Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 4:9 - ಕನ್ನಡ ಸಮಕಾಲಿಕ ಅನುವಾದ

9 ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ, ಪರ್ಷಿಯಾ, ಯೆರೆಕ್ ಹಾಗೂ ಬಾಬೆಲಿನವರು, ಶೂಷನಿನವರ ಮತ್ತು ಏಲಾಮ್ಯರ ನ್ಯಾಯಾಧೀಶರು, ಅಧಿಕಾರಿಗಳು ಮತ್ತು ಆಡಳಿತಗಾರರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅದರಲ್ಲಿ, ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಇವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೂಷನಿನವರು, ದೆಹಾಯರು ಮತ್ತು ಏಲಾಮ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ರಾಜ್ಯಪಾಲ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರು, ಅವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೊಷನಿನವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅದರಲ್ಲಿ - ದೇಶಾಧಿಪತಿಯಾದ ರೆಹೂಮ್, ಲೇಖಕನಾದ ಶಿಂಷೈ ಇವರೂ ಇವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬೆಲಿನವರು, ಶೂಷನಿನವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ದೇಶಾಧಿಪತಿಯಾದ ರೆಹೂಮ, ಕಾರ್ಯದರ್ಶಿಯಾದ ಶಿಂಷೈ ಇವರೂ ಇವರ ಜೊತೆಗಾರರಾದ ಟರ್ಪಲಾಯರು, ಪರ್ಶಿಯದವರು, ಯೆರೆಕ್ಯರು, ಬಾಬಿಲೋನಿನವರು, ಕೂಷನಿನ ಏಲಾಮ್ಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 4:9
16 ತಿಳಿವುಗಳ ಹೋಲಿಕೆ  

ಬಳಿಕ ದಾರ್ಯಾವೆಷನು ಬರೆದು ಕಳುಹಿಸಿದ್ದು ಏನೆಂದರೆ, ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಅಧಿಪತಿಯಾದ ತತ್ತೆನೈನೇ, ಶೆತರ್ ಬೋಜೆನೈಯೇ, ನದಿಯ ಆಚೆಯಲ್ಲಿರುವ ನಿಮ್ಮ ಜೊತೆಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರಿ.


ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈನೂ, ಶೆತರ್ ಬೋಜೆನೈಯೂ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅವನ ಜೊತೆಗಾರರೂ, ಅರಸನಾದ ದಾರ್ಯಾವೆಷನಿಗೆ ಪತ್ರ ಬರೆದು ಕಳುಹಿಸಿದರು.


ಅಸ್ಸೀರಿಯದ ಅರಸನು ಬಾಬಿಲೋನ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಊರುಗಳ ಜನರನ್ನು ಬರಮಾಡಿ, ಅವರನ್ನು ಇಸ್ರಾಯೇಲರಿಗೆ ಬದಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಅವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು, ಅದರ ಪಟ್ಟಣಗಳಲ್ಲಿ ವಾಸಿಸಿದರು.


ಪಾರ್ಥಿಯರು, ಮೇದ್ಯರು ಹಾಗೂ ಏಲಾಮ್ಯರು, ಮೆಸೊಪೊಟೇಮಿಯ, ಯೂದಾಯ, ಕಪ್ಪದೋಕ್ಯ, ಪೊಂತ, ಏಷ್ಯಾ,


ಈ ದರ್ಶನದಲ್ಲಿ ನಾನು ನೋಡಿದ್ದೇನೆಂದರೆ: ನಾನು ಏಲಾಮ್ ಸೀಮೆಯಲ್ಲಿರುವ ಶೂಷನಿನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ನಾನು ಊಲಾ ನದಿಯ ದಡದ ಬಳಿಯಲ್ಲಿ ನಿಂತಿರುವ ಹಾಗೆ ತೋರಿತು.


“ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ. ಅವರೆಲ್ಲರೂ ಖಡ್ಗದಿಂದ ಹತರಾದವರೇ. ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದು ಹೋದವರೇ. ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.


ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆಮೀಯನಿಗೆ ಯೆಹೋವ ದೇವರಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು:


ಜಿಮ್ರಿಯ ಅರಸರೆಲ್ಲರಿಗೂ, ಏಲಾಮಿನ ಅರಸರೆಲ್ಲರಿಗೂ, ಮೇದ್ಯದ ಅರಸರೆಲ್ಲರಿಗೂ,


ಘೋರ ದರ್ಶನವು ನನಗೆ ತಿಳಿಯಬಂದಿದೆ: ಬಾಧಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.


ರೂಪವತಿಯಾರಾದ ಸಮಸ್ತ ಕನ್ಯೆಯರು ರಾಜಧಾನಿಯಾದ ಶೂಷನಿಗೆ ಸ್ತ್ರೀಯರು ಇರುವ ಅರಮನೆಗೆ, ಸ್ತ್ರೀಯರ ಮೇಲೆ ಕಾವಲಾಗಿ ಇರುವ ಅರಸನ ಅಧಿಕಾರಿಗಳಾದ ಹೇಗೈ ಎಂಬವನ ವಶಕ್ಕೆ ಒಪ್ಪಿಸಲಿ. ಅರಸನು ತನ್ನ ರಾಜ್ಯದ ಸಮಸ್ತ ಪ್ರಾಂತಗಳಲ್ಲಿ ಅಧಿಕಾರಿಗಳನ್ನು ನೇಮಿಸಲಿ. ಹೇಗೈ ಅವರಿಗೆ ಸೌಂದರ್ಯವರ್ಧಕ ಸಾಧನಗಳನ್ನು ಕೊಡಲಿ.


ಆ ದಿವಸಗಳಲ್ಲಿ ಅರಸನಾದ ಅಹಷ್ವೇರೋಷನು ರಾಜಧಾನಿಯಾದ ಶೂಷನಿನಲ್ಲಿ ಅರಮನೆಯಲ್ಲಿರುವ ತನ್ನ ರಾಜಸಿಂಹಾಸನದ ಮೇಲೆ ಕುಳಿತಿರುವಾಗ


ಶೇಮನ ಪುತ್ರರು: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್, ಅರಾಮ್.


ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ, ಯೆರೂಸಲೇಮಿಗೆ ವಿರೋಧವಾಗಿ ಈ ಕೆಳಗೆ ಕಂಡಂತೆ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದ್ದರು.


ತಮ್ಮ ಜೊತೆ ಕೆಲಸ ಮಾಡುವವರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ, “ಈ ಬಲಹೀನರಾದ ಯೆಹೂದ್ಯರು ಮಾಡುವುದೇನು? ಅವರು ತಮ್ಮ ಗೋಡೆಯನ್ನು ಪುನಃ ಕಟ್ಟುತ್ತಾರೆಯೇ? ಬಲಿಯನ್ನು ಅರ್ಪಿಸುವರೋ? ಪಟ್ಟಣವು ಬೆಂಕಿಯಲ್ಲಿ ಸುಟ್ಟುಹೋದಾಗ, ಕಲ್ಲಿನ ತುಂಡುಗಳ ರಾಶಿಯಿಂದ ಕಟ್ಟಡಕ್ಕೆ ಸೂಕ್ತವಾದ ಕಲ್ಲುಗಳನ್ನು ಹೊರತೆಗೆಯಲು ಅವರಿಗೆ ಸಾಧ್ಯವಾಗುತ್ತದೆಯೇ?” ಎಂದು ಹೇಳಿದನು.


ಆ ವೇಳೆಯಲ್ಲಿ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಪ್ರದೇಶಗಳ ಅಧಿಪತಿಯಾಗಿದ್ದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು, “ಈ ಆಲಯವನ್ನು ಪುನಃ ಕಟ್ಟಿ ತೀರಿಸುವುದಕ್ಕೆ ನಿಮಗೆ ಅಪ್ಪಣೆ ಕೊಟ್ಟವರು ಯಾರು?” ಎಂದು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು