Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:17 - ಕನ್ನಡ ಸಮಕಾಲಿಕ ಅನುವಾದ

17 ಈ ಪತ್ರಕ್ಕೆ ಅರಸನು ಅವರಿಗೆ ಕೊಟ್ಟ ಉತ್ತರ: ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರಿಗೂ, ಸಮಾರ್ಯದಲ್ಲಿರುವವರಿಗೂ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಇತರರಿಗೂ, ಕ್ಷೇಮಾಭಿಲಾಶೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅರಸನು ಅವರಿಗೆ ಕೊಟ್ಟ ಉತ್ತರವು, “ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಅವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ, ನಮ್ಮ ಕುಶಲಕ್ಷೇಮಗಳ ಅಭಿಲಾಷೆ ವ್ಯಕ್ತಪಡಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಈ ಪತ್ರಕ್ಕೆ ಅರಸ ಅವರಿಗೆ ಕೊಟ್ಟ ಉತ್ತರ: “ರಾಜ್ಯಪಾಲ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರಿಗೂ ಸಮಾರಿಯದಲ್ಲಿರುವ ಅವರ ಜೊತೆಗಾರರಿಗೂ ನದಿಯ ಆಚೆಯಲ್ಲಿರುವ ಇತರರಿಗೂ ಕ್ಷೇಮಾಭಿಲಾಶೆಗಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅರಸನು ಅವರಿಗೆ ಕೊಟ್ಟ ಉತ್ತರವು - ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರಿಗೂ ಸಮಾರ್ಯದಲ್ಲಿರುವ ಇವರ ಜೊತೆಗಾರರಿಗೂ ಹೊಳೆಯ ಆಚೆಯಲ್ಲಿರುವ ಇತರರಿಗೂ ಕ್ಷೇಮ ಇತ್ಯಾದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈ ಪತ್ರಕ್ಕೆ ಅರಸನಾದ ಅರ್ತಷಸ್ತನು ಈ ರೀತಿಯಾಗಿ ಉತ್ತರಿಸಿದನು. ದೇಶಾಧಿಪತಿಯಾದ ರೆಹೂಮನಿಗೂ ಕಾರ್ಯದರ್ಶಿಯಾದ ಶಿಂಷೈಗೂ ಮತ್ತು ಸಮಾರ್ಯದಲ್ಲೂ ಯೂಫ್ರೇಟೀಸ್ ಪಶ್ಚಿಮ ಪ್ರಾಂತ್ಯದಲ್ಲೂ ವಾಸಿಸುವ ಜನರಿಗೆ ವಂದನೆಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:17
11 ತಿಳಿವುಗಳ ಹೋಲಿಕೆ  

ರೋಮ್ ನಗರದಲ್ಲಿ ದೇವರಿಗೆ ಪ್ರಿಯರೂ ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲಾದವರೂ ಆಗಿರುವವರೆಲ್ಲರಿಗೂ: ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ಕೃಪೆಯೂ ಶಾಂತಿಯೂ ಆಗಲಿ.


ಮಹಾಪ್ರಭುಗಳಾದ ರಾಜ್ಯಪಾಲ ಫೇಲಿಕ್ಸ್, ಅವರಿಗೆ ಕ್ಲೌದ್ಯ ಲೂಸ್ಯನು, ಮಾಡುವ ವಂದನೆಗಳು.


“ನೀವು ಯಾವ ಮನೆಯನ್ನಾದರೂ ಪ್ರವೇಶಿಸುವಾಗ ಮೊದಲು, ‘ಈ ಮನೆಗೆ ಸಮಾಧಾನವಾಗಲಿ,’ ಎಂದು ಹೇಳಿರಿ.


ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ, ಪರಲೋಕ ದೇವರ ನಿಯಮದಲ್ಲಿ ಪ್ರವೀಣನೂ ಆದ ಎಜ್ರನಿಗೆ, ವಂದನೆಗಳು.


ಅವರು ಅವನ ಬಳಿಗೆ ಕಳುಹಿಸಿದ ಪತ್ರದ ಪ್ರತಿಯಲ್ಲಿ: ಅರಸನಾದ ದಾರ್ಯಾವೆಷನಿಗೆ: ಸರ್ವತಾ ಕ್ಷೇಮ.


ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ, ಮಿತ್ರದಾತನೂ, ಟಾಬೆಯೇಲನೂ, ಮಿಕ್ಕಾದ ಅವರ ಜೊತೆಗಾರರೂ ಪಾರಸಿಯ ಅರಸನಾದ ಅರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯ ಭಾಷೆಯಲ್ಲಿಯೂ, ಅರಾಮ್ಯ ಲಿಪಿಯಲ್ಲಿಯೂ ಇತ್ತು.


ಆ ಪಟ್ಟಣವನ್ನೂ, ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ, ತಮಗೆ ಯೂಫ್ರೇಟೀಸ್ ನದಿಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸನಿಗೆ ಅರಿಕೆ ಮಾಡಿಕೊಳ್ಳುತ್ತೇವೆ.


ನೀವು ಕಳುಹಿಸಿದ್ದ ಪತ್ರವನ್ನು ನನ್ನ ಸನ್ನಿಧಿಯಲ್ಲಿ ಸ್ಪಷ್ಟವಾಗಿ ಓದಿ ಅನುವಾದ ಮಾಡಲಾಯಿತು.


ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ, ಜನಾಂಗಗಳಿಗೂ, ಭಾಷೆಯವರಿಗೂ, ನಿಮಗೆ ಶಾಂತಿಯು ಹೆಚ್ಚಾಗಲಿ.


ಆಗ ಅರಸನಾದ ದಾರ್ಯಾವೆಷನು ಭೂಲೋಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ, ಭಾಷೆಗಳವರೆಗೆ ಬರೆದದ್ದೇನೆಂದರೆ, “ನೀವು ಅಪಾರವಾಗಿ ಸಮೃದ್ಧಿಗೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು