Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 5:6 - ಕನ್ನಡ ಸಮಕಾಲಿಕ ಅನುವಾದ

6 ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈನೂ, ಶೆತರ್ ಬೋಜೆನೈಯೂ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅವನ ಜೊತೆಗಾರರೂ, ಅರಸನಾದ ದಾರ್ಯಾವೆಷನಿಗೆ ಪತ್ರ ಬರೆದು ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ, ಶೆತರ್ಬೋಜೆನೈಯೂ ಮತ್ತು ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರೂ ಅರಸನಾದ ದಾರ್ಯಾವೆಷನಿಗೆ ಕಳುಹಿಸಿದ ಪತ್ರದ ಪ್ರತಿಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನದಿಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯ ಮತ್ತು ಶೆತರ್ಬೋಜೆನೈಯ ಹಾಗು ನದಿಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರು ಅರಸ ದಾರ್ಯಾವೆಷನಿಗೆ ಪತ್ರ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹೊಳೆಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರೂ ಅರಸನಾದ ದಾರ್ಯಾವೆಷನಿಗೆ ಕಳುಹಿಸಿದ ಪತ್ರದ ಪ್ರತಿಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರಾಂತ್ಯದ ರಾಜ್ಯಪಾಲ ತತ್ತೆನೈ, ಶೆತರ್ಬೋಜೆನೈ ಮತ್ತು ಪ್ರಮುಖರು ರಾಜನಾದ ದಾರ್ಯಾವೆಷನಿಗೆ ಪತ್ರ ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 5:6
7 ತಿಳಿವುಗಳ ಹೋಲಿಕೆ  

ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ, ಪರ್ಷಿಯಾ, ಯೆರೆಕ್ ಹಾಗೂ ಬಾಬೆಲಿನವರು, ಶೂಷನಿನವರ ಮತ್ತು ಏಲಾಮ್ಯರ ನ್ಯಾಯಾಧೀಶರು, ಅಧಿಕಾರಿಗಳು ಮತ್ತು ಆಡಳಿತಗಾರರು,


ಬಳಿಕ ದಾರ್ಯಾವೆಷನು ಬರೆದು ಕಳುಹಿಸಿದ್ದು ಏನೆಂದರೆ, ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಅಧಿಪತಿಯಾದ ತತ್ತೆನೈನೇ, ಶೆತರ್ ಬೋಜೆನೈಯೇ, ನದಿಯ ಆಚೆಯಲ್ಲಿರುವ ನಿಮ್ಮ ಜೊತೆಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರಿ.


ಆ ವೇಳೆಯಲ್ಲಿ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಪ್ರದೇಶಗಳ ಅಧಿಪತಿಯಾಗಿದ್ದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು, “ಈ ಆಲಯವನ್ನು ಪುನಃ ಕಟ್ಟಿ ತೀರಿಸುವುದಕ್ಕೆ ನಿಮಗೆ ಅಪ್ಪಣೆ ಕೊಟ್ಟವರು ಯಾರು?” ಎಂದು ಕೇಳಿದರು.


ಅರಸನಾದ ಅರ್ತಷಸ್ತನ ಪತ್ರದ ಪ್ರತಿಯು ರೆಹೂಮನಿಗೂ, ಕಾರ್ಯದರ್ಶಿ ಶಿಂಷೈಯಿಗೂ, ಅವರ ಜೊತೆಗಾರರಿಗೂ ಓದಿದ ತರುವಾಯ, ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ, ಒತ್ತಾಯದಿಂದ ಮತ್ತು ಅಧಿಕಾರದಿಂದ ಅವರನ್ನು ನಿಲ್ಲಿಸುವಂತೆ ಮಾಡಿದರು.


ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಈ ರೀತಿಯಿತ್ತು: ಅರ್ತಷಸ್ತ ರಾಜರಿಗೆ, ತಮ್ಮ ಸೇವಕರಾದ ಯೂಫ್ರೇಟೀಸ್ ನದಿಯ ಈಚೆಯವರು:


ಅವರು ಅವನ ಬಳಿಗೆ ಕಳುಹಿಸಿದ ಪತ್ರದ ಪ್ರತಿಯಲ್ಲಿ: ಅರಸನಾದ ದಾರ್ಯಾವೆಷನಿಗೆ: ಸರ್ವತಾ ಕ್ಷೇಮ.


ಅವರು ಅರಸನ ಆಜ್ಞೆಗಳನ್ನು ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ, ಯಜಮಾನರಿಗೂ ಒಪ್ಪಿಸಿದರು. ಆಗ ಅವರು ಜನರಿಗೂ, ದೇವರ ಆಲಯಕ್ಕೂ ಸಹಾಯ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು