Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:20 - ಕನ್ನಡ ಸಮಕಾಲಿಕ ಅನುವಾದ

20 ಯಾಜಕರೂ ಲೇವಿಯರೂ ಕೂಡ ಶುದ್ಧ ಮಾಡಿಕೊಂಡಿದ್ದರು. ಅವರೆಲ್ಲರು ಶುದ್ಧರಾದ ನಂತರ, ಲೇವಿಯರು ಸೆರೆಯಿಂದ ಬಂದವರೆಲ್ಲರಿಗೋಸ್ಕರವೂ, ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ, ತಮಗೋಸ್ಕರವೂ ಪಸ್ಕದ ಕುರಿಮರಿಯನ್ನು ವಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯಾಜಕರೂ ಮತ್ತು ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡರು. ಎಲ್ಲರೂ ಶುದ್ಧವಾದನಂತರ ಲೇವಿಯರು ದೇಶಾಂತರದಿಂದ ಹಿಂದಿರುಗಿ ಬಂದವರಿಗೋಸ್ಕರವೂ, ತಮಗೋಸ್ಕರವೂ ಪಸ್ಕದ ಕುರಿಮರಿಗಳನ್ನು ವಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯಾಜಕರು ಹಾಗು ಲೇವಿಯರು ತಮ್ಮನ್ನು ಶುದ್ಧಿಪಡಿಸಿಕೊಂಡರು. ಎಲ್ಲರೂ ಶುದ್ಧರಾದ ನಂತರ ಲೇವಿಯರು ಸೆರೆಯಿಂದ ಬಂದವರಿಗಾಗಿ, ತಮ್ಮ ಬಂಧುಗಳಾದ ಯಾಜಕರಿಗಾಗಿ ಹಾಗು ತಮಗಾಗಿ ಪಾಸ್ಕದ ಕುರಿಮರಿಗಳನ್ನು ವಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಪಡಿಸಿಕೊಂಡರು. ಎಲ್ಲರೂ ಶುದ್ಧವಾದನಂತರ [ಲೇವಿಯರು] ಸೆರೆಯಿಂದ ಬಂದವರಿಗೋಸ್ಕರವೂ ತಮ್ಮ ಬಂಧುಗಳಾದ ಯಾಜಕರಿಗೋಸ್ಕರವೂ ತಮಗೋಸ್ಕರವೂ ಪಸ್ಕದ ಕುರಿಮರಿಗಳನ್ನು ವಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಮಾಡಿಕೊಂಡು ಹಬ್ಬವನ್ನು ಆಚರಿಸಲು ಸಿದ್ಧರಾದರು. ಪಸ್ಕದ ಕುರಿಮರಿಯನ್ನು ಎಲ್ಲಾ ಇಸ್ರೇಲರಿಗಾಗಿಯೂ ತಮಗಾಗಿಯೂ ಯಾಜಕರಿಗಾಗಿಯೂ ಲೇವಿಯರು ವಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:20
7 ತಿಳಿವುಗಳ ಹೋಲಿಕೆ  

ಲೇವಿಯರು ಪಸ್ಕದ ಕುರಿಮರಿಯನ್ನು ವಧಿಸಿದ ತರುವಾಯ, ಯಾಜಕರು ಅವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು. ಆದರೆ ಲೇವಿಯರು ಚರ್ಮವನ್ನು ಸುಲಿದರು,


ಮೊದಲು ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಾರ್ಪಣೆ ಮಾಡುವ ಆ ಮಹಾಯಾಜಕರಂತೆ ಯೇಸು ಪ್ರತಿದಿನವೂ ಬಲಿ ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಇವರು ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡಾಗ ಅದನ್ನು ಒಂದೇ ಸಾರಿ ಮಾಡಿ ಮುಗಿಸಿದರು.


ಆದರೆ ಯಾಜಕರು ಸ್ವಲ್ಪ ಜನರಾಗಿದ್ದು, ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದುದರಿಂದ, ಕೆಲಸವು ತೀರುವವರೆಗೂ, ಮಿಕ್ಕ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವವರೆಗೂ ಲೇವಿಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಏಕೆಂದರೆ ಯಾಜಕರಿಗಿಂತ ತಮ್ಮನ್ನು ಪರಿಶುದ್ಧ ಮಾಡಿಕೊಳ್ಳುವುದರಲ್ಲಿ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.


ಆಗ ಮೋಶೆಯು ಇಸ್ರಾಯೇಲಿನ ಎಲ್ಲಾ ಹಿರಿಯರನ್ನು ಕರೆದು ಅವರಿಗೆ, “ನಿಮ್ಮ ಕುಟುಂಬಗಳ ಪ್ರಕಾರ ಕುರಿಗಳನ್ನು ಆಯ್ದುಕೊಂಡು ಪಸ್ಕಹಬ್ಬಕ್ಕಾಗಿ ಕೊಯ್ಯಿರಿ.


ತರುವಾಯ ತಮಗೋಸ್ಕರ, ಯಾಜಕರಿಗೋಸ್ಕರ ಭೋಜನವನ್ನು ಸಿದ್ಧಮಾಡಿದರು. ಏಕೆಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನಬಲಿಗಳನ್ನೂ, ಕೊಬ್ಬನ್ನೂ ಅರ್ಪಿಸುವುದರಲ್ಲಿದ್ದರು. ಆದ್ದರಿಂದ ಲೇವಿಯರು ತಮಗೋಸ್ಕರವೂ, ಆರೋನನ ಮಕ್ಕಳಾದ ಯಾಜಕರಿಗೋಸ್ಕರವೂ ಭೋಜನವನ್ನು ಸಿದ್ಧಮಾಡಿದರು.


ದಾವೀದನೂ, ಆಸಾಫನೂ, ಹೇಮಾನನೂ, ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು. ದ್ವಾರಪಾಲಕರು ಬಾಗಿಲಲ್ಲಿ ಇದ್ದರು. ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು. ಏಕೆಂದರೆ ಅವರ ಸಹೋದರರಾದ ಲೇವಿಯರಿಗೋಸ್ಕರ ಭೋಜನವನ್ನು ಸಿದ್ಧಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು