Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:11 - ಕನ್ನಡ ಸಮಕಾಲಿಕ ಅನುವಾದ

11 ಆದಕಾರಣ ಸುನ್ನತಿಮಾಡಿಸಿಕೊಂಡಿದ್ದೇವೆ ಎಂದು ತಮ್ಮ ಬಗ್ಗೆ ಹೇಳಿಕೊಂಡವರು, ಹುಟ್ಟಿದಂದಿನಿಂದ ಯೆಹೂದ್ಯರಲ್ಲದವರಾದ ನಿಮಗೆ ಸುನ್ನತಿಮಾಡಿಸಿಕೊಳ್ಳದವರು ಎಂದು ಹೇಳಿದ್ದನು ನೆನಪುಮಾಡಿಕೊಳ್ಳಿ. ಈ ಸುನ್ನತಿಯು ಮನುಷ್ಯರಿಂದಾದದ್ದಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹಿಂದೊಮ್ಮೆ ನೀವು ಅನ್ಯಜನರಾಗಿದ್ದಿರಿ ಎಂಬುದು ನಿಮ್ಮ ನೆನಪಿನಲ್ಲಿರಲಿ; ಆಗ ಶಾರೀರಿಕ ಸುನ್ನತಿ ಪಡೆದವರು ನಿಮ್ಮನ್ನು ‘ಸುನ್ನತಿಯಿಲ್ಲದವರು’ ಎಂದು ತುಚ್ಛೀಕರಿಸಿ ಕರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ; ಶರೀರದಲ್ಲಿ ಕೈಯಿಂದ ಸುನ್ನತಿಮಾಡಿಸಿಕೊಂಡು ಸುನ್ನತಿಯವರೆನಿಸಿಕೊಳ್ಳುವವರು ನಿಮ್ಮನ್ನು ಸುನ್ನತಿಯಿಲ್ಲದವರೆಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀವು ಹುಟ್ಟಿದಂದಿನಿಂದ ಅನ್ಯಜನರಾಗಿದ್ದೀರಿ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಯೆಹೂದ್ಯರು ಕರೆಯುತ್ತಾರೆ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಕರೆಯುವ ಯೆಹೂದ್ಯರು ತಮ್ಮ ಬಗ್ಗೆ “ಸುನ್ನತಿಯವರು” ಎಂದು ಹೇಳಿಕೊಳ್ಳುತ್ತಾರೆ. (ಅವರ ಸುನ್ನತಿಯು ಶರೀರದಲ್ಲಿ ಕೈಯಿಂದ ಮಾಡಲ್ಪಡುತ್ತದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜುದೆವಾನಿಕ್ನಾ ಸುನ್ನತ್ ಕರುನ್ ಘೆವ್ ನಸಲ್ಲೆ ಮನುನ್ ಬಲ್ವುನ್ ಘೆತಲ್ಯಾ ಜಲ್ಮಿ ಜುದೆವ್ ನ್ಹಯ್ ಹೊವ್ನ್ ಅಸಲ್ಲ್ಯಾನು, ಅಪ್ನಾಕುಚ್ ಸುನ್ನತ್ ಕರ್ಸುನ್ ಘೆಟಲ್ಲೆ ತಸೆ ಮಟ್ಲ್ಯಾರ್ ಘೊವ್ಮಾನ್ಸಾನ್ ಅಪ್ನಾಚ್ಯಾ ಅಂಗಾಕ್ ಕರುನ್ಗೆಟಲ್ಲ್ಯಾ ವಿಶಯಾತ್ ಸಮುಂದ್ ಪಡಲೆ ಹಾಯ್ ಫಾಟಿ ತುಮಿ ಕಾಯ್ ಹೊವ್ನ್ ಹೊತ್ತ್ಯಾಸಿ ಮನುನ್ ಯಾದ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:11
29 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತ ಯೇಸುವಿನಲ್ಲಿ ಸ್ವೀಕರಿಸಿದ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಅದು ನಿಮ್ಮ ಮಾಂಸಭಾವವನ್ನು ಆಳುವ ಇಡೀ ಸ್ವಾರ್ಥವನ್ನೇ ಬಿಟ್ಟುಬಿಡುವ ಆತ್ಮಿಕ ಸುನ್ನತಿಯಾಗಿದೆ.


ನಿಮ್ಮ ಪಾಪಗಳಿಂದಲೂ ನಿಮ್ಮ ಸುನ್ನತಿಯಿಲ್ಲದ ಪಾಪ ಸ್ವಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತ ಯೇಸುವಿನೊಂದಿಗೆ ಜೀವಿತರನ್ನಾಗಿ ಮಾಡಿ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದರು.


ಯೆಹೂದ್ಯರು ಯೆಹೂದ್ಯರಲ್ಲದವರು, ಸುನ್ನತಿ ಹೊಂದಿದವರು, ಸುನ್ನತಿ ಹೊಂದದವರು, ನಾಗರಿಕ, ಅನಾಗರಿಕ, ಆಳು, ಸ್ವತಂತ್ರರು ಎಂಬ ಭೇದವಿಲ್ಲ. ಆದರೆ ಕ್ರಿಸ್ತ ಯೇಸುವೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.


ಹಿಂದಿನ ಕಾಲದಲ್ಲಿ ನೀವು ನಿಮ್ಮ ದುಷ್ಕೃತ್ಯಗಳ ನಿಮಿತ್ತ ದೇವರಿಂದ ದೂರವಿದ್ದವರೂ ಮನಸ್ಸಿನಲ್ಲಿ ದೇವರ ಶತ್ರುಗಳೂ ಆಗಿದ್ದೀರಿ.


ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.


ನೀವು ಹಿಂದೊಮ್ಮೆ ಕತ್ತಲೆಯಾಗಿದ್ದಿರಿ. ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿದ್ದೀರಿ. ಬೆಳಕಿನ ಮಕ್ಕಳಾಗಿ ಬಾಳಿರಿ.


ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡುವವರೂ ತಮಗೆ ಕ್ರಿಸ್ತ ಯೇಸುವಿನ ಶಿಲುಬೆಯ ನಿಮಿತ್ತ ಹಿಂಸೆಯಾಗಬಾರದೆಂಬುದಕ್ಕಾಗಿಯೇ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಿಮ್ಮನ್ನು ಒತ್ತಾಯ ಮಾಡುತ್ತಾರೆ.


ನೀವು ಕ್ರಿಸ್ತನನ್ನು ನಂಬದಿದ್ದಾಗ, ಹೇಗೆ ಮೂಕ ವಿಗ್ರಹಗಳ ಕಡೆಗೆ ಪ್ರಭಾವಗೊಂಡು ದಾರಿತಪ್ಪಿ ಹೋಗಿದ್ದಿರಿ ಎಂಬುದನ್ನು ಬಲ್ಲಿರಿ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ, “ಈ ಫಿಲಿಷ್ಟಿಯನನ್ನು ಕೊಂದು, ಇಸ್ರಾಯೇಲಿನ ಮೇಲಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಸಿಕ್ಕುವುದು? ಏಕೆಂದರೆ ಸುನ್ನತಿ ಇಲ್ಲದ ಆ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸುವುದಕ್ಕೆ ಎಷ್ಟರವನು,” ಎಂದನು.


ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಆಚರಿಸಬೇಕು.


ನೀವು ಈಜಿಪ್ಟ್ ದೇಶದಲ್ಲಿ ದಾಸರಾಗಿದ್ದಿರಿ ಎಂದೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಿರಿ. ಆದ್ದರಿಂದ ನಾನು ಈ ಹೊತ್ತು ಇದನ್ನು ನಿಮಗೆ ಆಜ್ಞಾಪಿಸುತ್ತೇನೆ.


ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ. ಮರೆಯಬೇಡಿರಿ. ನೀವು ಈಜಿಪ್ಟ್ ದೇಶದಿಂದ ಹೊರಟ ದಿವಸ ಮೊದಲ್ಗೊಂಡು ಈ ಸ್ಥಳಕ್ಕೆ ಬರುವವರೆಗೆ ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುತ್ತಿದ್ದೀರಿ.


ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ತಗ್ಗಿಸಿ, ನೀವು ದೇವರ ಆಜ್ಞೆಗಳನ್ನು ಕಾಪಾಡುವಿರೋ ಇಲ್ಲವೋ ಎಂದು ನಿಮ್ಮ ಹೃದಯವನ್ನು ಪರೀಕ್ಷಿಸುವುದಕ್ಕೆ ನಿಮ್ಮನ್ನು ನಡೆಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಿರಿ.


“ನಾವಂತೂ ಹುಟ್ಟು ಯೆಹೂದ್ಯರು, ಪಾಪಿಗಳೆಂದು ಕರೆಯಲಾಗುವ ಯೆಹೂದ್ಯರಲ್ಲದವರಲ್ಲ.


ಆಮೇಲೆ ನೀವು ನಿಮ್ಮ ನಿಮ್ಮ ದುರ್ಮಾರ್ಗಗಳನ್ನೂ ದುರಾಚಾರಗಳನ್ನೂ ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.


ನೀನು ಈಜಿಪ್ಟ್ ದೇಶದಲ್ಲಿ ದಾಸನಾಗಿದ್ದಿಯೆಂದೂ, ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಲ್ಲಿಂದ ಬಲವಾದ ಹಸ್ತದಿಂದಲೂ ಚಾಚಿದ ಭುಜದಿಂದಲೂ ಹೊರಗೆ ಬರಮಾಡಿದರೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಯೆಹೋವ ದೇವರು ನಿನಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾರೆ.


ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು, ನೀವು ಯಾವ ಸಂಗತಿಗಳಿಂದ ಅಶುದ್ಧವಾಗಿದ್ದೀರೋ, ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕ ಮಾಡಿಕೊಳ್ಳುವಿರಿ. ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿಯಲ್ಲಿಯೇ ನೀವು ಅಸಹ್ಯರಾಗುವಿರಿ.


ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ, ಆ ಕರಡಿಯನ್ನೂ ಕೊಂದುಬಿಟ್ಟೆನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸಿದ್ದರಿಂದ, ಅವುಗಳಲ್ಲಿ ಒಂದರ ಹಾಗೆ ಇರುವನು,” ಎಂದನು.


ಸುನ್ನತಿಯಿಲ್ಲದವನು ನಿಯಮಗಳನ್ನು ಕೈಗೊಳ್ಳುವವರೆಗೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸುವುದಿಲ್ಲವೇ?


ಅವನು ಶಾರೀರಿಕವಾಗಿ ಸುನ್ನತಿಯಿಲ್ಲದವನಾಗಿದ್ದರೂ ನಿಯಮವನ್ನು ಅನುಸರಿಸುವುದರಿಂದ ಲಿಖಿತ ನಿಯಮವೂ ಸುನ್ನತಿಯೂ ಇದ್ದು ನಿಯಮವನ್ನು ಮೀರಿ ನಡೆಯುವ ನಿನ್ನನ್ನು ದೋಷಿಯೆಂದು ತೀರ್ಪು ಮಾಡುವನಲ್ಲವೇ?


ಕೆಲವು ಕೊಂಬೆಗಳು ಮುರಿದುಹೋಗಿರುವುದಾದರೆ, ಕಾಡು ಓಲಿವ್ ಮರದಂತಿರುವ ನೀನು ಅವುಗಳ ನಡುವೆ ಕಸಿಮಾಡಿ ಉತ್ತಮ ಓಲಿವ್ ಮರದ ರಸವತ್ತಾದ ಬೇರಿನಲ್ಲಿ ಪಾಲುಹೊಂದಿರಲಾಗಿ,


ನೀವು, ಹಿಂದೆ ಇಹಲೋಕದ ಮಾರ್ಗಕ್ಕೆ ಅನುಸಾರವಾಗಿ ನಡೆದುಕೊಂಡು, ವಾಯುಮಂಡಲದ ಅಧಿಪತಿಯ ಆತ್ಮನಿಗನುಸಾರವಾಗಿದ್ದೀರಿ. ಆ ದುರಾತ್ಮವು ಈಗ ಅವಿಧೇಯತೆಯ ಮಕ್ಕಳಲ್ಲಿ ಕಾರ್ಯಮಾಡುತ್ತಿದೆ.


“ಅವರು, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ,’ ಎಂದರು. “ಆಗ ಅವನು, ‘ನೀವು ಸಹ ದ್ರಾಕ್ಷಿಯ ತೋಟಕ್ಕೆ ಹೋಗಿರಿ,’ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು