Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 1:6 - ಕನ್ನಡ ಸಮಕಾಲಿಕ ಅನುವಾದ

6 ಅವರ ನೆರೆಯವರೆಲ್ಲರು ಎಲ್ಲಾ ಕಾಣಿಕೆಗಳಲ್ಲದೇ, ಬೆಳ್ಳಿ ಹಾಗೂ ಬಂಗಾರದಿಂದ ಮಾಡಿದ ವಸ್ತುಗಳಿಂದಲೂ, ಪಶುಗಳಿಂದಲೂ, ಬೆಲೆಯುಳ್ಳವುಗಳಿಂದಲೂ ಅವರಿಗೆ ಧಾರಾಳವಾಗಿ ಸಹಾಯ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟಿದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರ ನೆರೆಯವರೆಲ್ಲರು ಕೊಡುಗೆಗಳನ್ನು ಕೊಟ್ಟರು; ಬೆಳ್ಳಿ ಸಾಮಾನುಗಳು, ಬಂಗಾರದ ಆಭರಣಗಳು, ಪಶುಪ್ರಾಣಿಗಳು, ಶ್ರೇಷ್ಠವಸ್ತುಗಳು, ಇತ್ಯಾದಿಗಳನ್ನು ನೀಡಿ ಸಹಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರ ನೆರೆಹೊರೆಯವರು ಅವರಿಗೆ ತುಂಬಾ ಕಾಣಿಕೆಗಳನ್ನು ಕೊಟ್ಟರು. ಅವರಿಗೆ ಬೆಳ್ಳಿಬಂಗಾರಗಳನ್ನು, ಪಶುಗಳನ್ನು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಧಾರಾಳವಾಗಿ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 1:6
12 ತಿಳಿವುಗಳ ಹೋಲಿಕೆ  

ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿರ್ಧರಿಸಿದ್ದನ್ನು ಕೊಡಲಿ. ಮನಸ್ಸಿಲ್ಲದ ಮನಸ್ಸಿನಿಂದಾಗಲಿ ಅಥವಾ ಬಲವಂತದಿಂದಾಗಲಿ ಕೊಡಬಾರದು. ಏಕೆಂದರೆ ಸಂತೋಷದಿಂದ ಕೊಡುವವನನ್ನು ದೇವರು ಪ್ರೀತಿಸುತ್ತಾರೆ.


ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು.


ತರುವಾಯ ನಾಲ್ಕನೆಯ ದಿವಸದಲ್ಲಿ ಆ ಬೆಳ್ಳಿಯೂ, ಬಂಗಾರವೂ, ಸಲಕರಣೆಗಳೂ ನಮ್ಮ ದೇವರ ಆಲಯದಲ್ಲಿ ಯಾಜಕರಾಗಿರುವ ಊರೀಯನ ಮಗ ಮೆರೇಮೋತನ ಕೈಯಿಂದ ತೂಕಮಾಡಿ ಕೊಟ್ಟೆವು. ಅವನ ಸಂಗಡ ಲೇವಿಯರಾದ ಫೀನೆಹಾಸನ ಮಗನಾಗಿರುವ ಎಲಿಯಾಜರನೂ, ಯೇಷೂವನ ಮಗ ಯೋಜಾಬಾದನೂ, ಬಿನ್ನೂಯ್ ಮಗ ನೋವದ್ಯನೂ ಇದ್ದರು.


ಯೆಹೂದ್ಯರಲ್ಲಿ ಬದುಕುಳಿದವರು ಈಗ ವಾಸಿಸುತ್ತಿರುವ ಯಾವುದೇ ಪ್ರದೇಶದಲ್ಲಿ, ಜನರು ಅವರಿಗೆ ಬೆಳ್ಳಿ ಮತ್ತು ಬಂಗಾರ, ಸರಕುಗಳು ಮತ್ತು ಪ್ರಾಣಿಪಶುಗಳನ್ನು ಮತ್ತು ಯೆರೂಸಲೇಮಿನ ದೇವಾಲಯಕ್ಕೆ ಉಚಿತ ಕಾಣಿಕೆಗಳನ್ನು ಒದಗಿಸಬೇಕು.’ ”


ಹೀಗೆ, “ಅವರ ಕೈಗಳು ಬಲಹೀನವಾಗುವುವು. ಕೆಲಸವು ಪೂರ್ತಿಯಾಗುವುದಿಲ್ಲ,” ಎಂದುಕೊಂಡು ಅವರೆಲ್ಲರು ನಮ್ಮನ್ನು ಭಯಪಡಿಸಿದರು. ನಾನಾದರೋ, “ದೇವರೇ, ನನ್ನ ಕೈಗಳನ್ನು ಬಲಪಡಿಸಿರಿ,” ಎಂದು ಪ್ರಾರ್ಥಿಸಿದೆನು.


ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ. ನಡುಗುವ ಮೊಣಕಾಲುಗಳನ್ನು ದೃಢಪಡಿಸಿರಿ.


ಇಸ್ರಾಯೇಲರು ಮೋಶೆಯು ಹೇಳಿದಂತೆ ಮಾಡಿ, ಬೆಳ್ಳಿಬಂಗಾರದ ಒಡವೆಗಳನ್ನೂ, ಬಟ್ಟೆಗಳನ್ನೂ ಈಜಿಪ್ಟಿನವರಿಂದ ಕೇಳಿ ಪಡೆದರು.


ಯೆಹೋವ ದೇವರು ಈಜಿಪ್ಟಿನವರ ಎದುರಿನಲ್ಲಿ ಜನರ ಮೇಲೆ ದಯೆ ತೋರಿಸಿದ್ದರಿಂದ, ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಈಜಿಪ್ಟಿನವರ ಸೊತ್ತನ್ನು ಸುಲಿದುಕೊಂಡರು.


ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ, ಜನರು ಸಂತೋಷಪಟ್ಟರು. ಏಕೆಂದರೆ ಅವರು ಪೂರ್ಣಮನಸ್ಸಿನಿಂದ ಮನಃಪೂರ್ವಕವಾಗಿ ಯೆಹೋವ ದೇವರಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷಪಟ್ಟನು.


ಅವರನ್ನು ಸೆರೆಹಿಡಿದವರ ಕರುಣೆ ತೋರುವಂತೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು