Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:15 - ಕನ್ನಡ ಸಮಕಾಲಿಕ ಅನುವಾದ

15 ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರ ಗ್ರಂಥದಲ್ಲಿ ಪರಿಶೋಧಿಸಬೇಕೆಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣ ರಾಜಕಂಟಕವಾದ ಪಟ್ಟಣ. ಅರಸರಿಗೂ, ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥ ಪಟ್ಟಣ. ಇದು ಪೂರ್ವಕಾಲದಿಂದಲೂ ದೇಶದ್ರೋಹ ಮಾಡುತ್ತಾ ಬಂದಿದೆ ಎಂದೂ ಹಾಗು ಆ ಕಾರಣದಿಂದಲೇ ನೆಲಸಮವಾಯಿತೆಂದೂ ಆ ಚರಿತ್ರ ಗ್ರಂಥದಲ್ಲಿ ಕಂಡುಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥಗಳನ್ನು ಪರಿಶೋಧಿಸಿ ತಿಳಿದುಕೊಳ್ಳುವುದು ಸೂಕ್ತ ಎಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬುದೂ ಆ ಕಾರಣದಿಂದಲೇ ಈ ಪಟ್ಟಣವು ನೆಲಸಮವಾಯಿತು ಎಂದು ಆ ಚರಿತ್ರಾ ಗ್ರಂಥದಲ್ಲಿ ಕಂಡುಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥದಲ್ಲಿ ಪರಿಶೋಧಿಸಬೇಕೆಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣ ರಾಜಕಂಟಕವಾದ ಪಟ್ಟಣ. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥ ಪಟ್ಟಣ. ಇದು ಪೂರ್ವಕಾಲದಿಂದಲೂ ದಂಗೆಯೆಬ್ಬಿಸುತ್ತಾ ಬಂದಿದೆ ಎಂದೂ ಹಾಗು ಆ ಕಾರಣದಿಂದಲೇ ನೆಲಸಮವಾಯಿತೆಂದೂ ಆ ಚರಿತ್ರಗ್ರಂಥದಲ್ಲಿ ಕಂಡುಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥದಲ್ಲಿ ಪರಿಶೋಧಿಸಬೇಕೆಂಬದು ನಮ್ಮ ಅಭಿಪ್ರಾಯ. ಆ ಪಟ್ಟಣವು ರಾಜಕಂಟಕವಾದ ಪಟ್ಟಣವು, ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥದು, ಪೂರ್ವಕಾಲದಿಂದಲೇ ದಂಗೆಯೆಬ್ಬಿಸುವಂಥದು ಎಂಬದೂ ಆ ಕಾರಣದಿಂದಲೇ ಹಾಳುಮಾಡಲ್ಪಟ್ಟಿತೆಂಬದೂ ಆ ಚರಿತ್ರ ಗ್ರಂಥದಲ್ಲಿ ಕಂಡುಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ರಾಜನಾದ ಅರ್ತಷಸ್ತನೇ, ನಿಮಗಿಂತ ಮೊದಲು ಆಳಿದ ರಾಜರ ಬಗ್ಗೆ ಬರೆದ ವೃತ್ತಾಂತವನ್ನು ಓದಿರಿ ಎಂದು ನಿಮ್ಮನ್ನು ವಿನಂತಿಸುತ್ತೇವೆ. ಜೆರುಸಲೇಮ್ ಯಾವಾಗಲೂ ಇತರ ರಾಜರುಗಳಿಗೆ ಎದುರುಬೀಳುವುದನ್ನು ನೀವು ಅದರಲ್ಲಿ ಕಂಡುಕೊಳ್ಳುವಿರಿ. ಬೇರೆ ರಾಜರನ್ನು ಮತ್ತು ದೇಶಗಳವರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದು ಮಾತ್ರವಲ್ಲ, ಪೂರ್ವಕಾಲದಿಂದಲೂ ಈ ನಗರದಿಂದ ಎಷ್ಟೋ ದಂಗೆಗಳು ಎದ್ದಿವೆ. ಆ ಕಾರಣಕ್ಕಾಗಿಯೇ ಜೆರುಸಲೇಮ್ ನಾಶಮಾಡಲ್ಪಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:15
12 ತಿಳಿವುಗಳ ಹೋಲಿಕೆ  

ಅದಾಗಿ, ತಮ್ಮ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು, ಯೆರೂಸಲೇಮನ್ನು ಸೇರಿ, ರಾಜಕಂಟಕವಾದ ಆ ದುಷ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಮತ್ತೆ ಕಟ್ಟುವುದಕ್ಕೆ ಪ್ರಾರಂಭಿಸಿ, ಪೌಳಿಗೋಡೆಯ ಅಸ್ತಿವಾರವನ್ನು ಮುಗಿಸಿದ್ದಾರೆ ಎಂಬುದಾಗಿ ನಾವು ರಾಜರಿಗೆ ಅರಿಕೆ ಮಾಡಿಕೊಳ್ಳುತ್ತೇವೆ.


ಅದರಲ್ಲಿ ಹೀಗೆ ಬರೆದಿತ್ತು: “ಗೆಷೆಮ್ ಎಂಬವನು ನನಗೆ ತಿಳಿಸಿದ ಪ್ರಕಾರ ನೀನೂ, ಯೆಹೂದ್ಯರೂ ತಿರುಗಿಬೀಳಲು ಯೋಚಿಸುತ್ತೀರಿ. ಆದಕಾರಣ ಈ ಮಾತುಗಳ ಪ್ರಕಾರ ನೀನು ಅವರಿಗೆ ಅರಸನಾಗಿರುವ ಹಾಗೆ ಗೋಡೆಯನ್ನು ಪುನಃ ಕಟ್ಟಿಸುತ್ತಿದ್ದೀ.


ಆದರೆ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ಯ ದಾಸನಾದ ಟೋಬೀಯನೂ, ಅರಬಿಯನಾದ ಗೆಷೆಮನೂ ಇದನ್ನು ಕೇಳಿದಾಗ, ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ, “ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರುಗಿಬೀಳುವಿರೋ?” ಎಂದರು.


ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.


ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. ಅನಂತರ ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.


ನಾವಾದರೋ ಅರಮನೆಯ ಉಪ್ಪನ್ನು ತಿನ್ನುವವರು, ಅರಸರಿಗೆ ಅಪಮಾನವಾಗುವುದನ್ನು ಕಂಡು ಸುಮ್ಮನೆ ಇರುವುದು ಉಚಿತವಲ್ಲವೆಂದು ತಿಳಿದು, ತಮಗೆ ಈ ಪತ್ರದ ಮೂಲಕ ಸುದ್ದಿ ಕಳುಹಿಸಿದ್ದೇವೆ.


ಆ ಪಟ್ಟಣವನ್ನೂ, ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ, ತಮಗೆ ಯೂಫ್ರೇಟೀಸ್ ನದಿಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸನಿಗೆ ಅರಿಕೆ ಮಾಡಿಕೊಳ್ಳುತ್ತೇವೆ.


ಈ ವಿಷಯ ವಿಚಾರಣೆಗೆ ಬಂದಾಗ ನಿಜವೆಂದು ಗೊತ್ತಾಯಿತು. ಆಗ ಆ ಇಬ್ಬರು ಅಧಿಕಾರಿಗಳನ್ನೂ ಗಲ್ಲಿಗೇರಿಸಲಾಯಿತು. ಇವೆಲ್ಲವನ್ನೂ ಅರಸನ ಮುಂದೆ ಇರುವ ರಾಜನ ಇತಿಹಾಸಗಳ ಪುಸ್ತಕದಲ್ಲಿ ಬರೆದಿಡಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು