ಎಜ್ರ 8:36 - ಕನ್ನಡ ಸಮಕಾಲಿಕ ಅನುವಾದ36 ಅವರು ಅರಸನ ಆಜ್ಞೆಗಳನ್ನು ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ, ಯಜಮಾನರಿಗೂ ಒಪ್ಪಿಸಿದರು. ಆಗ ಅವರು ಜನರಿಗೂ, ದೇವರ ಆಲಯಕ್ಕೂ ಸಹಾಯ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆ ಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ, ಹೊಳೆಯಾಚೆಯ ಪ್ರದೇಶಾಧಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ಮತ್ತು ದೇವಾಲಯಕ್ಕೂ ಸಹಾಯಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಆಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ ನದಿಯಾಚೆಯ ರಾಜ್ಯಪಾಲರಿಗೂ ಒಪ್ಪಿಸಿದರು. ಅಂದಿನಿಂದ ಆ ಅಧಿಕಾರಿಗಳು ಜನರಿಗೂ ದೇವಾಲಯಕ್ಕೂ ಸಹಾಯಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ ಹೊಳೆಯಾಚೆಯ ಪ್ರದೇಶಾಧಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ದೇವಾಲಯಕ್ಕೂ ಸಹಾಯಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಅರಸನಾದ ಅರ್ತಷಸ್ತನು ಕೊಟ್ಟಿದ್ದ ರಾಜಾಜ್ಞೆಯ ಪತ್ರವನ್ನು ಯೂಫ್ರೇಟೀಸ್ ನದಿಯ ಪಶ್ಚಿಮಪ್ರಾಂತ್ಯದ ರಾಜ್ಯಪಾಲರಿಗೂ ಸಂಸ್ಥಾನಾಧಿಕಾರಿಗಳಿಗೂ ಕೊಟ್ಟಾಗ ಅವರು ಇಸ್ರೇಲ್ ಜನರಿಗೂ ಅವರ ದೇವಾಲಯಕ್ಕೂ ಸಂಪೂರ್ಣ ಸಹಕಾರವನ್ನೂ ಬೆಂಬಲವನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿ |
ಮೊದಲನೆಯ ತಿಂಗಳ ಹದಿಮೂರನೆಯ ದಿವಸದಲ್ಲಿ ಅರಸನ ಲೇಖಕರನ್ನು ಕರೆಸಲಾಯಿತು. ಹಾಮಾನನು ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಪ್ರತಿ ಪ್ರಾಂತದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅವರವರ ಸ್ವದೇಶಿ ಲಿಪಿಗಳಲ್ಲಿಯೂ, ಭಾಷೆಗಳಲ್ಲಿಯೂ ಪತ್ರಗಳನ್ನು ಬರೆದರು. ಅರಸನಾದ ಅಹಷ್ವೇರೋಷನ ಹೆಸರಿನಲ್ಲಿಯೇ ಲಿಖಿತವಾದ ಈ ಪತ್ರಗಳು ಅರಸನ ಉಂಗುರದಿಂದ ಅಧಿಕೃತ ರಾಜಮುದ್ರೆಯನ್ನು ಹೊಂದಿದ್ದವು.