Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:31 - ಕನ್ನಡ ಸಮಕಾಲಿಕ ಅನುವಾದ

31 ಎಲ್ಲಾ ಕಹಿತನ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಎಲ್ಲಾ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಎಲ್ಲ ವಿಧವಾದ ದ್ವೇಷ-ದೂಷಣೆ, ಕೋಪ-ಕ್ರೋಧ ಮತ್ತು ಕೆಡುಕುತನವನ್ನು ನಿಮ್ಮಿಂದ ದೂರಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಎಲ್ಲಾ ದ್ವೇಷ ಕೋಪ ಕ್ರೋಧ ಕಲಹ ದೂಷಣೆ ಇವುಗಳನ್ನೂ ಸಕಲವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಸಗ್ಳೆ ಕುಶ್ಡೆಪಾನ್, ರಾಗ್ ಖುದ್ಗೆಪಾನ್, ಝಗ್ಡೆ, ಗಾಳ್ಯಿಯಾ ಹೆ ಸಗ್ಳ್ಯಾ ನಮನಿಚೆ ಬುರ್ಶೆಪಾನ್ ತುಮ್ಚ್ಯಾಕ್ನಾ ಧುರ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:31
62 ತಿಳಿವುಗಳ ಹೋಲಿಕೆ  

ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ, ನಿಮ್ಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ.


ನೀನು ಕೋಪಿಸಿಕೊಳ್ಳುವುದಕ್ಕೆ ಆತುರಪಡದಿರು, ಏಕೆಂದರೆ ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.


ಆದಕಾರಣ, ಎಲ್ಲಾ ದ್ವೇಷವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ ಎಲ್ಲಾ ಅಪವಾದಗಳನ್ನೂ ವಿಸರ್ಜಿಸಿರಿ.


ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.


ನಿಮ್ಮ ಹೃದಯದೊಳಗೆ ಕಹಿಯಾದ ಹಗೆತನವನ್ನೂ ಸ್ವಾರ್ಥ ಉದ್ದೇಶವನ್ನು ಕೂಡಿಟ್ಟು ಕೊಂಡಿರುವಲ್ಲಿ, ನೀವು ಜ್ಞಾನದ ಕುರಿತು ಹೊಗಳಿಕೊಳ್ಳಬೇಡಿರಿ ಮತ್ತು ಸತ್ಯವನ್ನು ನಿರಾಕರಿಸಬೇಡಿರಿ.


“ಕೋಪ ಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮುಂಚೆ ನಿಮ್ಮ ಕೋಪವು ಇಳಿಯಲಿ.


ಕೆಡುಕನಾಗಿದ್ದ ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ಅಲ್ಲ. ಅವನು ಯಾವ ಕಾರಣದಿಂದ ತಮ್ಮನನ್ನು ಕೊಂದುಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ ಅಲ್ಲವೇ?


ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸುಮ್ಮನಿರಿಸುವೆನು; ಗರ್ವದ ಕಣ್ಣೂ, ಅಹಂಕಾರದ ಹೃದಯವೂ ಉಳ್ಳವನನ್ನು ಸಹಿಸಲಾರೆನು.


ಪ್ರಿಯರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತೀರ್ಪುಮಾಡಿದರೆ ಅವನು ದೇವರ ನಿಯಮದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ, ನಿಯಮವನ್ನೇ ತೀರ್ಪುಮಾಡಿದ ಹಾಗಾಗುವುದು. ಆದರೆ ನೀನು ದೇವರ ನಿಯಮವನ್ನೇ ತೀರ್ಪುಮಾಡಿದರೆ ನೀನು ಅನುಸರಿಸುವವನಾಗಿರದೆ ನ್ಯಾಯಾಧಿಪತಿಯೆನಿಸಿಕೊಳ್ಳುವಿ.


ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿಹೋಗುತ್ತದೆ; ಹಾಗೆಯೇ ಚಾಡಿಕೋರನು ಇಲ್ಲದಿರುವಲ್ಲಿ ಜಗಳ ಶಮನವಾಗುವುದು.


ಏಕೆಂದರೆ ಸಭಾಧ್ಯಕ್ಷನು ದೇವರ ಕಾರ್ಯಭಾರವನ್ನು ಉಳ್ಳವನಾಗಿರುವುದರಿಂದ ನಿಂದಾರಹಿತನಾಗಿರಬೇಕು; ಅವನು ಗರ್ವಿಷ್ಠನೂ ಮುಂಗೋಪಿಯೂ ಮದ್ಯಪಾನ ಮಾಡುವವನೂ ಹೊಡೆದಾಡುವವನೂ ನೀಚಲಾಭವನ್ನು ಆಶಿಸುವವನೂ ಆಗಿರಬಾರದು.


ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು. ಚಾಡಿ ಹೇಳದವರೂ ಸ್ವಸ್ಥ ಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.


ನಾನು ಬಂದಾಗ ಒಂದು ವೇಳೆ ನೀವು ನನ್ನ ಮನಸ್ಸಿನ ತೋರಿಕೆಯ ಪ್ರಕಾರ ಇರುವುದಿಲ್ಲವೋ ಏನೋ? ನಾನು ನಿಮ್ಮ ಇಷ್ಟದ ಪ್ರಕಾರ ತೋರದೆ ಇರಬಹುದು. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ಕೋಪ, ಭೇದಗಳು, ಚಾಡಿ ಹೇಳುವುದು, ಹರಟೆ ಹೊಡೆಯುವುದು, ಉಬ್ಬಿಕೊಳ್ಳುವುದು, ಕಲಹ ಎಬ್ಬಿಸುವುದು, ಇವುಗಳು ಕಾಣಬರುವುದೋ ಎಂಬ ಭಯ ನನಗೆ ಉಂಟು.


ಸಹೋದರರೇ, ಮಕ್ಕಳಂತೆ ಯೋಚಿಸುವುದನ್ನು ಬಿಟ್ಟುಬಿಡಿರಿ. ಕೇಡಿನ ವಿಷಯದಲ್ಲಿ ಶಿಶುಗಳಂತೆ ಇದ್ದರೂ, ನಿಮ್ಮ ಯೋಚನೆಯಲ್ಲಿ ಪ್ರಾಯಸ್ಥರಾಗಿರಿ.


ಕೋಪಿಷ್ಟನು ಜಗಳವನ್ನೆಬ್ಬಿಸುವನು, ಮುಂಗೋಪಿಯು ಅನೇಕ ಪಾಪಗಳನ್ನು ಮಾಡುತ್ತಾನೆ.


ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ, ಜನರು ಕುಯುಕ್ತಿಯುಳ್ಳವನನ್ನು ಹಗೆ ಮಾಡುತ್ತಾರೆ.


ದ್ವೇಷವನ್ನು ಮರೆಮಾಚುವವನು ಸುಳ್ಳುಗಾರ ಮತ್ತು ಚಾಡಿ ಹೇಳುವವನು ಮೂರ್ಖನು.


ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಆದರೆ ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚುತ್ತದೆ.


ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಸೋಮಾರಿತನವನ್ನು ಕಲಿಯುತ್ತಾರೆ. ಸೋಮಾರಿಗಳಾಗುವುದಷ್ಟೇ ಅಲ್ಲ, ಹರಟೆ ಮಾತನಾಡುವವರೂ ಇತರರ ಕೆಲಸದಲ್ಲಿ ತಲೆಹಾಕುವವರಾಗಿ ಆಡಬಾರದ ಮಾತುಗಳನ್ನಾಡುವವರೂ ಆಗುತ್ತಾರೆ.


ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಸ್ವಾರ್ಥತ್ವ, ವಿರೋಧತ್ವ, ಭಿನ್ನತೆ,


ಆದಕಾರಣ ಹಗೆತನ, ದುಷ್ಟತನ, ಎಂಬ ಹಳೇ ಹುಳಿಯಿಂದಲ್ಲ, ಯಥಾರ್ಥತೆ ಹಾಗೂ ಸತ್ಯ ಎಂಬ ಹುಳಿಯಿಲ್ಲದ ರೊಟ್ಟಿಯಿಂದಲೇ ಹಬ್ಬವನ್ನು ಆಚರಿಸೋಣ.


“ಅವರ ಬಾಯಿ ಶಾಪದಿಂದಲೂ ಕಹಿಯಿಂದಲೂ ತುಂಬಿರುತ್ತವೆ.”


ಅನಿರೀಕ್ಷಿತ ಮಳೆಯನ್ನು ತರುವ ಉತ್ತರದ ಗಾಳಿಯಂತೆ ಚಾಡಿಯ ನಾಲಿಗೆ ಕೋಪದ ಮುಖ ಮಾಡುತ್ತದೆ.


ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು; ಅವು ಹೊಟ್ಟೆಯ ಒಳಭಾಗಗಳಿಗೆ ಇಳಿದು ಹೋಗುವುವು.


ಅಸತ್ಯವನ್ನಾಡುವ ಸುಳ್ಳುಸಾಕ್ಷಿ ಮತ್ತು ಸಹೋದರರಲ್ಲಿ ಜಗಳ ಹುಟ್ಟಿಸುವ ವ್ಯಕ್ತಿ.


ಚಾಡಿಕೋರರು ದೇಶದಲ್ಲಿ ಉಳಿಯದಿರಲಿ; ಬಲಾತ್ಕಾರಿಯನ್ನು ಕೇಡು ಬೇಟೆಯಾಡಿ ಕೆಡವಲಿ.


ಅವರು ತಮ್ಮ ನಾಲಿಗೆಯನ್ನು ಖಡ್ಗದಂತೆ ಮಸೆಯುತ್ತಾರೆ.


ನೀವು ಕುಳಿತುಕೊಂಡು ನಿಮ್ಮ ಸಹೋದರರಿಗೆ ವಿರೋಧವಾಗಿ ಸುಳ್ಳಾಡುತ್ತೀರಿ. ನಿಮ್ಮ ಒಡಹುಟ್ಟಿದವರ ಮೇಲೆ ಚಾಡಿ ಹೇಳುತ್ತೀರಿ.


ಅವರ ನಾಲಿಗೆಯು ಚಾಡಿ ಹೇಳುವುದಿಲ್ಲ, ತಮ್ಮ ನೆರೆಯವರಿಗೆ ಕೇಡುಮಾಡುವುದಿಲ್ಲ, ಇತರರನ್ನು ನಿಂದಿಸುವುದೂ ಇಲ್ಲ;


ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ. ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಮಾಡು.


ತಮ್ಮ ತಂದೆಯು ಅವನನ್ನು ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿಮಾಡುತ್ತಿರುವುದನ್ನು ಅವನ ಸಹೋದರರು ಕಂಡು, ಅವನನ್ನು ದ್ವೇಷಿಸಿ, ಅವನ ಸಂಗಡ ಸಮಾಧಾನದಿಂದ ಮಾತಾಡದೆಹೋದರು.


ಏಸಾವನು ತನ್ನ ತಂದೆಯು ಅವನಿಗೆ ಕೊಟ್ಟ ಆಶೀರ್ವಾದಕ್ಕೋಸ್ಕರ ಯಾಕೋಬನನ್ನು ದ್ವೇಷಿಸಿದನು. ಏಸಾವನು, “ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸಮೀಪವಾಗಿವೆ. ತರುವಾಯ ನಾನು ನನ್ನ ಸಹೋದರ ಯಾಕೋಬನನ್ನು ಕೊಲ್ಲುವೆನು,” ಎಂದು ತನ್ನಲ್ಲಿಯೇ ಅಂದುಕೊಂಡನು.


ಅನಂತರ ಕಾಯಿನನು, “ಅಡವಿಗೆ ಹೋಗೋಣ ಬಾ,” ಎಂದು ತನ್ನ ತಮ್ಮನಿಗೆ ಹೇಳಿದನು. ಅವರು ಅಲ್ಲಿ ಬಂದಾಗ ಕಾಯಿನನು ತನ್ನ ತಮ್ಮ ಹೇಬೆಲನ ಮೇಲೆ ದಾಳಿಮಾಡಿ, ಅವನನ್ನು ಕೊಂದುಹಾಕಿದನು.


ಆಗ ಪರಲೋಕದಲ್ಲಿ ಮಹಾಧ್ವನಿಯನ್ನು ಕೇಳಿದೆನು. ಅದು, “ರಕ್ಷಣೆಯೂ ಶಕ್ತಿಯೂ ರಾಜ್ಯವೂ ಈಗ ನಮ್ಮ ದೇವರದಾದವು. ದೇವರ ಕ್ರಿಸ್ತ ಆಗಿರುವವರ ಅಧಿಕಾರವು ಈಗ ಸ್ಥಾಪಿತವಾಯಿತು. ಹಗಲಿರುಳು ನಮ್ಮ ಸಹೋದರರ ಮೇಲೆ, ನಮ್ಮ ದೇವರ ಮುಂದೆ ದೂರು ಹೇಳುವ ದೂರುಗಾರನನ್ನು ತಳ್ಳಲಾಗಿದೆ.


ತನ್ನ ಸಹೋದರನನ್ನು ದ್ವೇಷಿಸುವ ಯಾರೇ ಆದರೂ ಕೊಲೆಗಾರನಾಗಿದ್ದಾನೆ ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.


ಅದೇ ಪ್ರಕಾರ, ವೃದ್ಧಸ್ತ್ರೀಯರು ನಡತೆಯಲ್ಲಿ ಭಕ್ತಿಗೆ ತಕ್ಕ ಹಾಗೆ ಇರುವವರಾಗಿರಬೇಕು. ಅವರು ಸುಳ್ಳಾಗಿ ದೂರುವವರೂ ಮದ್ಯಾಸಕ್ತರೂ ಆಗಿರದೆ, ಒಳ್ಳೆಯವುಗಳನ್ನು ಬೋಧಿಸುವವರಾಗಿರಬೇಕು ಎಂದು ಅವರಿಗೆ ಉಪದೇಶಿಸು.


ಬುದ್ಧಿಯಿಲ್ಲದ ಅಯುಕ್ತ ವಾಗ್ವಾದಗಳು ಜಗಳಗಳನ್ನು ಹುಟ್ಟಿಸುತ್ತವೆ ಎಂದು ತಿಳಿದು ಅವುಗಳನ್ನು ನಿರಾಕರಿಸು.


ಅವನು ಮದ್ಯಪಾನ ಮಾಡುವವನಾಗಿರಬಾರದು, ಹೊಡೆದಾಡುವವನಾಗಿರಬಾರದು. ಆದರೆ ಸಾತ್ವಿಕನೂ ಕುತರ್ಕ ಮಾಡದವನೂ ಹಣದಾಶೆಯಿಲ್ಲದವನೂ ಆಗಿರಬೇಕು.


ಇಡೀ ಪಟ್ಟಣದಲ್ಲೇ ಕೋಲಾಹಲವೆದ್ದಿತು. ಜನರು ಎಲ್ಲಾ ದಿಕ್ಕುಗಳಿಂದ ಓಡೋಡುತ್ತಾ ಬಂದು. ಪೌಲನನ್ನು ಹಿಡಿದುಕೊಂಡು ದೇವಾಲಯದೊಳಗಿಂದ ಹೊರಗೆಳೆದುಕೊಂಡು ಹೋದರು. ಕೂಡಲೇ ದ್ವಾರಗಳನ್ನು ಮುಚ್ಚಿಬಿಟ್ಟರು.


ಅವರೆಲ್ಲರು ಕಠಿಣ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಕಂಚು, ಕಬ್ಬಿಣಕ್ಕೆ ಸಮಾನರು, ಎಲ್ಲರೂ ಕೇಡಿಗರು.


ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯಮಾಡುವಾಗ, ಮೂರ್ಖನು ರೇಗಿದರೂ ಅಪಹಾಸ್ಯಮಾಡಿದರೂ ಸಮಾಧಾನವೇ ಇರುವುದಿಲ್ಲ.


ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಆದರೆ ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.


ಆದರೆ ಇಸ್ರಾಯೇಲರು ಯೆಹೂದ ಜನರಿಗೆ ಉತ್ತರವಾಗಿ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟು. ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರುಗಿ ಕರೆದುಕೊಂಡು ಬರುವುದರ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಏಕೆ ಅಲ್ಪರಾಗಿ ಎಣಿಸಿದಿರಿ?” ಎಂದರು. ಆದರೆ ಇಸ್ರಾಯೇಲರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.


ಆದರೆ ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೆಯದಾದರೂ, ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಏಕೆಂದರೆ ಅವನು ತನ್ನ ಸಹೋದರಿಯಾದ ತಾಮಾರಳನ್ನು ಅವಮಾನ ಮಾಡಿದ್ದರಿಂದ, ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.


ಆದರೆ ರೂಬೇನನು ಅದನ್ನು ಕೇಳಿ, ಅವನನ್ನು ಅವರ ಕೈಗಳಿಂದ ತಪ್ಪಿಸಿ, “ಅವನನ್ನು ಕೊಲ್ಲುವುದು ಬೇಡ,” ಎಂದನು.


ಮಾನವತ್ವವಿಲ್ಲದವರೂ ಸಮಾಧಾನವಾಗದವರೂ ಚಾಡಿಕೋರರೂ ಸಂಯಮವಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯದನ್ನು ಪ್ರೀತಿಸದವರೂ


“ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ. ಯಾವ ಸಹೋದರನಲ್ಲಾದರೂ ನಂಬಿಕೆ ಇಡಬೇಡಿರಿ. ಏಕೆಂದರೆ ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸ ಮಾಡುವರು; ನೆರೆಯವರೆಲ್ಲರೂ ಚಾಡಿ ಹೇಳುತ್ತಾ ತಿರುಗಾಡುವರು.


ಕೋಪವನ್ನು ಅಡಗಿಸು ಮತ್ತು ರೋಷವನ್ನು ಬಿಡು. ಸಿಡುಕಬೇಡ, ಅದು ಕೆಟ್ಟತನಕ್ಕೆ ನಡೆಸುತ್ತದೆ.


ನಿಮಗೆ ಉಪದೇಶಿಸಿದಂತೆ, ನೀವು ನಿಮ್ಮ ಹಿಂದಿನ ನಡತೆಯ ಪ್ರಕಾರ ಮೋಸಕರವಾದ ಆಶೆಗಳ ಅನುಸಾರವಾಗಿರುವ ಹಳೆಯ ಸ್ವಭಾವವನ್ನು ತೆಗೆದುಹಾಕಬೇಕು.


ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು