Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 7:14 - ಕನ್ನಡ ಸಮಕಾಲಿಕ ಅನುವಾದ

14 ಹೀಗೆ ನಮ್ಮ ಕರ್ತ ಯೇಸು ಯೂದಾ ಗೋತ್ರಕ್ಕೆ ಸೇರಿದವರೆಂದು ತಿಳಿದ ಸಂಗತಿಯಾಗಿದೆ. ಈ ಗೋತ್ರವನ್ನು ಸಂಬಂಧಿಸಿ ಮೋಶೆಯು ಯಾಜಕರ ವಿಷಯವಾಗಿ ಏನನ್ನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಮ್ಮ ಪ್ರಭು ಹುಟ್ಟಿದ್ದು ಯೂದನ ಕುಲದಲ್ಲಿ ಎಂಬುದು ತಿಳಿದ ವಿಷಯ. ಮೋಶೆ ಯಾಜಕರನ್ನು ಕುರಿತು ಮಾತನಾಡಿದಾಗ ಈ ಕುಲದ ಬಗ್ಗೆ ಏನನ್ನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಮ್ಮ ಕರ್ತನು ಯೆಹೂದ ಕುಲದಲ್ಲಿ ಜನಿಸಿದವನೆಂಬದು ಪ್ರಸಿದ್ಧವಾಗಿದೆಯಷ್ಟೆ; ಈ ಕುಲದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಒಂದು ಮಾತನ್ನಾದರೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಮ್ಮ ಪ್ರಭು (ಕ್ರಿಸ್ತನು) ಯೆಹೂದಕುಲದಿಂದ ಬಂದವನೆಂಬುದು ಸ್ಪಷ್ಟವಾಗಿದೆ. ಆ ಕುಲಕ್ಕೆ ಸೇರಿದ ಯಾಜಕರನ್ನು ಕುರಿತು ಮೋಶೆಯು ಏನನ್ನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮ್ಚೊ ಧನಿ ಜುದೆವಾಚ್ಯಾ ಘರಾನಾಕ್ನಾ ಯೆಲ್ಲೊ ಮನ್ತಲೆ ಚೊಕ್ಕ್ ದಿಸುನ್ ಯೆಲಾ ತ್ಯಾ ಘರಾನಾಕ್ ಸಮಂದ್ ಪಡಲ್ಯಾ ಯಾಜಕಾಂಚ್ಯಾ ವಿಶಯಾತ್ ಮೊಯ್ಜೆನ್ ಕಾಯ್ಬಿ ಸಾಂಗುಕ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 7:14
22 ತಿಳಿವುಗಳ ಹೋಲಿಕೆ  

ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಕೊಂಬೆಯು ಫಲಕೊಡುವುದು.


ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜರೂ ಆಗಿರುವವರು ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನು ಬಿಚ್ಚುವುದಕ್ಕೆ ಜಯವೀರರಾಗಿದ್ದಾರೆ,” ಎಂದು ಹೇಳಿದನು.


ನಹಶೋನನು ಅಮ್ಮೀನಾದಾಬನ ಮಗನು, ಅಮ್ಮೀನಾದಾಬನು ಆರ್ನೈಯನ ಮಗನು, ಆರ್ನೈಯನು ಹೆಚ್ರೋನನ ಮಗನು, ಹೆಚ್ರೋನನು ಪೆರೆಸನ ಮಗನು, ಪೆರೆಸನು ಯೂದನ ಮಗನು,


“ಯೇಸುವೆಂಬ ನಾನು ನಮ್ಮ ಸಭೆಗಳಲ್ಲಿ ಈ ಸಂಗತಿಗಳ ವಿಷಯವಾಗಿ ನಿಮಗೆ ಸಾಕ್ಷಿ ನೀಡುವಂತೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶದ ಕುಡಿ, ಅವನ ಸಂತತಿಯೂ ಉದಯದ ಪ್ರಕಾಶಮಾನ ತಾರೆಯೂ ಆಗಿದ್ದೇನೆ!” ಎಂದರು.


ಈ ಸುವಾರ್ತೆಯು ದೇವಪುತ್ರನ ವಿಷಯವಾದದ್ದು. ಯೇಸು ಮನುಷ್ಯತ್ವದ ಪ್ರಕಾರ ದಾವೀದನ ಸಂತಾನದವರೂ


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ದೇವರೂ ತಂದೆಯೂ ಆಗಿರುವವರಿಗೆ ಸ್ತೋತ್ರ, ದೇವರು ಕ್ರಿಸ್ತನಲ್ಲಿ ಪರಲೋಕದ ಎಲ್ಲಾ ಆತ್ಮಿಕ ಆಶೀರ್ವಾದಗಳಿಂದ ನಮ್ಮನ್ನು ಆಶೀರ್ವದಿಸಿದ್ದಾರೆ.


ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.


ಮನುಷ್ಯನೇ, ಅಂಥವುಗಳನ್ನು ನಡೆಸುವವರ ಮೇಲೆ ತೀರ್ಪುಮಾಡುತ್ತಿರುವ ನೀನು ದೇವರ ತೀರ್ಪಿನಿಂದ ತಪ್ಪಿಸಿಕೊಂಡೇನೆಂದು ನೆನಸುತ್ತೀಯೋ?


ಆಗ ತೋಮನು, “ನನ್ನ ಕರ್ತ, ನನ್ನ ದೇವರೇ!” ಎಂದನು.


ಅವರು ಆಕೆಗೆ, “ಅಮ್ಮಾ, ನೀನು ಏಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು ಅವರಿಗೆ, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಕರ್ತನನ್ನು ಅವರು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ,” ಎಂದಳು.


ನನ್ನ ಕರ್ತದೇವರ ತಾಯಿಯು, ನನ್ನ ಬಳಿಗೆ ಬರುವಷ್ಟು ನಾನು ದಯೆ ಹೊಂದಿದ್ದು ಏಕೆ?


“ನಾನು ಅವನನ್ನು ನೋಡುವೆನು, ಈಗಲ್ಲ. ಅವನನ್ನು ದೃಷ್ಟಿಸುವೆನು, ಸಮೀಪದಲ್ಲಿ ಅಲ್ಲ. ಯಾಕೋಬನಿಂದ ನಕ್ಷತ್ರ ಉದಯಿಸುವುದು. ಇಸ್ರಾಯೇಲನಿಂದ ರಾಜದಂಡ ಏಳುವುದು. ಅದು ಮೋವಾಬಿನ ಮೂಲೆಗಳನ್ನು ಹೊಡೆದು, ಸೇಥನ ಎಲ್ಲಾ ಮಕ್ಕಳನ್ನು ಸಂಹರಿಸುವುದು.


ಯೆಹೂದನ ಮಕ್ಕಳು: ಏರ್, ಓನಾನ್, ಶೇಲಹ, ಪೆರೆಚ್ ಮತ್ತು ಜೆರಹ. ಆದರೆ ಏರನೂ, ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಮತ್ತು ಹಾಮೂಲ್ ಎಂಬುವರು.


ಇದಲ್ಲದೆ, ನನ್ನ ಕರ್ತದೇವರು ಆಗಿರುವ ಕ್ರಿಸ್ತ ಯೇಸುವನ್ನು ಅರಿತುಕೊಳ್ಳುವುದೇ ಅತಿ ಶ್ರೇಷ್ಠವಾದುದ್ದೆಂದು, ನಾನು ಎಲ್ಲವನ್ನೂ ನಷ್ಟವೆಂದು ಎಣಿಸುತ್ತೇನೆ. ಕ್ರಿಸ್ತನನ್ನೇ ಲಾಭವನ್ನಾಗಿಸಿಕೊಳ್ಳಲು ನಾನು ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.


“ ‘ಯೆಹೂದ ಪ್ರಾಂತದಲ್ಲಿರುವ ಬೇತ್ಲೆಹೇಮೇ, ಯೆಹೂದದ ಅಧಿಪತಿಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಅಲ್ಪವಲ್ಲ. ಏಕೆಂದರೆ ನನ್ನ ಪ್ರಜೆಗಳಾದ ಇಸ್ರಾಯೇಲನ್ನು ಪರಿಪಾಲಿಸಲು ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಬರುವನು,’” ಎಂದು ಹೇಳಿದರು.


ಇವು ಯಾರ ವಿಷಯದಲ್ಲಿ ಹೇಳಿದೆಯೋ ಆ ವ್ಯಕ್ತಿ ಬೇರೊಂದು ಗೋತ್ರಕ್ಕೆ ಸೇರಿದವನು. ಆ ಗೋತ್ರದಿಂದ ಎಂದೂ ಯಾರೂ ಬಲಿಪೀಠದ ಬಳಿ ಸೇವೆ ಮಾಡಿದವರಲ್ಲ.


ಮೆಲ್ಕಿಜೆದೇಕನಂತೆ ಇನ್ನೊಬ್ಬ ಯಾಜಕನು ಏಳುತ್ತಾನೆಂಬುದು ಇನ್ನೂ ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು