Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:13 - ಕನ್ನಡ ಸಮಕಾಲಿಕ ಅನುವಾದ

13 ನೀವು ಸಹ ನಿಮ್ಮ ರಕ್ಷಣೆಯ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿದ ಮೇಲೆ ಕ್ರಿಸ್ತನಲ್ಲಿ ನಂಬಿಕೆಯಿಟ್ಟು ವಾಗ್ದಾನದ ಪವಿತ್ರಾತ್ಮರಿಂದ ಮುದ್ರೆಹೊಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀವು ಸಹ ಸತ್ಯವಾಕ್ಯವನ್ನು ಅಂದರೆ, ನಿಮಗೆ ಜೀವೋದ್ಧಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಇದು ನಿಮಗೂ ಅನ್ವಯಿಸುತ್ತದೆ. ನೀವು ಸತ್ಯ ಬೋಧನೆಯ ಬಗ್ಗೆ ಅಂದರೆ ನಿಮ್ಮ ರಕ್ಷಣೆಯ ಕುರಿತಾದ ಸುವಾರ್ತೆಯ ಬಗ್ಗೆ ಕೇಳಿದಾಗ ಕ್ರಿಸ್ತನಲ್ಲಿ ನಂಬಿಕೆಯಿಟ್ಟಿರಿ. ದೇವರು ತನ್ನ ವಾಗ್ದಾನಕ್ಕನುಸಾರವಾಗಿ ನಿಮಗೆ ಪವಿತ್ರಾತ್ಮನನ್ನು ದಯಪಾಲಿಸುವುದರ ಮೂಲಕ ನಿಮ್ಮ ಮೇಲೆ ತನ್ನ ವಿಶೇಷವಾದ ಮುದ್ರೆಯನ್ನು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಹೆ ತುಮ್ಕಾಬಿ ಲಾಗುಹೊತಾ ತುಮಿ ಖರ್‍ಯಾ ಶಿಕಾಪಾಚ್ಯಾ ವಿಶಯಾತ್ ಮಟ್ಲ್ಯಾರ್ ತುಮ್ಚ್ಯಾ ರಾಕ್ವನಿಚ್ಯಾ ವಿಶಯಾಚಿ ಬರಿ ಖಬರ್ ಆಯ್ಕುನ್ ಕ್ರಿಸ್ತಾಚ್ಯಾ ವರ್ತಿ ವಿಶ್ವಾಸ್ ಥವ್ಲ್ಯಾಸಿ, ದೆವಾನ್ ಅಪ್ನಿ ದಿಲ್ಲ್ಯಾ ಗೊಸ್ಟಿ ಸಾರ್ಕೆ ಪವಿತ್ರ್ ಆತ್ಮೊ ದಿವ್ನ್ ತುಮ್ಚ್ಯಾ ವರ್ತಿ ವಿಶೆಸ್ ಛಪ್ಪೊ ಘಾಟಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:13
38 ತಿಳಿವುಗಳ ಹೋಲಿಕೆ  

ನಮ್ಮ ಮೇಲೆ ದೇವರಿಗಿರುವ ಅಧಿಕಾರವೆಂಬ ಮುದ್ರೆಯನ್ನು ಒತ್ತಿದರು. ಮಾತ್ರವಲ್ಲದೇ ತಮ್ಮ ಪವಿತ್ರಾತ್ಮನನ್ನು ಖಾತರಿಯಾಗಿ ನಮ್ಮ ಹೃದಯದಲ್ಲಿಟ್ಟರು.


ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ಈ ಕಾರಣಕ್ಕಾಗಿಯೇ ನಂಬುವವರಾದ ನಿಮ್ಮಲ್ಲಿ ಕಾರ್ಯಸಾಧಿಸುವ ದೇವರ ವಾಕ್ಯವನ್ನು ನಮ್ಮಿಂದ ನೀವು ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ, ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ಹೌದು, ಸುನ್ನತಿಯಾಗುವ ಮೊದಲೇ ಅಬ್ರಹಾಮನಿಗಿದ್ದ ನಂಬಿಕೆಯಿಂದ ಅವನು ನೀತಿಯ ಮುದ್ರೆಯನ್ನು ಹೊಂದಿದನು. ಹೀಗಿರುವಲ್ಲಿ, ಸುನ್ನತಿಯಿಲ್ಲದೆ ನಂಬುವವರೆಲ್ಲರಿಗೂ ಅಬ್ರಹಾಮನು ತಂದೆಯಾಗಿರುತ್ತಾನೆ. ಹೀಗೆ ಅವರಿಗೆ ನೀತಿಯು ಎಣಿಕೆಯಾಗುವುದು.


ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನು ತರುವ ದೇವರ ಕೃಪೆಯೂ ಪ್ರತ್ಯಕ್ಷವಾಯಿತು.


ಅಬ್ರಹಾಮನ ಆಶೀರ್ವಾದವು ಕ್ರಿಸ್ತ ಯೇಸುವಿನ ಮೂಲಕ ಯೆಹೂದ್ಯರಲ್ಲದವರಿಗೆ ಉಂಟಾಗಿ, ನಂಬಿಕೆಯ ಮೂಲಕ ವಾಗ್ದಾನದ ಪವಿತ್ರಾತ್ಮರನ್ನು ನಾವು ಪಡೆದುಕೊಳ್ಳುವುದಕ್ಕಾಗಿಯೇ ದೇವರು ನಮ್ಮನ್ನು ವಿಮೋಚಿಸಿದರು.


“ಆಮೇಲೆ ನಾನು, ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು. ನಿಮ್ಮ ಯುವಜನರಿಗೆ ದರ್ಶನಗಳಾಗುವವು.


ನಾನು ಸುವಾರ್ತೆಯ ವಿಷಯದಲ್ಲಿ ನಾಚಿಕೊಳ್ಳುವವನಲ್ಲ. ಏಕೆಂದರೆ ಅದು ಮೊದಲು ಯೆಹೂದ್ಯರಿಗೆ ಆಮೇಲೆ ಯೆಹೂದ್ಯರಲ್ಲದವರಿಗೆ, ಹೀಗೆ ನಂಬುವವರೆಲ್ಲರಿಗೂ ರಕ್ಷಣೆಯನ್ನು ಉಂಟುಮಾಡುವ ದೇವರ ಶಕ್ತಿಯಾಗಿದೆ.


ಆದ್ದರಿಂದ ಯೇಸು ದೇವರ ಬಲಗಡೆಗೆ ಏರಿಹೋಗಿ ವಾಗ್ದಾನಮಾಡಿದ ಪವಿತ್ರಾತ್ಮ ದೇವರನ್ನು ತಂದೆಯಿಂದ ಪಡೆದುಕೊಂಡರು. ಈಗ ನೀವು ಕಂಡು ಕೇಳಿರುವ ಆ ಪವಿತ್ರಾತ್ಮ ವರವನ್ನು ಯೇಸುವೇ ಇವರ ಮೇಲೆ ಸುರಿಸಿದ್ದಾರೆ.


ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಸಹಾಯಕ ‘ಪವಿತ್ರಾತ್ಮರು’ ಎಲ್ಲವನ್ನೂ ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.


ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮಗೆ ಕಳುಹಿಸುವೆನು; ಆದರೆ ನೀವು ಪರಲೋಕದ ಶಕ್ತಿಯನ್ನು ಹೊದಿಸುವ ತನಕ, ಈ ಪಟ್ಟಣದಲ್ಲಿಯೇ ಕಾದುಕೊಂಡಿರಿ,” ಎಂದರು.


ಸತ್ಯವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡಿರಿ, ಏಕೆಂದರೆ ನಿಮ್ಮ ನಿಯಮಗಳಲ್ಲಿ ನಾನು ನನ್ನ ನಿರೀಕ್ಷೆಯನ್ನಿಟ್ಟಿದ್ದೇನೆ.


ಮೊದಲು ನೀವು ಪ್ರಜೆಗಳಾಗಿರಲಿಲ್ಲ. ಈಗ ದೇವರ ಪ್ರಜೆಗಳಾಗಿದ್ದೀರಿ. ಮೊದಲು ಕರುಣೆ ಹೊಂದಿರಲಿಲ್ಲ. ಈಗ ಕರುಣೆ ಹೊಂದಿದ್ದೀರಿ.


ಆದರೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಒಪ್ಪಿಸಿದ ಬೋಧನೆಗೆ ಹೃದಯದಿಂದ ವಿಧೇಯರಾದುದ್ದಕ್ಕಾಗಿ, ದೇವರಿಗೆ ಸ್ತೋತ್ರವಾಗಲಿ.


ಒಮ್ಮೆ ಯೇಸು ಶಿಷ್ಯರೊಂದಿಗೆ ಊಟಮಾಡುತ್ತಿದ್ದಾಗ ಶಿಷ್ಯರಿಗೆ, “ನೀವು ಯೆರೂಸಲೇಮನ್ನು ಬಿಟ್ಟು ಹೋಗಬೇಡಿರಿ, ನಾನು ನಿಮಗೆ ತಿಳಿಸಿದಂತೆ ನನ್ನ ತಂದೆ ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.


“ಆದರೂ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆ ಸಹಾಯಕರೊಬ್ಬರು ನಿಮ್ಮ ಬಳಿಗೆ ಬರುವರು. ಆಗ ತಂದೆಯಿಂದ ಬರುವ ಆ ಸತ್ಯದ ಆತ್ಮವಾಗಿರುವವರೇ ನನ್ನ ವಿಷಯವಾಗಿ ಸಾಕ್ಷಿಕೊಡುವರು.


“ಅಬ್ರಹಾಮನ ವಂಶದವರಾದ ಸಹೋದರರೇ, ದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಈ ರಕ್ಷಣೆಯ ಸಂದೇಶ ಕಳುಹಿಸಿರುವುದು ನಮಗಾಗಿಯೇ.


ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು.


ಹಾಗಾದರೆ ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತಮ್ಮನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮರನ್ನು ದಯಪಾಲಿಸುವರಲ್ಲವೇ!” ಎಂದು ನಾನು ನಿಮಗೆ ಹೇಳುತ್ತೇನೆ ಎಂದರು.


ಆಗ ಮತ್ತೊಬ್ಬ ದೂತನು, ಜೀವಸ್ವರೂಪರಾದ ದೇವರ ಮುದ್ರೆಯನ್ನು ಹಿಡಿದು ಪೂರ್ವದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಭೂಮಿ ಮತ್ತು ಸಮುದ್ರವನ್ನು ಬಾಧಿಸುವ ಶಕ್ತಿ ಹೊಂದಿದ ನಾಲ್ಕು ದೂತರಿಗೆ ಅವನು ಮಹಾಶಬ್ದದಿಂದ,


ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.


ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.


ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸದ ಮೂಲಕ ರಕ್ಷಣೆ ಹೊಂದುವಂತೆ ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಶಕ್ತವಾಗಿರುವ ಪವಿತ್ರ ವೇದಗಳನ್ನು ನೀನು ಚಿಕ್ಕಂದಿನಿಂದಲೂ ತಿಳಿದವನಾಗಿದ್ದೀಯಲ್ಲಾ.


ನೀನು ನಾಚಿಕೆಗೆ ಒಳಪಡದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಬೋಧಿಸುವವನೂ ಆಗಿರುವಂತೆ ನಿನ್ನನ್ನು ದೇವರಿಗೆ ಮೆಚ್ಚಿಕೆಯಾದವನಾಗಿರಲು ಸಮರ್ಪಿಸಲು ಅತ್ಯಂತ ಆಸಕ್ತನಾಗಿರು.


ನೀವು ಕ್ರಿಸ್ತನ ಬಗ್ಗೆ ಕೇಳಿ ಬೋಧನೆಯನ್ನು ಪಡೆದಾಗ, ಅದು ಯೇಸುವಿನಲ್ಲಿರುವ ಸತ್ಯಕ್ಕೆ ಅನುಸಾರವಾಗಿತ್ತು.


ಸತ್ಯಮಾತುಗಳಿಂದಲೂ, ದೇವರ ಶಕ್ತಿಯಿಂದಲೂ, ಎಡಬಲಗೈಗಳಲ್ಲಿ ನೀತಿಯ ಆಯುಧಗಳೂ


ಅವರ ಸಾಕ್ಷಿಯನ್ನು ಸ್ವೀಕರಿಸಿದವರು ದೇವರು ಸತ್ಯವಂತರೆಂದು ಮುದ್ರೆ ಹಾಕಿದ್ದಾರೆ.


ಆದಕಾರಣ ಎಲ್ಲಾ ಮಾಲಿನ್ಯವನ್ನೂ ಉಳಿದಿರುವ ದುಷ್ಟತನವನ್ನೂ ತೆಗೆದುಹಾಕಿ, ನಿಮ್ಮೊಳಗೆ ಬೇರೂರಿರುವ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು