Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:1 - ಕನ್ನಡ ಸಮಕಾಲಿಕ ಅನುವಾದ

1 ನೀವು ನಿಮ್ಮ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಹಿಂದೊಮ್ಮೆ ಸತ್ತವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಹಿಂದೊಮ್ಮೆ ನೀವು ಆಧ್ಯಾತ್ಮಿಕವಾಗಿ ಮೃತರಾಗಿದ್ದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆತನು ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಸಹ ಬದುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೊದಲು ನಿಮ್ಮ ಆತ್ಮಿಕ ಜೀವಿತಗಳು, ನಿಮ್ಮ ಪಾಪಗಳ ಮತ್ತು ನೀವು ದೇವರಿಗೆ ವಿರುದ್ಧವಾಗಿ ಮಾಡಿದ ಕೆಟ್ಟಕಾರ್ಯಗಳ ದೆಸೆಯಿಂದ ಸತ್ತುಹೋಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪಾಟಿ ತುಮ್ಚ್ಯಾ ಪಾಪಾಕ್ ಲಾಗುನ್ ಅನಿ ಖಾಯ್ಲ್ ಹೊವ್ನ್ ಚಲಿನಸಲ್ಯಾಕ್ ಲಾಗುನ್ ತುಮಿ ಆತ್ಮಿಕ್ ರಿತಿನ್ ಮರುನ್ ಗೆಲ್ಲ್ಯಾಸಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:1
21 ತಿಳಿವುಗಳ ಹೋಲಿಕೆ  

ನಿಮ್ಮ ಪಾಪಗಳಿಂದಲೂ ನಿಮ್ಮ ಸುನ್ನತಿಯಿಲ್ಲದ ಪಾಪ ಸ್ವಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತ ಯೇಸುವಿನೊಂದಿಗೆ ಜೀವಿತರನ್ನಾಗಿ ಮಾಡಿ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದರು.


ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.


ಅವರು ತಮ್ಮ ಹೃದಯ ಕಠಿಣತ್ವದ ಅಜ್ಞಾನದಿಂದ ತಮ್ಮ ಕತ್ತಲು ಕವಿದ ತಿಳುವಳಿಕೆಯಲ್ಲಿ, ದೇವರ ಜೀವದಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡವರಾಗಿದ್ದಾರೆ.


ತಂದೆ ಸತ್ತವರನ್ನು ಎಬ್ಬಿಸಿ ಬದುಕಿಸುವಂತೆಯೇ ಪುತ್ರನೂ ತನಗಿಷ್ಟ ಬಂದವರನ್ನು ಬದುಕಿಸುತ್ತಾರೆ.


ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.


ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ಆದ್ದರಿಂದ ಹೀಗೆ ಹೇಳಲಾಗಿದೆ: “ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”


ಆದರೆ ಭೋಗಿಯಾಗಿರುವ ವಿಧವೆಯು ಬದುಕಿರುವಾಗಲೂ ಸತ್ತವಳೇ.


ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಪುತ್ರನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಈಗಾಗಲೇ ಬಂದಿದೆ. ಈ ಸ್ವರವನ್ನು ಕೇಳುವವರು ಬದುಕುವರು.


“ಮೊದಲನೆಯ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು,” ಎಂದು ಬರೆದಿದೆಯಲ್ಲವೇ? ಕಡೇ ಆದಾಮನು ಜೀವಕೊಡುವ ಆತ್ಮನಾದನು.


ಕಳ್ಳನು ಕದಿಯಲು, ಕೊಯ್ಯಲು ಮತ್ತು ನಾಶಮಾಡಲು ಮಾತ್ರ ಬರುತ್ತಾನೆ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.


“ಸಾರ್ದಿಸಿನಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ದೇವರ ಏಳು ಆತ್ಮಗಳನ್ನೂ ಏಳು ನಕ್ಷತ್ರಗಳನ್ನೂ ಹಿಡಿದುಕೊಂಡಿರುವವರು ಹೇಳುವುದೇನೆಂದರೆ: ನಾನು ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ಸತ್ತವನಾಗಿದ್ದೀಯೆ.


ಆದರೆ ಈ ನಿನ್ನ ತಮ್ಮ ಸತ್ತುಹೋಗಿದ್ದನು, ತಿರುಗಿ ಬದುಕಿದ್ದಾನೆ; ಕಳೆದುಹೋಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಉಲ್ಲಾಸಪಟ್ಟು ಆನಂದಪಡುವುದು ಯುಕ್ತವಾದದ್ದೇ ಎಂದು ಹೇಳಿದನು.’ ”


ಏಕೆಂದರೆ ಈ ನನ್ನ ಮಗನು ಸತ್ತುಹೋಗಿದ್ದನು, ತಿರುಗಿ ಬದುಕಿದ್ದಾನೆ; ಕಳೆದುಹೋಗಿದ್ದನು, ಸಿಕ್ಕಿದ್ದಾನೆ,’ ಎಂದು ಹೇಳಿದನು. ಹೀಗೆ ಅವರು ಅವನ ಬರುವಿಕೆಯನ್ನು ಆಚರಿಸತೊಡಗಿದರು.


ಆದರೆ ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ,” ಎಂದು ಹೇಳಿದರು.


ಕ್ರಿಸ್ತ ಯೇಸುವಿನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ. ಏಕೆಂದರೆ, ಎಲ್ಲರಿಗೋಸ್ಕರ ಕ್ರಿಸ್ತ ಯೇಸು ಸತ್ತದ್ದರಿಂದ, ಎಲ್ಲರೂ ಸತ್ತಂತಾಯಿತು.


ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು