Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:20 - ಕನ್ನಡ ಸಮಕಾಲಿಕ ಅನುವಾದ

20 ಈ ಮಹಾಶಕ್ತಿಯನ್ನು ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಈ ಪರಾಕ್ರಮ ಶಕ್ತಿಯಿಂದಲೇ ದೇವರು ಕ್ರಿಸ್ತನನ್ನು ಮರಣದಿಂದ ಎಬ್ಬಿಸಿ, ಸಕಲ ರಾಜತ್ವ, ಅಧಿಕಾರ, ಅಧಿಪತ್ಯ ಮತ್ತು ಪ್ರಭುತ್ವಗಳ ಮೇಲೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20-21 ಈ ಮಹಿಮಾಶಕ್ತಿಯಿಂದಲೇ ದೇವರು ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಿದರು; ಸಕಲ ಅಧಿಕಾರ, ಆಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳ ಮೇಲೆ ಯೆಸುಕ್ರಿಸ್ತರೇ ಆಡಳಿತ ನಡೆಸುವಂತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿ ಗಳಿಸಿದವರೆಲ್ಲರಿಗಿಂತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆತನ ಬಲಾತಿಶಯವು ಎಷ್ಟು ಮಹತ್ತಾದದ್ದೆಂಬದು ಕ್ರಿಸ್ತನಲ್ಲಿ ತೋರಿಬಂದಿದೆ. ಹೇಗಂದರೆ ಆತನು ಸತ್ತಿದ್ದ ಕ್ರಿಸ್ತನನ್ನು ಬದುಕಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ದೇವರು ಕ್ರಿಸ್ತನನ್ನು ಪರಲೋಕದೊಳಗೆ ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತೊಚ್ ಮೊಟೊ ಬಳ್ ತೆನಿ ವಾಪ್ರುನ್ ಕ್ರಿಸ್ತಾಕ್ ಮರಲ್ಲ್ಯಾಕ್ನಾ ಝಿತ್ತೊ ಕರ್ಲ್ಯಾನ್ ಅನಿ ಸರ್ಗಾಚ್ಯಾ ರಾಜಾತ್ ಅಪ್ನಾಚ್ಯಾ ಉಜ್ವ್ಯಾ ಭಾಜುಕ್ ತೆಕಾ ಬಸ್ವುಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:20
33 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡರು.


ಕರ್ತ ಯೇಸು ಅವರೊಂದಿಗೆ ಮಾತನಾಡಿದ ನಂತರ, ಅವರು ಪರಲೋಕಕ್ಕೆ ಏರಿ ದೇವರ ಬಲಪಾರ್ಶ್ವದಲ್ಲಿ ಕುಳಿತುಕೊಂಡರು.


ಯೆಹೋವ ದೇವರು ನನ್ನ ಕರ್ತ ಆಗಿರುವವರಿಗೆ ಹೇಳಿದ್ದೇನೆಂದರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರಿ.”


ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.


ನೀವು ಕ್ರಿಸ್ತನೊಂದಿಗೆ ಜೀವಂತವಾಗಿ ಎದ್ದವರಾಗಿದ್ದರೆ, ಮೇಲಿರುವವುಗಳನ್ನೇ ಹುಡುಕಿರಿ. ಅಲ್ಲಿ ಕ್ರಿಸ್ತ ಯೇಸು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ಕ್ರಿಸ್ತನನ್ನೂ ಅವರ ಪುನರುತ್ಥಾನದ ಶಕ್ತಿಯನ್ನೂ ನಾನು ಅರಿತುಕೊಂಡು, ಕ್ರಿಸ್ತನ ಶ್ರಮೆಯಲ್ಲಿ ಪಾಲುಗೊಳ್ಳುವ ಅನ್ಯೋನ್ಯತೆಯನ್ನೂ ಅವರ ಮರಣದಲ್ಲಿ ಅವರ ಹಾಗೆ ಆಗುವುದನ್ನೂ ತಿಳಿಯುವುದೇ ನನ್ನ ಅಪೇಕ್ಷೆ.


ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ, ಜೀವಿತರಾಗಿ ಎದ್ದು ದೇವರ ಬಲಗಡೆಯಲ್ಲಿ ಇದ್ದಾರೆ ಮತ್ತು ಅವರೇ ನಮಗೋಸ್ಕರ ವಿಜ್ಞಾಪಿಸುವವರಾಗಿರುತ್ತಾರೆ.


ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ.


ಅದಕ್ಕೆ ಯೇಸು, “ಹೌದು ನಾನೇ, ಇದಲ್ಲದೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ಕಾಣುವಿರಿ,” ಎಂದರು.


ಅದಕ್ಕೆ ಯೇಸು ಅವನಿಗೆ, “ನೀನೇ ಹೇಳಿದ್ದೀ; ಆದರೂ ಇನ್ನು ಮೇಲೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀವು ಕಾಣುವಿರಿ ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ನಾನು ಅವರನ್ನು ಕಂಡಾಗ ಸತ್ತವನ ಹಾಗೆ ಅವರ ಪಾದಗಳ ಮೇಲೆ ಬಿದ್ದೆನು. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನು ಮೊದಲನೆಯವನೂ ಕಡೆಯವನೂ


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯೂ ದೇವರೂ ಆಗಿರುವವರಿಗೆ ಸ್ತೋತ್ರವಾಗಲಿ. ಅವರು ಕ್ರಿಸ್ತ ಯೇಸುವನ್ನು ತಮ್ಮ ಮಹಾ ಕರುಣಾನುಸಾರವಾಗಿ, ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಜೀವಕರವಾದ ನಿರೀಕ್ಷೆಗೆ ನಮ್ಮನ್ನು ತಿರುಗಿ ಹುಟ್ಟಿಸಿದ್ದಾರೆ.


ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.


ಆದರೂ ದೇವದೂತರಿಗಿಂತ ಸ್ವಲ್ಪಕಾಲ ಕಡಿಮೆಯಾಗಿ ಮಾಡಲಾದ ಆ ಒಬ್ಬಾತನು ಯೇಸುವೇ. ಈ ಯೇಸು ಬಾಧೆಪಟ್ಟು ಮೃತಪಟ್ಟಿದ್ದರಿಂದಲೇ ಮಹಿಮೆಯನ್ನೂ ಮಾನವನ್ನೂ ಕಿರೀಟವಾಗಿ ಹೊಂದಿದರೆಂದು ಎಂದು ನಾವು ಕಾಣುತ್ತೇವೆ. ದೇವರ ಕೃಪೆಯಿಂದಲೇ ಎಲ್ಲರಿಗೋಸ್ಕರ ಮರಣವನ್ನು ಈ ಯೇಸು ಅನುಭವಿಸಬೇಕಾಗಿತ್ತು.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ದೇವರೂ ತಂದೆಯೂ ಆಗಿರುವವರಿಗೆ ಸ್ತೋತ್ರ, ದೇವರು ಕ್ರಿಸ್ತನಲ್ಲಿ ಪರಲೋಕದ ಎಲ್ಲಾ ಆತ್ಮಿಕ ಆಶೀರ್ವಾದಗಳಿಂದ ನಮ್ಮನ್ನು ಆಶೀರ್ವದಿಸಿದ್ದಾರೆ.


ಸತ್ತವರೊಳಗಿಂದ ಪುನರುತ್ಥಾನಗೊಂಡು ಪರಿಶುದ್ಧತೆಯ ಆತ್ಮದ ಪ್ರಕಾರ ದೇವಪುತ್ರರೆಂದು ಪ್ರಬಲವಾಗಿ ನಿರ್ಣಯಿಸಲಾದವರೂ ಆಗಿದ್ದಾರೆ. ಇವರೇ ನಮ್ಮ ಕರ್ತ ಯೇಸು ಕ್ರಿಸ್ತ.


ಸತ್ತವರನ್ನು ದೇವರು ಜೀವಂತವಾಗಿ ಎಬ್ಬಿಸುತ್ತಾರೆಂಬುದನ್ನು ನಂಬಲು ಅಸಾಧ್ಯವೆಂದು ನೀವು ಪರಿಗಣಿಸುವುದು ಏಕೆ?


ಆದರೆ ಮೂರನೆಯ ದಿನದಲ್ಲಿ ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಏಳುವಂತೆ ಮತ್ತು ಕಾಣಿಸಿಕೊಳ್ಳುವಂತೆ ಮಾಡಿದರು.


ನಿಮಗೂ ಎಲ್ಲಾ ಇಸ್ರಾಯೇಲ್ ಜನರಿಗೂ ಇದು ತಿಳಿದಿರಲಿ: ನೀವು ಯೇಸುವನ್ನು ಶಿಲುಬೆಗೆ ಹಾಕಿದಿರಿ. ಆದರೆ ದೇವರು ಸತ್ತವರೊಳಗಿಂದ ಎಬ್ಬಿಸಿದ ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಿಂದಲೇ ಈ ಮನುಷ್ಯನು ಪೂರ್ಣ ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುವನು.


ನಾನು ಮತ್ತು ನನ್ನ ತಂದೆ ಒಂದೇ ಆಗಿದ್ದೇವೆ,” ಎಂದು ಉತ್ತರಕೊಟ್ಟರು.


ಯಾರೂ ನನ್ನ ಪ್ರಾಣವನ್ನು ನನ್ನಿಂದ ತೆಗೆಯುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುವೆನು. ನಾನು ಅದನ್ನು ಕೊಡುವುದಕ್ಕೆ ನನಗೆ ಅಧಿಕಾರವಿದೆ. ಅದನ್ನು ಪುನಃ ತೆಗೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಪಡೆದಿದ್ದೇನೆ,” ಎಂದರು.


ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು, ಮಹತ್ವವು, ರಾಜ್ಯವು ಇವುಗಳನ್ನು ಕೊಡಲಾಯಿತು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂಥ ರಾಜ್ಯವಾಗಿದೆ.


ಏಕೆಂದರೆ ಭೂಪರಲೋಕಗಳಲ್ಲಿರುವ ಕಾಣುವಂತವುಗಳಾಗಲಿ, ಕಾಣದಂತವುಗಳಾಗಲಿ ಸಮಸ್ತವು ಇವರ ಮೂಲಕವೇ ಸೃಷ್ಟಿಸಲಾಯಿತು. ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಕ್ರಿಸ್ತನಲ್ಲಿಯೇ ಸೃಷ್ಟಿಗೊಂಡವು. ಸರ್ವವೂ ಕ್ರಿಸ್ತರಿಂದಲೂ ಕ್ರಿಸ್ತರಿಗಾಗಿಯೂ ಸೃಷ್ಟಿಹೊಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು