Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:1 - ಕನ್ನಡ ಸಮಕಾಲಿಕ ಅನುವಾದ

1 ಆಗ ಅರಸನಾದ ದಾರ್ಯಾವೆಷನ ಅಪ್ಪಣೆಯ ಪ್ರಕಾರ ಅವರು ಬಾಬಿಲೋನಿನ ಭಂಡಾರದಲ್ಲಿದ್ದ ಗ್ರಂಥಾಲಯದಲ್ಲಿ ಹುಡುಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅರಸನಾದ ದಾರ್ಯಾವೆಷನು ಬಾಬಿಲೋನಿನ ಗ್ರಂಥಸಂಗ್ರಹವಾಗಿದ್ದ ಬಾಬಿಲೋನಿನ ಭಂಡಾರದಲ್ಲಿ ರಾಜಾಜ್ಞೆಯನ್ನು ಹುಡುಕುವುದಕ್ಕೆ ಆಜ್ಞೆಯನ್ನು ಹೊರಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅರಸ ದಾರ್ಯಾವೆಷನ ಆಜ್ಞಾನುಸಾರ ಬಾಬಿಲೋನಿನ ಭಂಡಾರದಲ್ಲಿದ್ದ ಗ್ರಂಥ ಸಂಗ್ರಹದಲ್ಲಿ ಹುಡುಕಿನೋಡಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅರಸನಾದ ದಾರ್ಯಾವೆಷನ ಆಜ್ಞಾನುಸಾರವಾಗಿ ಗ್ರಂಥಸಂಗ್ರಹವಾಗಿದ್ದ ಬಾಬೆಲಿನ ಭಂಡಾರದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತನಗಿಂತ ಮೊದಲು ರಾಜರಾಗಿದ್ದವರ ವೃತ್ತಾಂತ ಪುಸ್ತಕಗಳನ್ನು ತರಿಸಿ ದಾರ್ಯಾವೆಷನು ಶೋಧಿಸಿದನು. ಈ ಪುಸ್ತಕಗಳು ರಾಜ ಖಜಾನೆಯಲ್ಲಿ ಇಡಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:1
16 ತಿಳಿವುಗಳ ಹೋಲಿಕೆ  

“ಆದ್ದರಿಂದ ಅರಸನಿಗೆ ಸರಿ ತೋರುವುದಾದರೆ, ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಪುನಃ ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ, ಇಲ್ಲವೋ ಎಂಬುದನ್ನು ಬಾಬಿಲೋನಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸೋಣವಾಗಲಿ,” ಎಂಬುದಾಗಿ ಉತ್ತರಕೊಟ್ಟರು.


ವಿಷಯವನ್ನು ರಹಸ್ಯ ಮಾಡುವುದು ದೇವರ ಮಹಿಮೆ. ಒಂದು ವಿಷಯವನ್ನು ಹುಡುಕುವುದು ರಾಜರ ಮಹಿಮೆ.


ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರ ಗ್ರಂಥದಲ್ಲಿ ಪರಿಶೋಧಿಸಬೇಕೆಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣ ರಾಜಕಂಟಕವಾದ ಪಟ್ಟಣ. ಅರಸರಿಗೂ, ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥ ಪಟ್ಟಣ. ಇದು ಪೂರ್ವಕಾಲದಿಂದಲೂ ದೇಶದ್ರೋಹ ಮಾಡುತ್ತಾ ಬಂದಿದೆ ಎಂದೂ ಹಾಗು ಆ ಕಾರಣದಿಂದಲೇ ನೆಲಸಮವಾಯಿತೆಂದೂ ಆ ಚರಿತ್ರ ಗ್ರಂಥದಲ್ಲಿ ಕಂಡುಬರುತ್ತದೆ.


ಸಿಂಹಾಸನದ ಮೇಲೆ ಕುಳಿತಿದ್ದವರ ಬಲಗೈಯಲ್ಲಿ ಒಂದು ಚರ್ಮದ ಸುರುಳಿಯನ್ನು ಕಂಡೆನು. ಅದರ ಒಳಗೂ ಹಿಂಭಾಗದಲ್ಲಿಯೂ ಬರೆಯಲಾಗಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.


ಇಗೋ, ನಾನು ನೋಡುತ್ತಿದ್ದಂತೆ ಒಂದು ಕೈ ನನ್ನ ಕಡೆಗೆ ಚಾಚಿತ್ತು. ಅದರಲ್ಲಿ ಗ್ರಂಥದ ಸುರುಳಿಯೊಂದು ಕಾಣಿಸಿತು.


ಆಗ ಯೆರೆಮೀಯನು ಮತ್ತೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗ ಲೇಖಕನಾದ ಬಾರೂಕನಿಗೆ ಕೊಟ್ಟನು. ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಸುರುಳಿಯ ವಾಕ್ಯಗಳನ್ನೆಲ್ಲಾ ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು. ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲಾದವು.


ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ, ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಹಾಳು ಮಾಡುವುದು ಖಂಡಿತ, ಎಂದು ಇದರಲ್ಲಿ ಏಕೆ ಬರೆದಿದ್ದೀ?” ಎಂದು ಹೇಳಿ ನೀನು ಈ ಸುರುಳಿಯನ್ನು ಸುಟ್ಟಿದ್ದೀ.


ಆಗ ನಾನು, “ಇಗೋ, ನಾನು ಇದ್ದೇನೆ, ನಾನು ಬಂದಿದ್ದೇನೆ. ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿದೆ.


ದರಿದ್ರರಿಗೆ ನಾನು ತಂದೆಯಾಗಿದ್ದೆನು; ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು.


ನನ್ನ ಆಜ್ಞಾನುಸಾರ ವಿಚಾರಣೆಯಾದಾಗ, ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರೋಧವಾಗಿ ಪ್ರತಿಭಟಿಸುತ್ತಾ, ದೇಶದ್ರೋಹ ಮಾಡುತ್ತಾ ಬಂದಿದ್ದಾರೆ.


ಇದಾದ ಮೇಲೆ ದೇವರು ನನಗೆ, “ಮನುಷ್ಯಪುತ್ರನೇ, ನಿನಗೆ ಸಿಕ್ಕಿದ್ದ ಈ ಸುರುಳಿಯನ್ನು ತಿಂದು, ಹೋಗಿ ಇಸ್ರಾಯೇಲಿನ ಜನರ ಸಂಗಡ ಮಾತನಾಡು,” ಎಂದರು.


ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು. ಏಕೆಂದರೆ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವುದಕ್ಕೆ ಅಸ್ಸೀರಿಯ ದೇಶದ ಅರಸನ ಹೃದಯವನ್ನು, ಅವರ ಕಡೆಗೆ ಮನಪರಿವರ್ತಿಸಿದ್ದರಿಂದ ಯೆಹೋವ ದೇವರು ಅವರನ್ನು ಸಂತೋಷಪಡಿಸಿದರು.


ನನ್ನ ರಾಜ್ಯದಲ್ಲಿರುವ ಇಸ್ರಾಯೇಲರಲ್ಲಿ, ಯಾಜಕರಲ್ಲಿ ಹಾಗು ಲೇವಿಯರಲ್ಲಿ ಯಾರಿಗೆ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸಿದೆಯೋ, ಅವರೆಲ್ಲರು ನಿನ್ನೊಂದಿಗೆ ಹೋಗಬಹುದೆಂದು ಅಪ್ಪಣೆ ಮಾಡುತ್ತೇನೆ.


“ಆದ್ದರಿಂದ ನೀನು ಅರಿತು ತಿಳಿಯಬೇಕಾದದ್ದು ಏನೆಂದರೆ, ಯೆರೂಸಲೇಮನ್ನು ತಿರುಗಿ ಕಟ್ಟಲು ಆಜ್ಞೆ ಹೊರಡುವ ದಿನದಿಂದ, ಆಳುವ ಒಬ್ಬ ಅಭಿಷಿಕ್ತರು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಿದ ಮೇಲೆ, ಅರವತ್ತೆರಡು ವಾರಗಳು ಇರುವುದು. ಕಷ್ಟಕಾಲದಲ್ಲಿ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಅದು ಕಟ್ಟಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು