Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:22 - ಕನ್ನಡ ಸಮಕಾಲಿಕ ಅನುವಾದ

22 ನಿಮಗೆ ಉಪದೇಶಿಸಿದಂತೆ, ನೀವು ನಿಮ್ಮ ಹಿಂದಿನ ನಡತೆಯ ಪ್ರಕಾರ ಮೋಸಕರವಾದ ಆಶೆಗಳ ಅನುಸಾರವಾಗಿರುವ ಹಳೆಯ ಸ್ವಭಾವವನ್ನು ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆದ್ದರಿಂದ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಹಳೆಯ ಸ್ವಭಾವವನ್ನು ಕಿತ್ತೊಗೆಯಿರಿ; ಅದು ಕಾಮಾಭಿಲಾಷೆಯಿಂದ ಕಲುಷಿತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದಂದರೆ - ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನೀವು ನಿಮ್ಮ ಹಿಂದಿನ ಕೆಟ್ಟ ನಡತೆಯನ್ನು ಬಿಟ್ಟುಬಿಡಬೇಕೆಂಬುದನ್ನು ಅಂದರೆ ನಿಮ್ಮ ಹಳೆಯ ಸ್ವಭಾವವನ್ನು ತೊರೆದುಬಿಡಬೇಕೆಂಬುದನ್ನು ಕಲಿತುಕೊಂಡಿರಿ. ಜನರು ತಾವು ಮಾಡ ಬಯಸುವ ದುಷ್ಕೃತ್ಯಗಳಿಂದ ವಂಚಿತರಾಗಿರುವುದರಿಂದ ಆ ಹಳೆಯ ಸ್ವಭಾವವು ದಿನದಿಂದ ದಿನಕ್ಕೆ ಮತ್ತಷ್ಟು ಕೆಟ್ಟು ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತಸೆ ಹೊವ್ನ್, ತುಮ್ಕಾ ಶಿಕ್ವಲ್ಲೆ ಕಾಯ್ ಮಟ್ಲ್ಯಾರ್, ತುಮಿ ತುಮ್ಚೆ ಅದ್ಲೊ ಬುರ್ಶೊ ಗುನ್ ಸೊಡುನ್ ದಿವ್ಚೆ ಮನುನ್ ಮಟ್ಲ್ಯಾರ್ ತುಮ್ಚೊ ಜನ್ನೊ ಸ್ವಬಾವ್ ಕಾಡುನ್ ಟಾಕುಚೆ ಮನ್ತಲೆ ಶಿಕುನ್ ಘೆಟ್ಲ್ಯಾಸಿ ಲೊಕಾ ಅಪ್ನಿ ಕರ್ತಲ್ಯಾ ಬುರ್ಶ್ಯಾ ಕಾಮಾಂಚ್ಯಾ ವೈನಾ ಪಸೆತ್ ಪಡಲ್ಯಾ ಸಾಟ್ನಿ ತೊ ಅದ್ಲೊ ಸ್ವಬಾವ್ ದಿಸ್ ಗೆಲೊಸೊ ಹಾಳ್ ಹೊಯ್ತ್ ಜಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:22
27 ತಿಳಿವುಗಳ ಹೋಲಿಕೆ  

ನಮ್ಮ ಪಾಪದ ಶರೀರವು ನಾಶವಾಗಿ ನಾವು ಇನ್ನು ಮುಂದೆ ಎಂದಿಗೂ ಪಾಪಕ್ಕೆ ಗುಲಾಮರಾಗದಂತೆ, ನಮ್ಮ ಹಳೆಯ ಮನುಷ್ಯ ಸ್ವಭಾವ ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಯಿತು ಎಂದು ನಾವು ಬಲ್ಲೆವು.


ಆದಕಾರಣ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಇರುವುದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನೂ ನಾವು ಎಸೆದುಬಿಟ್ಟು,


ಆದಕಾರಣ ಎಲ್ಲಾ ಮಾಲಿನ್ಯವನ್ನೂ ಉಳಿದಿರುವ ದುಷ್ಟತನವನ್ನೂ ತೆಗೆದುಹಾಕಿ, ನಿಮ್ಮೊಳಗೆ ಬೇರೂರಿರುವ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.


ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ, “ಈ ಹೊತ್ತು” ಎಂಬುದು ಇರುವವರೆಗೆ ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.


ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು.


ದೇವರನ್ನು ಅರಿಯದ ಜನರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಸಾಕಷ್ಟು ಮಾಡಿದ್ದೀರಿ. ಆಗ ನೀವು ಅಶ್ಲೀಲತೆ, ದುರಾಶೆಗಳು, ಕುಡುಕತನ, ಅಮಲೇರುವಿಕೆ, ದುಂದು ಔತಣಗಳು, ಅಸಹ್ಯವಾದ ವಿಗ್ರಹಾರಾಧನೆಗಳು ಇವುಗಳನ್ನು ಮಾಡುತ್ತಿದ್ದೀರಿ.


ಆದ್ದರಿಂದ, ಯೆಹೂದ್ಯರಲ್ಲದವರು ವ್ಯರ್ಥ ಆಲೋಚನೆಯುಳ್ಳವರಾಗಿ ಬಾಳುವ ರೀತಿಯಲ್ಲಿ ನೀವು ಇನ್ನು ಮೇಲೆ ಬಾಳದಂತೆ, ಕರ್ತನಲ್ಲಿ ನಾನು ನಿಮಗೆ ಸಾಕ್ಷಿಕೊಟ್ಟು ಹೇಳುತ್ತೇನೆ.


ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯನ್ನು ಹಗಲಲ್ಲಿ ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಕಳಂಕಕ್ಕೂ, ನಿಂದೆಗೂ ಕಾರಣರಾಗಿದ್ದಾರೆ.


ನಿಮ್ಮ ಪೂರ್ವಿಕರಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿ, ಬಂಗಾರದಿಂದಲ್ಲ.


ನೀವು ಕ್ರಿಸ್ತ ಯೇಸುವಿನಲ್ಲಿ ಸ್ವೀಕರಿಸಿದ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಅದು ನಿಮ್ಮ ಮಾಂಸಭಾವವನ್ನು ಆಳುವ ಇಡೀ ಸ್ವಾರ್ಥವನ್ನೇ ಬಿಟ್ಟುಬಿಡುವ ಆತ್ಮಿಕ ಸುನ್ನತಿಯಾಗಿದೆ.


ದುಷ್ಟನು ಮೋಸದ ಸಂಬಳವನ್ನು ಸಂಪಾದಿಸುತ್ತಾನೆ, ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹವಾದ ಬಹುಮಾನವಿರುವುದು.


ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರಮಾಡಿ, ಸರ್ವಶಕ್ತರ ಕಡೆಗೆ ನೀನು ತಿರುಗಿಕೊಂಡರೆ, ನೀನು ಪುನಃಸ್ಥಾಪಿತವಾಗುವೆ.


ಹಿಂದೊಮ್ಮೆ ನಾವೆಲ್ಲರೂ ಅವರೊಂದಿಗೆ ನಮ್ಮ ದೇಹದ ಆಶೆಗಳ ಪ್ರಕಾರ ಜೀವಿಸುತ್ತಿದ್ದಾಗ ಮನಸ್ಸಿನ ಹಾಗೂ ಶರೀರದ ಆಶೆಗಳನ್ನು ನೆರವೇರಿಸುತ್ತಾ ನಡೆದು, ಉಳಿದವರಂತೆ ಸ್ವಾಭಾವಿಕವಾಗಿ ದೇವರ ಕೋಪಕ್ಕೆ ಗುರಿಯಾದವರಾಗಿದ್ದೆವು.


ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ‘ಯಾರು ನನ್ನನ್ನು ನೆಲಕ್ಕೆ ಇಳಿಸಬಲ್ಲವರು?’ ಎಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.


ದೇವರು ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದರು.


ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ನಿನ್ನ ಭಯಂಕರವೂ ನಿನ್ನ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಸ್ಥಳದಲ್ಲಿ ಕಟ್ಟಿದರೂ, ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನಾನು ಯೆಹೂದ್ಯ ವಿಶ್ವಾಸದಲ್ಲಿದ್ದಾಗ ನನ್ನ ಹಿಂದಿನ ನಡತೆಯನ್ನು ನೀವು ಕೇಳಿದ್ದೀರಷ್ಟೇ. ನಾನು ದೇವರ ಸಭೆಯನ್ನು ಮಿತಿಮೀರಿ ಹಿಂಸೆಪಡಿಸಿ ಹಾಳುಮಾಡಲು ಯತ್ನಿಸುತ್ತಿದ್ದೆನು.


ಏಲಿಯು ಅವಳಿಗೆ, “ಎಷ್ಟರವರೆಗೂ ಅಮಲೇರಿದವಳಾಗಿರುವೆ? ನಿನ್ನ ಬಳಿಯಿಂದ ನಿನ್ನ ದ್ರಾಕ್ಷಾರಸವನ್ನು ತೊರೆದುಬಿಡು,” ಎಂದನು.


ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ, ಅದೇ ನನ್ನನ್ನು ಮರಣಕ್ಕೆ ಒಳಪಡಿಸಿತು.


ನಿಮ್ಮಲ್ಲಿ ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜಕವಾಗಿದೆ.


ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾಗಿಯೂ ಗುಣಪಡಿಸಲು ಅಸಾಧ್ಯವಾದದ್ದೂ ಆಗಿದೆ. ಅದನ್ನು ತಿಳಿಯುವವನ್ಯಾರು?


ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿಬಿದ್ದು, ಹೇಗೆ ಮೋಸ ಹೋದಳೋ, ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತ ಯೇಸುವಿನ ಮೇಲಿರಬೇಕಾದ ಯಥಾರ್ಥತೆಯನ್ನೂ ಶುದ್ಧ ಭಕ್ತಿಯನ್ನೂ ಬಿಟ್ಟುಹೋದೀತೆಂಬ ಭಯ ನನಗುಂಟು.


ಎಲ್ಲಾ ಕಹಿತನ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಎಲ್ಲಾ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು