Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 9:8 - ಕನ್ನಡ ಸಮಕಾಲಿಕ ಅನುವಾದ

8 ಹೊರಗಿನ ಗುಡಾರವು ಇನ್ನೂ ಇರುವ ತನಕ ಅತಿ ಪವಿತ್ರ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲವೆಂಬುದನ್ನು ಪವಿತ್ರಾತ್ಮ ದೇವರು ವ್ಯಕ್ತಪಡಿಸುತ್ತಾರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈ ಗುಡಾರದ ಮೊದಲನೆಯ ಭಾಗವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲ ಎಂಬುದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈ ವ್ಯವಸ್ಥೆಯಲ್ಲಿ ಗುಡಾರದ ಮೊದಲನೆಯ ಭಾಗ ಇರುವ ತನಕ ಗರ್ಭಗುಡಿಯನ್ನು ಪ್ರವೇಶಿಸುವ ಮಾರ್ಗ ತೆರೆದಿರುವುದಿಲ್ಲ, ಎಂಬುದನ್ನು ಪವಿತ್ರಾತ್ಮ ಸಾಂಕೇತಿಕವಾಗಿ ತಿಳಿಯಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈ ಏರ್ಪಾಟಿನಿಂದ ಗುಡಾರದಲ್ಲಿ ಮುಂದಣ ಭಾಗವು ಇರುವ ತನಕ ದೇವರ ಸಮಕ್ಷಮಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪವಿತ್ರಾತ್ಮನು ಆ ಎರಡು ಪ್ರತ್ಯೇಕವಾದ ಕೊಠಡಿಗಳ ಮೂಲಕ ನಮಗೆ ತಿಳಿಸುವುದೇನೆಂದರೆ, ಮೊದಲನೆ ಕೊಠಡಿಯು ಅಲ್ಲಿ ಇರುವವರೆಗೂ ಮಹಾ ಪವಿತ್ರಸ್ಥಳಕ್ಕೆ ಹೋಗುವ ಮಾರ್ಗವು ತೆರೆಯಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಪಯ್ಲಿ ಖೊಲಿ ರ್‍ಹಾಯ್ ಸಗ್ಳೆ ದೊನ್ವೆಚ್ಯಾ ಖೊಲಿಕ್ ಜಾತಲಿ ವಾಟ್ ಕಾಡುಕುಚ್ ಹೊವ್ಕ್ ನಾ, ಪವಿತ್ರ್ ಆತ್ಮೊ ಅಮ್ಕಾ ಸಾಂಗ್ತಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 9:8
15 ತಿಳಿವುಗಳ ಹೋಲಿಕೆ  

ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ಆದ್ದರಿಂದ ಪವಿತ್ರಾತ್ಮ ದೇವರು ಹೇಳುವ ಪ್ರಕಾರ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,


ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ನಾವೂ ನೀವೂ ಪವಿತ್ರಾತ್ಮ ದೇವರಿಂದ ತಂದೆಯ ಬಳಿಗೆ ಪ್ರವೇಶಿಸುವುದಕ್ಕೆ ಮಾರ್ಗವಾಯಿತು.


ಯಾವ ಪ್ರವಾದನೆಯೂ ಎಂದೂ ಮನುಷ್ಯನ ಚಿತ್ತದಿಂದ ಬರಲಿಲ್ಲ, ಆದರೆ ಪ್ರವಾದಿಗಳು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಪಡೆದುಕೊಂಡಿದ್ದನ್ನೇ ಮಾತನಾಡಿದರು.


ಎರಡನೆಯ ತೆರೆಯ ಆಚೆ ಅತಿ ಪವಿತ್ರ ಸ್ಥಳ ಎಂದು ಕರೆಯಲಾದ ಗುಡಾರವಿತ್ತು.


ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, “ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು.


ನಾನೇ ಬಾಗಿಲು; ನನ್ನ ಮೂಲಕವಾಗಿ ಯಾರು ಪ್ರವೇಶಿಸುವರೋ ಅವರೇ ಸುರಕ್ಷಿತವಾಗಿರುವರು. ಇದಲ್ಲದೆ ಅವರು ಒಳಗೆ ಹೋಗುವರು, ಹೊರಗೆ ಬರುವರು ಮತ್ತು ಮೇವನ್ನು ಕಂಡುಕೊಳ್ಳುವರು.


ಆದರೆ ಬೇರೆಯವರು ನಂಬಲಿಲ್ಲ. ಅವರು ತಮ್ಮತಮ್ಮಲ್ಲಿಯೇ ಭಿನ್ನಾಭಿಪ್ರಾಯ ಉಳ್ಳವರಾಗಿರಲು ಪೌಲನು ಅವರಿಗೆ, “ಪವಿತ್ರಾತ್ಮ ದೇವರು ನಿಮ್ಮ ಪಿತೃಗಳಿಗೆ ಪ್ರವಾದಿ ಯೆಶಾಯನ ಮುಖಾಂತರ ಈ ಮಾತುಗಳನ್ನು ಸರಿಯಾಗಿಯೇ ಹೇಳಿದ್ದಾರೆ:


ಯೇಸು ತಿರುಗಿ ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ.


ಆಗ ಆತನು ಪೂರ್ವಕಾಲದ ದಿವಸಗಳನ್ನೂ, ಮೋಶೆಯನ್ನೂ, ಅವನ ಜನರನ್ನೂ ಜ್ಞಾಪಕಮಾಡಿಕೊಂಡು “ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಸುರಕ್ಷಿತವಾಗಿ ಮೇಲಕ್ಕೆ ಬರಮಾಡಿದವನು ಎಲ್ಲಿ? ಅವರ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?


ಪವಿತ್ರಾತ್ಮ ದೇವರು ಸಹ ನಿಮಗೆ ಸಾಕ್ಷಿ ಕೊಡುವವರಾಗಿ,


ಆ ಶಿಶುವಾದ ಯೋಹಾನನು ಬೆಳೆದು, ಆತ್ಮದಲ್ಲಿ ಬಲಗೊಂಡು; ತನ್ನನ್ನು ಇಸ್ರಾಯೇಲರಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು