Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:1 - ಕನ್ನಡ ಸಮಕಾಲಿಕ ಅನುವಾದ

1 ಈ ಕಾರಣದಿಂದ ಯೆಹೂದ್ಯರಲ್ಲದವರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನ್ಯಜನರಾದ ನಿಮ್ಮ ನಿಮಿತ್ತ ಯೇಸುಕ್ರಿಸ್ತರ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಹೀಗಿರುವದರಿಂದ ಅನ್ಯಜನರಾಗಿರುವ ನಿಮ್ಮ ನಿವಿುತ್ತ ಕ್ರಿಸ್ತ ಯೇಸುವಿನ ಸೆರೆಯವನಾದ ಪೌಲನೆಂಬ ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಕ್ರಿಸ್ತಯೇಸುವಿನ ಸೆರೆಯಾಳು. ಯೆಹೂದ್ಯರಲ್ಲದ ನಿಮಗೋಸ್ಕರ ನಾನು ಸೆರೆಯಾಳಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹ್ಯಾ ಕಾರಾನಾ ಸಾಟ್ನಿ ಪಾವ್ಲು ಮನ್ತಲೊ ಮಿಯಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾನು ತುಮ್ಚ್ಯಾ ಸಾಟ್ನಿ ಕ್ರಿಸ್ತಾಚೊ ಬಂಧಿ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:1
30 ತಿಳಿವುಗಳ ಹೋಲಿಕೆ  

ಈಗ ನಾನು ನಿಮಗೋಸ್ಕರ ಸಹಿಸುತ್ತಿರುವ ಬಾಧೆಗಳಲ್ಲಿ ಆನಂದಿಸುತ್ತೇನೆ. ಕ್ರಿಸ್ತ ಯೇಸುವಿನ ಸಂಕಟಗಳೊಳಗೆ ಇನ್ನೂ ಕೊರತೆಯಾಗಿರುವುದನ್ನು ಅವರ ದೇಹವಾಗಿರುವ ಸಭೆಗಾಗಿ ನನ್ನ ದೇಹದಲ್ಲಿ ತೀರಿಸುತ್ತೇನೆ.


ಆದ್ದರಿಂದ ನೀವು ಸ್ವೀಕರಿಸಿದ ನಿಮ್ಮ ಕರೆಯುವಿಕೆಗೆ ಯೋಗ್ಯರಾಗಿ ಬಾಳಬೇಕೆಂದು ಕರ್ತನ ಸೆರೆಯಾಳಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ಹೀಗಿರುವುದರಿಂದ ನಮ್ಮ ಕರ್ತ ಯೇಸುವಿನ ಸಾಕ್ಷಿಯ ವಿಷಯವಾಗಿಯೂ ಅವರ ಸೆರೆಯವನಾದ ನನ್ನ ವಿಷಯವಾಗಿಯೂ ನೀನು ನಾಚಿಕೆಪಡಬೇಡ. ಅದರ ಬದಲಾಗಿ, ದೇವರ ಶಕ್ತಿಗೆ ಅನುಸಾರವಾಗಿ, ಸುವಾರ್ತೆಗೋಸ್ಕರ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು.


ಏಕೆಂದರೆ ಆ ಸುವಾರ್ತೆಗಾಗಿಯೇ ಸೆರೆಯಲ್ಲಿರುವ ರಾಯಭಾರಿಯಾದ ನಾನು ಅದನ್ನು ಸಾರುವುದರಲ್ಲಿ ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.


ಹಾಗೆ ಆಜ್ಞಾಪಿಸದೆ, ಈಗ ಕ್ರಿಸ್ತ ಯೇಸುವಿನ ಸೆರೆಯಾಳೂ ಮುದುಕನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.


ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸುವುದು ನನಗೆ ಸೂಕ್ತವಾಗಿದೆ. ಏಕೆಂದರೆ ನಾನು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ. ನಾನು ಬೇಡಿಗಳಿಂದ ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಸಮರ್ಥಿಸಿ ದೃಢಪಡಿಸುವಾಗಲೂ ನೀವೆಲ್ಲರು ನನ್ನೊಂದಿಗಿರುವ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.


ಸುವಾರ್ತೆಯನ್ನು ಸಾರಿದ್ದರಿಂದ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆಗೆಲಸದವನೂ ಆಗಿರುವ ಫಿಲೆಮೋನನಿಗೂ


ಅದರಂತೆ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ, “ನಿಮಗೆ ತಿಳಿಸತಕ್ಕ ವಿಷಯವಿದೆಯೆಂದು ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯುವಕನನ್ನು ನಿಮ್ಮ ಬಳಿ ತರುವಂತೆ ಬೇಡಿಕೊಂಡಿದ್ದಾನೆ,” ಎಂದನು.


“ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು, ಹಿಂಸಿಸಿ ಸಭಾಮಂದಿರಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ, ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.


ಕ್ರಿಸ್ತ ಯೇಸುವಿಗಾಗಿ ನನ್ನ ಜೊತೆ ಸೆರೆಯಾಳಾಗಿರುವ ಎಪಫ್ರನು ನಿನಗೆ ವಂದನೆ ತಿಳಿಸುತ್ತಾನೆ.


ಪೌಲನು, “ಅಲ್ಪ ಕಾಲದಲ್ಲಾಗಲಿ, ದೀರ್ಘಕಾಲದಲ್ಲಾಗಲಿ ನೀವಷ್ಟೇ ಅಲ್ಲ, ನನ್ನ ಮಾತುಗಳನ್ನು ಇಂದು ಆಲಿಸುತ್ತಿರುವ ಪ್ರತಿಯೊಬ್ಬರೂ ಈ ಬೇಡಿಗಳನ್ನು ಹೊರತು ನನ್ನಂತೆಯೇ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ,” ಎಂದನು.


ಒನೇಸಿಫೊರನ ಮನೆಯವರಿಗೆ ಕರ್ತ ಯೇಸು ಕರುಣೆಯನ್ನು ದಯಪಾಲಿಸಲಿ. ಏಕೆಂದರೆ ಅವನು ಅನೇಕಾವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆ ಪಡಲಿಲ್ಲ.


ಇದು ಪೌಲನಾದ ನಾನೇ ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.


ನಾವು ಕ್ರಿಸ್ತ ಯೇಸುವಿನ ರಹಸ್ಯವನ್ನು ಮಾತನಾಡುವಂತೆ ದೇವರು ನಮ್ಮ ಸಂದೇಶಕ್ಕೆ ಬಾಗಿಲನ್ನು ತೆರೆಯುವಂತೆ ನಮಗೋಸ್ಕರವೂ ಪ್ರಾರ್ಥಿಸಿರಿ. ಈ ಸೇವೆಗಾಗಿಯೇ ನಾನು ಸೆರೆಯಲ್ಲಿದ್ದೇನಲ್ಲಾ.


ಅವರು ಕ್ರಿಸ್ತ ಯೇಸುವಿನ ಸೇವಕರೋ? ಅವರಿಗಿಂತ ಹೆಚ್ಚಾಗಿ ನಾನು ಸೇವೆ ಮಾಡಿದ್ದೇನೆ. ನಾನು ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ. ನಾನು ಅತಿಯಾಗಿ ಪ್ರಯಾಸ ಪಟ್ಟಿರುತ್ತೇನೆ. ಅನೇಕಬಾರಿ ಸೆರೆಮನೆಗೆ ಹಾಕಲಾದೆನು. ಬಹು ಕ್ರೂರವಾದ ರೀತಿಯಲ್ಲಿ ಪೆಟ್ಟುಗಳನ್ನು ತಿಂದೆನು. ಅನೇಕಬಾರಿ ಮರಣವನ್ನು ಎದುರಿಸಿದೆನು.


ನಾನು ನಿಮ್ಮ ಬಳಿಯಲ್ಲಿ ಮುಖಾಮುಖಿಯಾಗಿ ಮಾತನಾಡುವಾಗ, “ಮೃದುವಾಗಿಯೂ” ನಿಮ್ಮಿಂದ ದೂರವಿರುವಾಗ “ಕಠಿಣನಾಗಿಯೂ ವರ್ತಿಸುವವನು” ಎಂತಲೂ ನೀವು ತಿಳಿದಿದ್ದೀರಿ. ಅಂಥ ಪೌಲನೆಂಬ, ನಾನು ಕ್ರಿಸ್ತ ಯೇಸುವಿನ ದೀನತ್ವದಿಂದಲೂ ಸಾತ್ವಿಕತೆಯಿಂದಲೂ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:


ಸಹಸ್ರಾಧಿಪತಿ ಅಲ್ಲಿಗೆ ಬಂದು ಪೌಲನನ್ನು ಬಂಧಿಸಿ, ಅವನನ್ನು ಎರಡು ಸರಪಣಿಗಳಿಂದ ಕಟ್ಟಬೇಕೆಂದು ಆಜ್ಞಾಪಿಸಿದನು. ಅನಂತರ “ಇವನು ಯಾರು? ಇವನು ಮಾಡಿದ್ದೇನು?” ಎಂದು ವಿಚಾರಿಸಿದನು.


ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ಆದ್ದರಿಂದ, ನಿಮಗಾಗಿ ನನಗುಂಟಾದ ಸಂಕಟಗಳು ನಿಮಗೆ ಮಹಿಮೆಯಾಗಿರುವುದರಿಂದ, ನೀವು ಧೈರ್ಯಗೆಡಬಾರದೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಆದರೆ ಪ್ರಿಯರೇ, ನಾನು ಸುನ್ನತಿಯಾಗಬೇಕೆಂದು ಇನ್ನೂ ಬೋಧಿಸುವವನಾಗಿದ್ದರೆ, ಈಗಲೂ ನನಗೆ ಹಿಂಸೆಯಾಗುತ್ತಿರುವುದು ಏಕೆ? ಹಾಗಾದರೆ ಶಿಲುಬೆಯ ಸಂದೇಶ ಸಾರುವುದರಿಂದ ಯಾವ ಆತಂಕವೂ ಉಂಟಾಗುತ್ತಿರಲಿಲ್ಲವಲ್ಲಾ?


ಇಗೋ, ಪೌಲನೆಂಬ ನಾನು ನಿಮಗೆ ಹೇಳುವುದೇನೆಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ, ಕ್ರಿಸ್ತ ಯೇಸುವಿನ ಮುಖಾಂತರ ನಿಮಗೆ ಏನೂ ಪ್ರಯೋಜನವಾಗುವುದಿಲ್ಲ.


ಆದರೆ ಕರ್ತ ಯೇಸುವು ಅವನಿಗೆ, “ಹೋಗು! ಯೆಹೂದ್ಯರಲ್ಲದವರಿಗೂ ಅವರ ಅರಸುಗಳಿಗೂ ಇಸ್ರಾಯೇಲ್ ದೇಶಕ್ಕೂ ನನ್ನ ಹೆಸರನ್ನು ಪ್ರಸಿದ್ಧಿಪಡಿಸಲು ಅವನು ನಾನು ಆಯ್ದುಕೊಂಡ ಸಾಧನವಾಗಿದ್ದಾನೆ.


ನಮಗೆ ಕಷ್ಟಸಂಕಟಗಳು ಬಂದರೆ, ಅದು ನಿಮ್ಮ ಆದರಣೆ ಮತ್ತು ರಕ್ಷಣೆಗೋಸ್ಕರವೇ ಇರುತ್ತದೆ. ನಾವು ಸಂತೈಸುವಿಕೆಯನ್ನು ಹೊಂದಿರುವುದಾದರೆ, ಅದು ನಿಮ್ಮ ಆದರಣೆಗಾಗಿಯೇ. ಆ ಆದರಣೆಯು ನಮ್ಮಂತೆ ನೀವು ಅನುಭವಿಸುವ ಕಷ್ಟಸಂಕಟಗಳನ್ನು ಸಹನೆಯಿಂದ ಅನುಭವಿಸುವಂತೆ ಮಾಡುವುದು.


ಕ್ರಿಸ್ತ ಯೇಸುವಿನವರು ತಮ್ಮ ಮಾಂಸಭಾವವನ್ನೂ ಅದರ ಆಶೆ ಹಾಗೂ ಅಪೇಕ್ಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.


ನಾನು ಕರ್ತನ ಜನರೆಲ್ಲರಲ್ಲಿಯೂ ಅತ್ಯಲ್ಪನಾಗಿದ್ದೇನೆ. ಹಾಗಿದ್ದರೂ, ನನಗೆ ಈ ಕೃಪೆ ಕೊಡಲಾಯಿತು: ಏಕೆಂದರೆ, ನಾನು ಕ್ರಿಸ್ತನ ಅಪರಿಮಿತವಾದ ಐಶ್ವರ್ಯವನ್ನು ಯೆಹೂದ್ಯರಲ್ಲದವರಿಗೆ ಸಾರುವಂತೆಯೂ


ಹೀಗೆ ದೇವರು ತಮ್ಮ ನಿತ್ಯ ಉದ್ದೇಶದ ಪ್ರಕಾರ ಇದನ್ನು ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನೆರವೇರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು