Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:1 - ಕನ್ನಡ ಸಮಕಾಲಿಕ ಅನುವಾದ

1 ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತರಾದ ದೇವರ ಯಾಜಕನೂ ಆಗಿದ್ದನು. ರಾಜರನ್ನು ಸೋಲಿಸಿ, ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಸಂಧಿಸಿ ಅವನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದನು. ಈತನು ರಾಜರನ್ನು ಸಂಹಾರ ಮಾಡಿ ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಈ ಮೆಲ್ಕಿಸದೇಕನು ಸಾಲೇಮ್ ನಗರದ ರಾಜನೂ ಮಹೋನ್ನತ ದೇವರ ಯಾಜಕನೂ ಆಗಿದ್ದನು. ಶತ್ರುರಾಜರನ್ನು ಗೆದ್ದು ಹಿಂದಿರುಗುತ್ತಿದ್ದ ಅಬ್ರಹಾಮನನ್ನು ಈತನು ಎದುರುಗೊಂಡು ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಈ ಮೆಲ್ಕಿಜೆದೇಕನು ಸಾಲೇವಿುನ ಅರಸನೂ ಪರಾತ್ಪರನಾದ ದೇವರ ಯಾಜಕನೂ ಆಗಿದ್ದನು; ರಾಜರನ್ನು ಹೊಡೆದು ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೆಲ್ಕಿಜೆದೇಕನು ಸಾಲೇಮಿನ ರಾಜನಾಗಿದ್ದನು ಮತ್ತು ಪರಾತ್ಪರನಾದ ದೇವರ ಯಾಜಕನಾಗಿದ್ದನು. ಅಬ್ರಹಾಮನು ರಾಜರುಗಳನ್ನು ಸೋಲಿಸಿ ಹಿಂದಿರುಗಿ ಬರುತ್ತಿರುವಾಗ ಅವನು ಅಬ್ರಹಾಮನನ್ನು ಸಂಧಿಸಿ ಆಶೀರ್ವದಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹ್ಯೊ ಮೆಲ್ಕಿಜೆದೆಕ್ ಸಾಲೆಮಾಚೊ ರಾಜಾ, ಅನಿ ಪವಿತ್ರ್ ದೆವಾಚೊ ಯಜ್ನ್ ಕರ್‍ತಲೊ ಹೊವ್ನ್ ಹೊತ್ತೊ, ರಾಜಾಕ್ನಿ ಹರ್‍ವುನ್ ಪರ್ತುನ್ ಯೆವ್‌ಲಾಗಲ್ಲ್ಯಾ ಅಬ್ರಾಹಾಮಾಕ್ ಗಾವ್ನ್ ಆಶಿರ್ವಾದ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:1
17 ತಿಳಿವುಗಳ ಹೋಲಿಕೆ  

ಯೇಸು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಮಹಾಯಾಜಕರಾಗಿ ಅತಿ ಪರಿಶುದ್ಧ ಸ್ಥಳಕ್ಕೆ ಮುಂದಾಗಿ ಹೋಗಿ ಯೇಸು ನಮ್ಮ ಪರವಾಗಿ ಪ್ರವೇಶಿಸಿದ್ದಾರೆ.


ನಾನು ಯಾವುದರೊಂದಿಗೆ ಯೆಹೋವ ದೇವರ ಮುಂದೆ ಬಂದು, ಯಾವುದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಮತ್ತು ಒಂದು ವರ್ಷದ ಕರುಗಳ ಸಂಗಡ ಆತನ ಮುಂದೆ ಹೋಗಲೇ?


ಮಹೋನ್ನತನಾದ ದೇವರಿಗೆ, ಮೊರೆಯಿಡುತ್ತೇನೆ. ನನಗಾಗಿ ಕಾರ್ಯಗಳಿಗೆ ನ್ಯಾಯ ನೀಡುವ ದೇವರಿಗೆ ಮೊರೆಯಿಡುತ್ತೇನೆ.


ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು.


“ಅರಸನೇ, ಮಹೋನ್ನತರಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಸಾರ್ವಭೌಮತ್ವವನ್ನೂ, ಮಹತ್ತನ್ನೂ, ಕೀರ್ತಿಯನ್ನೂ, ಘನವನ್ನೂ ಕೊಟ್ಟರು.


ದೇವರು ತಮ್ಮ ಬಂಡೆ ಎಂದೂ ಮಹೋನ್ನತರಾದ ದೇವರು ತಮ್ಮ ವಿಮೋಚಕರೆಂದೂ ಜ್ಞಾಪಕ ಮಾಡಿಕೊಳ್ಳುತ್ತಿದ್ದರು.


ಸಾಲೇಮಿನಲ್ಲಿ ದೇವರ ಗುಡಾರವೂ ಚೀಯೋನಿನಲ್ಲಿ ಅವರ ವಾಸಸ್ಥಾನವೂ ಉಂಟು.


ಅವಳು, “ಈ ಮನುಷ್ಯರು ಮಹೋನ್ನತ ದೇವರ ದಾಸರು. ರಕ್ಷಣೆಯ ಮಾರ್ಗವನ್ನು ನಿಮಗೆ ಸಾರುತ್ತಾರೆ,” ಎಂದು ಗಟ್ಟಿಯಾಗಿ ಕೂಗುತ್ತಾ ಪೌಲನ ಮತ್ತು ನಮ್ಮ ಹಿಂದೆಯೇ ಬಂದಳು.


ಅವನು ಮಾನವ ಸಮಾಜದಿಂದ ಬಹಿಷ್ಕೃತನಾದನು. ಮಹೋನ್ನತರಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾರೆಂದೂ, ಅವರು ತಮಗೆ ಬೇಕಾದವರನ್ನು ಅದಕ್ಕೆ ನೇಮಿಸುತ್ತಾರೆಂದೂ ತಿಳಿಯುವ ತನಕ ಅವನು ಮೃಗಬುದ್ಧಿಯುಳ್ಳವನಾಗಿದ್ದನು. ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು. ಅವನು ದನಗಳಂತೆ ಹುಲ್ಲನ್ನು ಮೇಯುತ್ತಿದ್ದನು. ಅವನ ಶರೀರ ಆಕಾಶದ ಮಂಜಿನಿಂದ ತೇವವಾಯಿತು.


ಮಹೋನ್ನತ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂದು ನನಗೆ ವಿಹಿತವಾಗಿ ತೋರಿ ಬಂದಿದೆ.


ಆದರೆ ಜನರು ಮಹೋನ್ನತರಾದ ದೇವರನ್ನು ಪರೀಕ್ಷಿಸಿ ವಿರೋಧಿಸಿದರು; ದೇವರ ಶಾಸನಗಳನ್ನು ಅವರು ಕೈಗೊಳ್ಳಲಿಲ್ಲ.


ಅಬ್ರಹಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತರಲ್ಲಿ ಒಂದು ಭಾಗವನ್ನು ಕೊಟ್ಟನು. ಅವನ ಹೆಸರಿಗೆ ಮೊದಲನೆಯದಾಗಿ, “ನೀತಿರಾಜನು” ಎಂದೂ ತರುವಾಯ “ಸಾಲೇಮಿನ ರಾಜ,” ಅಂದರೆ, “ಸಮಾಧಾನದ ಅರಸನು” ಎಂದರ್ಥ.


ಈ ಮೆಲ್ಕಿಜೆದೇಕನಿಗೆ ತಂದೆಯೂ, ತಾಯಿಯೂ, ವಂಶಾವಳಿಯೂ ಇಲ್ಲ. ಅವನ ಜನ್ಮಕ್ಕೆ ಆದಿಯಾಗಲಿ, ಜೀವನಕ್ಕೆ ಅಂತ್ಯವಾಗಲಿ ಇಲ್ಲ. ಅವನು ದೇವರ ಪುತ್ರ ಆಗಿರುವವರಿಗೆ ಹೋಲಿಕೆಯಾಗಿರುವ ನಿತ್ಯ ಯಾಜಕನಾಗಿ ಉಳಿಯುತ್ತಾನೆ.


ಆದರೆ ವಂಶಾವಳಿಯಲ್ಲಿ ಸೇರದೆ ಇರುವ ಮೆಲ್ಕಿಜೆದೇಕನು ಅಬ್ರಹಾಮನಿಂದ ದಶಮಭಾಗವನ್ನು ತೆಗೆದುಕೊಂಡದ್ದಲ್ಲದೆ, ವಾಗ್ದಾನಗಳನ್ನು ಪಡೆದಿದ್ದ ಅಬ್ರಹಾಮನನ್ನು ಆಶೀರ್ವದಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು