Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 5:9 - ಕನ್ನಡ ಸಮಕಾಲಿಕ ಅನುವಾದ

9 ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9-10 ಇದಲ್ಲದೆ ಆತನು ಸಿದ್ಧಿಗೆ ಬಂದು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆನಿಸಿಕೊಂಡವನಾಗಿ ತನಗೆ ವಿಧೇಯರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹೀಗಿರಲಾಗಿ ಆತನು ಪರಿಶುದ್ಧನಾಗಿದ್ದನು. ದೇವರಿಗೆ ವಿಧೇಯರಾಗುವ ಜನರೆಲ್ಲರೂ ಶಾಶ್ವತವಾದ ರಕ್ಷಣೆಯನ್ನು ಹೊಂದಿಕೊಳ್ಳಲು ಆತನೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅನಿ ಸಂಪುರ್ನ್ ತೆಚ್ಯಾ ಟೊಕೆಕ್ ತೆಚಿ ಗೊಸ್ಟ್ ಪಾಳ್ತಲ್ಯಾ ಸಗ್ಳ್ಯಾಕ್ನಿ ಸದಾ ಸರ್ವತಾಚ್ಯಾ ಸುಟ್ಕೆಚೊ ಕಾರನ್ ತೊ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 5:9
39 ತಿಳಿವುಗಳ ಹೋಲಿಕೆ  

ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.


ದೇವರು ಸಮಸ್ತವನ್ನೂ ತಮಗೋಸ್ಕರವೂ ತಮ್ಮ ಮೂಲಕವೂ ಉಂಟುಮಾಡಿ ಬಹುಮಂದಿ ಮಕ್ಕಳನ್ನು ಮಹಿಮೆಗೆ ತರುವಂತೆ ಅವರ ರಕ್ಷಣಾ ನಾಯಕರಾದ ಕ್ರಿಸ್ತ ಯೇಸುವನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ದೇವರಿಗೆ ಯುಕ್ತವಾಗಿತ್ತು.


ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ.


ಕ್ರಿಸ್ತ ಯೇಸು ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವರಾಗಿ ಒಂದೇ ಸಾರಿ ಮಹಾ ಪವಿತ್ರ ಸ್ಥಳದೊಳಗೆ ಪ್ರವೇಶಿಸಿದರು.


ಈ ಸಂಗತಿಗಳಿಗೆ ನಾವೇ ಸಾಕ್ಷಿಗಳು; ತನಗೆ ವಿಧೇಯರಾಗಿರುವವರಿಗೆ ದೇವರು ದಯಪಾಲಿಸಿದ ಪವಿತ್ರಾತ್ಮ ದೇವರು ಸಾಕ್ಷಿ,” ಎಂದರು.


ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ನಂಬಿಕೆಯಿಂದಲೇ ಅಬ್ರಹಾಮನು ಕರೆಕೊಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.


ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.


ಯಾರು ಸ್ವಾರ್ಥಿಗಳಾಗಿದ್ದು ಸತ್ಯವನ್ನು ಅನುಸರಿಸದೆ ಅನೀತಿಯನ್ನು ಅನುಸರಿಸುತ್ತಾರೋ ಅವರ ವಿರುದ್ಧ ದೇವರಿಗೆ ಕೋಪವೂ ಆಕ್ರೋಶವೂ ಬರುತ್ತವೆ.


ಯೇಸುವಿನ ನಾಮದ ಮಹಿಮೆಗಾಗಿ ಯೆಹೂದ್ಯರಲ್ಲದವರಲ್ಲಿಯೂ ನಂಬಿಕೆಯ ವಿಧೇಯತೆ ಉಂಟಾಗುವುದಕ್ಕಾಗಿ ನಾವು ಯೇಸುವಿನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲರಾಗಿರುವುದನ್ನೂ ಹೊಂದಿದೆವು.


ನಾವು ದೈವಜ್ಞಾನವನ್ನು ವಿರೋಧಿಸುವ ವಾಗ್ವಾದಗಳನ್ನೂ ಪ್ರತಿಯೊಂದು ನಟನೆಯನ್ನೂ ಧ್ವಂಸಮಾಡುತ್ತೇವೆ. ಪ್ರತಿಯೊಂದು ಯೋಚನೆಗಳನ್ನು ಕ್ರಿಸ್ತ ಯೇಸುವಿಗೆ ವಿಧೇಯವಾಗುವಂತೆ ಸೆರೆಹಿಡಿಯುವವರು ಆಗಿದ್ದೇವೆ.


ಯೆಹೂದ್ಯರಲ್ಲದವರನ್ನು ದೇವರಿಗೆ ವಿಧೇಯರಾಗುವುದಕ್ಕಾಗಿ ಕ್ರಿಸ್ತನು ನನ್ನ ಮೂಲಕ ಮಾತಿನಿಂದಲೂ ಕೃತ್ಯದಿಂದಲೂ


ನಿಮ್ಮೊಳಗೆ ಯೆಹೋವ ದೇವರಿಗೆ ಭಯಪಟ್ಟು, ಅವರ ಸೇವಕನ ಮಾತನ್ನು ಕೇಳಿ, ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಟ್ಟು, ತನ್ನ ದೇವರ ಮೇಲೆ ಆತುಕೊಳ್ಳಲಿ.


ಆದಕಾರಣ ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ.


ಆದರೆ ಇಸ್ರಾಯೇಲರಲ್ಲಿ ಎಲ್ಲರೂ ಸುವಾರ್ತೆಯನ್ನು ಸ್ವೀಕರಿಸಲಿಲ್ಲ. ಏಕೆಂದರೆ, “ಕರ್ತನೇ, ನಮ್ಮ ಸಂದೇಶವನ್ನು ಯಾರು ನಂಬಿದರು?” ಎಂದು ಯೆಶಾಯ ಪ್ರವಾದಿಯು ಹೇಳುತ್ತಾನೆ.


ಆದರೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಒಪ್ಪಿಸಿದ ಬೋಧನೆಗೆ ಹೃದಯದಿಂದ ವಿಧೇಯರಾದುದ್ದಕ್ಕಾಗಿ, ದೇವರಿಗೆ ಸ್ತೋತ್ರವಾಗಲಿ.


ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.


ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿಕೊಟ್ಟರು.


ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.


ದೂರದಲ್ಲಿರುವವರು ಬಂದು ಯೆಹೋವ ದೇವರ ಆಲಯವನ್ನು ಕಟ್ಟುವುದಕ್ಕೆ ಸಹಾಯ ಮಾಡುವರು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ನೀವು ತಿಳಿಯುವಿರಿ. ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಜಾಗ್ರತೆಯಾಗಿ ಕಿವಿಗೊಟ್ಟರೆ, ಇದು ನೆರವೇರುವುದು.”


“ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿರಿ, ರಕ್ಷಣೆಯನ್ನು ಪಡೆಯಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ಆದರೂ ಅಂತರಂಗದಲ್ಲಿ ನೀವು ಯಥಾರ್ಥವನ್ನು ಬಯಸುತ್ತೀರಿ. ನೀವು ಹೃದಯದ ಆಂತರ್ಯದಲ್ಲಿ ನನಗೆ ಜ್ಞಾನವನ್ನು ಬೋಧಿಸಿದ್ದೀರಿ.


ನಿತ್ಯಜೀವಕ್ಕಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕರುಣೆಗೋಸ್ಕರ ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.


ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.


ಏಕೆಂದರೆ ನಮ್ಮೊಂದಿಗೆ ಅವರು ಪರಿಪೂರ್ಣರಾಗಬೇಕೆಂದು ದೇವರು ನಮಗೋಸ್ಕರ ಉತ್ತಮವಾದದ್ದನ್ನು ಸಂಕಲ್ಪಿಸಿದ್ದಾರೆ.


ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಹಾಗೂ ನಮ್ಮ ತಂದೆ ದೇವರು ನಮ್ಮನ್ನು ಪ್ರೀತಿಸಿ ಕೃಪೆಯಿಂದ ಕೊಟ್ಟಿರುವ ನಮಗೆ ನಿತ್ಯ ಆದರಣೆಯನ್ನೂ ಒಳ್ಳೆಯ ನಿರೀಕ್ಷೆಯನ್ನೂ ನೀಡಿ,


ಜೀವದ ಒಡೆಯನನ್ನು ನೀವು ಕೊಂದಿರಿ. ದೇವರಾದರೋ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.


ಅದಕ್ಕೆ ಯೇಸು ಅವರಿಗೆ, “ಇಗೋ, ‘ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಓಡಿಸುತ್ತೇನೆ ಸ್ವಸ್ಥಮಾಡುತ್ತೇನೆ, ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ,’ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.


ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”


ನಾನು ಆನಂದವನ್ನೂ ಹರ್ಷವನ್ನೂ ಕೇಳುವಂತೆ ಮಾಡಿರಿ; ನೀವು ಜಜ್ಜಿದ ಎಲುಬುಗಳು ಆನಂದಪಡಲಿ.


ತಲತಲಾಂತರವೂ ನಿಮ್ಮ ಹೆಸರನ್ನು ನಾನು ಸ್ಮರಿಸುವಂತೆ ಮಾಡುವೆನು. ಆದ್ದರಿಂದ ಜನರು ಯುಗಯುಗಾಂತರವೂ ನಿಮ್ಮನ್ನು ಹೊಗಳುವರು.


ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ,” ಎಂದನು.


ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ, ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ.


ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?


ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು