Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:22 - ಕನ್ನಡ ಸಮಕಾಲಿಕ ಅನುವಾದ

22 ಹೀಗೆ ದೇವರ ನಿಯಮದ ಪ್ರಕಾರ ಎಲ್ಲವೂ ರಕ್ತದಿಂದಲೇ ಶುದ್ಧಿಯಾಗಬೇಕು. ರಕ್ತಧಾರೆ ಇಲ್ಲದೆ ಪಾಪಪರಿಹಾರವು ಉಂಟಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಎಂದೇ, ಧರ್ಮಶಾಸ್ತ್ರದ ಪ್ರಕಾರ ಹೆಚ್ಚುಕಡಿಮೆ ಎಲ್ಲವೂ ರಕ್ತದಿಂದಲೇ ಶುದ್ಧೀಕರಣ ಹೊಂದುತ್ತವೆ. ರಕ್ತಧಾರೆ ಇಲ್ಲದೆ ಪಾಪಪರಿಹಾರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಧರ್ಮಶಾಸ್ತ್ರದ ಪ್ರಕಾರ ಸ್ವಲ್ಪಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತಧಾರೆಯಿಲ್ಲದೆ ಪಾಪಪರಿಹಾರ ಉಂಟಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಬಹುಮಟ್ಟಿಗೆ ಪ್ರತಿಯೊಂದೂ ರಕ್ತದಿಂದ ಪರಿಶುದ್ಧವಾಗಬೇಕೆಂದು ಧರ್ಮಶಾಸ್ತ್ರವು ಹೇಳುತ್ತದೆ. ರಕ್ತವಿಲ್ಲದೆ ಪಾಪಗಳನ್ನು ಕ್ಷಮಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಲೈ ಕರುನ್ ಹರ್ ಎಕ್ ರಗ್ತಾನುಚ್ ನಿತಳ್ ಹೊವ್ಚೆ ಮನುನ್ ಪವಿತ್ರ್ ಪುಸ್ತಕ್ ಸಾಂಗ್ತಾ ರಗಾತ್ ನಸ್ತಾನಾ ಪಾಪಾಚಿ ಸುಟ್ಕಾ ಹೊವ್ಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:22
14 ತಿಳಿವುಗಳ ಹೋಲಿಕೆ  

ಏಕೆಂದರೆ ದೇಹದ ಜೀವವು ರಕ್ತದೊಳಗೆ ಇರುತ್ತದೆ ಮತ್ತು ನಾನು ಅದನ್ನು ನಿಮ್ಮ ಆತ್ಮಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಬಲಿಪೀಠದ ಮೇಲೆ ನಿಮಗೆ ಕೊಟ್ಟಿದ್ದೇನೆ. ಪ್ರಾಣಕ್ಕೆ ಪ್ರಾಯಶ್ಚಿತ್ತ ಮಾಡುವುದು ರಕ್ತವೇ.


ಯಾಜಕನು ಅವನಿಗಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಬೇಕು. ಅತಿಕ್ರಮದಲ್ಲಿ ಅವನು ಏನನ್ನಾದರೂ ಮಾಡಿದ್ದರೆ, ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು,” ಎಂದರು.


ಇದಲ್ಲದೆ ಸಮಾಧಾನ ಬಲಿಗಳ ಕುರಿಮರಿಯ ಕೊಬ್ಬಿನಂತೆಯೇ, ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು. ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಯೆಹೋವ ದೇವರಿಗೆ ಮಾಡಿದಂತೆಯೇ, ಬಲಿಪೀಠದ ಮೇಲೆ ಅವುಗಳನ್ನು ಸುಡಬೇಕು. ಯಾಜಕನು ಅವನು ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


ಅಲ್ಲದೆ ಅವನು ಹಿಂಡಿನೊಳಗಿಂದ ಕಳಂಕರಹಿತವಾದ ಒಂದು ಟಗರನ್ನು ನಿನ್ನ ಅಂದಾಜಿಗನುಸಾರ ಪ್ರಾಯಶ್ಚಿತ್ತ ಬಲಿಗಾಗಿ, ಯಾಜಕನ ಬಳಿಗೆ ತರಬೇಕು. ಯಾಜಕನು, ಅಜ್ಞಾನದಿಂದ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ, ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನಿಗೆ ಕ್ಷಮೆ ದೊರಕುವುದು.


ಯಾಜಕನು ಪ್ರಾಯಶ್ಚಿತ್ತ ಬಲಿಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಮತ್ತು ಯಾಜಕನು ಅದನ್ನು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮತ್ತು ಬಲಗೈಯ ಹೆಬ್ಬೆರಳಿನ ಮೇಲೆಯೂ, ಬಲಗಾಲಿನ ಹೆಬ್ಬೆಟ್ಟಿನ ಮೇಲೆಯೂ ಹಚ್ಚಬೇಕು.


ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ, ದೇವದಾರು ಕಟ್ಟಿಗೆಯನ್ನೂ, ರಕ್ತವರ್ಣದ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಂಡು, ಹರಿಯುವ ನೀರಿನ ಬಳಿಯಲ್ಲಿ ವಧಿಸಿದ ಆ ಪಕ್ಷಿಯ ರಕ್ತದಲ್ಲಿ ಅದ್ದಿ,


ಅವನು ಕ್ರಮದ ಪ್ರಕಾರ, ಎರಡನೆಯದನ್ನು ದಹನಬಲಿಯಾಗಿ ಸಮರ್ಪಿಸಬೇಕು. ಯಾಜಕನು ಅವನು ಮಾಡಿದ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.


ಅವರು ಸಮಾಧಾನದ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಯಾಜಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.


ಪಾಪ ಪರಿಹಾರದ ಬಲಿಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ, ಈ ಹೋರಿಗೂ ಮಾಡಬೇಕು. ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವರಿಗೆ ಕ್ಷಮಾಪಣೆಯಾಗುವುದು.


ಅವನು ಪ್ರಾಯಶ್ಚಿತ್ತ ಬಲಿಗಾಗಿ ಆ ಕುರಿಮರಿಯನ್ನು ವಧಿಸಬೇಕು. ಆ ಪ್ರಾಯಶ್ಚಿತ್ತ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು, ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಯ ಮೇಲೆಯೂ, ಅವನ ಬಲಗೈಯ ಹೆಬ್ಬೆರಳಿನ ಮೇಲೆಯೂ ಹಚ್ಚಬೇಕು.


ತರುವಾಯ ಅವರು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿಯಷ್ಟು ತೆಗೆದುಕೊಂಡು, ಬಲಿಪೀಠದ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಯೆಹೋವ ದೇವರಿಗಾಗಿ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು.


“ ‘ಆದರೆ ಅವರು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅಶಕ್ತರಾಗಿದ್ದರೆ, ಪಾಪಮಾಡಿದವರು ತಮ್ಮ ಬಲಿಗಾಗಿ, ಮೂರು ಸೇರು ಗೋಧಿ ಹಿಟ್ಟನ್ನು ಪಾಪ ಪರಿಹಾರದ ಬಲಿಯಾಗಿ ತರಬೇಕು. ಅವರು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಏಕೆಂದರೆ ಅದು ದೋಷಪರಿಹಾರ ಬಲಿಯಾಗಿದೆ.


ಅವರು ನನಗೆ ಹೇಳಿದ್ದೇನೆಂದರೆ: “ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಬಲಿಪೀಠವನ್ನು ಮಾಡುವ ದಿನದಲ್ಲಿ ಅದರ ಮೇಲೆ ದಹನಬಲಿಗಳನ್ನು ಅರ್ಪಿಸಿ ರಕ್ತವನ್ನು ಚಿಮುಕಿಸಬೇಕು; ಇವು ಅಲ್ಲಿನ ನಿಯಮಗಳಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು