎಂದನು.


ಅಮ್ರಾಮನ ಪುತ್ರರು: ಆರೋನ್ ಮತ್ತು ಮೋಶೆ; ಆರೋನನನ್ನು ಮತ್ತು ಅವನ ಪುತ್ರರನ್ನು ಮಹಾಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಶಾಶ್ವತವಾಗಿ ಪ್ರತ್ಯೇಕಿಸಲಾಯಿತು. ಇವರು ಯೆಹೋವ ದೇವರ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಅವರ ಸೇವೆ ಮಾಡುವವರೂ, ಅವರ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು.


ಅದಕ್ಕೆ ಯೋಹಾನನು, “ಪರಲೋಕದಿಂದ ಒಬ್ಬ ಮನುಷ್ಯನಿಗೆ ದಯಪಾಲಿಸದ ಹೊರತು ಅವನು ಯಾವುದನ್ನೂ ಹೊಂದಲಾರನು.


ಯೆಹೋವ ದೇವರ ಬಳಿಯಿಂದ ಬೆಂಕಿಯು ಹೊರಟು, ಧೂಪವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.


ಆದ್ದರಿಂದ ನೀನು ನಿನ್ನ ಪುತ್ರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ತೆರೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವ ಸೇವೆಯನ್ನು ನಿಮಗೆ ದಾನವಾಗಿ ಕೊಟ್ಟಿದ್ದೇನೆ. ಪರಕೀಯನು ಸಮೀಪಕ್ಕೆ ಬಂದರೆ ಮರಣಶಿಕ್ಷೆಯಾಗಬೇಕು,” ಎಂದರು.


ದೇವರು ನಿನ್ನನ್ನೂ, ನಿನ್ನ ಸಂಗಡ ಲೇವಿಯ ಪುತ್ರರಾದ ನಿನ್ನ ಸಹೋದರರೆಲ್ಲರನ್ನೂ ತಮ್ಮ ಹತ್ತಿರ ಬರಮಾಡಿಕೊಂಡಿದ್ದಾರೆ. ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ?


ನಾಳೆ ಅವುಗಳಲ್ಲಿ ಬೆಂಕಿಯನ್ನು ಹಾಕಿ, ಅವುಗಳ ಮೇಲೆ ಧೂಪವನ್ನು ಯೆಹೋವ ದೇವರ ಮುಂದೆ ಹಾಕಿರಿ. ಆಗ ಯೆಹೋವ ದೇವರು ಯಾವನನ್ನು ಆಯ್ದುಕೊಳ್ಳುವರೋ ಅವನೇ ಪರಿಶುದ್ಧನಾಗಿರುವನು. ಲೇವಿಯರೇ, ನೀವು ಬಹಳ ಮಿತಿಮೀರಿ ಹೋಗುತ್ತಿರುವಿರಿ,” ಎಂದನು.


“ಆರೋನನನ್ನೂ, ಅವನೊಂದಿಗೆ ಅವನ ಪುತ್ರರನ್ನೂ, ಉಡುಪುಗಳನ್ನೂ, ಅಭಿಷೇಕ ತೈಲವನ್ನೂ, ಪಾಪ ಪರಿಹಾರದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೋ.


ಯಾಜಕರಾಗಿ ಅಭಿಷೇಕ ಹೊಂದಿದ ಆರೋನನ ಮಕ್ಕಳುಗಳ ಹೆಸರುಗಳು ಇವೇ, ಇವರೇ ಯಾಜಕೋದ್ಯೋಗ ಮಾಡುವುದಕ್ಕೆ ಪ್ರತಿಷ್ಠಿತರಾದವರು.


ಇವನು ಅಬೀಷೂವನ ಮಗನು; ಇವನು ಫೀನೆಹಾಸನ ಮಗನು; ಇವನು ಎಲಿಯಾಜರನ ಮಗನು; ಇವನು ಮುಖ್ಯಯಾಜಕನಾದ ಆರೋನನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು