Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 6:7 - ಕನ್ನಡ ಸಮಕಾಲಿಕ ಅನುವಾದ

7 ಭೂಮಿಯು ತನ್ನ ಮೇಲೆ ಆಗಾಗ್ಗೆ ಬೀಳುವ ಮಳೆಯನ್ನು ಹೀರಿಕೊಂಡು ಅದು ತನ್ನ ಒಡೆಯನಿಗೆ ಯೋಗ್ಯವಾದ ಬೆಳೆಯನ್ನು ಕೊಡುವುದಾದರೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು, ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ, ಅವರಿಗೆ ಅನುಕೂಲವಾದ ಬೆಳೆಯನ್ನು ಕೊಡುತ್ತದೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಭೂಮಿಯು ಕಾಲಾನುಕಾಲಕ್ಕೆ ತನ್ನ ಮೇಲೆ ಬೀಳುವ ಮಳೆಯ ನೀರನ್ನು ಹೀರಿಕೊಂಡು ವ್ಯವಸಾಯಗಾರನಿಗೆ ಅನುಕೂಲವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಪಡೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಭೂವಿುಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿವಿುತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಜನರು ತನ್ನ ಮೇಲೆ ಪದೇಪದೇ ಸುರಿಯುವ ಮಳೆಯನ್ನು ಹೀರಿಕೊಳ್ಳುವ ಭೂಮಿಯಂತಿದ್ದಾರೆ. ಅದು ಜನರಿಗೆ ಆಹಾರವನ್ನು ಕೊಡಲೆಂದು ರೈತನು ಅದರಲ್ಲಿ ಸಸಿಯನ್ನು ನೆಟ್ಟು ಬೆಳೆಸುತ್ತಾನೆ. ಅದು ಜನರಿಗೆ ಉಪಯುಕ್ತವಾದ ಬೆಳೆಗಳನ್ನು ಬೆಳೆಸಿದರೆ, ಅದಕ್ಕೆ ದೇವರಿಂದ ಆಶೀರ್ವಾದ ದೊರೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಜಿಮಿನ್ ಅಪ್ನಾವರ್ತಿ ಪಡ್ತಲೊ ಪಾವ್ಸ್ ಘೆವ್ನ್, ಕೊನಾಕ್ ತರಿಬಿ ಸೆತ್ ಕರುಕ್ ಅವಕಾಸ್ ಕರುನ್ ದಿಲ್ಲ್ಯಾ ತನ್ನಾ ಎವ್ಡಿಚ್ ದೆವಾಕ್ನಾ ಆಶಿರ್ವಾದ್ ಘೆವ್ಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 6:7
17 ತಿಳಿವುಗಳ ಹೋಲಿಕೆ  

ನಿಮಗಾಗಿ ನೀತಿಯ ಬೀಜವನ್ನು ಬಿತ್ತಿರಿ. ಪ್ರೀತಿಯ ಫಲವನ್ನು ಕೊಯ್ಯಿರಿ. ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ. ಏಕೆಂದರೆ ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವವರೆಗೂ ಯೆಹೋವ ದೇವರನ್ನು ಹುಡುಕುವ ಸಮಯ ಇದೇ.


ಏಕೆಂದರೆ ನಾನು ಬಾಯಾರಿದ ಭೂಮಿಯ ಮೇಲೆ ನೀರನ್ನು ಸುರಿಸುವೆನು. ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು. ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ, ನಿನ್ನಿಂದ ಹುಟ್ಟುವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸುವೆನು.


ಬಿತ್ತಲು ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವರು, ತಮ್ಮ ಸಿವುಡುಗಳನ್ನು ಹೊತ್ತುಕೊಂಡು ಆನಂದ ಗೀತದೊಡನೆ ತಿರುಗಿ ಬರುವರು.


ಪ್ರಿಯರೇ, ಕರ್ತ ಯೇಸು ಬರುವ ತನಕ ದೀರ್ಘಶಾಂತಿಯಿಂದಿರಿ. ವ್ಯವಸಾಯಗಾರನನ್ನು ನೋಡಿರಿ. ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.


ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವಾದವನ್ನಾಗಿ ಮಾಡುವೆನು. ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು. ದಿವ್ಯಾಶೀರ್ವಾದದ ಮಳೆಯಾಗುವುದು.


ಇಂಥವರೇ ಯೆಹೋವ ದೇವರಿಂದ ಆಶೀರ್ವಾದವನ್ನು ಹೊಂದುವರು. ತಮ್ಮ ರಕ್ಷಕ ಆಗಿರುವ ದೇವರಿಂದಲೇ ನಿರ್ದೋಷಿಯಾಗುವರು.


ಆಗ ನಾನು, “ಆರನೆಯ ವರ್ಷದಲ್ಲಿ ಮೂರು ವರ್ಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಕೊಡುವೆನು.


ನನ್ನ ಆಲಯದಲ್ಲಿ ಆಹಾರ ಇರುವಂತೆ ಹತ್ತನೆಯ ಪಾಲುಗಳನ್ನೆಲ್ಲಾ ಬೊಕ್ಕಸಕ್ಕೆ ತನ್ನಿರಿ. ನಾನು ನಿಮಗೆ ಪರಲೋಕದ ಮಹಾದ್ವಾರಗಳನ್ನು ತೆರೆದು, ಸ್ಥಳ ಹಿಡಿಸಲಾರದಷ್ಟು ನಿಮಗೆ ಆಶೀರ್ವಾದವನ್ನು ಸುರಿಸದಿರುವೆನೋ, ಇಲ್ಲವೋ ಎಂಬುದನ್ನು ನೀವು ಈಗ ನನ್ನನ್ನು ಪರೀಕ್ಷಿಸಿ ನೋಡಿರಿ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆಗ ಯಾಕೋಬನು ಹತ್ತಿರ ಬಂದು ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ, ಅವನನ್ನು ಹೀಗೆ ಆಶೀರ್ವದಿಸಿದನು, “ನನ್ನ ಮಗನ ವಾಸನೆಯು ಯೆಹೋವ ದೇವರು ಆಶೀರ್ವದಿಸಿದ ಹೊಲದ ವಾಸನೆಯಂತೆ ಇದೆ.


ಅನಂತರ ದೇವರು, “ಭೂಮಿಯು ಹುಲ್ಲನ್ನೂ ಬೀಜಬಿಡುವ ಗಿಡಗಳನ್ನೂ ಅದರದರ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳನ್ನೂ ಉತ್ಪತ್ತಿ ಮಾಡಲಿ,” ಎಂದು ಹೇಳಿದರು. ಅದು ಹಾಗೆಯೇ ಆಯಿತು.


ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬರು ಪಡೆದುಕೊಳ್ಳುವರು; ಹುಡುಕುವವರಿಗೆ ಸಿಗುವುದು; ತಟ್ಟುವವರಿಗೆ ಬಾಗಿಲು ತೆರೆಯಲಾಗುವುದು.


ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯದಾಗಿ ಪಾಲುಗಾರನಾಗಿರತಕ್ಕದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು