Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:11 - ಕನ್ನಡ ಸಮಕಾಲಿಕ ಅನುವಾದ

11 ಲೇವಿಯರ ಯಾಜಕತ್ವದ ಆಧಾರದ ಮೇಲೆ ಜನರು ನಿಯಮವನ್ನು ಪಡೆದಿದ್ದರು. ಈ ಯಾಜಕತ್ವದ ಮೂಲಕವೇ ಪರಿಪೂರ್ಣತೆಯು ಉಂಟಾಗಿದ್ದರೆ, ಆರೋನನ ಕ್ರಮಾನುಸಾರವಾಗಿರದೆ ಮೆಲ್ಕಿಜೆದೇಕನ ಕ್ರಮದ ಪ್ರಕಾರ ಬೇರೊಬ್ಬ ಯಾಜಕನು ಎದ್ದೇಳುವ ಅವಶ್ಯವೇನಿತ್ತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಇಸ್ರಾಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿದ್ದಾದರೆ, ಆರೋನನ ಪರಂಪರೆಗೆ ಸೇರದ, ಮೆಲ್ಕಿಜೆದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಬರುವುದರ ಅಗತ್ಯವೇನಿತ್ತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಸ್ರಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿತ್ತಾದರೆ, ಆರೋನನ ಪರಂಪರೆಗೆ ಸೇರದೆ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಕಾಣಿಸಿಕೊಳ್ಳುವ ಅವಶ್ಯಕತೆ ಏನಿತ್ತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇಸ್ರಾಯೇಲ್ಯರಿಗೆ ಉಂಟಾದ ಧರ್ಮಶಾಸ್ತ್ರವು ಲೇವಿಕ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆಯಷ್ಟೆ. ಆ ಯಾಜಕತ್ವದಿಂದ ಸಂಪೂರ್ಣಸಿದ್ಧಿ ಉಂಟಾಗಿದ್ದರೆ ಆರೋನನ ತರಹದವನಾಗಿರದೆ ಮೆಲ್ಕಿಜೆದೇಕನ ತರಹದ ಬೇರೊಬ್ಬ ಯಾಜಕನು ಬರುವದಕ್ಕೆ ಅವಶ್ಯವೇನಿತ್ತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಲೇವಿಕುಲದ ಯಾಜಕತ್ವದ ಆಧಾರದ ಮೇಲೆ ಧರ್ಮಶಾಸ್ತ್ರವನ್ನು ಜನರಿಗೆ ಕೊಡಲಾಯಿತು. ಆದರೆ ಆ ಯಾಜಕತ್ವದಿಂದ ಜನರನ್ನು ಆತ್ಮಿಕತೆಯಲ್ಲಿ ಪರಿಪೂರ್ಣರನ್ನಾಗಿ ಮಾಡಲು ಸಾಧ್ಯವಾಗಲಿಲ್ಲ. ಆದ್ದರಿಂದ ಬೇರೊಂದು ರೀತಿಯ ಯಾಜಕನು ಬರುವುದು ಅತ್ಯವಶ್ಯಕವಾಗಿತ್ತು. ಅಂದರೆ ಮೆಲ್ಕಿಜೆದೇಕನಂತಹ ಯಾಜಕನೇ ಹೊರತು ಆರೋನನಂತವನಲ್ಲ ಎಂಬುದು ಅದರ ಅರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಲೆವಿಚ್ಯಾ ಘರಾನ್ಯಾಚ್ಯಾ ಯಾಜಕ್ ಕಾಮಾಚ್ಯಾ ವೈನಾ ಲೊಕಾಕ್ನಿ ದಿವ್ನ್ ಹೊತಾ, ಹೊಲ್ಯಾರ್ಬಿ ಯಾಜಕ್ ಕಾಮಾಕ್ನಾ ಲೊಕಾಕ್ನಿ ಆತ್ಮ್ಯಾನ್ ಸಂಪುರ್ನ್ ಕರುಕ್ ಹೊವ್ಕ್ ನಾ, ತಸೆ ಹೊವ್ನ್ ದುಸ್ರ್ಯಾ ನಮನಿಚೊ ಯಾಜಕ್ ಯೆತಲೊ ತೆಂಕಾ ಪಾಜೆಚ್ ಹೊವ್ನ್ ಹೊತ್ತೊ, ತಸೆ ಮಟ್ಲ್ಯಾರ್ ಮೆಲ್ಕಿಜೆದೆಕ್ ಸಾರ್ಕೊ ಯಾಜಕುಚ್ ಪಾಜೆ ಹೊಲ್ಲೊ, ಅನಿ ಆರೊನಾ ಸಾರ್ಕೊಸೊ ನ್ಹಯ್ ಮನ್ತಲೆ ಹೆಚೊ ಅರ್ಥ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:11
17 ತಿಳಿವುಗಳ ಹೋಲಿಕೆ  

ಆ ಮೊದಲನೆಯ ಒಡಂಬಡಿಕೆಯು ತಪ್ಪಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅವಶ್ಯಕತೆಯೇ ಇರುತ್ತಿರಲಿಲ್ಲ.


ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಏಕೆಂದರೆ ನಿಯಮದ ಮೂಲಕ ನೀತಿಯು ಬರುವುದಾದರೆ, ಕ್ರಿಸ್ತ ಯೇಸು ಕಾರಣವಿಲ್ಲದೆ ಸತ್ತಂತಾಯಿತು!”


ಆದರೆ ಯೇಸು ದೇವರ ಆಣೆಯಿಂದಲೇ ಯಾಜಕರಾದರು. ಹೀಗೆ ದೇವರು ಹೇಳಿದ್ದೇನೆಂದರೆ: “ ಕರ್ತ ಆಗಿರುವ ನಾನು ಆಣೆಯಿಟ್ಟು ಹೇಳಿದ್ದೇನೆ. ನಾನು ಎಂದಿಗೂ ಮನಸ್ಸನ್ನು ಬದಲಾಯಿಸುವುದಿಲ್ಲ. ‘ನೀನು ಸದಾಕಾಲವೂ ಯಾಜಕನಾಗಿದ್ದೀ.’ ”


ಮೆಲ್ಕಿಜೆದೇಕನಂತೆ ಇನ್ನೊಬ್ಬ ಯಾಜಕನು ಏಳುತ್ತಾನೆಂಬುದು ಇನ್ನೂ ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ.


ದೇವರು ಇನ್ನೊಂದು ಸ್ಥಳದಲ್ಲಿ: “ನೀನು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಪ್ರಕಾರವಿರುವ ಯಾಜಕನು!” ಎಂದು ಹೇಳುತ್ತಾರೆ.


ಈಗಲಾದರೋ ನೀವು ದೇವರನ್ನು ಅರಿತುಕೊಂಡಿದ್ದೀರಿ. ನಿಜವಾಗಿ ಹೇಳಬೇಕಾದರೆ, ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲಪಾಠಗಳಿಗೆ ಪುನಃ ಗುಲಾಮರಾಗಬೇಕೆಂದು ಅಪೇಕ್ಷಿಸಿ, ಅವುಗಳಿಗೆ ನೀವು ತಿರುಗಿಕೊಳ್ಳುವುದು ಹೇಗೆ?


ಯೇಸು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಮಹಾಯಾಜಕರಾಗಿ ಅತಿ ಪರಿಶುದ್ಧ ಸ್ಥಳಕ್ಕೆ ಮುಂದಾಗಿ ಹೋಗಿ ಯೇಸು ನಮ್ಮ ಪರವಾಗಿ ಪ್ರವೇಶಿಸಿದ್ದಾರೆ.


ಯೇಸು ದೇವರಿಂದ ನೇಮಕಗೊಂಡು, ಮೆಲ್ಕಿಜೆದೇಕನ ಕ್ರಮದ ಪ್ರಕಾರ ಮಹಾಯಾಜಕರಾದರು.


ಅದರಂತೆಯೇ ನಾವು ಬಾಲಕರಾಗಿದ್ದಾಗ ಲೋಕದ ಮೂಲಪಾಠಗಳಿಗೆ ಗುಲಾಮರಾಗಿದ್ದೆವು.


ಹೇಗೆಂದರೆ, ಮೆಲ್ಕಿಜೆದೇಕನು ಅಬ್ರಹಾಮನನ್ನು ಸಂಧಿಸಿದಾಗ, ಲೇವಿಯು ತನ್ನ ಪಿತೃ ಆದ ಅಬ್ರಹಾಮನ ದೇಹದಲ್ಲಿ ಇದ್ದನು ಎಂದು ಪರಿಗಣಿಸಬಹುದು.


ಯಾಜಕತ್ವವು ಬದಲಾದಾಗ ನಿಯಮವು ಸಹ ಬದಲಾಗುವುದು ಅಗತ್ಯ.


ಇವು ಯಾರ ವಿಷಯದಲ್ಲಿ ಹೇಳಿದೆಯೋ ಆ ವ್ಯಕ್ತಿ ಬೇರೊಂದು ಗೋತ್ರಕ್ಕೆ ಸೇರಿದವನು. ಆ ಗೋತ್ರದಿಂದ ಎಂದೂ ಯಾರೂ ಬಲಿಪೀಠದ ಬಳಿ ಸೇವೆ ಮಾಡಿದವರಲ್ಲ.


ಇವುಗಳು ಹೀಗೆ ಸಿದ್ಧವಾದ ಬಳಿಕ ಯಾಜಕರು ಯಾವಾಗಲೂ ಹೊರಗಿನ ಗುಡಾರವನ್ನು ಪ್ರವೇಶಿಸಿ ದೈವಿಕ ಆರಾಧನೆಯನ್ನು ನಡೆಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು