Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:6 - ಕನ್ನಡ ಸಮಕಾಲಿಕ ಅನುವಾದ

6 ಬಳಿಕ ದಾರ್ಯಾವೆಷನು ಬರೆದು ಕಳುಹಿಸಿದ್ದು ಏನೆಂದರೆ, ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಅಧಿಪತಿಯಾದ ತತ್ತೆನೈನೇ, ಶೆತರ್ ಬೋಜೆನೈಯೇ, ನದಿಯ ಆಚೆಯಲ್ಲಿರುವ ನಿಮ್ಮ ಜೊತೆಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಆಗ ದಾರ್ಯಾವೆಷನು ಬರೆದು ಕಳುಹಿಸಿದ್ದೇನೆಂದರೆ, ಹೊಳೆಯಾಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈ, ಶೆತರ್ಬೋಜೆನೈ, ಹೊಳೆಯಾಚೆಯಲ್ಲಿ ಇವರು ಜೊತೆಗಾರರಾದ ಅಪರ್ಸತ್ಕಾಯರು ಇವರಿಗೆ, ನೀವು ಅವರ ಗೊಡವೆಗೆ ಹೋಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಳಿಕ ದಾರ್ಯಾವೆಷನು ಬರೆದು ಕಳುಹಿಸಿದ್ದೇನೆಂದರೆ, “ನದಿಯಾಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈ, ಶೆತರ್ಬೋಜೆನೈಗೆ ಹಾಗು ನದಿಯಾಚೆಯಲ್ಲಿ ಇವರ ಜೊತೆಗಾರರಾದ ಅಪರ್ಸತ್ಯಾಯರು ಇವರಿಗೆ: ನೀವು ಆ ಜನರ ಗೊಡವೆಗೆ ಹೋಗಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 [ಆಗ ದಾರ್ಯಾವೆಷನು ಬರೆದು ಕಳುಹಿಸಿದ್ದೇನಂದರೆ -] ಹೊಳೆಯಾಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈ, ಶೆತರ್ಬೋಜೆನೈ, ಹೊಳೆಯಾಚೆಯಲ್ಲಿ ಇವರ ಜೊತೆಗಾರರಾದ ಅಪರ್ಸತ್ಕಾಯರು ಇವರಿಗೆ - ನೀವು ಅವರ ಗೊಡವೆಗೆ ಹೋಗಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಹೀಗಿರುವದರಿಂದ, ದಾರ್ಯಾವೇಷನಾದ ನಾನು, ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಕ್ಕೆ ರಾಜ್ಯಪಾಲನಾಗಿರುವ ತತ್ತೆನೈ ಎಂಬ ನಿನಗೂ ಶೆತರ್ಬೋಜೆನೈ ಮತ್ತು ಆ ಪ್ರಾಂತ್ಯದ ಎಲ್ಲಾ ಅಧಿಕಾರಿಗಳಿಗೂ ಆಜ್ಞೆ ಕೊಡುವದೇನೆಂದರೆ, ಜೆರುಸಲೇಮಿನಿಂದ ನೀವು ದೂರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:6
14 ತಿಳಿವುಗಳ ಹೋಲಿಕೆ  

ಆ ವೇಳೆಯಲ್ಲಿ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಪ್ರದೇಶಗಳ ಅಧಿಪತಿಯಾಗಿದ್ದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು, “ಈ ಆಲಯವನ್ನು ಪುನಃ ಕಟ್ಟಿ ತೀರಿಸುವುದಕ್ಕೆ ನಿಮಗೆ ಅಪ್ಪಣೆ ಕೊಟ್ಟವರು ಯಾರು?” ಎಂದು ಕೇಳಿದರು.


ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?


ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.


ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈನೂ, ಶೆತರ್ ಬೋಜೆನೈಯೂ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅವನ ಜೊತೆಗಾರರೂ, ಅರಸನಾದ ದಾರ್ಯಾವೆಷನಿಗೆ ಪತ್ರ ಬರೆದು ಕಳುಹಿಸಿದರು.


ಯುದ್ಧದಿಂದಲೂ ಸೆರೆಯಿಂದಲೂ ಆಕೆಯೊಂದಿಗೆ ತೃಪ್ತರಾಗಿರಿ. ಆತನು ತನ್ನ ಕೋಪದ ಪೆಟ್ಟಿನಿಂದ ಪೂರ್ವದ ಬಿರುಗಾಳಿ ಬೀಸುವಾಗ ಆಗುವಂತೆ, ಆಕೆಯನ್ನು ಹೊರಗೋಡಿಸುವನು.


ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.


ಮನುಷ್ಯರ ವಿರುದ್ಧ ನಿಮ್ಮ ಕೋಪವು ನಿಮಗೆ ಘನವನ್ನು ತರುವುದು. ಉಳಿದಿರುವವರು ಕೋಪಕ್ಕೆ ತುತ್ತಾಗುವುದಿಲ್ಲ.


ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು.


ಸರ್ವಶಕ್ತ ದೇವರು ನಿಮ್ಮ ಮತ್ತೊಬ್ಬ ಸಹೋದರನನ್ನೂ ಬೆನ್ಯಾಮೀನನನ್ನೂ ಕಳುಹಿಸಿಕೊಡುವ ಹಾಗೆ, ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ,” ಎಂದನು.


ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.


ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ, ಪರ್ಷಿಯಾ, ಯೆರೆಕ್ ಹಾಗೂ ಬಾಬೆಲಿನವರು, ಶೂಷನಿನವರ ಮತ್ತು ಏಲಾಮ್ಯರ ನ್ಯಾಯಾಧೀಶರು, ಅಧಿಕಾರಿಗಳು ಮತ್ತು ಆಡಳಿತಗಾರರು,


ದೇವರ ಆಲಯವನ್ನು ಕಟ್ಟುವ ಕೆಲಸಕ್ಕೆ ನೀವು ಅಡ್ಡಿಮಾಡಬೇಡಿರಿ. ಯೆಹೂದ್ಯರ ಅಧಿಪತಿಯೂ, ಯೆಹೂದ್ಯರ ಹಿರಿಯರೂ ಅದರ ಸ್ಥಳದಲ್ಲಿ ದೇವರ ಆಲಯವನ್ನು ಕಟ್ಟಿಸಲಿ.


ಆಗ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅರಸನಾದ ದಾರ್ಯಾವೆಷನು ಕಳುಹಿಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು