Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 2:2 - ಕನ್ನಡ ಸಮಕಾಲಿಕ ಅನುವಾದ

2 ಜೆರುಬ್ಬಾಬೆಲನ ಸಂಗಡ ಹಿಂದಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಹಾಗೂ ಬಾಣ. ಇಸ್ರಾಯೇಲ್ ಜನಾಂಗದ ಪುರುಷರ ಸಂಖ್ಯೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ ಎಂಬ ನಾಯಕರೊಡನೆ ಹಿಂತಿರುಗಿ ಬಂದವರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್, ಬಾಣ ಎಂಬ ನಾಯಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆರೂಸಲೇವಿುಗೂ ಯೆಹೂದ ಪ್ರಾಂತದ ಸ್ವಂತ ಪಟ್ಟಣಗಳಿಗೂ ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ವಿುಸ್ಪಾರ್, ಬಿಗ್ವೈ, ರೆಹೂಮ್, ಬಾಣ ಎಂಬ ನಾಯಕರೊಡನೆ ತಿರಿಗಿ ಬಂದವರು ಯಾರಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಜೆರುಬ್ಬಾಬೆಲನೊಂದಿಗೆ ಹಿಂತಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಮತ್ತು ಬಾಣ. ಇಸ್ರೇಲರಲ್ಲಿ ಹಿಂತಿರುಗಿ ಬಂದವರ ಹೆಸರು ಮತ್ತು ಸಂಖ್ಯೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 2:2
24 ತಿಳಿವುಗಳ ಹೋಲಿಕೆ  

ಆದರೂ ಈಗ ಯೆಹೋವ ದೇವರು ಹೀಗೆ ಹೇಳಿದರು: ‘ಜೆರುಬ್ಬಾಬೆಲನೇ, ಬಲವಾಗಿರು. ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನೇ, ಬಲವಾಗಿರು. ದೇಶದ ಜನರೆಲ್ಲರೇ, ಬಲವಾಗಿರಿ,’ ಕೆಲಸಮಾಡಿರಿ. ‘ನಾನು ನಿಮ್ಮ ಸಂಗಡ ಇದ್ದೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರು ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನ ಆತ್ಮವನ್ನೂ, ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನ ಆತ್ಮವನ್ನೂ, ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಪ್ರೇರೇಪಿಸಿದರು. ಅವರು ಬಂದು ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೇ ವರ್ಷದ, ಆರನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಯೆಹೋವ ದೇವರ ಆಲಯದ ಕೆಲಸ ಪ್ರಾರಂಭಿಸಿದರು. ಅರಸನಾದ ದಾರ್ಯಾವೆಷನ ಎರಡನೇ ವರ್ಷದಲ್ಲಿ,


ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನೂ ಜನರಲ್ಲಿ ಉಳಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರ ಮಾತನ್ನೂ ತಮ್ಮ ದೇವರಾದ ಯೆಹೋವ ದೇವರು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು. ಜನರು ಯೆಹೋವ ದೇವರಿಗೆ ಭಯಪಟ್ಟರು.


ಜೆರುಬ್ಬಾಬೆಲನ ಸಂಗಡ ಹಿಂದಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್, ಬಾಣ. ಇಸ್ರಾಯೇಲ್ ಜನಾಂಗದ ಪುರುಷರ ಸಂಖ್ಯೆ:


ಯೆಹೋಶುವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವನಾಗಿ ದೇವದೂತನ ಮುಂದೆ ನಿಂತನು.


ಆತನು ನನಗೆ, ಯೆಹೋವ ದೇವರ ದೂತನ ಮುಂದೆ ನಿಂತಿರುವ ಮಹಾಯಾಜಕನಾದ ಯೆಹೋಶುವನನ್ನೂ, ಅವನ ಮೇಲೆ ದೂರು ಹೇಳುವುದಕ್ಕೆ ಅವನ ಬಲಗಡೆಯಲ್ಲಿ ನಿಂತ ಸೈತಾನನನ್ನೂ ತೋರಿಸಿದನು.


ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನೆಂದರೆ, “ನಾನು ಆಕಾಶಗಳನ್ನೂ, ಭೂಮಿಯನ್ನೂ ಕದಲಿಸುವೆನು.


“ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಇದನ್ನು ಹೇಳತಕ್ಕದ್ದು.


ಪಾರಸಿಯ ಅರಸ ದಾರ್ಯಾವೆಷನ ಆಳಿಕೆಯ ಎರಡನೆಯ ವರ್ಷದಲ್ಲಿ, ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮುಖಾಂತರ, ಶೆಯಲ್ತಿಯೇಲನ ಮಗನು ಮತ್ತು ಯೆಹೂದದ ಅಧಿಪತಿ ಆದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನು ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಬಂದಿತು:


ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಪುನಃ ಕಟ್ಟಿಸಲು ಪ್ರಾರಂಭಿಸಿದರು. ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.


ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ, ಯೆರೂಸಲೇಮಿಗೆ ವಿರೋಧವಾಗಿ ಈ ಕೆಳಗೆ ಕಂಡಂತೆ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದ್ದರು.


ಆದರೆ ಜೆರುಬ್ಬಾಬೆಲನೂ, ಯೇಷೂವನೂ, ಮಿಕ್ಕಾದ ಇಸ್ರಾಯೇಲಿನ ಕುಟುಂಬಗಳ ಮುಖ್ಯಸ್ಥರೂ ಅವರಿಗೆ, “ನಮ್ಮ ದೇವರಿಗೆ ಆಲಯವನ್ನು ಕಟ್ಟುವುದರಲ್ಲಿ ನಿಮಗೆ ಭಾಗವಿಲ್ಲ. ಪಾರಸಿಯ ಅರಸನಾದ ಕೋರೆಷನು ನಮಗೆ ಆಜ್ಞಾಪಿಸಿದ ಹಾಗೆ, ನಾವು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರಿಗೆ ಅದನ್ನು ಕಟ್ಟುವೆವು,” ಎಂದರು.


ಒಟ್ಟು 5,400 ಬೆಳ್ಳಿಬಂಗಾರದಿಂದ ಮಾಡಿದ ವಸ್ತುಗಳು. ಇವುಗಳನ್ನೆಲ್ಲಾ ಬಾಬಿಲೋನಿನಿಂದ ಯೆರೂಸಲೇಮಿಗೆ ಪ್ರಯಾಣಮಾಡಿದವರ ಸಂಗಡ ಶೆಷ್ಬಚ್ಚರನು ತೆಗೆದುಕೊಂಡು ಹೋದನು.


ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ, ಬಾಬಿಲೋನಿಗೆ ಸೆರೆಯಾಗಿ ಹೋಗಿ, ಅನಂತರ ಬಂಧನದಿಂದ ಬಿಡುಗಡೆಯಾಗಿ ಯೆರೂಸಲೇಮಿಗೂ, ಯೆಹೂದಕ್ಕೂ, ತಮ್ಮ ತಮ್ಮ ಪಟ್ಟಣಗಳಿಗೂ


ಆಗ ಯೋಚಾದಾಕನ ಮಗನಾದ ಯೇಷೂವನೂ, ಅವನ ಜೊತೆ ಯಾಜಕರೂ, ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಅವನ ಸಹಾಯಕರು ಎದ್ದು ದೇವರ ಮನುಷ್ಯನಾದ ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವುದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.


ಅವುಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸದವನಾದ ಮಿತ್ರದಾತನ ಕೈಯಿಂದ ತರಿಸಿ, ಯೆಹೂದದ ರಾಜಕುಮಾರನಾದ ಶೆಷ್ಬಚ್ಚರನಿಗೆ ಎಣಿಸಿಕೊಟ್ಟನು.


ಅರಸನಾದ ಅರ್ತಷಸ್ತನ ಆಳಿಕೆಯಲ್ಲಿ ಬಾಬಿಲೋನಿನಿಂದ ನನ್ನ ಸಂಗಡ ಹೊರಟು ಬಂದವರ ಕುಟುಂಬಗಳಲ್ಲಿ ಮುಖ್ಯಸ್ಥರು ಯಾರೆಂದರೆ:


ಬುನ್ನಿ, ಅಜ್ಗಾದ್, ಬೇಬೈ,


ಆದ್ದರಿಂದ ಜೆರುಬ್ಬಾಬೆಲನ ದಿವಸಗಳಲ್ಲಿಯೂ, ನೆಹೆಮೀಯನ ದಿವಸಗಳಲ್ಲಿಯೂ ಇಸ್ರಾಯೇಲರೆಲ್ಲರು ಹಾಡುಗಾರರಿಗೂ, ದ್ವಾರಪಾಲಕರಿಗೂ, ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಇತರ ಲೇವಿಯರಿಗೆ ಭಾಗವನ್ನು ಪ್ರತ್ಯೇಕವಾಗಿಟ್ಟರು ಮತ್ತು ಲೇವಿಯರು ಆರೋನನ ವಂಶಸ್ಥರಿಗೆ ಭಾಗವನ್ನು ಪ್ರತ್ಯೇಕವಾಗಿಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು