Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:5 - ಕನ್ನಡ ಸಮಕಾಲಿಕ ಅನುವಾದ

5 ಮಂಜೂಷದ ಮೇಲೆ ಮಹಿಮೆಯ ಕೆರೂಬಿಯರು ಕರುಣಾಸನವನ್ನು ಮುಚ್ಚಿಕೊಂಡಿದ್ದವು. ಸದ್ಯಕ್ಕೆ ಈ ವಿಷಯಗಳನ್ನು ಸವಿಸ್ತಾರವಾಗಿ ನಾನು ಹೇಳುವುದಕ್ಕಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದರ ಮೇಲೆ ಕೃಪಾಸನವನ್ನು ಮುಚ್ಚುವ ತೇಜಸ್ಸಿನ ಕೆರೂಬಿಗಳೂ ಇದ್ದವು. ಅದನ್ನು ಈಗ ಒಂದೊಂದಾಗಿ ವಿವರಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮಂಜೂಷದ ಮೇಲೆ ದೇವರ ಸಾನ್ನಿಧ್ಯವನ್ನು ಸೂಚಿಸುವ ಕೆರೂಬಿ ಎಂಬ ದೂತರ ಆಕೃತಿಗಳಿದ್ದವು. ಅವುಗಳ ರೆಕ್ಕೆಗಳು ಕೃಪಾಸನವನ್ನು ಆವರಿಸಿಕೊಂಡಿದ್ದವು. ಸದ್ಯಕ್ಕೆ ಇವನ್ನು ಸವಿಸ್ತಾರವಾಗಿ ವಿವರಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅದರ ಮೇಲೆ ದೇವರ ಪ್ರಭಾವವನ್ನು ಸೂಚಿಸುವ ಕೆರೂಬಿಗಳು ಕೃಪಾಸನವನ್ನು ಆಚ್ಫಾದಿಸಿಕೊಂಡಿದ್ದವು. ಸದ್ಯಕ್ಕೆ ಈ ವಿಷಯಗಳನ್ನು ಒಂದೊಂದಾಗಿ ವಿವರಿಸುವದಕ್ಕೆ ಆಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಪೆಟ್ಟಿಗೆಯ ಮೇಲ್ಗಡೆ ದೇವರ ವೈಭವವನ್ನು ತೋರ್ಪಡಿಸುವ ಕೆರೂಬಿಗಳಿದ್ದವು. ಈ ಕೆರೂಬಿಗಳು ಕೃಪಾಸನವನ್ನು ಆಚ್ಛಾದಿಸಿಕೊಂಡಿದ್ದವು. ಆದರೆ ಇವುಗಳ ಕುರಿತು ಎಲ್ಲವನ್ನೂ ನಾವು ಈಗ ಹೇಳಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತ್ಯಾ ಡೆವ್ಳಿಯಾ ವೈನಿ ದೆವಾಚೊ ವೈಭವ್ ದಾಕ್ವುತಲಿ ಚಿತ್ರಾ ಕೆರುಬಿ ಹೊತ್ತಿ, ತೆ ದೆವಾಚೆ ಹಾಜಿರ್ ಪಾನ್ ದಾಕ್ವಿತ್ ತ್ಯಾ ಫಾಕಾಟ್ಯಾನಿ ಎಕ್ ಸಿವಾಸನ್ ನಿಪ್ವುನ್ ಥವಲ್ಯಾನಿ, ತ್ಯಾ ಜಾಗ್ಯಾ ವೈನಾ ಪಾಪಾಂಚಿ ಮಾಪಿ ಹೊಯ್ತ್ ಹೊತ್ತಿ, ಅತ್ತಾ ಅಮ್ಚ್ಯಾ ಕಡೆ ಹೆ ಸಗ್ಳೆ ಸಾಂಗುಕ್ ವೆಳ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:5
15 ತಿಳಿವುಗಳ ಹೋಲಿಕೆ  

ಮೋಶೆಯು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಾಗ, ಅವನು ಒಡಂಬಡಿಕೆಯ ಮಂಜೂಷದ ಮೇಲೆ ಇರುವ ಕರುಣಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವ ಧ್ವನಿಯನ್ನು ಮೋಶೆಯು ಕೇಳಿದನು. ಹೀಗೆ ದೇವರು ಅವನ ಸಂಗಡ ಮಾತನಾಡಿದರು.


ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನಿನ್ನ ಅಣ್ಣನಾದ ಆರೋನನು ಮಂಜೂಷದ ಮೇಲಿರುವ ಕರುಣಾಸನದ ಮುಂದಿರುವ ತೆರೆಯ ಒಳಗೆ ಮಹಾಪರಿಶುದ್ಧ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ, ಇಲ್ಲವಾದರೆ ಅವನು ಸಾಯುತ್ತಾನೆ, ಏಕೆಂದರೆ ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.


ಯೆಹೋವ ದೇವರು ಆಳಿಕೆ ಮಾಡುತ್ತಾರೆ. ರಾಷ್ಟ್ರಗಳು ನಡುಗಲಿ. ಅವರು ಕೆರೂಬಿಗಳ ಮಧ್ಯದಲ್ಲಿ ಕೂತಿದ್ದಾರೆ. ಭೂಮಿಯು ಕದಲಲಿ.


ಮಂದೆಯಂತೆ ಯೋಸೇಫ್ಯರನ್ನು ನಡೆಸುವ ಇಸ್ರಾಯೇಲರ ಕುರುಬ ಆಗಿರುವ ದೇವರೇ, ಕಿವಿಗೊಡಿರಿ. ಕೆರೂಬಿಗಳ ಮಧ್ಯದಲ್ಲಿ ಆಸೀನವಾಗಿರುವ ದೇವರೇ ಪ್ರಕಾಶಿಸಿರಿ.


ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕರುಣಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಯೆಹೋವ ದೇವರ ಎದುರಿನಲ್ಲಿ ಬೆಂಕಿಯ ಮೇಲೆ ಹಾಕಬೇಕು.


ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ.


ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.


ಆಗ ದಾವೀದನು ತನ್ನ ಮಗ ಸೊಲೊಮೋನನಿಗೆ, “ದ್ವಾರಾಂಗಳದ ಮಾದರಿಯನ್ನೂ, ಅದರ ಮನೆಗಳು, ಅದರ ಉಗ್ರಾಣಗಳು, ಅದರ ಮೇಲಿನ ಕೊಠಡಿಗಳು, ಅದರ ಅಂತರಂಗದ ಕೊಠಡಿಗಳು, ಕರುಣಾಸನದ ಸ್ಥಾನವು,


ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.


ಕೆರೂಬಿಗಳ ಮಧ್ಯದಲ್ಲಿರುವ ಸೇನಾಧೀಶ್ವರ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬರಲು ಶೀಲೋವಿಗೆ ಜನರನ್ನು ಕಳುಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ, ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು.


ಬಹು ಪ್ರಕಾರದ ದೇವರ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶ.


ಇಸ್ರಾಯೇಲರಾದ ಅವರಿಗೆ ಸ್ವೀಕಾರವೂ ದೇವರ ಮಹಿಮೆಯೂ ಒಡಂಬಡಿಕೆಗಳೂ ನಿಯಮ ಕೊಡೋಣವೂ ದೇವಾಲಯದ ಸೇವೆಯೂ ಹಾಗೂ ವಾಗ್ದಾನಗಳೂ ಒಪ್ಪಿಸಲಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು