Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 8:10 - ಕನ್ನಡ ಸಮಕಾಲಿಕ ಅನುವಾದ

10 ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು: ನಾನು ನನ್ನ ನಿಯಮಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ‘ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು’ ಹೀಗಿರುವುದು, ‘ನಾನು ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್‍ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು, ಅವರ ಹೃದಯದ ಮೇಲೆ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾನು ಇಸ್ರೇಲರೊಡನೆ ಮುಂದಿನ ದಿನಗಳಲ್ಲಿ ಮಾಡಿಕೊಳ್ಳುವ ಹೊಸ ಒಡಂಬಡಿಕೆಯು ಇಂತಿದೆ: ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇರಿಸುವೆನು; ಅವರ ಹೃದಯದ ಮೇಲೆ ಬರೆಯುವೆನು; ನಾನು ಅವರ ದೇವರಾಗಿರುವೆನು; ಅವರು ನನ್ನ ಜನರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮಿಯಾ ಇಸ್ರಾಯೆಲ್ ಲೊಕಾಂಚ್ಯಾ ವಾಂಗ್ಡಾ ಯೆತಲ್ಯಾ ದಿಸಾತ್ನಿ ಕರುನ್ ಘೆತಲೆ ಕರಾಕ್ ಅಶೆ ಹಾಯ್! ಮಾಜೊ ಹುಕುಮ್ ತೆಂಚ್ಯಾ ಮನಾತ್ ಥವ್ತಾ; ಅನಿ ತೆಂಚ್ಯಾ ಮನಾತ್ನಿ ವೈರ್ ಲಿವ್ತಾ, ಮಿಯಾ ತೆಂಚೊ ದೆವ್ ಹೊವ್ನ್ ರ್‍ಹಾತಾ, ತೆನಿ ಮಾಜಿ ಲೊಕಾ ಹೊವ್ನ್ ರ್‍ಹಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 8:10
34 ತಿಳಿವುಗಳ ಹೋಲಿಕೆ  

“ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ನಿಯಮವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ನಮ್ಮ ಸುವಾರ್ತಾ ಸೇವೆಯ ಫಲಿತಾಂಶವಾಗಿ, ನೀವು ಕ್ರಿಸ್ತ ಯೇಸುವಿನ ಪತ್ರವೆಂದು ಪ್ರಕಟಿಸುತ್ತಿದ್ದೀರಿ ಎಂಬುದು ಸ್ಪಷ್ಟವಾಗಿದೆ. ಆ ಪತ್ರವು ಮಸಿಯಿಂದ ಬರೆದದ್ದಲ್ಲ, ಜೀವವುಳ್ಳ ದೇವರ ಆತ್ಮನಿಂದಲೇ ಬರೆಯಲಾಗಿದೆ, ಕಲ್ಲಿನ ಹಲಗೆಗಳ ಮೇಲೆಯಲ್ಲ, ಮಾನವ ಹೃದಯಗಳೆಂಬ ಹಲಗೆಗಳ ಮೇಲೆ ಬರೆಯಲಾಗಿದೆ.


ಆಗ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ, ನೀವು ಬದುಕಿ ಬಾಳುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಹೃದಯವನ್ನೂ, ನಿಮ್ಮ ಸಂತತಿಯ ಹೃದಯವನ್ನೂ ಪರಿಚ್ಛೇದಿಸುವರು.


ನಾನೇ ಯೆಹೋವನೆಂದು ನನ್ನನ್ನು ತಿಳಿದುಕೊಳ್ಳುವುದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಹಿಂದಿರುಗಿಕೊಳ್ಳುವರು.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ನಾನು ಅವರ ಪಾಪಗಳನ್ನು ತೆಗೆದುಹಾಕುವಾಗ, ಅವರೊಂದಿಗೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ ಎಂದು ತಿಳಿದುಕೊಳ್ಳುವೆನು,” ಎಂಬುದೇ.


ಆದಕಾರಣ ಎಲ್ಲಾ ಮಾಲಿನ್ಯವನ್ನೂ ಉಳಿದಿರುವ ದುಷ್ಟತನವನ್ನೂ ತೆಗೆದುಹಾಕಿ, ನಿಮ್ಮೊಳಗೆ ಬೇರೂರಿರುವ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಏಕೆಂದರೆ ನೀವು ತಿರುಗಿ ಹುಟ್ಟಿದವರಾಗಿದ್ದೀರಲ್ಲಾ! ಆ ಜನ್ಮವು ನಾಶವಾಗುವ ಬೀಜದಿಂದಲ್ಲ. ಆದರೆ ನಾಶವಾಗದಂಥದ್ದರಿಂದ ಸಜೀವವಾದ ಸದಾಕಾಲವಿರುವ ದೇವರ ವಾಕ್ಯದ ಮೂಲಕ ಆಗಿದೆ.


ನಾನು ಅವರನ್ನು ತರುವೆನು. ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು. ಅವರು ನನ್ನ ಜನರಾಗಿರುವರು. ನಾನು ಅವರಿಗೆ ನಂಬಿಗಸ್ತನೂ, ನೀತಿವಂತನೂ ಆದ ದೇವರಾಗಿರುವೆನು.”


ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.


ನನ್ನ ಗುಡಾರವು ಸಹ ಅವರೊಂದಿಗಿರುವುದು. ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ಅವರಿಗೆ ಒಳ್ಳೆಯದನ್ನು ಮಾಡುವ ಹಾಗೆ ನಾನು ತಿರುಗಿಸಿಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ. ಅವರು ನನ್ನನ್ನು ಬಿಡದ ಹಾಗೆ ಭಯವನ್ನು ಅವರ ಹೃದಯದಲ್ಲಿ ಇಡುತ್ತೇನೆ.


ಅವರು ನನ್ನ ಜನರಾಗಿರುವರು. ನಾನು ಅವರಿಗೆ ದೇವರಾಗಿರುವೆನು.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಆಗಿದ್ದೇನೆ,’ ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ,” ಎಂದು ಹೇಳಿದರು.


ಅದರ ಬದಲು ಅವರು ಅದಕ್ಕಿಂತ ಉತ್ತಮವಾದ ಪರಲೋಕದ ದೇಶವನ್ನು ನಿರೀಕ್ಷಿಸಿದರು. ಆದ್ದರಿಂದ ದೇವರು ಅವರ ದೇವರೆನಿಸಿಕೊಳ್ಳುವುದಕ್ಕೆ ನಾಚಿಕೊಳ್ಳದೆ ಅವರಿಗಾಗಿ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾರೆ.


ಯೆಹೋವ ದೇವರು ಮೋಶೆಗೆ ಹೀಗೆ ಹೇಳಿದರು, “ನೀನು ಈ ವಾಕ್ಯಗಳನ್ನು ಬರೆ. ಏಕೆಂದರೆ ಈ ವಾಕ್ಯಗಳ ಪ್ರಕಾರವೇ ನಾನು ನಿನ್ನ ಮತ್ತು ಇಸ್ರಾಯೇಲಿನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ.”


ಹೀಗೆ ಇಸ್ರಾಯೇಲನ ಮನೆತನದವರು ಯೆಹೋವ ದೇವರಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವರಾಗಿರುವೆನು ಎಂದು ತಿಳಿಯುವರು.


ನನ್ನ ಪ್ರಿಯನು ನನ್ನವನೇ, ನಾನು ಅವನವಳೇ. ಅವನು ನೆಲದಾವರೆಗಳ ನಡುವೆ ಮಂದೆಯನ್ನು ಮೇಯಿಸುತ್ತಾನೆ.


ಮೋಶೆಯು ಯೆಹೋವ ದೇವರು ಪ್ರಕಟಪಡಿಸಿದ ಮಾತುಗಳನ್ನೆಲ್ಲಾ ಬರೆದಿಟ್ಟನು. ಅವನು ಮರುದಿನ ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಬಲಿಪೀಠವನ್ನು ಕಟ್ಟಿಸಿ, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.


“ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು.


“ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು,” ಎಂದು ಯೆಹೋವ ದೇವರು ಸಾರುತ್ತಾರೆ.


ನಾನು ದೇಶದಲ್ಲಿ ಆಕೆಯನ್ನು ನನಗಾಗಿ ಬಿತ್ತಿಕೊಳ್ಳುವೆನು. ‘ನನ್ನ ಪ್ರಿಯರಲ್ಲ’ ಎಂದು ಕರೆದವರಿಗೆ, ನಾನು ನನ್ನ ಪ್ರೀತಿಯನ್ನು ತೋರಿಸುವೆನು. ನಾನು, ‘ನೀವು ನನ್ನ ಜನರಲ್ಲ’ ಎಂದು ಹೇಳಿದವರನ್ನು, ‘ನೀವು ನನ್ನ ಜನರು,’ ಎಂದು ಹೇಳುವೆನು. ಅವರು, ‘ನೀವು ನಮ್ಮ ದೇವರು’ ” ಎಂದು ಹೇಳುವರು.


ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರ ಸಭೆಯಲ್ಲಿ ಓದಿದನು. ಆಗ ಅವರು, “ಯೆಹೋವ ದೇವರ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ಅವುಗಳಿಗೆ ವಿಧೇಯರಾಗುವೆವು,” ಎಂದರು.


ಯೆಹೋವ ದೇವರು ಮೋಶೆಗೆ, “ಮೊದಲಿನವುಗಳ ಹಾಗೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.


ವೇಶ್ಯೆಯನ್ನು ಸೇರುವವನು ಅವಳೊಂದಿಗೆ ಒಂದೇ ದೇಹವಾಗುವನೆಂಬುದು ನಿಮಗೆ ತಿಳಿಯದೋ? “ಅವರಿಬ್ಬರೂ ಒಂದೇ ಶರೀರವಾಗಿರುವರು,” ಎಂದು ಹೇಳಲಾಗಿದೆಯಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು