Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:6 - ಕನ್ನಡ ಸಮಕಾಲಿಕ ಅನುವಾದ

6 ತಮ್ಮ ಕೃಪಾ ಮಹಿಮೆಯ ಸ್ತುತಿಗಾಗಿಯೇ ಇವುಗಳನ್ನು ದೇವರು ತಾವು ಪ್ರೀತಿಸುವ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರ ಅದ್ಭುತವಾದ ಕೃಪೆಯಿಂದಾದ ಈ ನಿರ್ಧಾರವು ಆತನಿಗೆ ಸ್ತೋತ್ರವನ್ನು ಉಂಟುಮಾಡುತ್ತದೆ. ದೇವರು ಆ ಕೃಪೆಯನ್ನು ತನ್ನ ಪ್ರಿಯನಾದ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಯೆವಾ ಅಮಿ ಮಹಿಮೆನ್ ಭರಲ್ಲ್ಯಾ ಕುರ್ಪೆ ಸಾಟ್ನಿ ದೆವಾಕ್ ಸ್ತುತಿ ಕರುಂವಾ, ಕಶ್ಯಾಕ್ ಮಟ್ಲ್ಯಾರ್, ತೆನಿ ಅಪ್ನಾಚ್ಯಾ ಅಪುರ್‍ಬಾಯೆಚ್ಯಾ ಲೆಕಾಚ್ಯಾ ವೈನಾ ಅಮ್ಕಾ ಫುಕೊಟ್ ದೆನೆ ದಿಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:6
41 ತಿಳಿವುಗಳ ಹೋಲಿಕೆ  

ತಂದೆಯು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತಮ್ಮ ಪ್ರಿಯ ಪುತ್ರ ಕ್ರಿಸ್ತ ಯೇಸುವಿನ ರಾಜ್ಯದೊಳಗೆ ಸೇರಿಸಿದರು.


ಇದರಿಂದ ಕ್ರಿಸ್ತನಲ್ಲಿ ಮೊದಲು ನಿರೀಕ್ಷೆಯುಳ್ಳವರಾದ ನಾವು ಅವರ ಮಹಿಮೆಯ ಸ್ತುತಿಯಾಗಿರುವಂತೆ ನೇಮಿಸಿದರು.


ನನ್ನ ದೇವರು, ಕ್ರಿಸ್ತ ಯೇಸುವಿನಲ್ಲಿರುವ ತಮ್ಮ ಮಹಿಮೆಯ ಐಶ್ವರ್ಯಕ್ಕೆ ತಕ್ಕಂತೆಯೇ ನಿಮ್ಮ ಎಲ್ಲಾ ಕೊರತೆಗಳನ್ನು ನೀಗಿಸುವರು.


ಸ್ವರ್ಗದೊಳಗಿಂದ, “ಈತನು ನನ್ನ ಪ್ರಿಯ ಮಗನು. ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿ ಕೇಳಿಸಿತು.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ದೇವರ ಮಹಿಮೆ ಹಾಗೂ ಸ್ತೋತ್ರಕ್ಕಾಗಿ ಕ್ರಿಸ್ತ ಯೇಸುವಿನ ಮೂಲಕ ಬರುವ ನೀತಿಯ ಫಲಗಳಿಂದ ತುಂಬಿದವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.


ದೇವರಿಗೆ ಸೇರಿದವರಾದ ನಾವು ವಿಮೋಚನೆಯಾಗುವ ತನಕ ನಮ್ಮ ಸ್ವರ್ಗೀಯ ವಾರಸುತನವನ್ನು ಹೊಂದುವೆವು ಎಂಬುವುದಕ್ಕೆ ಈ ಪವಿತ್ರಾತ್ಮ ದೇವರೇ ನಮಗೆ ಹೊಣೆಯಾಗಿದ್ದಾರೆ. ದೇವರ ಮಹಿಮೆಯ ನಿಮಿತ್ಯವಾಗಿ ನಾವು ಅವರನ್ನು ಸ್ತುತಿಸೋಣ.


ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.


ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.


ಇವೆಲ್ಲವೂ ನಿಮ್ಮ ಒಳ್ಳೆಯದಕ್ಕಾಗಿಯೇ. ಇದರಿಂದ ಹೆಚ್ಚಾದ ಜನರಿಗೆ ತಲುಪುತ್ತಿರುವ ಕೃಪೆಯು, ಕೃತಜ್ಞತೆಯಿಂದ ತುಂಬಿ ಹರಿಯುವುದು. ಆಗ ದೇವರ ಮಹಿಮೆಯು ಸ್ಪಷ್ಟವಾಗುವುದು.


“ಇಗೋ, ನನ್ನ ಸೇವಕನು. ಇವನಿಗೆ ನಾನೇ ಆಧಾರ, ನಾನು ಆಯ್ದುಕೊಂಡವನಲ್ಲಿ ನನ್ನ ಆತ್ಮವು ಆನಂದಿಸುವುದು; ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಇತರ ಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.


ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ.


ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಮರಳಿ ಪಡೆಯುವಂತೆ ನನ್ನ ಪ್ರಾಣವನ್ನು ನಾನು ಕೊಡುವುದರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾರೆ.


ತಂದೆಯು ಪುತ್ರನನ್ನು ಪ್ರೀತಿಸಿ ಎಲ್ಲವನ್ನೂ ಅವರ ಕೈಯಲ್ಲಿ ಕೊಟ್ಟಿದ್ದಾರೆ.


“ಮಹೋನ್ನತದಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರ ಮೆಚ್ಚುಗೆ, ಮಾನವರಿಗೆ ಸಮಾಧಾನ.”


ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.


ಯೆಹೋವ ದೇವರು ಎಲ್ಲವುಗಳನ್ನು ಅದರದೇ ಆದ ಉದ್ದೇಶಗಳಿಗಾಗಿ ಮಾಡಿದ್ದಾರೆ. ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿದ್ದಾರೆ.


ಹೀಗೆ ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ಅವರಲ್ಲಿ ಒಂದಾಗಿರ ಬಯಸುತ್ತೇನೆ. ನಿಯಮದಿಂದ ಬರುವ ಸ್ವನೀತಿಯನ್ನು ಆಶ್ರಯಿಸಿಕೊಳ್ಳದೆ, ಕ್ರಿಸ್ತನನ್ನು ನಂಬುವುದರ ಮೂಲಕ ವಿಶ್ವಾಸದ ಆಧಾರದ ಮೇಲೆ ದೇವರು ಕೊಡುವ ನೀತಿಯನ್ನೇ ಹೊಂದಿದವನಾಗಿರ ಬಯಸುತ್ತೇನೆ.


ಮುಂದಣ ಯುಗಗಳಲ್ಲಿ ಕ್ರಿಸ್ತ ಯೇಸುವಿನ ದಯೆಯ ಮೂಲಕ ದೇವರು ತಮ್ಮ ಮಿತಿಯಿಲ್ಲದ ಕೃಪೆಯನ್ನು ನಮಗೆ ತೋರಿಸಬೇಕೆಂದಿದ್ದಾರೆ.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’


ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.


ಏಕೆಂದರೆ ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವುದೋ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳೆಯಿಸುವುದೋ, ಹಾಗೆಯೇ ಸಾರ್ವಭೌಮ ಯೆಹೋವ ದೇವರು ನೀತಿಯನ್ನೂ, ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವರು.


ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.


ನನ್ನ ಪ್ರಾಣವನ್ನು ಖಡ್ಗದಿಂದಲೂ ನನ್ನ ಅಮೂಲ್ಯ ಜೀವವನ್ನು ನಾಯಿಗಳ ಬಲದಿಂದಲೂ ಬಿಡಿಸಿರಿ.


“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.


ನೀವು ಪ್ರೀತಿಸುವವರು ಬಿಡುಗಡೆಯಾಗುವಂತೆ ನಿಮ್ಮ ಬಲಗೈಯಿಂದ ರಕ್ಷಿಸಿ ನಮಗೆ ಸಹಾಯಮಾಡಿರಿ.


ಆಗ ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿ ಮತ್ತು ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು, ಯಾಜಕನು ಅವನ ಸ್ರಾವಕ್ಕೋಸ್ಕರ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.


“ಆಗ ಐದು ಗಂಟೆಗೆ ಕರೆದವರು ಬಂದಾಗ ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು