Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:16 - ಕನ್ನಡ ಸಮಕಾಲಿಕ ಅನುವಾದ

16 ಆಗ ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ಸೆರೆಯಿಂದ ಬಂದ ಮಿಕ್ಕಾದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾಜಕರೂ, ಲೇವಿಯರೂ ಮತ್ತು ಸೆರೆಯಿಂದ ಹಿಂತಿರುಗಿ ಬಂದ ಬೇರೆ ಇಸ್ರಾಯೇಲರೂ ಸಂತೋಷದಿಂದ ಆ ದೇವಾಲಯದ ಪ್ರತಿಷ್ಠೆಯನ್ನು ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಯಾಜಕರು, ಲೇವಿಯರು ಹಾಗು ಸೆರೆಯಿಂದ ಹಿಂದಿರುಗಿ ಬಂದ ಬೇರೆ ಇಸ್ರಯೇಲರು ಸಂತೋಷದಿಂದ ಆ ದೇವಾಲಯದ ಪ್ರತಿಷ್ಠೆಯನ್ನು ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾಜಕರೂ ಲೇವಿಯರೂ ಸೆರೆಯಿಂದ ತಿರಿಗಿ ಬಂದ ಬೇರೆ ಇಸ್ರಾಯೇಲ್ಯರೂ ಸಂತೋಷದಿಂದ ಆ ದೇವಾಲಯದ ಪ್ರತಿಷ್ಠೆಯನ್ನು ಆಚರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಅನಂತರ ಇಸ್ರೇಲರೆಲ್ಲರೂ ಸೇರಿ ದೇವಾಲಯವನ್ನು ಅತ್ಯಂತ ಹರ್ಷದಿಂದ ಪ್ರತಿಷ್ಠೆ ಮಾಡಿದರು. ಸೆರೆವಾಸದಿಂದ ಹಿಂತಿರುಗಿ ಬಂದಿದ್ದ ಯಾಜಕರು, ಲೇವಿಯರು ಮತ್ತು ಎಲ್ಲಾ ಜನರು ಈ ಆಚರಣೆಯಲ್ಲಿ ಭಾಗವಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:16
21 ತಿಳಿವುಗಳ ಹೋಲಿಕೆ  

ಅರಸನಾದ ಸೊಲೊಮೋನನು 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಬಲಿಯಾಗಿ ಅರ್ಪಿಸಿದನು. ಹೀಗೆಯೇ ಅರಸನೂ, ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು.


ಸೊಲೊಮೋನನು ಯೆಹೋವ ದೇವರಿಗೆ ಸಮಾಧಾನದ ಬಲಿಗಳಾಗಿ 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ, ಇಸ್ರಾಯೇಲಿನ ಸಮಸ್ತ ಜನರೂ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು.


ಯಾವಾಗಲೂ ಕರ್ತ ದೇವರಲ್ಲಿ ಆನಂದಿಸಿರಿ, ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ಆಗ ಯೆರೂಸಲೇಮಿನಲ್ಲಿ ದೇವಾಲಯದ ಪ್ರತಿಷ್ಠೆಯ ಹಬ್ಬವಿತ್ತು. ಅದು ಚಳಿಗಾಲವಾಗಿತ್ತು.


“ಯೆಹೋವ ದೇವರ ಆಲಯಕ್ಕೆ ಹೋಗೋಣ,” ಎಂದು ಜನರು ನನ್ನನ್ನು ಕರೆದಾಗ, ನನಗೆ ಸಂತೋಷವಾಯಿತು.


ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು. ಏಕೆಂದರೆ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವುದಕ್ಕೆ ಅಸ್ಸೀರಿಯ ದೇಶದ ಅರಸನ ಹೃದಯವನ್ನು, ಅವರ ಕಡೆಗೆ ಮನಪರಿವರ್ತಿಸಿದ್ದರಿಂದ ಯೆಹೋವ ದೇವರು ಅವರನ್ನು ಸಂತೋಷಪಡಿಸಿದರು.


ಹೀಗೆಯೇ ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ಸಾಮಾನ್ಯ ಜನರೂ, ದೇವಾಲಯದ ಸೇವಕರೂ, ಸಮಸ್ತ ಇಸ್ರಾಯೇಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು. ಏಳನೆಯ ತಿಂಗಳು ಬಂದಾಗ ಇಸ್ರಾಯೇಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.


ಸೆರೆಯಿಂದ ಬಂದವರು ಇಸ್ರಾಯೇಲ್ ದೇವರಾದ ಯೆಹೋವ ದೇವರಿಗಾಗಿ ಆಲಯವನ್ನು ಕಟ್ಟುತ್ತಾರೆಂಬುದಾಗಿ ಯೆಹೂದದ ಮತ್ತು ಬೆನ್ಯಾಮೀನನ ಶತ್ರುಗಳು ಕೇಳಿದಾಗ


ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು. ಇಸ್ರಾಯೇಲಿನ ಅರಸನಾದ ದಾವೀದನ ಮಗ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥಾ ಆಚರಣೆಯು ನಡೆದಿರಲಿಲ್ಲ.


ಅಲ್ಲದೆ ಕೂಟವೆಲ್ಲಾ ಇನ್ನೂ ಏಳು ದಿವಸಗಳ ಕಾಲ ಹಬ್ಬವನ್ನು ಆಚರಿಸಬೇಕೆಂದು ತಿರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು.


ಹೀಗೆ ಇಸ್ರಾಯೇಲರೆಲ್ಲರೂ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಆರ್ಭಟದಿಂದಲೂ, ಕೊಂಬಿನ ಶಬ್ದದಿಂದಲೂ, ತುತೂರಿಗಳಿಂದಲೂ, ತಾಳಗಳಿಂದಲೂ ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಾ ತೆಗೆದುಕೊಂಡು ಬಂದರು.


ತಮ್ಮ ಸ್ವಾಸ್ತ್ಯಗಳಲ್ಲಿ, ತಮ್ಮ ಪಟ್ಟಣಗಳಲ್ಲಿ ಮೊದಲು ವಾಸವಾಗಿದ್ದವರಲ್ಲಿ ಕೆಲವರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ ಮತ್ತು ದೇವಾಲಯದ ಸೇವಕರೂ ಆಗಿದ್ದರು.


ಅಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಉಂಡು, ನಿಮ್ಮ ಕುಟುಂಬಗಳ ಸಂಗಡ ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಿದ್ದರಿಂದ, ನೀವು ಸಾಧಿಸಿದ ಎಲ್ಲಾ ಕಾರ್ಯಗಳ ಬಗ್ಗೆ ಸಂತೋಷ ಪಡಬೇಕು.


ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ, ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಅವರು ತಮ್ಮ ಮಡದಿಮಕ್ಕಳೂಡನೆ ಮಹೋತ್ಸವ ಮಾಡಿದರು. ಆದ್ದರಿಂದ ಯೆರೂಸಲೇಮಿನ ಸಂತೋಷ ಧ್ವನಿಯು ಬಹು ದೂರಕ್ಕೆ ಕೇಳಿಸಿತು.


ಇದಲ್ಲದೆ ಎಜ್ರನು ಅವರಿಗೆ, “ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ,” ಎಂದು ಹೇಳಿದನು.


ಆಗ ಅರಸನೂ, ಅವನ ಸಂಗಡ ಇಸ್ರಾಯೇಲರೆಲ್ಲರೂ ಯೆಹೋವ ದೇವರ ಮುಂದೆ ಬಲಿಗಳನ್ನು ಅರ್ಪಿಸಿದರು.


ಆಗ ದಾನಿಯೇಲನನ್ನು ಅರಸನ ಮುಂದೆ ತಂದರು. ಅರಸನು ದಾನಿಯೇಲನಿಗೆ, “ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?


ಇದಲ್ಲದೆ ಅರಸನಾದ ಹಿಜ್ಕೀಯನೂ, ಪ್ರಧಾನರೂ ದಾವೀದನ ಮಾತುಗಳಿಂದಲೂ, ಆಸಾಫನ ಕೀರ್ತನೆಗಳಿಂದಲೂ ಯೆಹೋವ ದೇವರನ್ನು ಸ್ತುತಿಸಬೇಕೆಂದು ಲೇವಿಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಮೊಣಕಾಲೂರಿಕೊಂಡು ಆರಾಧಿಸಿದರು.


ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ, ಹಾಡುವುದರಿಂದಲೂ, ತಾಳಗಳಿಂದಲೂ, ವೀಣೆಗಳಿಂದಲೂ, ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವುದಕ್ಕೆ ಲೇವಿಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು