Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:3 - ಕನ್ನಡ ಸಮಕಾಲಿಕ ಅನುವಾದ

3 ಆ ವೇಳೆಯಲ್ಲಿ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಪ್ರದೇಶಗಳ ಅಧಿಪತಿಯಾಗಿದ್ದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು, “ಈ ಆಲಯವನ್ನು ಪುನಃ ಕಟ್ಟಿ ತೀರಿಸುವುದಕ್ಕೆ ನಿಮಗೆ ಅಪ್ಪಣೆ ಕೊಟ್ಟವರು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆ ಸಮಯದಲ್ಲಿ ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ತಮ್ಮ ಜೊತೆಗಾರರೊಂದಿಗೆ ಅವರ ಬಳಿಗೆ ಬಂದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದೇ ಸಮಯಕ್ಕೆ, ನದಿಯ ಈಚೆಯ ಪ್ರದೇಶಗಳ ಅಧಿಪತಿಯಾಗಿದ್ದ ತತ್ತನೈಯು ಹಾಗು ಶತರ್ಬೋಜೆನೈಯು ಮತ್ತು ಇವರ ಜೊತೆಗಾರರು ಅವರ ಬಳಿಗೆ ಬಂದು, “ಈ ಅಸ್ತಿವಾರವನ್ನು ಸರಿಪಡಿಸಿ ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆ ಸಮಯದಲ್ಲಿ ಹೊಳೆಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಇವರ ಜೊತೆಗಾರರೂ ಅವರ ಬಳಿಗೆ ಬಂದು ಅವರನ್ನು - ಈ ಅಸ್ತಿವಾರವನ್ನು ಸರಿಪಡಿಸಿ ಈ ಆಲಯವನ್ನು ಕಟ್ಟುವದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು ಎಂದು ಕೇಳಿದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ಸಮಯದಲ್ಲಿ ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯದ ರಾಜ್ಯಪಾಲನಾಗಿದ್ದ ತತ್ತೆನೈ ಮತ್ತು ಶೆತರ್ಬೋಜೆನೈ ಮತ್ತು ಅವರ ಸಂಗಡಿಗರು ಜೆರುಬ್ಬಾಬೆಲ್, ಯೇಷೂವ ಮತ್ತು ಅವರ ಜೊತೆಗಾರರ ಬಳಿ ಬಂದು, “ನಿಮಗೆ ದೇವಾಲಯವನ್ನು ಮತ್ತೆ ಕಟ್ಟಲೂ ಅದನ್ನು ಹೊಸದಾಗಿ ಮಾಡಲೂ ಅಪ್ಪಣೆ ಕೊಟ್ಟವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:3
12 ತಿಳಿವುಗಳ ಹೋಲಿಕೆ  

ಬಳಿಕ ದಾರ್ಯಾವೆಷನು ಬರೆದು ಕಳುಹಿಸಿದ್ದು ಏನೆಂದರೆ, ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಅಧಿಪತಿಯಾದ ತತ್ತೆನೈನೇ, ಶೆತರ್ ಬೋಜೆನೈಯೇ, ನದಿಯ ಆಚೆಯಲ್ಲಿರುವ ನಿಮ್ಮ ಜೊತೆಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರಿ.


ಆಗ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅರಸನಾದ ದಾರ್ಯಾವೆಷನು ಕಳುಹಿಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು.


“ಆಗ ಈ ಆಲಯವನ್ನು ಕಟ್ಟುವುದಕ್ಕೂ ನಿಮಗೆ ಅಪ್ಪಣೆ ಕೊಟ್ಟವರು ಯಾರು?” ಎಂದು ನಾವು ಆ ಹಿರಿಯರನ್ನು ಕೇಳಿದೆವು.


ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಯೆಹೂದ, ಯೆರೂಸಲೇಮಿಗೆ ಹೋಗಿ, ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಒಂದು ದೇವಾಲಯವನ್ನು ಕಟ್ಟಲಿ, ಅವರ ಸಂಗಡ ಅವರ ದೇವರು ಇರಲಿ!


ಅವರು ಪೇತ್ರ ಯೋಹಾನರನ್ನು ತಮ್ಮೆದುರಿನಲ್ಲಿ ನಿಲ್ಲಿಸಿ ಅವರಿಗೆ, “ಯಾವ ಶಕ್ತಿಯಿಂದ ಇಲ್ಲವೆ, ಯಾವ ಹೆಸರಿನಿಂದ ನೀವಿದನ್ನು ಮಾಡಿದಿರಿ?” ಎಂದು ಪ್ರಶ್ನಿಸಿದರು.


ಅನಂತರ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿದ್ದಾಗ, ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿನ ಬಳಿಗೆ ಬಂದು, “ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.


“ಅರ್ತಷಸ್ತ ರಾಜನಾದ ನಾನು, ಯೂಫ್ರೇಟೀಸ್ ನದಿ ಆಚೆಯ ಪ್ರಾಂತಗಳ ಭಂಡಾರ ಮುಖ್ಯಸ್ಥರಿಗೆ ಆಜ್ಞಾಪಿಸುವುದೇನೆಂದರೆ ಯಾಜಕನೂ, ಪರಲೋಕ ದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.


ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈನೂ, ಶೆತರ್ ಬೋಜೆನೈಯೂ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅವನ ಜೊತೆಗಾರರೂ, ಅರಸನಾದ ದಾರ್ಯಾವೆಷನಿಗೆ ಪತ್ರ ಬರೆದು ಕಳುಹಿಸಿದರು.


ಅದಾಗಿ, ತಮ್ಮ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು, ಯೆರೂಸಲೇಮನ್ನು ಸೇರಿ, ರಾಜಕಂಟಕವಾದ ಆ ದುಷ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಮತ್ತೆ ಕಟ್ಟುವುದಕ್ಕೆ ಪ್ರಾರಂಭಿಸಿ, ಪೌಳಿಗೋಡೆಯ ಅಸ್ತಿವಾರವನ್ನು ಮುಗಿಸಿದ್ದಾರೆ ಎಂಬುದಾಗಿ ನಾವು ರಾಜರಿಗೆ ಅರಿಕೆ ಮಾಡಿಕೊಳ್ಳುತ್ತೇವೆ.


ಪಾರಸಿಯ ಅರಸ ದಾರ್ಯಾವೆಷನ ಆಳಿಕೆಯ ಎರಡನೆಯ ವರ್ಷದಲ್ಲಿ, ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮುಖಾಂತರ, ಶೆಯಲ್ತಿಯೇಲನ ಮಗನು ಮತ್ತು ಯೆಹೂದದ ಅಧಿಪತಿ ಆದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನು ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಬಂದಿತು:


ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ, ಪರ್ಷಿಯಾ, ಯೆರೆಕ್ ಹಾಗೂ ಬಾಬೆಲಿನವರು, ಶೂಷನಿನವರ ಮತ್ತು ಏಲಾಮ್ಯರ ನ್ಯಾಯಾಧೀಶರು, ಅಧಿಕಾರಿಗಳು ಮತ್ತು ಆಡಳಿತಗಾರರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು