Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 9:14 - ಕನ್ನಡ ಸಮಕಾಲಿಕ ಅನುವಾದ

14 ನಾವು ನಿಮ್ಮ ಆಜ್ಞೆಗಳನ್ನು ಪುನಃ ಮೀರಿ ಅಸಹ್ಯ ಅಭ್ಯಾಸಕರಾದ ಈ ಜನರ ಸಂಗಡ ವಿವಾಹ ಸಂಬಂಧ ಮಾಡಬಹುದೇ? ಹಾಗೆ ಮಾಡಿದರೆ, ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದಂತೆ ದಂಡಿಸಲು, ನೀವು ನಮ್ಮ ಮೇಲೆ ಕೋಪಗೊಳ್ಳುವುದು ಯೋಗ್ಯವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿರುವಲ್ಲಿ ನಾವು ತಿರುಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವುದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿಬಿಡುವಿಯಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹೀಗಿರುವಲ್ಲಿ, ನಾವು ಪುನಃ ನಿಮ್ಮ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ವಿವಾಹ ಸಂಬಂಧ ಬೆಳೆಸುವುದು ಯೋಗ್ಯವೇ? ಹಾಗೆ ಮಾಡಿದರೆ, ನೀವು ನಮ್ಮ ಮೇಲೆ ರೌದ್ರಾವೇಶವುಳ್ಳವರಾಗಿ, ಯಾರೂ ತಪ್ಪಿಸಿಕೊಳ್ಳದಂತೆ ನಮ್ಮನ್ನು ಮುಗಿಸಿಬಿಡುವಿರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೀಗಿರುವಲ್ಲಿ ನಾವು ತಿರಿಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿ ಬಿಡುವಿಯಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿನ್ನ ಆಜ್ಞೆಗಳಿಗೆ ಅವಿಧೇಯರಾಗಬಾರದೆಂದು ಈಗ ನಮಗೆ ತಿಳಿಯುತ್ತದೆ. ಅನ್ಯಜನರನ್ನು ಮದುವೆ ಮಾಡಿಕೊಳ್ಳಬಾರದು. ಅವರು ಘೋರ ಪಾಪಿಗಳು. ನಾವು ಹೀಗೆಯೇ ಅವರೊಂದಿಗೆ ಮದುವೆಯಾದರೆ ನೀನು ನಮ್ಮನ್ನು ನಾಶಮಾಡುವೆ ಎಂದು ನಾವು ತಿಳಿದಿದ್ದೇವೆ. ಹೀಗಿರುವಲ್ಲಿ ಇಸ್ರೇಲ್ ಜನಾಂಗದಲ್ಲಿ ಯಾರೂ ಉಳಿಯಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 9:14
20 ತಿಳಿವುಗಳ ಹೋಲಿಕೆ  

ನೀವು ಹೋರೇಬಿನಲ್ಲಿಯೂ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದಾಗ, ಅವರು ನಿಮ್ಮನ್ನು ನಿಮ್ಮ ಮೇಲೆ ಸಿಟ್ಟುಮಾಡಿಕೊಂಡು ನಾಶಮಾಡಬೇಕೆಂದಿದ್ದರು.


ಇಸ್ರಾಯೇಲರು ತಮಗೂ, ತಮ್ಮ ಪುತ್ರರಿಗೂ ಅವರ ಪುತ್ರಿಯರನ್ನು ತೆಗೆದುಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ. ನಿಶ್ಚಯವಾಗಿ ಪ್ರಧಾನರು ಮತ್ತು ಅಧಿಕಾರಸ್ಥರು ಈ ಅಪನಂಬಿಗಸ್ತಿಕೆಗೆ ಮುಂದಾಳುಗಳಾದರು,” ಎಂದು ತಿಳಿಸಿದರು.


ನನ್ನನ್ನು ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು, ನಿಮ್ಮನ್ನು ಅವರಿಗಿಂತ ಬಲಿಷ್ಠವಾದ ಜನಾಂಗವಾಗಿ ಮಾಡುವೆನು,” ಎಂದು ಹೇಳಿದರು.


ಹಾಗಾದರೆ ನಾವು ಏನು ಹೇಳೋಣ? ಕೃಪೆಯು ಹೆಚ್ಚಾಗಲಿ ಎಂದು ನಾವು ಪಾಪದಲ್ಲಿ ಮುಂದುವರಿಯೋಣವೆ?


ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ಇಗೋ, ನೀನು ಸ್ವಸ್ಥನಾಗಿರುವೆ, ಹೆಚ್ಚಿನ ಕೇಡು ಬಾರದಂತೆ ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.


‘ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ, ಅವರ ಬಲಿಪೀಠಗಳನ್ನು ಕೆಡಿವಿಬಿಡಿರಿ,’ ಎಂದು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಏಕೆ ಮಾಡಿದಿರಿ?


“ನೀನು ಈ ಜನರ ಮಧ್ಯದಿಂದ ಎದ್ದು ಬಾ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು. ಆಗ ಅವರಿಬ್ಬರು ಬೋರಲು ಬಿದ್ದರು.


“ಈ ಜನರ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು.


ಹೀಗಿರುವುದರಿಂದ ನನ್ನ ಕೋಪಾಗ್ನಿಯು ಅವರ ಮೇಲೆ ಉರಿದು ಅವರನ್ನು ದಹಿಸಿಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು,” ಎಂದರು.


“ ‘ಆದರೆ ನಾನು ಕೆಲವರನ್ನು ಉಳಿಸುತ್ತೇನೆ; ಹೇಗೆಂದರೆ, ನೀವು ದೇಶಗಳ ಮತ್ತು ಜನಾಂಗಗಳ ನಡುವೆ ಚದರಿಹೋದಾಗ ನಿಮ್ಮಲ್ಲಿ ಕೆಲವರು ಖಡ್ಗದಿಂದ ತಪ್ಪಿಸಿಕೊಳ್ಳುವಿರಿ.


ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡಬೇಡ,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿ ಓಡಿಸಿದೆನೋ, ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ಮುಗಿಸಿಬಿಡುತ್ತೇನೆ; ಆದರೆ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದರೂ ನಿನ್ನನ್ನು ಶಿಕ್ಷಿಸದೆ ಬಿಡುವುದಿಲ್ಲ.”


ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.


“ಈಗ ನಮ್ಮ ಯೆಹೋವ ದೇವರೇ, ಸ್ವಲ್ಪ ಹೊತ್ತು ನಮಗೆ ದಯೆತೋರಿ ನಮ್ಮ ದಾಸತ್ವದಿಂದ ನಮಗೆ ಬಿಡುಗಡೆ ಕೊಟ್ಟಿದ್ದೀರಿ. ನಮ್ಮ ಕಣ್ಣುಗಳನ್ನು ಬೆಳಗಿಸಿ, ತಮ್ಮ ಪರಿಶುದ್ಧ ಸ್ಥಾನದಲ್ಲಿ ನೆಲೆಗೊಳಿಸುವಂತೆ ಮಾಡಿದ್ದೀರಿ


ಅವರ ಸಂಗಡ, ಅವರ ದೇವರುಗಳ ಸಂಗಡ ಯಾವ ಒಡಂಬಡಿಕೆಯನ್ನು ಮಾಡಿಕೊಳ್ಳಬಾರದು.


ಆಗ ಯಾಜಕನಾದ ಎಜ್ರನು ಎದ್ದು ಅವರಿಗೆ, “ನೀವು ಇಸ್ರಾಯೇಲರ ಅಪರಾಧವನ್ನು ಅಧಿಕವಾಗಿ ಮಾಡಲು, ಅನ್ಯ ಸ್ತ್ರೀಯರನ್ನು ಮದುವೆ ಮಾಡಿಕೊಂಡಿದ್ದರಿಂದ ದ್ರೋಹ ಮಾಡಿದಿರಿ.


ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ, ನಮ್ಮ ದೇವರು ನಮ್ಮ ಮೇಲೆಯೂ, ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲಿಲ್ಲವೋ? ಆದರೆ ನೀವು ಸಬ್ಬತ್ ದಿನವನ್ನು ಅಪವಿತ್ರ ಮಾಡುವುದರಿಂದ ಇಸ್ರಾಯೇಲಿನ ಮೇಲೆ ಇನ್ನೂ ದೇವರ ಕೋಪವನ್ನು ಬರಮಾಡುವಿರಿ.”


ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡಿದಂಥ, ನಿಮ್ಮ ಪಿತೃಗಳು ಕೆಟ್ಟತನಗಳನ್ನೂ, ಯೆಹೂದದ ಅರಸರ ಕೆಟ್ಟತನಗಳನ್ನೂ, ಅವರ ಹೆಂಡತಿಯರ ಕೆಟ್ಟತನಗಳನ್ನೂ, ನಿಮ್ಮ ಸ್ವಂತ ಕೆಟ್ಟತನಗಳನ್ನೂ, ನಿಮ್ಮ ಹೆಂಡತಿಯರ ಕೆಟ್ಟತನಗಳನ್ನೂ ಮರೆತು ಬಿಟ್ಟಿದ್ದೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು