Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:16 - ಕನ್ನಡ ಸಮಕಾಲಿಕ ಅನುವಾದ

16 ಹೀಗೆ ದೇಹವೆಲ್ಲಾ ಕ್ರಿಸ್ತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಣೆಹೊಂದಿ, ಪ್ರತಿ ಅಂಗವೂ ತನ್ನ ಕೆಲಸವನ್ನು ಸೂಕ್ತವಾಗಿ ಮಾಡುವಂತೆ ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿ ಹೊಂದುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇಡೀ ದೇಹವು ಕ್ರಿಸ್ತಯೇಸುವನ್ನೇ ಆಧರಿಸಿದೆ. ಅವರಲ್ಲಿಯೇ ಎಲ್ಲ ನರನಾಡಿಗಳು, ಕೀಲುಗಂಟು಼ಗಳು ಒಂದಾಗಿ ಕೆಲಸಮಾಡುತ್ತವೆ. ಪ್ರತಿಯೊಂದು ಅಂಗವೂ ತನ್ನ ಕೆಲಸವನ್ನು ಸೂಕ್ತರೀತಿಯಲ್ಲಿ ನಿರ್ವಹಿಸುವುದರಿಂದ ಇಡೀ ದೇಹ ಬೆಳೆಯುತ್ತಾ, ಪ್ರೀತಿಯಲ್ಲಿ ಪ್ರವರ್ಧಿಸುತ್ತಾ ಕ್ಷೇಮಾಭಿವೃದ್ಧಿಯನ್ನು ಪಡೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಆತನೇ ಶಿರಸ್ಸು; ದೇಹವೆಲ್ಲಾ ಆತನ ದೊರೆತನದಲ್ಲಿದ್ದು ತನ್ನಲ್ಲಿರುವ ಎಲ್ಲಾ ನರಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯ ಹೊಂದಿ ಪ್ರೀತಿಯಿಂದ ಐಕ್ಯವಾಗಿದ್ದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇಡೀ ದೇಹವು ಕ್ರಿಸ್ತನನ್ನು ಅವಲಂಬಿಸಿಕೊಂಡಿದೆ. ದೇಹದ ಒಂದೊಂದು ಅಂಗಗಳೂ ಒಂದಕ್ಕೊಂದು ಬಿಗಿದುಕೊಂಡಿವೆ. ಪ್ರತಿಯೊಂದು ಅಂಗವು ತನ್ನದೇ ಆದ ಕೆಲಸವನ್ನು ಮಾಡುವುದರಿಂದ ಇಡೀ ದೇಹವು ಬೆಳೆದು ಪ್ರೀತಿಯಲ್ಲಿ ಬಲವಾಗಿರಲು ಸಾಧ್ಯವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆಚ್ಯಾ ಚಾಲ್ವುನ್ಕಿತ್ ದುಸ್ರಿ ದುಸ್ರಿ ಭಾಗಾ ಎಕ್ ಆಂಗ್ ಹೊವ್ನ್ ಮಿಳುನ್ ಹಾತ್ ಅನಿ ಅಂಗಾಚಿ ಸಗ್ಳಿ ಸಂದಾ ಎಕಾಮೆಕಾಕ್ ಎಕ್ ಹೊವ್ನ್ ಜೊಡಲಿ ಹಾತ್ ಅಸೆ ಹರಿ ಎಕ್ ಎಗ್ಳೊ ಭಾಗಾನ್ ಅಪ್ನಾಚೆ ಕಾಮ್ ಕರ್ಲ್ಯಾರ್, ಸಗ್ಳೆ, ಆಂಗುಚ್ ವಾಡ್ತಾ ಅನಿ ಪ್ರೆಮಾಚ್ಯಾ ವೈನಾ ಅಪ್ನಾಕುಚ್ ಗಟ್ಟ್ ಬಾಂಧುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:16
28 ತಿಳಿವುಗಳ ಹೋಲಿಕೆ  

ಇಂಥವರು ಶಿರಸ್ಸಾಗಿರುವ ಕ್ರಿಸ್ತ ಯೇಸುವಿನನೊಂದಿಗೆ ಸಂಬಂಧ ಕಳೆದುಕೊಂಡವರಾಗಿದ್ದಾರೆ. ಏಕೆಂದರೆ, ಕ್ರಿಸ್ತನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಪೋಷಣೆ ಪಡೆದು ಒಂದಾಗಿ ಜೋಡಿಸಲಾಗಿ ದೇವರು ಬೆಳೆಸುವಂತೆ ಬೆಳೆಯುತ್ತದೆ.


“ನಾನೇ ದ್ರಾಕ್ಷಿಯ ಬಳ್ಳಿ, ನೀವು ಕವಲುಬಳ್ಳಿಗಳು. ನೀವು ನನ್ನಲ್ಲಿ ಮತ್ತು ನಾನು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಬಹಳ ಫಲಕೊಡುವಿರಿ. ಏಕೆಂದರೆ ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.


ಅವರು ಹೃದಯದಲ್ಲಿ ಉತ್ತೇಜನಗೊಂಡು, ಪ್ರೀತಿಯಲ್ಲಿ ಒಂದಾಗಿ, ದೇವರ ರಹಸ್ಯವಾಗಿರುವ ಕ್ರಿಸ್ತ ಯೇಸುವನ್ನು ತಿಳಿದುಕೊಳ್ಳುವಂತೆ ಪೂರ್ಣಜ್ಞಾನದ ಸರ್ವ ಐಶ್ವರ್ಯವನ್ನು ದೃಢವಾಗಿ ಹೊಂದಬೇಕೆಂಬುದೇ ನನ್ನ ಗುರಿಯಾಗಿದೆ.


ಕ್ರಿಸ್ತನ ದೇಹವನ್ನು ಕಟ್ಟುವುದಕ್ಕಾಗಿಯೂ ದೇವಜನರನ್ನು ಸೇವಾ ಕೆಲಸಕ್ಕಾಗಿ ಪರಿಣಿತರನ್ನಾಗಿ ಮಾಡುವುದಕ್ಕಾಗಿಯೂ ಕ್ರಿಸ್ತನು ಅವರನ್ನು ಕೊಟ್ಟ ಉದ್ದೇಶವಾಗಿತ್ತು.


ಆದರೆ ಈಗ ನಂಬಿಕೆ, ನಿರೀಕ್ಷೆ, ಪ್ರೀತಿ, ಈ ಮೂರೇ ಉಳಿದಿರುತ್ತವೆ. ಇವುಗಳಲ್ಲಿ ಮಹತ್ತಾದದ್ದು ಪ್ರೀತಿಯೇ.


ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ, ನಾವು ಎಲ್ಲಾ ವಿಷಯಗಳಲ್ಲಿಯೂ ಕ್ರಿಸ್ತನ ದೇಹದ ಪರಿಪಕ್ವತೆಯೆಡೆಗೆ ಅವರ ಶಿರಸತ್ವದಲ್ಲಿ ಬೆಳೆಯೋಣ.


ಈ ಆಜ್ಞೆಯ ಗುರಿಯು ಪ್ರೀತಿಯೇ ಆಗಿರುತ್ತದೆ. ಶುದ್ಧ ಹೃದಯ, ಒಳ್ಳೆಯ ಮನಸ್ಸಾಕ್ಷಿ ಹಾಗೂ ನಿಷ್ಕಪಟವಾದ ನಂಬಿಕೆಯಿಂದ ಈ ಪ್ರೀತಿಯು ಹುಟ್ಟುತ್ತದೆ.


ಈ ಕಾರಣಕ್ಕಾಗಿಯೇ ನಂಬುವವರಾದ ನಿಮ್ಮಲ್ಲಿ ಕಾರ್ಯಸಾಧಿಸುವ ದೇವರ ವಾಕ್ಯವನ್ನು ನಮ್ಮಿಂದ ನೀವು ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ, ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ನಿಮ್ಮ ಪ್ರೀತಿಯು ಹೆಚ್ಚುತ್ತಾ ಜ್ಞಾನದಲ್ಲಿಯೂ ಒಳನೋಟದಲ್ಲಿಯೂ ಬಹು ಹೆಚ್ಚಾಗಿ ಸಮೃದ್ಧಿಯಾಗಲಿ.


ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಲಿ. ನೀವು ಪ್ರೀತಿಯಲ್ಲಿ ಬೇರೂರಿ ನೆಲೆಗೊಂಡು ನಿಂತು


ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.


ದೇವರ ಶಕ್ತಿಯ ಕ್ರಿಯೆಯಿಂದ ನನಗೆ ಕೊಡಲಾದ ಅವರ ದೇವ ಕೃಪಾದಾನಕ್ಕೆ ಅನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.


ನಾವು ಪ್ರೀತಿಯಲ್ಲಿದ್ದು ಅವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಅವರು ಲೋಕದ ಅಸ್ತಿವಾರಕ್ಕೆ ಮುಂಚೆ ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡರು.


ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,


ದೇವರು ನಮ್ಮನ್ನು ಪ್ರೀತಿಸುತ್ತಾರೆಂದು ನಾವು ತಿಳಿದುಕೊಂಡಿದ್ದೇವೆ ಮತ್ತು ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾರೆ, ಪ್ರೀತಿಯಲ್ಲಿ ಬಾಳುವವರು ದೇವರಲ್ಲಿ ಬಾಳುವವರಾಗಿದ್ದಾರೆ, ದೇವರು ಅವರಲ್ಲಿ ಬಾಳುವವರಾಗಿದ್ದಾರೆ.


ಪ್ರಿಯರೇ, ನಾವು ಯಾವಾಗಲೂ ನಿಮಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ. ಹಾಗೆ ಮಾಡುವುದು ಯೋಗ್ಯ. ಏಕೆಂದರೆ ನಿಮ್ಮ ವಿಶ್ವಾಸವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುತ್ತಾ ಇದೆ ಮತ್ತು ಪರಸ್ಪರ ನಿಮ್ಮೆಲ್ಲರಲ್ಲಿ ಪ್ರೀತಿಯೂ ಹೆಚ್ಚುತ್ತಿದೆ.


ನಮ್ಮ ಪ್ರೀತಿಯು ನಿಮ್ಮ ಕಡೆಗೆ ಸಮೃದ್ಧಿಯಾಗಿರುವಂತೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ತುಂಬಿರುವಂತೆ ಕರ್ತ ಯೇಸು ನಿಮಗೆ ಅನುಗ್ರಹಿಸಲಿ.


ನಿಮ್ಮ ವಿಶ್ವಾಸ ಪ್ರಕಟಿಸುವ ಕ್ರಿಯೆಯನ್ನೂ ಪ್ರೀತಿ ಪ್ರೇರಿತ ಪ್ರಯಾಸವನ್ನೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿರುವ ನಿರೀಕ್ಷೆಯ ಸ್ಮರಣೆಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡಬಿಡದೆ ಜ್ಞಾಪಿಸಿಕೊಳ್ಳುತ್ತೇವೆ.


ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


ಈಗ ವಿಗ್ರಹಕ್ಕೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳ ವಿಷಯ: “ನಮ್ಮೆಲ್ಲರಿಗೂ ತಿಳುವಳಿಕೆಯಿದೆ,” ಎಂದು ಬಲ್ಲೆವು. ತಿಳುವಳಿಕೆಯು ಅಹಂಕಾರಿಗಳನ್ನಾಗಿ ಮಾಡುತ್ತದೆ. ಆದರೆ ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.


ನಮ್ಮಲ್ಲಿ ಪ್ರತಿಯೊಬ್ಬನಿಗೂ ಅನೇಕ ಅಂಗಗಳಿಂದ ಕೂಡಿದ ಒಂದು ದೇಹವಿರುವ ಹಾಗೆಯೇ ಮತ್ತು ಹೇಗೆ ಈ ಅಂಗಾಂಗಗಳಿಗೆಲ್ಲಾ ಒಂದೇ ಕೆಲಸವಿರುವುದ್ಲಿಲವೋ,


ರೊಟ್ಟಿ ಒಂದೇ, ಆದ್ದರಿಂದ ನಾವು ಅನೇಕರಿದ್ದರೂ, ಒಂದೇ ದೇಹವಾಗುತ್ತೇವೆ. ಏಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಭಾಗಿಗಳಾಗುತ್ತೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು