Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:10 - ಕನ್ನಡ ಸಮಕಾಲಿಕ ಅನುವಾದ

10 ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾವು ಆತನ ನಿರ್ಮಾಣ; ಸತ್ಕಾರ್ಯಗಳನ್ನು ಮಾಡುವದಕ್ಕಾಗಿಯೇ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟೆವು. ನಾವು ಸತ್ಕಾರ್ಯಗಳನ್ನು ನಡಿಸುವವರಾಗಿ ಬದುಕಬೇಕೆಂದು ದೇವರು ನಮ್ಮನ್ನು ಮೊದಲೇ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾವು ದೇವರ ನಿರ್ಮಾಣ. ನಾವು ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ದೇವರು ನಮ್ಮನ್ನು ಕ್ರಿಸ್ತಯೇಸುವಿನಲ್ಲಿ ಹೊಸ ಜನರನ್ನಾಗಿ ಮಾಡಿದನು. ದೇವರು ನಮಗೋಸ್ಕರವಾಗಿ ಆ ಒಳ್ಳೆಯ ಕಾರ್ಯಗಳನ್ನು ಮೊದಲೇ ಯೋಜನೆ ಮಾಡಿದನು. ನಾವು ಆ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಜೀವಿಸಬೇಕೆಂಬುದು ದೇವರ ಯೋಜನೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ದೆವಾನ್ ಅಮ್ಕಾ ರಚಲೆ ಹಾಯ್ ಅನಿ ಕ್ರಿಸ್ತ್ ಜೆಜುಚ್ಯಾ ಎಕ್ಟಟ್ಟಾ ವೈನಾ ತೆನಿ ಅಮ್ಕಾ ಬರಿಕಾಮಾ ಕರ್ತಲೆ ಜಿವನ್ ಕರುಕ್ ರಚಲೆ ಹಾಯ್, ಹೆ ತೆನಿ ಅಮ್ಚ್ಯಾ ಸಾಟ್ನಿ ಅದ್ದಿಚ್ ತಯಾರ್ ಕರುನ್ ಥವಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:10
58 ತಿಳಿವುಗಳ ಹೋಲಿಕೆ  

ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ.


ಕರ್ತ ಯೇಸುವಿಗೆ ಯೋಗ್ಯರಾಗಿ ಜೀವಿಸಿ ಎಲ್ಲಾ ವಿಧದಲ್ಲಿ ಅವರನ್ನೇ ಮೆಚ್ಚಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯದಲ್ಲಿ ಫಲಕೊಡುತ್ತಾ ದೇವರ ತಿಳುವಳಿಕೆಯಲ್ಲಿ ವೃದ್ಧಿಯಾಗುತ್ತಿರಬೇಕೆಂತಲೂ


ನೀವು ದೇವರ ಚಿತ್ತಾನುಸಾರವಾಗಿ ಎಲ್ಲವನ್ನೂ ಮಾಡುವಂತೆ ನಿಮ್ಮನ್ನು ಸನ್ನದ್ಧರಾಗಿ ಮಾಡಲಿ. ಕ್ರಿಸ್ತ ಯೇಸುವಿನ ಶಕ್ತಿಯ ಮೂಲಕವಾಗಿ ಪ್ರತಿಯೊಂದು ಸತ್ಕಾರ್ಯಗಳನ್ನು ತಮಗೆ ಮೆಚ್ಚಿಕೆಯಾಗುವಂತೆ ನಿಮ್ಮ ಮೂಲಕವಾಗಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಯೇಸುವಿಗೆ ಮಹಿಮೆ ಉಂಟಾಗಲಿ. ಆಮೆನ್.


ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು.


ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತರಾಗಿರುವುದರಿಂದ ನೀವು ಯಾವಾಗಲೂ ಎಲ್ಲಾ ವಿಷಯಗಳಲ್ಲಿಯೂ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಿ.


ಸತ್ಯವಾದ ನೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ದೇವರ ಹೋಲಿಕೆಯ ಪ್ರಕಾರವಾಗಿರಲು ಸೃಷ್ಟಿಸಲಾದ ಹೊಸ ಸ್ವಭಾವವನ್ನು ಧರಿಸಿಕೊಳ್ಳಿರಿ.


ಒಳ್ಳೆಯ ಕೆಲಸಗಳನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಕ್ರಿಸ್ತ ಯೇಸುವಿನ ಪುನರಾಗಮನ ದಿನದವರೆಗೆ ಪೂರೈಸುವರು ಎಂಬುದೇ ನನ್ನ ದೃಢ ವಿಶ್ವಾಸವಾಗಿದೆ.


ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.


ಆದ್ದರಿಂದ ನೀವು ಸ್ವೀಕರಿಸಿದ ನಿಮ್ಮ ಕರೆಯುವಿಕೆಗೆ ಯೋಗ್ಯರಾಗಿ ಬಾಳಬೇಕೆಂದು ಕರ್ತನ ಸೆರೆಯಾಳಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ಒಬ್ಬನು ತನ್ನನ್ನು ಸಾಮಾನ್ಯ ಘನಹೀನತೆಯಿಂದ ಶುದ್ಧಮಾಡಿಕೊಂಡರೆ, ಅವನು ವಿಶೇಷ ಉದ್ದೇಶಕ್ಕಾಗಿ ಶುದ್ಧೀಕರಗೊಂಡವನೂ ಯಜಮಾನನಿಗೆ ಉಪಯುಕ್ತನೂ ಸಕಲ ಸತ್ಕಾರ್ಯಕ್ಕೆ ಸಿದ್ಧನೂ ಆಗಿರುವ ಗೌರವದ ಪಾತ್ರೆಯಾಗಿರುವನು.


ಯೆಹೋವ ದೇವರೇ ದೇವರೆಂದು ತಿಳುಕೊಳ್ಳಿರಿ; ಅವರೇ ನಮ್ಮನ್ನು ಉಂಟುಮಾಡಿದ್ದಾರೆ; ನಾವು ಅವರ ಜನರೂ, ಅವರು ಮೇಯಿಸುವ ಕುರಿ ಮಂದೆಯೂ ಆಗಿದ್ದೇವೆ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.


ನಾವು ಪ್ರೀತಿಯಲ್ಲಿದ್ದು ಅವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಅವರು ಲೋಕದ ಅಸ್ತಿವಾರಕ್ಕೆ ಮುಂಚೆ ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡರು.


ಅಂಥವರು ಒಳ್ಳೆಯದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲು ಕೊಡುವುದರಲ್ಲಿ ಸಿದ್ಧರಾಗಿರುವವರೂ ಪರೋಪಕಾರ ಮಾಡುವವರೂ ಆಗಿರಬೇಕೆಂದು ಅವರನ್ನು ಪ್ರಬೋಧಿಸು.


ನಮ್ಮವರು ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೂ ಅಗತ್ಯವಾಗಿರುವ ಕೊರತೆಗಳನ್ನು ನೀಗಿಸುವುದಕ್ಕೂ ಕಲಿತುಕೊಳ್ಳಲಿ. ಆಗ ಅವರು ನಿಷ್ಪಲರಾಗದೇ ಇರುವರು.


ನಾವು ಒಬ್ಬರನ್ನೊಬ್ಬರು ಪ್ರೀತಿಸುವುದಕ್ಕಾಗಿಯೂ ಸತ್ಕಾರ್ಯ ಮಾಡುವುದಕ್ಕಾಗಿಯೂ ಹೇಗೆ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಬೇಕೆಂದು ಯೋಚಿಸೋಣ.


ಇದು ನಂಬತಕ್ಕ ಮಾತಾಗಿದೆ. ದೇವರನ್ನು ನಂಬಿದವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಇವುಗಳ ವಿಷಯವಾಗಿ ಪ್ರಾಮುಖ್ಯತೆಯನ್ನು ಕೊಡಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಹಿತಕರವೂ ಪ್ರಯೋಜನಕರವೂ ಆಗಿವೆ.


ಸೃಷ್ಟಿಕರ್ತನ ಸ್ವರೂಪವನ್ನು, ತಿಳುವಳಿಕೆಯಲ್ಲಿ ನವೀಕರಣ ಹೊಂದುತ್ತಿರುವ ಆ ನೂತನ ಸ್ವಭಾವವನ್ನೇ ಧರಿಸಿಕೊಂಡವರಾಗಿದ್ದೀರಲ್ಲಾ.


ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯ ಮಾಡುವುದರಲ್ಲಿ ಆದರ್ಶವಾಗಿ ತೋರಿಸು. ಬೋಧನೆಯಲ್ಲಿ ಪ್ರಾಮಾಣಿಕತೆಯನ್ನೂ ಗಂಭೀರತೆಯನ್ನೂ


ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.


ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.


ಆಳುವವರಿಗೂ ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕೆಂತಲೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕೆ ಸಿದ್ಧರಾಗಿರಬೇಕೆಂತಲೂ ಅವರಿಗೆ ಜ್ಞಾಪಕಮಾಡು.


ದೇವರಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಯೇಸು ಜೀವಿಸಿದಂತೆಯೇ ತಾನೂ ಜೀವಿಸಬೇಕು.


ಯೆಹೋವ ದೇವರು ನನ್ನ ನ್ಯಾಯವನ್ನು ಸಿದ್ಧಿಗೆ ತರುತ್ತಾರೆ; ಯೆಹೋವ ದೇವರೇ, ನಿಮ್ಮ ಪ್ರೀತಿಯು ಎಂದೆಂದಿಗೂ ಇರುವುದು; ನಿಮ್ಮ ಕೈಕೆಲಸಗಳನ್ನು ನೆರವೇರಿಸಿರಿ.


ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ಕಾಣುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ, ಯಾಕೋಬಿನ ಪರಿಶುದ್ಧನನ್ನು ಪ್ರತಿಷ್ಠಿಸುವರು, ಇಸ್ರಾಯೇಲಿನ ದೇವರಿಗೆ ಭಯಪಡುವರು.


ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.


ಆದರೆ ಸತ್ಯವನ್ನು ಅನುಸರಿಸುವವರು ನಡೆದಿರುವ ತಮ್ಮ ಕೃತ್ಯಗಳು ದೇವರಿಂದ ಆದವುಗಳೆಂದು ಪ್ರಕಟಿಸುವಂತೆ ಬೆಳಕಿಗೆ ಬರುತ್ತಾರೆ.


ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ, ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.


ನಿಮ್ಮ ಹೃದಯಗಳನ್ನು ಸಂತೈಸಿ, ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.


ಅನೇಕ ಸಹೋದರರ ಮಧ್ಯೆ ಜ್ಯೇಷ್ಠಪುತ್ರನೆನಿಸುವಂತೆ ದೇವರು ಯಾರನ್ನು ಮೊದಲು ತಿಳಿದುಕೊಂಡರೋ ಅವರನ್ನು ತಮ್ಮ ಪುತ್ರನ ಹೋಲಿಕೆಗೆ ಸಮಾನರಾಗುವಂತೆ ಮುಂದಾಗಿ ನೇಮಿಸಿದರು.


ಆ ಸಮಯದಲ್ಲಿ ಯೂದಾಯ, ಗಲಿಲಾಯ, ಸಮಾರ್ಯದಲ್ಲೆಲ್ಲಾ ಇದ್ದ ಸಭೆಯು ಸಮಾಧಾನ ಹೊಂದಿತು. ಸಭೆ ಬಲಗೊಂಡು ಪವಿತ್ರಾತ್ಮರಿಂದ ಧೈರ್ಯಹೊಂದಿ ಸಂಖ್ಯೆಯಲ್ಲಿ ವೃದ್ಧಿಸುತ್ತಾ, ಕರ್ತ ಯೇಸುವಿನ ಭಯದಲ್ಲಿ ಮುನ್ನಡೆಯಿತು.


“ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ನಿಯಮವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.


ಈ ಉದ್ದೇಶಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು, ಮುಂಬರುವುದರ ಖಾತರಿಯಾಗಿ ನಮಗೆ ತಮ್ಮ ಆತ್ಮವನ್ನೇ ಕೊಟ್ಟಿದ್ದಾರೆ.


“ಯಾಕೋಬೇ, ಇಸ್ರಾಯೇಲೇ! ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನೀನು ನನ್ನ ಸೇವಕನಾಗಿದ್ದೀ. ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು. ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.


ಅದರಂತೆಯೇ ಕೆಲವರ ಒಳ್ಳೆಯ ಕ್ರಿಯೆಗಳು ಮುಂಚೆಯೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವ ಒಳ್ಳೆಯ ಕ್ರಿಯೆಗಳು ನಿರಂತರವಾಗಿ ಮರೆಯಾಗಿರಲಾರವು.


ದೇವ ಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ತಕ್ಕಂತೆ ಸತ್ಕ್ರಿಯೆಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳಬೇಕು.


ನೀವು ಬದುಕುವ ಹಾಗೆಯೂ, ನಿಮಗೆ ಒಳ್ಳೆಯದಾಗುವ ಹಾಗೆಯೂ, ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಮಾರ್ಗಗಳಲ್ಲೇ ನಡೆದುಕೊಳ್ಳಬೇಕು.


ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.


ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.


ಯೊಪ್ಪ ಎಂಬಲ್ಲಿ ತಬಿಥಾ ಎಂಬ ಹೆಸರಿನ ದೇವಭಕ್ತೆ ಇದ್ದಳು. ಈ ಹೆಸರಿನ ಗ್ರೀಕ್ ಭಾಷಾಂತರ “ದೊರ್ಕ” ಎಂದಾಗುತ್ತದೆ. ಆಕೆ ಬಡವರಿಗೆ ಸಹಾಯ ಮಾಡುತ್ತಾ ಯಾವಾಗಲೂ ಒಳ್ಳೆಯದನ್ನೇ ಮಾಡುತ್ತಿದ್ದಳು.


ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.


ನನ್ನ ಪ್ರಜೆಯಾದ ಈಜಿಪ್ಟಿಗೂ, ನನ್ನ ಕೈಕೆಲಸವಾದ ಅಸ್ಸೀರಿಯಕ್ಕೂ ಮತ್ತು ನನ್ನ ಸೊತ್ತಾದ ಇಸ್ರಾಯೇಲಿಗೂ, “ನಿಮಗೆ ಆಶೀರ್ವಾದ,” ಎಂದು ಸೇನಾಧೀಶ್ವರ ಯೆಹೋವ ದೇವರು ಅವುಗಳನ್ನು ಆಶೀರ್ವಾದ ಮಾಡುವರು.


ಅಂಥವರು ಅನ್ಯಾಯವನ್ನು ಮಾಡದೆ, ದೇವರ ಮಾರ್ಗಗಳಲ್ಲಿ ನಡೆದುಕೊಳ್ಳುವರು.


“ಹಾ, ನನ್ನ ಜನರು ನನ್ನ ಮಾತನ್ನು ಕೇಳಿದರೆ ಒಳ್ಳೆದಾಗಿತ್ತು! ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ ಮೇಲಾಗುತ್ತಿತ್ತು,


ಸುನ್ನತಿಯಾಗುವುದರಿಂದ ಇಲ್ಲವೆ, ಸುನ್ನತಿಯಾಗದೆ ಇರುವುದರಿಂದ ಏನೂ ಪ್ರಯೋಜನವಿಲ್ಲ. ಆದರೆ ಹೊಸ ಸೃಷ್ಟಿಯೇ ಬೇಕು.


ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಯೆಹೋವ ದೇವರಿಗೆ ಪ್ರತಿಯಾಗಿ ಹೀಗೆ ವರ್ತಿಸುವುದು ಸರಿಯೋ? ಜ್ಞಾನವಿಲ್ಲದ ಬುದ್ಧಿಹೀನ ಜನರೇ, ದೇವರು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೋ? ನಿಮ್ಮನ್ನು ಸೃಷ್ಟಿಸಿ ಸ್ಥಿರಪಡಿಸಿದ್ದು ದೇವರಲ್ಲವೋ?


ನೀವು, ಹಿಂದೆ ಇಹಲೋಕದ ಮಾರ್ಗಕ್ಕೆ ಅನುಸಾರವಾಗಿ ನಡೆದುಕೊಂಡು, ವಾಯುಮಂಡಲದ ಅಧಿಪತಿಯ ಆತ್ಮನಿಗನುಸಾರವಾಗಿದ್ದೀರಿ. ಆ ದುರಾತ್ಮವು ಈಗ ಅವಿಧೇಯತೆಯ ಮಕ್ಕಳಲ್ಲಿ ಕಾರ್ಯಮಾಡುತ್ತಿದೆ.


ನನ್ನ ಹೆಸರಿನಿಂದ ಕರೆಯಲಾದ ಪ್ರತಿಯೊಬ್ಬನನ್ನೂ ಬರಮಾಡುವೆನು. ಏಕೆಂದರೆ ಅವರನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ. ನಾನು ಅವರನ್ನು ನಿರ್ಮಿಸಿದ್ದೇನೆ. ಹೌದು, ನಾನು ಅವರನ್ನು ಉಂಟುಮಾಡಿದ್ದೇನೆ.”


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, ಎಫೆಸದಲ್ಲಿರುವ ಭಕ್ತರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ ಬರೆಯುತ್ತಿರುವುದು:


ಕ್ರಿಸ್ತ ಯೇಸುವಿನೊಂದಿಗೆ ದೇವರು ನಮ್ಮನ್ನು ಎಬ್ಬಿಸಿ ಪರಲೋಕದ ಉನ್ನತ ಸ್ಥಳಗಳಲ್ಲಿ ಕ್ರಿಸ್ತನೊಂದಿಗೇ ನಮ್ಮನ್ನು ಕೂತುಕೊಳ್ಳುವಂತೆ ಮಾಡಿದ್ದಾರೆ.


ಮೊದಲು ಕ್ರಿಸ್ತ ಯೇಸುವಿಗೆ ದೂರವಾಗಿದ್ದ ನೀವು ಈಗ ಕ್ರಿಸ್ತನ ರಕ್ತದ ಮೂಲಕ ಹತ್ತಿರವಾಗಿದ್ದೀರಿ.


ಹೀಗೆ ಕ್ರಿಸ್ತ ಯೇಸು ತಮ್ಮ ದೇಹವನ್ನು ಶಿಲುಬೆಯಲ್ಲಿ ಸಮರ್ಪಿಸಿದ್ದರಿಂದ ನಿಯಮದ ಆಜ್ಞೆಗಳುಳ್ಳ ಶಾಸನಗಳನ್ನು ರದ್ದುಗೊಳಿಸಿದರು. ಈ ರೀತಿಯಾಗಿ ಇವೆರಡೂ ಗುಂಪಿನವರಿಂದ ಒಬ್ಬ ನೂತನ ಮಾನವತ್ವವನ್ನು ತಮ್ಮಲ್ಲಿ ಸೃಷ್ಟಿಸಿ ಸಮಾಧಾನವನ್ನು ಉಂಟುಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು