ಇಬ್ರಿಯರಿಗೆ 9:15 - ಕನ್ನಡ ಸಮಕಾಲಿಕ ಅನುವಾದ15 ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಈ ಕಾರಣ, ಯೇಸು ಹೊಸ ಒಡಂಬಡಿಕೆಯನ್ನು ಏರ್ಪಡಿಸಿದ ಮಧ್ಯಸ್ಥರಾಗಿದ್ದಾರೆ. ದೈವಕರೆ ಹೊಂದಿದವರು ದೇವರು ವಾಗ್ದಾನಮಾಡಿದ ಅಮರ ಸೌಭಾಗ್ಯವನ್ನು ಬಾಧ್ಯವಾಗಿ ಪಡೆಯುವಂತೆ ಈ ಒಡಂಬಡಿಕೆಯನ್ನು ಏರ್ಪಡಿಸಲಾಯಿತು. ಇದು ಯೇಸುವಿನ ಮರಣದ ಮೂಲಕವೇ ಉಂಟಾಯಿತು. ಈ ಮರಣವು ಹಳೆಯ ಒಡಂಬಡಿಕೆಯನ್ನು ಮೀರಿ ಮಾಡಿದ ಅಪರಾಧಗಳನ್ನೂ ಪರಿಹರಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮತ್ತು ಈ ಕಾರಣದಿಂದ ಆತನು ಒಂದು ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ. ಮೊದಲನೆಯ ಒಡಂಬಡಿಕೆಯ ಕಾಲದಲ್ಲಿ ನಡೆದ ಅಕ್ರಮಗಳ ಪರಿಹಾರಕ್ಕಾಗಿ ಆತನು ಮರಣವನ್ನು ಅನುಭವಿಸಿದ್ದರಿಂದ ದೇವರಿಂದ ಕರೆಯಿಸಿಕೊಂಡವರು ವಾಗ್ದಾನವಾಗಿದ್ದ ನಿತ್ಯಬಾಧ್ಯತೆಯನ್ನು ಹೊಂದುವದಕ್ಕೆ ಆತನ ಮೂಲಕ ಮಾರ್ಗವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದೇವರಿಂದ ಕರೆಯಲ್ಪಟ್ಟ ಜನರು ದೇವರ ವಾಗ್ದಾನಗಳನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಯನ್ನು ದೇವರಿಂದ ತಂದನು. ದೇವರ ಜನರು ಅವುಗಳನ್ನು ಶಾಶ್ವತವಾಗಿ ಹೊಂದಿಕೊಳ್ಳಲು ಸಾಧ್ಯ. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಜನರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ದೆವಾನ್ ಬಲ್ವಲ್ಲಿ ಲೊಕಾ ದೆವಾಕ್ನಾ ಗೊಸ್ಟಿಯಾ ಘೆಂವ್ದಿ ಮನುನ್ ಕ್ರಿಸ್ತಾನ್ ನ್ಹವೊ ಕರಾರ್ ಹಾನ್ಲ್ಯಾನ್, ದೆವಾಚಿ ಲೊಕಾ ತೆ ಶಾಸ್ವತ್ ಕರುನ್ ಘೆವ್ಕ್ ಹೊತಾ ಕಶ್ಯಾಕ್ ಮಟ್ಲ್ಯಾರ್, ಪೈಲೆಚ್ಯಾ ಕರಾರಾಚ್ಯಾ ವೆಳಾರ್ ಕರಲ್ಯಾ ಪಾಪಾಂತ್ನಾ ಲೊಕಾಕ್ನಿ ಸುಟ್ಕಾ ಕರುಕ್ ಸಾಟ್ನಿ ಕ್ರಿಸ್ತ್ ಖುರ್ಸಾರ್ ಮರ್ಲೊ. ಅಧ್ಯಾಯವನ್ನು ನೋಡಿ |