Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:10 - ಕನ್ನಡ ಸಮಕಾಲಿಕ ಅನುವಾದ

10 ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳಲ್ಲಿಯೂ ಮುಂತಾದ ಬಾಹ್ಯಾಚಾರದ ಕ್ರಮಗಳಾಗಿದ್ದವು. ಅವು ಹೊಸ ಕ್ರಮಕಾಲದವರೆಗೆ ಮಾತ್ರ ನೇಮಕವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವು ಅನ್ನಪಾನಗಳೂ ಮತ್ತು ವಿವಿಧ ಆಚರಣೆಗಳಿಗೂ ಒಳಪಟ್ಟಿರುವ ಸ್ನಾನಗಳು ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು. ಇವು ಸುಧಾರಣೆಯ ಕಾಲದವರೆಗೆ ಮಾತ್ರ ನೇಮಕವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಏಕೆಂದರೆ, ಈ ಕಾಣಿಕೆಗಳು ಮತ್ತು ಬಲಿಗಳು ಕೇವಲ ಲೌಕಿಕವಾದುವು. ಅನ್ನಪಾನೀಯಗಳಿಂದಲೂ ನಾನಾ ತರದ ಸ್ನಾನವಿಧಿಗಳಿಂದಲೂ ಕೂಡಿದ ಇವು ಸುಧಾರಣೆಯ ಕಾಲದವರೆಗೆ ಮಾತ್ರ ಇರಬೇಕಾದುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅನ್ನಪಾನಾದಿಗಳೂ ವಿವಿಧ ಸ್ನಾನಗಳೂ ಸಹಿತವಾಗಿ ದೇಹಕ್ಕೆ ಮಾತ್ರ ಸಂಬಂಧಪಟ್ಟ ನಿಯಮಗಳಾಗಿದ್ದು ತಿದ್ದುಪಾಟಿನ ಕಾಲದವರೆಗೆ ಮಾತ್ರ ನೇಮಕವಾದವು ಎಂಬದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆ ಯಜ್ಞಗಳು ಮತ್ತು ಕಾಣಿಕೆಗಳು ಅನ್ನಪಾನಾದಿಗಳನ್ನೂ ವಿಶೇಷವಾದ ಸ್ನಾನಗಳನ್ನೂ ಕುರಿತಾಗಿದ್ದವು. ಅವು ದೇಹಕ್ಕೆ ಸಂಬಂಧಿಸಿದ ನಿಯಮಗಳೇ ಹೊರತು ಜನರ ಹೃದಯಕ್ಕೆ ಸಂಬಂಧಿಸಿದ್ದವುಗಳಲ್ಲ. ಜನರಿಗೆ ದೇವರ ಹೊಸ ಮಾರ್ಗವು ಲಭಿಸುವ ಕಾಲದವರೆಗೆ, ಅವರು ಅನುಸರಿಸಲೆಂದು ಆ ನಿಯಮಗಳನ್ನು ದೇವರೇ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತಿ ಯಜ್ನ್ ಕಾನಿಕ್, ಜೆವಾನ್ ಖಾನ್ ಅನಿ ನ್ಹಾತಲ್ಯಾಚ್ಯಾ ಸಾಟ್ನಿ ಹೊತ್ತಿ ಹೆ ಸಗ್ಳೆ ಆಂಗಾಕ್ ಸಮಂದ್ ಪಡಲಿ ನೆಮಾ, ಮನಾಕ್ ಸಮಂದ್ ಪಡಲಿ ನೆಮಾ ನ್ಹಯ್, ದೆವಾಚಿ ನ್ಹವಿ ವಾಟ್ ಗಾವಿ ಪತರ್ ತೆನಿ ಅಸೆಚ್ ದೆವಾಚಿ ನ್ಹವಿ ನೆಮಾ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:10
32 ತಿಳಿವುಗಳ ಹೋಲಿಕೆ  

ಹೀಗಿರಲಾಗಿ, ಅನ್ನಪಾನಗಳ ವಿಷಯದಲ್ಲಿಯೂ ಹಬ್ಬ ಅಮಾವಾಸ್ಯೆ ಸಬ್ಬತ್ ದಿನ ಮುಂತಾದವುಗಳ ವಿಷಯದಲ್ಲಿಯೂ ಯಾರೂ ನಿಮ್ಮನ್ನು ತೀರ್ಪು ಮಾಡದಿರಲಿ.


ಹೀಗೆ ಕ್ರಿಸ್ತ ಯೇಸು ತಮ್ಮ ದೇಹವನ್ನು ಶಿಲುಬೆಯಲ್ಲಿ ಸಮರ್ಪಿಸಿದ್ದರಿಂದ ನಿಯಮದ ಆಜ್ಞೆಗಳುಳ್ಳ ಶಾಸನಗಳನ್ನು ರದ್ದುಗೊಳಿಸಿದರು. ಈ ರೀತಿಯಾಗಿ ಇವೆರಡೂ ಗುಂಪಿನವರಿಂದ ಒಬ್ಬ ನೂತನ ಮಾನವತ್ವವನ್ನು ತಮ್ಮಲ್ಲಿ ಸೃಷ್ಟಿಸಿ ಸಮಾಧಾನವನ್ನು ಉಂಟುಮಾಡಿದರು.


ಕ್ರಿಸ್ತ ಯೇಸು ಯಾಜಕರಾದುದು ಅಳಿವಿಲ್ಲದ ಜೀವದ ಶಕ್ತಿಗೆ ಅನುಸಾರವಾಗಿದೆಯೇ ಹೊರತು ನಿಯಮಾನುಸಾರವಾದ ದೈಹಿಕ ಹುಟ್ಟಿನಿಂದಲ್ಲ.


ಅದಕ್ಕೆ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದ ದಿನದಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ. ಯಾವ ಅಸಹ್ಯ ಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.


ಸಂಜೆ ಆಗುತ್ತಿರುವಾಗ ಅವನು ಸ್ನಾನಮಾಡಿ, ಸೂರ್ಯನು ಮುಳುಗಿದಾಗ ಪಾಳೆಯದ ಒಳಗೆ ತಿರುಗಿಬರಬಹುದು.


ಅವನು ಪರಿಶುದ್ಧ ಸ್ಥಳದಲ್ಲಿ ನೀರಿನಲ್ಲಿ ಸ್ನಾನಮಾಡಿ, ತನ್ನ ಬಳಕೆಯ ಬಟ್ಟೆಗಳನ್ನು ಧರಿಸಿಕೊಂಡು, ಹೊರಗೆ ಬಂದು ತನ್ನ ದಹನಬಲಿಯನ್ನೂ, ಜನರ ದಹನಬಲಿಯನ್ನೂ ಸಮರ್ಪಿಸಿ ತನಗೋಸ್ಕರವೂ, ಜನರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.


ಆದಕಾರಣ ಅಪರಾಧ ಮನಸ್ಸಾಕ್ಷಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ಶುದ್ಧ ನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಸಮೀಪಕ್ಕೆ ಬರೋಣ.


ಮೊದಲನೆಯ ಒಡಂಬಡಿಕೆಯಲ್ಲಿ ದೈವಿಕ ಆರಾಧನೆಯ ಕ್ರಮಗಳಿದ್ದವು. ಮಾತ್ರವಲ್ಲದೆ ಮಾನವ ನಿರ್ಮಿತ ಪವಿತ್ರ ಸ್ಥಳವೂ ಇತ್ತು.


ದೇವರ ವಾಕ್ಯದ ಒಳ್ಳೆತನವನ್ನೂ ಬರುವ ಲೋಕದ ಶಕ್ತಿಯನ್ನೂ ರುಚಿ ನೋಡಿದವರು


ನಾವು ಸಾರುತ್ತಿರುವ ಮುಂದಣ ಲೋಕವನ್ನು ದೇವರು ತಮ್ಮ ದೂತರಿಗೆ ಅಧೀನ ಮಾಡಲಿಲ್ಲವಲ್ಲ.


ಆಮೇಲೆ ಹತನಾದವನ ಶವಕ್ಕೆ ಸಮೀಪವಾಗಿರುವ ಆ ಊರಿನ ಹಿರಿಯರೆಲ್ಲರೂ ತಗ್ಗಿನಲ್ಲಿ ವಧಿಸಿದ ಕಡಸಿನ ಮೇಲೆ ಕೈಗಳನ್ನು ತೊಳೆದುಕೊಳ್ಳಬೇಕು.


ಅವನು ಪರಿಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟುಕೊಂಡು, ತನ್ನ ಶರೀರದ ಮೇಲೆ ನಾರುಬಟ್ಟೆಯ ಒಳಉಡುಪನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು, ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು. ಆದಕಾರಣ ಅವನು ನೀರಿನಿಂದ ಸ್ನಾನಮಾಡಿ ಅವುಗಳನ್ನು ಧರಿಸಿಕೊಳ್ಳಬೇಕು.


“ಆರೋನನನ್ನೂ, ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿನ ಬಳಿಗೆ ಬರಮಾಡಿ, ಅವರನ್ನು ನೀರಿನಿಂದ ಸ್ನಾನ ಮಾಡಿಸಬೇಕು.


ವಿಚಿತ್ರವಾದ ವಿವಿಧ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ಏಕೆಂದರೆ ಕೃಪೆಯ ಮೂಲಕ ಹೃದಯವನ್ನು ಬಲಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳಲ್ಲಿ ಮಗ್ನರಾದವರು, ಅವುಗಳಿಂದ ಏನೂ ಪ್ರಯೋಜನ ಹೊಂದಲಿಲ್ಲ.


ದೀಕ್ಷಾಸ್ನಾನಗಳ ಬೋಧನೆಯೂ ಹಸ್ತಾರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಮುಂತಾದವುಗಳನ್ನು ಪುನಃ ಅಸ್ತಿವಾರವನ್ನಾಗಿ ಹಾಕದೆ, ನಾವು ಪರಿಪೂರ್ಣತೆಗೆ ಹೋಗೋಣ.


ಆ ರಹಸ್ಯವೋ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕಾಲವು ಪರಿಪೂರ್ಣಗೊಂಡಾಗ ಕ್ರಿಸ್ತನಲ್ಲಿ ಒಂದುಗೂಡಿಸುವುದಾಗಿದೆ.


ಈಗಲಾದರೋ ನೀವು ದೇವರನ್ನು ಅರಿತುಕೊಂಡಿದ್ದೀರಿ. ನಿಜವಾಗಿ ಹೇಳಬೇಕಾದರೆ, ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲಪಾಠಗಳಿಗೆ ಪುನಃ ಗುಲಾಮರಾಗಬೇಕೆಂದು ಅಪೇಕ್ಷಿಸಿ, ಅವುಗಳಿಗೆ ನೀವು ತಿರುಗಿಕೊಳ್ಳುವುದು ಹೇಗೆ?


ಪೇಟೆಗೆ ಹೋಗಿ ಬಂದರೆ ಅವರು ಸ್ನಾನ ಮಾಡದೆ ಊಟಮಾಡುತ್ತಿರಲಿಲ್ಲ. ಮಾತ್ರವಲ್ಲದೆ ಲೋಟ, ಚೆಂಬು ಮತ್ತು ತಪ್ಪಲೆಗಳನ್ನು ಬೆಳಗಿ ತೊಳೆಯುವುದು ಮುಂತಾದ ಅನೇಕ ಶುದ್ಧಾಚಾರಗಳನ್ನು ಅವರು ಪಾಲಿಸುತ್ತಿದ್ದರು.


ಸಂಜೆಯವರೆಗೆ ಅಶುದ್ಧನಾಗಿರಬೇಕು. ಅವನು ನೀರಿನಲ್ಲಿ ಸ್ನಾನಮಾಡಿದ ಮೇಲೆ ಪರಿಶುದ್ಧವಾದವುಗಳನ್ನು ತಿನ್ನಬಹುದು.


ಆರೋನನನ್ನೂ ಅವನ ಪುತ್ರರನ್ನೂ ದೇವದರ್ಶನದ ಗುಡಾರದ ಬಾಗಿಲಿನ ಬಳಿಗೆ ತಂದು, ನೀರಿನಲ್ಲಿ ಅವರನ್ನು ತೊಳೆಯಬೇಕು.


ದ್ರಾಕ್ಷಾರಸಕ್ಕೂ ಮದ್ಯಪಾನಕ್ಕೂ ದೂರವಾಗಿದ್ದು, ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ, ದ್ರಾಕ್ಷಿಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ ಹಸಿಯದಾಗಲಿ, ಒಣಗಿದ್ದಾಗಲಿ ದ್ರಾಕ್ಷಿಹಣ್ಣನ್ನು ತಿನ್ನದೆ ಇರಬೇಕು.


ಯಾಜಕತ್ವವು ಬದಲಾದಾಗ ನಿಯಮವು ಸಹ ಬದಲಾಗುವುದು ಅಗತ್ಯ.


ನೀನು ತೊಳೆದ ಮೇಲೆ ಆ ಬೂಜು ಯಾವ ವಸ್ತುವಿನಿಂದ ಹೊರಟು ಹೋಯಿತೋ, ಆ ಬಟ್ಟೆಯನ್ನೂ, ಹಾಸನ್ನೂ, ಹೊಕ್ಕನ್ನೂ ಇಲ್ಲವೆ ಚರ್ಮದ ಯಾವುದೇ ಸಾಮಗ್ರಿಗಳನ್ನೂ ಎರಡನೆಯ ಸಾರಿ ತೊಳೆಯಬೇಕು. ಆಗ ಅದು ಶುದ್ಧವಾಗಿರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು