Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:21 - ಕನ್ನಡ ಸಮಕಾಲಿಕ ಅನುವಾದ

21 ಸೆರೆಯಿಂದ ತಿರುಗಿ ಬಂದ ಇಸ್ರಾಯೇಲರು ತಮ್ಮ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರನ್ನು ಹುಡುಕಲು ದೇಶದ ಜನಾಂಗಗಳ ಅಶುದ್ಧತೆಯಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡು, ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದೇಶಾಂತರದಿಂದ ಬಂದ ಇಸ್ರಾಯೇಲರೂ ಇಸ್ರಾಯೇಲ್ ದೇವರಾದ ಯೆಹೋವನನ್ನು ಹುಡುಕುವುದಕ್ಕಾಗಿ ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದುಬಿಟ್ಟು, ಇವರೊಡನೆ ಕೂಡಿಕೊಂಡವರೆಲ್ಲರೂ ಪಸ್ಕಭೋಜನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸೆರೆಯಿಂದ ಬಂದ ಇಸ್ರಯೇಲರು ಮತ್ತು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಅರಸುವುದಕ್ಕಾಗಿ, ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದು ಇವರೊಡನೆ ಕೂಡಿಕೊಂಡ ಎಲ್ಲರು, ಪಾಸ್ಕಭೋಜನ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಸೆರೆಯಿಂದ ಬಂದ ಇಸ್ರಾಯೇಲ್ಯರೂ ಇಸ್ರಾಯೇಲ್ ದೇವರಾದ ಯೆಹೋವನನ್ನು ಹುಡುಕುವದಕ್ಕಾಗಿ ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದುಬಿಟ್ಟು ಇವರೊಡನೆ ಕೂಡಿಕೊಂಡವರೆಲ್ಲರೂ ಪಸ್ಕ ಭೋಜನಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಸೆರೆಯಿಂದ ಹಿಂತಿರುಗಿ ಬಂದಿದ್ದ ಇಸ್ರೇಲರೆಲ್ಲರೂ ಪಸ್ಕದ ಊಟವನ್ನು ಮಾಡಿದರು. ಉಳಿದವರು ಅನ್ಯರ ಜೊತೆಯಲ್ಲಿ ವಾಸಿಸುವುದರಿಂದ ತಮ್ಮನ್ನು ಶುದ್ಧಪಡಿಸಿಕೊಂಡವರೆಲ್ಲರೂ ಪಸ್ಕದ ಊಟದಲ್ಲಿ ಪಾಲು ತೆಗೆದುಕೊಂಡರು. ಇಸ್ರೇಲರ ದೇವರಾದ ಯೆಹೋವನ ಬಳಿಗೆ ಸಹಾಯಕ್ಕಾಗಿ ಹೋಗಲು ಸಾಧ್ಯವಾಗುವಂತೆ ಅವರು ಹೀಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:21
13 ತಿಳಿವುಗಳ ಹೋಲಿಕೆ  

ನಿಮ್ಮ ಸೇವಕರಾದ ಪ್ರವಾದಿಗಳ ಮುಖಾಂತರ ನೀವು ಆ ನಿಮ್ಮ ಆಜ್ಞೆಗಳನ್ನು ಕೊಟ್ಟಿದ್ದೀರಿ. ‘ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು, ಆ ದೇಶಗಳ ಜನರ ಅಶುದ್ಧತ್ವದಿಂದ ಮೈಲಿಗೆಯಾದ ದೇಶವಾಗಿದೆ. ಆ ಜನರು ತಮ್ಮ ಅಸಹ್ಯ ಅಭ್ಯಾಸಗಳಿಂದ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯವರೆಗೂ ತುಂಬಿಸಿದ್ದಾರೆ.


ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.


ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ. ಅವಳ ಮಧ್ಯದಿಂದ ಹೊರಗೆ ಹೋಗಿರಿ. ಯೆಹೋವ ದೇವರ ದೇವಾಲಯದ ಪಾತ್ರೆಗಳನ್ನು ಹೊರುವವರೇ, ನೀವು ಶುದ್ಧರಾಗಿರಿ.


ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು, ತಮ್ಮ ಪಾಪಗಳನ್ನೂ, ತಮ್ಮ ಪಿತೃಗಳ ಪಾಪಗಳನ್ನೂ ಅರಿಕೆಮಾಡಿದರು.


ಈ ಸಂಗತಿಗಳನ್ನು ಮಾಡಿದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು, “ಇಸ್ರಾಯೇಲರೂ, ಯಾಜಕರೂ, ಲೇವಿಯರೂ ತಮ್ಮ ನೆರೆಯವರಿಂದ ಪ್ರತ್ಯೇಕಿಸಿಕೊಳ್ಳಲಿಲ್ಲ. ಅವರು ಕಾನಾನ್ಯರು, ಹಿತ್ತಿಯರು, ಪೆರಿಜೀಯರು, ಯೆಬೂಸಿಯರು, ಅಮ್ಮೋನ್ಯರು, ಮೋವಾಬ್ಯರು, ಈಜಿಪ್ಟರು, ಅಮೋರಿಯರು ಇವರ ಅಸಹ್ಯ ಸಂಗತಿಗಳ ಪದ್ಧತಿಗಳಂತೆ ನಡೆಯುತ್ತಾ ಇದ್ದಾರೆ.


ಆದ್ದರಿಂದ, “ಅವರ ನಡುವೆಯಿಂದ ಹೊರಟುಬಂದು ಪ್ರತ್ಯೇಕವಾಗಿರಿ. ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ನಾನು ನಿಮ್ಮನ್ನು ಸ್ವೀಕರಿಸುವೆನು ಎಂದು ಕರ್ತದೇವರು ಹೇಳುತ್ತಾರೆ.”


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.


ದೇವರೇ, ನಿಮ್ಮ ಶಾಸನಗಳು ಬಹಳ ನಿಶ್ಚಯವಾದವುಗಳು. ಯೆಹೋವ ದೇವರೇ, ಪರಿಶುದ್ಧತೆಯು ಸದಾಕಾಲ ನಿಮ್ಮ ಆಲಯವನ್ನು ಅಲಂಕರಿಸುತ್ತದೆ.


ಜನರಲ್ಲಿ ಉಳಿದವರಾದ ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ದೇವಾಲಯದ ಸೇವಕರೂ, ದೇವರ ನಿಯಮದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡವರೆಲ್ಲರೂ, ಅವರ ಹೆಂಡತಿಯರೂ, ಅವರ ಪುತ್ರರೂ, ಅವರ ಪುತ್ರಿಯರೂ, ತಿಳುವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ,


ಯೆಹೋವ ದೇವರೇ, ತಮ್ಮ ಪಿತೃಗಳ ದೇವರಾದ ನಿಮ್ಮನ್ನು ಹುಡುಕಬೇಕೆಂದು ಮನಸ್ಸು ಮಾಡುವವರಿಗೆಲ್ಲ ಕ್ಷಮೆಯನ್ನು ಅನುಗ್ರಹಿಸಿರಿ,” ಎಂದು ವಿಜ್ಞಾಪನೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು