Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:6 - ಕನ್ನಡ ಸಮಕಾಲಿಕ ಅನುವಾದ

6 ಆದರೆ ಅಹಷ್ವೇರೋಷನು ಆಳುವಾಗ, ಅವನ ಆಳ್ವಿಕೆಯ ಪ್ರಾರಂಭದಲ್ಲಿ, ಅವರು ಯೆಹೂದ ಮತ್ತು ಯೆರೂಸಲೇಮಿನ ನಿವಾಸಿಗಳಿಗೆ ವಿರೋಧವಾಗಿ ದೂರು ಸಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಹಷ್ವೇರೋಷನ ಆಳ್ವಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ವಾಸ ಮಾಡುತ್ತಿದ್ದವರ ವಿರುದ್ಧವಾಗಿ ಆಪಾದನೆಯ ಪತ್ರವನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ, ಅಹಷ್ಟೇರೋಷನ ಆಳ್ವಿಕೆಯ ಆರಂಭದಲ್ಲಿ ಅವರು ಜುದೇಯ ಹಾಗು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದವರಿಗೆ ವಿರುದ್ಧ ಆಪಾದನ ಪತ್ರವನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಹಷ್ವೇರೋಷನ ಆಳಿಕೆಯ ಪ್ರಾರಂಭದಲ್ಲಿ ಅವರು ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ವಾಸಿಸುವವರಿಗೆ ವಿರೋಧವಾಗಿ ಆಪಾದನ ಪತ್ರವನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಶತ್ರುಗಳು ಪರ್ಶಿಯ ರಾಜನಿಗೆ ಪತ್ರವನ್ನು ಬರೆದು ದೇವಾಲಯವನ್ನು ಕಟ್ಟುವ ಕಾರ್ಯವನ್ನು ನಿಲ್ಲಿಸಬೇಕೆಂದು ಬೇಡಿಕೊಂಡರು. ಅಹಷ್ವೇರೋಷನು ಪರ್ಶಿಯ ದೇಶದ ಅರಸನಾದಾಗ ಅವನಿಗೆ ಪತ್ರ ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:6
13 ತಿಳಿವುಗಳ ಹೋಲಿಕೆ  

ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಆದ ದಾರ್ಯಾವೆಷನ ಆಳ್ವಿಕೆಯ ಪ್ರಥಮ ವರ್ಷದಲ್ಲಿ ಬಾಬಿಲೋನ್ ರಾಜ್ಯದ ಮೇಲೆ ಅಧಿಕಾರಿಯಾಗಿದ್ದಾಗ,


ಭಾರತ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗಿನ ನೂರ ಇಪ್ಪತ್ತೇಳು ಸಂಸ್ಥಾನಗಳನ್ನು ಅಹಷ್ವೇರೋಷನು ಆಳುತ್ತಿದ್ದನು.


ಆಗ ಪರಲೋಕದಲ್ಲಿ ಮಹಾಧ್ವನಿಯನ್ನು ಕೇಳಿದೆನು. ಅದು, “ರಕ್ಷಣೆಯೂ ಶಕ್ತಿಯೂ ರಾಜ್ಯವೂ ಈಗ ನಮ್ಮ ದೇವರದಾದವು. ದೇವರ ಕ್ರಿಸ್ತ ಆಗಿರುವವರ ಅಧಿಕಾರವು ಈಗ ಸ್ಥಾಪಿತವಾಯಿತು. ಹಗಲಿರುಳು ನಮ್ಮ ಸಹೋದರರ ಮೇಲೆ, ನಮ್ಮ ದೇವರ ಮುಂದೆ ದೂರು ಹೇಳುವ ದೂರುಗಾರನನ್ನು ತಳ್ಳಲಾಗಿದೆ.


ಪೌಲನು ಅಲ್ಲಿಗೆ ಬಂದಾಗ, ಯೆರೂಸಲೇಮಿನಿಂದ ಬಂದ ಯೆಹೂದ್ಯರು ಅವನ ಸುತ್ತಲೂ ಎದ್ದು ನಿಂತು, ಅನೇಕ ತೀವ್ರ ಆಪಾದನೆಗಳನ್ನು ಅವನ ವಿರುದ್ಧ ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಗೆ ಸಾಧ್ಯವಾಗಲಿಲ್ಲ.


ಈಗ ಅವರು ನನ್ನ ಮೇಲೆ ಹೊರಿಸುತ್ತಿರುವ ಆಪಾದನೆಗಳನ್ನು ನಿಮ್ಮ ಮುಂದೆ ಅವರು ರುಜುಮಾಡಿ ತೋರಿಸಲಾರರು.


ಯೇಸುವಿನ ತಲೆಯ ಮೇಲ್ಭಾಗದಲ್ಲಿ ಅವರ ವಿರುದ್ಧ ದೋಷಾರೋಪಣೆಯನ್ನು ಬರೆದಿಟ್ಟರು. ಅದೇನೆಂದರೆ: ಈತನು ಯೆಹೂದ್ಯರ ಅರಸನಾದ ಯೇಸು.


ಪಾರಸಿಯ ಅರಸನಾದ ಕೋರೆಷನ ದಿನಗಳಿಂದ ಹಿಡಿದು, ಪಾರಸಿಯ ಅರಸನಾದ ದಾರ್ಯಾವೆಷನ ಆಳ್ವಿಕೆಯವರೆಗೂ, ಅವರ ಯೋಚನೆಯನ್ನು ವ್ಯರ್ಥಮಾಡುವುದಕ್ಕೆ ಅವರ ವಿರೋಧವಾಗಿ ವಕೀಲರನ್ನು ಹಣಕೊಟ್ಟು ಇಟ್ಟುಕೊಂಡರು.


ಏಳನೆಯ ದಿವಸದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸದಿಂದ ಅಮಲೇರಿದಾಗ ಬಹುರೂಪವತಿಯಾದ ವಷ್ಟಿ ರಾಣಿಯ ಸೌಂದರ್ಯವನ್ನು ಜನರಿಗೂ ಪ್ರಧಾನರಿಗೂ ಪ್ರದರ್ಶಿಸುವುದಕ್ಕೆ ರಾಣಿಗೆ ರಾಜಕಿರೀಟವನ್ನು ಧರಿಸಿಕೊಂಡು ತನ್ನ ಮುಂದೆ ಕರೆದುಕೊಂಡು ಬರುವುದಕ್ಕೆ ಅರಸನಾದ ಅಹಷ್ವೇರೋಷನ ಸಮ್ಮುಖದಲ್ಲಿ ಸೇವೆ ಮಾಡುವ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರಕಾಸ್ ಎಂಬ ಏಳುಮಂದಿ ಕಂಚುಕಿಗಳಿಗೆ ಹೇಳಿದನು.


ತರುವಾಯ ಅವರು ಇನ್ನೊಂದು ಬಾವಿಯನ್ನು ಅಗೆದಾಗ, ಅದಕ್ಕಾಗಿಯೂ ಅವರು ಜಗಳವಾಡಿದಾಗ, ಅವನು ಅದಕ್ಕೆ, ಸಿಟ್ನಾ, ಎಂದು ಹೆಸರಿಟ್ಟನು.


ಎಸ್ತೇರಳು ಅರಸನಾದ ಅಹಷ್ವೇರೋಷನ ಆಳಿಕೆಯ ಏಳನೆಯ ವರ್ಷದ ಹತ್ತನೆಯ ತಿಂಗಳಾದ ತೇಬೆತ್ ಎಂಬ ಪುಷ್ಯ ಮಾಸದಲ್ಲಿ ಅರಸನ ಬಳಿಗೆ ಕರೆತರಲಾಯಿತು.


ಆಗ ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಸಕಲ ಪ್ರಾಂತಗಳಲ್ಲಿರುವ ಜನರೊಳಗೆ ಚದರಿ ಬಂದು ವಾಸಿಸುವ ಪ್ರತ್ಯೇಕವಾದ ಜನಾಂಗದ ಜನರಿದ್ದಾರೆ. ಅವರ ರೀತಿನೀತಿಗಳು ಎಲ್ಲಾ ಜನರಿಗಿಂತಲೂ ಬೇರೆಯಾಗಿರುತ್ತವೆ. ಈ ಜನರು ಅರಸನ ನಿಯಮಗಳನ್ನು ಕೈಗೊಳ್ಳುವುದೇ ಇಲ್ಲ. ಆದಕಾರಣ ಇಂಥವರನ್ನು ಸುಮ್ಮನೇ ಬಿಡುವುದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.


ನಾನು ಈಗ ಸತ್ಯವನ್ನು ತಿಳಿಸುತ್ತೇನೆ. ಪಾರಸಿಯ ದೇಶದಲ್ಲಿ ಇನ್ನೂ ಮೂರು ಅರಸರು ಏಳುವರು. ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು. ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು