Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 3:2 - ಕನ್ನಡ ಸಮಕಾಲಿಕ ಅನುವಾದ

2 ಆಗ ಯೋಚಾದಾಕನ ಮಗನಾದ ಯೇಷೂವನೂ, ಅವನ ಜೊತೆ ಯಾಜಕರೂ, ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಅವನ ಸಹಾಯಕರು ಎದ್ದು ದೇವರ ಮನುಷ್ಯನಾದ ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವುದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದೈವಪುರುಷ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ದಹನಬಲಿಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗ ಯೇಷೊವನೂ ಯಾಜಕರಾದ ಅವನ ಬಂಧುಗಳೂ ಹಾಗು ಶೆಯಲ್ತೀಯೇಲನ ಮಗ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಯೇಲ್ ದೇವರ ಬಲಿಪೀಠವನ್ನು ಪುನಃ ಕಟ್ಟುವುದಕ್ಕೆ ಆಗ ಆರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ ಯಾಜಕರಾದ ಅವನ ಬಂಧುಗಳೂ ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಾಯೇಲ್‍ದೇವರ ಯಜ್ಞವೇದಿಯನ್ನು ತಿರಿಗಿ ಕಟ್ಟುವದಕ್ಕೆ ಪ್ರಾರಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆಗ ಯೋಚಾದಾಕನ ಮಗನಾದ ಯೇಷೂವನೂ ಅವನೊಂದಿಗೆ ಇದ್ದ ಯಾಜಕರೂ ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲ್ ಮತ್ತು ಅವನೊಂದಿಗಿದ್ದ ಜನರೊಂದಿಗೆ ಇಸ್ರೇಲ್ ದೇವರಿಗೆ ಯಜ್ಞವೇದಿಕೆಯನ್ನು ಕಟ್ಟಿದರು. ದೇವರ ಸೇವಕನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ದೇವರಿಗೆ ಯಜ್ಞವನ್ನು ಸಮರ್ಪಿಸಲು ಇವರು ವೇದಿಕೆಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 3:2
33 ತಿಳಿವುಗಳ ಹೋಲಿಕೆ  

ಯೋದನು ಯೋಹಾನನ ಮಗನು, ಯೋಹಾನನು ರೇಸನ ಮಗನು, ರೇಸನು ಜೆರುಬ್ಬಾಬೆಲನ ಮಗನು, ಜೆರುಬ್ಬಾಬೆಲನು ಶೆಯಲ್ತೀಯೇಲನ ಮಗನು, ಶೆಯಲ್ತಿಯೇಲನು ನೇರಿಯನ ಮಗನು,


ಪಾರಸಿಯ ಅರಸ ದಾರ್ಯಾವೆಷನ ಆಳಿಕೆಯ ಎರಡನೆಯ ವರ್ಷದಲ್ಲಿ, ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮುಖಾಂತರ, ಶೆಯಲ್ತಿಯೇಲನ ಮಗನು ಮತ್ತು ಯೆಹೂದದ ಅಧಿಪತಿ ಆದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನು ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಬಂದಿತು:


ಜೆರುಬ್ಬಾಬೆಲನ ಸಂಗಡ ಹಿಂದಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಹಾಗೂ ಬಾಣ. ಇಸ್ರಾಯೇಲ್ ಜನಾಂಗದ ಪುರುಷರ ಸಂಖ್ಯೆ:


ಯೆಹೋಯಾಕೀನನು ಸೆರೆಯಲ್ಲಿದ್ದಾಗ ಅವನ ವಂಶಜರು: ಇವನ ಮಗ ಶೆಯಲ್ತಿಯೇಲ್,


ಅಲ್ಲಿ ಬೆಳ್ಳಿ, ಬಂಗಾರವನ್ನು ತೆಗೆದುಕೊಂಡು, ಕಿರೀಟಗಳನ್ನು ಮಾಡಿ, ಅವುಗಳನ್ನು ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನ ತಲೆಯ ಮೇಲೆ ಇಟ್ಟು,


“ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ. ಅವರು ಆಶ್ಚರ್ಯವನ್ನುಂಟುಮಾಡುವ ಮನುಷ್ಯರಾಗಿದ್ದಾರೆ. ನಾನು ‘ರೆಂಬೆ’ ಎಂಬ ನನ್ನ ಸೇವಕನನ್ನು ಬರಮಾಡುವೆನು ಎಂಬುದಕ್ಕೆ ಇವರೇ ಮುಂಗುರುತು.


ಆತನು ನನಗೆ, ಯೆಹೋವ ದೇವರ ದೂತನ ಮುಂದೆ ನಿಂತಿರುವ ಮಹಾಯಾಜಕನಾದ ಯೆಹೋಶುವನನ್ನೂ, ಅವನ ಮೇಲೆ ದೂರು ಹೇಳುವುದಕ್ಕೆ ಅವನ ಬಲಗಡೆಯಲ್ಲಿ ನಿಂತ ಸೈತಾನನನ್ನೂ ತೋರಿಸಿದನು.


“ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಶೆಯಲ್ತಿಯೇಲನ ಮಗನಾದ ನನ್ನ ಸೇವಕ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ನಿನ್ನನ್ನು ಮುದ್ರೆಯ ಉಂಗುರದ ಹಾಗೆ ಇಡುವೆನು. ಏಕೆಂದರೆ ನಿನ್ನನ್ನು ನಾನೇ ಆಯ್ದುಕೊಂಡಿದ್ದೇನೆ,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.”


ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನೆಂದರೆ, “ನಾನು ಆಕಾಶಗಳನ್ನೂ, ಭೂಮಿಯನ್ನೂ ಕದಲಿಸುವೆನು.


ಯೆಹೋವ ದೇವರು ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನ ಆತ್ಮವನ್ನೂ, ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನ ಆತ್ಮವನ್ನೂ, ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಪ್ರೇರೇಪಿಸಿದರು. ಅವರು ಬಂದು ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೇ ವರ್ಷದ, ಆರನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಯೆಹೋವ ದೇವರ ಆಲಯದ ಕೆಲಸ ಪ್ರಾರಂಭಿಸಿದರು. ಅರಸನಾದ ದಾರ್ಯಾವೆಷನ ಎರಡನೇ ವರ್ಷದಲ್ಲಿ,


ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನೂ ಜನರಲ್ಲಿ ಉಳಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರ ಮಾತನ್ನೂ ತಮ್ಮ ದೇವರಾದ ಯೆಹೋವ ದೇವರು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು. ಜನರು ಯೆಹೋವ ದೇವರಿಗೆ ಭಯಪಟ್ಟರು.


ಯೆಹೂದನ ಕುಲವನ್ನೂ, ತಾನು ಪ್ರೀತಿಮಾಡಿದ ಚೀಯೋನ್ ಪರ್ವತವನ್ನೂ ಆಯ್ದುಕೊಂಡರು.


ಲೇವಿಯರು ಯಾರೆಂದರೆ: ಯೇಷೂವ, ಬಿನ್ನೂಯ್, ಕದ್ಮಿಯೇಲ್, ಶೇರೇಬ್ಯ, ಯೆಹೂದ, ಕೃತಜ್ಞತೆಯ ಹಾಡುಗಳ ಜವಾಬ್ದಾರನಾಗಿದ್ದ ಮತ್ತನ್ಯನೂ, ಅವನ ಸಂಗಡಿಗರು.


ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನ ಮತ್ತು ಯೇಷೂವನ ಸಂಗಡ ಹೋದ ಯಾಜಕರೂ ಲೇವಿಯರೂ ಯಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,


ಆದರೆ ನನ್ನ ಹೆಸರು ಅಲ್ಲಿ ಇರುವಂತೆ ಯೆರೂಸಲೇಮನ್ನೂ, ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನೂ ಆರಿಸಿಕೊಂಡಿದ್ದೇನೆ,’ ಎಂದು ಹೇಳಿದ್ದರು.


ಪೆದಾಯನ ಮಕ್ಕಳು: ಜೆರುಬ್ಬಾಬೆಲನು, ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮನು, ಹನನ್ಯನು. ಇವರ ಸಹೋದರಿಯಾದ ಶೆಲೋಮೀತಳು.


“ಇದಲ್ಲದೆ ಜಾಲಿ ಮರದಿಂದ ಬಲಿಪೀಠವನ್ನು ಮಾಡಬೇಕು. ಅದರ ಎತ್ತರವು ಸುಮಾರು ಒಂದು ಮೀಟರ್ ಇರಬೇಕು. ಅದರ ಉದ್ದ ಮತ್ತು ಅಗಲವು ಸುಮಾರು ಎರಡೂವರೆ ಮೀಟರ್ ಚಚ್ಚೌಕವಾಗಿರಬೇಕು.


ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೆಯ ವರ್ಷದ, ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ, ಉಳಿದ ಅವರ ಸಹೋದರರಾದ ಯಾಜಕರೂ, ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ, ಕೆಲಸವನ್ನು ಪ್ರಾರಂಭಿಸಿ ಇಪ್ಪತ್ತು ವರ್ಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಯೆಹೋವ ದೇವರ ಆಲಯದ ಕೆಲಸ ಮಾಡುವವರ ಮೇಲೆ ಮೇಲ್ವಿಚಾರಕರನ್ನಾಗಿ ನೇಮಿಸಿದರು.


ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಪುನಃ ಕಟ್ಟಿಸಲು ಪ್ರಾರಂಭಿಸಿದರು. ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.


ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.


“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುವಾಸನೆಗೋಸ್ಕರ ಅರ್ಪಿಸುವ ಅಂದರೆ, ದಹನಬಲಿಗಾಗಿ ಆಹಾರವನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವಂತೆ ನೀವು ನೋಡಿಕೊಳ್ಳಿರಿ.’


ಗಿದ್ಯೋನನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ, “ಯೆಹೋವ ಶಾಲೋಮ್” ಎಂದು ಅದಕ್ಕೆ ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಒಫ್ರದಲ್ಲಿ ಇನ್ನೂ ಇದೆ.


ದೇವರ ಮನುಷ್ಯನಾದ ಮೋಶೆಯಾದರೋ, ಅವನ ಪುತ್ರರು ಲೇವಿಯ ಗೋತ್ರದಲ್ಲಿ ಲೆಕ್ಕಿತರಾಗಿದ್ದರು.


ಯಾಜಕರ ವಂಶಜರಲ್ಲಿ ಅನ್ಯ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು ಯಾರೆಂದರೆ: ಯೋಚಾದಾಕನ ಮಗ ಯೇಷೂವನು ಮತ್ತು ಅವನ ಸಹೋದರರಲ್ಲಿ: ಮಾಸೇಯನು, ಎಲೀಯೆಜೆರನು, ಯಾರೀಬನು, ಗೆದಲ್ಯನು.


ಇಮ್ಮೇರನ ವಂಶಜರಲ್ಲಿ: ಹನಾನೀ, ಜೆಬದ್ಯ.


ಹಾರಿಮನ ವಂಶಜರಲ್ಲಿ: ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್, ಉಜ್ಜೀಯ.


ಪಷ್ಹೂರನ ವಂಶಜರಲ್ಲಿ: ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೆಯೇಲ್, ಯೋಜಾಬಾದ್ ಮತ್ತು ಎಲ್ಲಾಸ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು