Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:16 - ಕನ್ನಡ ಸಮಕಾಲಿಕ ಅನುವಾದ

16 ಶಿಲುಬೆಯ ಮರಣದ ಮೂಲಕ ಇವೆರಡೂ ಗುಂಪಿನವರಿಂದ ಒಂದೇ ದೇಹದವರನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿ, ಇದ್ದ ವೈರತ್ವವನ್ನು ಇಲ್ಲದಂತೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಮ್ಮ ಮೇಲೆ ಇದ್ದ ಹಗೆತನವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ, ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ತಮ್ಮ ಶಿಲುಬೆಯ ಮರಣದ ಮೂಲಕ ಹಗೆತನವನ್ನು ನಿರ್ಮೂಲಗೊಳಿಸಿ ಉಭಯತ್ರರನ್ನು ಒಂದೇ ದೇಹದಂತೆ ಮಾಡಿ ದೇವರೊಂದಿಗೆ ಸಂಧಾನಗೊಳಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಈ ಎರಡು ಜನಾಂಗಗಳ ನಡುವೆ ಇದ್ದ ದ್ವೇಷವನ್ನು ಕ್ರಿಸ್ತನು ಶಿಲುಬೆಯ ಮೂಲಕ ಕೊನೆಗೊಳಿಸಿದನು. ಈ ಜನಾಂಗಗಳು ಒಂದೇ ದೇಹವಾದ ಬಳಿಕ ಅವರನ್ನು ದೇವರ ಬಳಿಗೆ ನಡೆಸಬೇಕೆಂಬುದು ಕ್ರಿಸ್ತನ ಬಯಕೆಯಾಗಿತ್ತು. ಶಿಲುಬೆಯ ಮೇಲೆ ಪ್ರಾಣಕೊಡುವುದರ ಮೂಲಕ ಕ್ರಿಸ್ತನು ತನ್ನ ಈ ಬಯಕೆಯನ್ನು ಪೂರೈಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅಪ್ನಾಚ್ಯಾ ಖುರ್ಸಾಚ್ಯಾ ಮರ್ನಾ ವೈನಾ ಕ್ರಿಸ್ತಾನ್ ತೆಂಚ್ಯಾ ಮದ್ದಿ ಹೊತ್ತಿ ದುಶ್ಮನ್ಕಿ ನಾಶ್ ಕರ್ಲ್ಯಾನ್ ಅನಿ ಖುರ್ಸಾಕ್ ಲಾಗುನ್ ತೆನಿ ದೊನ್ ರಿತಿಚ್ಯಾ ಲೊಕಾಕ್ನಿ ಎಕ್ ಆಂಗ್ ಸಾರ್ಕೆ ಕರ್ಲ್ಯಾನ್ ಅನಿ ತೆಂಕಾ ದೆವಾಕ್ಡೆ ಪರ್ತುನ್ ಹಾನ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:16
14 ತಿಳಿವುಗಳ ಹೋಲಿಕೆ  

ನಾವು ದೇವರ ಶತ್ರುಗಳಾಗಿದ್ದಾಗಲೇ ಅವರು ನಮ್ಮನ್ನು ತಮ್ಮ ಪುತ್ರನ ಮರಣದ ಮೂಲಕ ಸಂಧಾನ ಮಾಡಿಕೊಂಡಿರುವುದಾದರೆ, ಕ್ರಿಸ್ತ ಯೇಸುವಿನ ಜೀವದ ಮೂಲಕ ಎಷ್ಟೋ ಹೆಚ್ಚಾಗಿ ನಾವು ರಕ್ಷಿಸುವುದು ಇನ್ನೂ ಖಚಿತವಲ್ಲವೆ?


ನಮಗೆ ವಿರೋಧವಾಗಿ ನಿಂತು ನಮ್ಮ ಮೇಲೆ ತಪ್ಪು ಹೊರಿಸುವಂತೆ ಬರೆಯಲಾಗಿದ್ದ ಶಾಸನಗಳನ್ನು ಕ್ರಿಸ್ತ ಯೇಸು ರದ್ದುಮಾಡಿದರು. ಅವುಗಳನ್ನು ಶಿಲುಬೆಯ ಮೇಲೆ ಜಡಿದು ಇಲ್ಲದಂತೆ ಮಾಡಿದರು.


ಹೀಗೆ ಕ್ರಿಸ್ತ ಯೇಸು ತಮ್ಮ ದೇಹವನ್ನು ಶಿಲುಬೆಯಲ್ಲಿ ಸಮರ್ಪಿಸಿದ್ದರಿಂದ ನಿಯಮದ ಆಜ್ಞೆಗಳುಳ್ಳ ಶಾಸನಗಳನ್ನು ರದ್ದುಗೊಳಿಸಿದರು. ಈ ರೀತಿಯಾಗಿ ಇವೆರಡೂ ಗುಂಪಿನವರಿಂದ ಒಬ್ಬ ನೂತನ ಮಾನವತ್ವವನ್ನು ತಮ್ಮಲ್ಲಿ ಸೃಷ್ಟಿಸಿ ಸಮಾಧಾನವನ್ನು ಉಂಟುಮಾಡಿದರು.


ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.


ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.


ಮಾಂಸಭಾವದ ಮನಸ್ಸು ದೇವರಿಗೆ ಶತ್ರುವಾಗಿರುತ್ತದೆ. ಏಕೆಂದರೆ, ಅದು ದೇವರ ನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.


ನಮ್ಮ ಪಾಪದ ಶರೀರವು ನಾಶವಾಗಿ ನಾವು ಇನ್ನು ಮುಂದೆ ಎಂದಿಗೂ ಪಾಪಕ್ಕೆ ಗುಲಾಮರಾಗದಂತೆ, ನಮ್ಮ ಹಳೆಯ ಮನುಷ್ಯ ಸ್ವಭಾವ ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಯಿತು ಎಂದು ನಾವು ಬಲ್ಲೆವು.


ರೊಟ್ಟಿ ಒಂದೇ, ಆದ್ದರಿಂದ ನಾವು ಅನೇಕರಿದ್ದರೂ, ಒಂದೇ ದೇಹವಾಗುತ್ತೇವೆ. ಏಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಭಾಗಿಗಳಾಗುತ್ತೇವೆ.


ಸುವಾರ್ತೆಯ ಮೂಲಕ ಯೆಹೂದ್ಯರಲ್ಲದವರೂ ಸಹ ಇಸ್ರಾಯೇಲರೊಂದಿಗೆ ವಾರಸುದಾರರೂ ಒಂದೇ ದೇಹದ ಅವಯವಗಳೂ ಕ್ರಿಸ್ತ ಯೇಸುವಿನಲ್ಲಿ ದೇವರ ವಾಗ್ದಾನದ ಸಹಪಾಲುಗಾರರೂ ಆಗಿರಬೇಕೆಂಬುದೇ ಈ ರಹಸ್ಯ.


ಒಂದೇ ನಿರೀಕ್ಷೆಗೆ ನೀವು ಕರೆಹೊಂದಿದಂತೆಯೇ ದೇಹವು ಒಂದೇ, ಪವಿತ್ರಾತ್ಮರು ಒಬ್ಬರೇ,


ಕ್ರಿಸ್ತ ಯೇಸುವಿನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ, ಆ ಸಮಾಧಾನಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲಾಗಿದ್ದೀರಿ. ನೀವು ಕೃತಜ್ಞತೆಯುಳ್ಳವರಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು