Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:8 - ಕನ್ನಡ ಸಮಕಾಲಿಕ ಅನುವಾದ

8 ಆದ್ದರಿಂದ ಪವಿತ್ರ ವೇದದಲ್ಲಿ ಹೀಗೆ ಹೇಳಲಾಗಿದೆ: “ಅವರು ಉನ್ನತಸ್ಥಾನಕ್ಕೆ ಏರಿಹೋದಾಗ, ಸೆರೆಯಾಳಾಗಿದ್ದ ಅನೇಕರನ್ನು ಕೊಂಡೊಯ್ದು ತಮ್ಮ ಜನರಿಗೆ ವರದಾನಗಳನ್ನು ಕೊಟ್ಟರು!”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದ್ದರಿಂದ ದೇವರವಾಕ್ಯದಲ್ಲಿ ಹೀಗೆ ಹೇಳಿದೆ, “ಆತನು ಉನ್ನತ ಸ್ಥಾನಕ್ಕೆ ಏರಿಹೋದಾಗ ತಾನು ಸೆರೆಯಾಳುಗಳನ್ನು ಸೆರೆಹಿಡಿದುಕೊಂಡು ಹೋಗಿ ಮನುಷ್ಯರಿಗೆ ವರಗಳನ್ನು ಕೊಟ್ಟನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಎಂತಲೇ ಪವಿತ್ರಗ್ರಂಥದಲ್ಲಿ ಹೀಗಿದೆ: “ಆತನು ಉನ್ನತಿಗೇರಿದನು ಶತ್ರುಗಳನು ಸೆರೆಯಾಳಾಗಿ ಕೊಂಡೊಯ್ದನು ನರಮಾನವರಿಗಿತ್ತನು ವರದಾನಗಳನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದದರಿಂದ - ಆತನು ಉನ್ನತಸ್ಥಾನಕ್ಕೆ ಏರಿದಾಗ ತಾನು ಜಯಿಸಿದ್ದ ಬಹುಜನರನ್ನು ಸೆರೆಹಿಡುಕೊಂಡು ಹೋಗಿ ಮನುಷ್ಯರಿಗೆ ದಾನಗಳನ್ನು ಮಾಡಿದನು ಎಂಬದಾಗಿ ಪ್ರವಾದಿಯು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದಕಾರಣವೇ ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆದಿದೆ: “ಆತನು ಆಕಾಶದ ಉನ್ನತಸ್ಥಾನಕ್ಕೆ ಏರಿಹೋದಾಗ, ಶತ್ರುಗಳನ್ನು ಸೆರೆಯಾಳುಗಳಾಗಿ ಕೊಂಡೊಯ್ದು ಜನರಿಗೆ ದಾನಗಳನ್ನು ಮಾಡಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೆಚ್ಯಾ ಸಾಟ್ನಿ ಪವಿತ್ರ್ ಪುಸ್ತಕ್ ಮನ್ತಾ, “ತೊ ವೈಲ್ಯಾ ಜಾಗ್ಯಾರ್ ಗೆಲ್ಲ್ಯಾ, ತನ್ನಾ ಅಪ್ನಾಚ್ಯಾ ವಾಂಗ್ಡಾ ಲೈ ಲೊಕಾಕ್ನಿ ಧರುನ್ ಬಂಧಿಕರುನ್ ಹಾನ್ಲ್ಯಾನ್, ಅನಿ ತೆನಿ ಲೊಕಾಕ್ನಿ ದೆನೆ ದಿಲ್ಯಾನ್.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:8
7 ತಿಳಿವುಗಳ ಹೋಲಿಕೆ  

ನೀವು ಅನೇಕ ಸೆರೆಯವರ ಹಿಡಿದುಕೊಂಡು ಉನ್ನತಕ್ಕೆ ಹೋದಾಗ, ಯೆಹೋವ ದೇವರು ತಿರುಗಿಬೀಳುವವರ ಮಧ್ಯದಲ್ಲಿ ಸಹ ನಿವಾಸಿಸುವಂತೆ ಆ ತಿರುಗಿಬಿದ್ದ ಮನುಷ್ಯರಿಂದ ದಾನಗಳನ್ನು ಅಂಗೀಕರಿಸಿದ್ದೀರಿ.


ಕ್ರಿಸ್ತ ಯೇಸುವು ಆಳುವ ಅದೃಶ್ಯ ಶಕ್ತಿಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಶಿಲುಬೆಯಲ್ಲಿ ಅವುಗಳ ಮೇಲೆ ಜಯಹೊಂದಿ, ಬಹಿರಂಗವಾಗಿ ಪ್ರದರ್ಶಿಸಿದರು.


ದಾವೀದನು ಚಿಕ್ಲಗನ್ನು ತಲುಪಿದಾಗ ಕೊಳ್ಳೆಯಿಂದ ತಂದದ್ದರಲ್ಲಿ ಒಂದು ಭಾಗವನ್ನು ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕಳುಹಿಸಿದನು. “ಯೆಹೋವ ದೇವರ ವೈರಿಗಳಿಂದ ಕೊಳ್ಳೆ ಹೊಡೆದದ್ದರಿಂದ ಈ ಬಹುಮಾನ ನಿಮಗಾಗಿದೆ,” ಎಂದು ಹೇಳಿದನು.


ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಗೌರವಾರ್ಥವಾಗಿ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಎಲ್ಲಾ ಪ್ರಾಂತಗಳಿಗೂ ರಜೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು.


‘ಎಚ್ಚರವಾಗು, ಎಚ್ಚರವಾಗು, ದೆಬೋರಳೇ, ಎಚ್ಚರವಾಗು, ಎಚ್ಚರವಾಗಿ ಹಾಡನ್ನು ಹಾಡು; ಬಾರಾಕನೇ, ಏಳು; ಅಬೀನೋವಮನ ಮಗನೇ, ನಿನ್ನನ್ನು ಸೆರೆಹಿಡಿದವರನ್ನು ಸೆರೆಯಾಗಿ ನಡೆಸು.’


ಯಾರು ಸ್ವರ್ಗಕ್ಕೆ ಹೋಗಿ ಕೆಳಗಿಳಿದು ಬಂದಿದ್ದಾರೆ? ಯಾರ ಕೈಗಳು ಗಾಳಿಯನ್ನು ಒಟ್ಟುಗೂಡಿಸಿವೆ? ಯಾರು ತಮ್ಮ ವಸ್ತ್ರದಲ್ಲಿ ಸಾಗರಗಳನ್ನು ಮೂಟೆಕಟ್ಟಿಕೊಂಡಿದ್ದಾರೆ? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿದವರು ಯಾರು? ಅವರ ಹೆಸರೇನು? ಅವರ ಮಗನ ಹೆಸರೇನು? ಖಂಡಿತವಾಗಿಯೂ ನಿಮಗೆ ಗೊತ್ತಿರಬೇಕು!


ಕ್ರಿಸ್ತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಕೆಲವರನ್ನು ಉಪದೇಶಿಗಳನ್ನಾಗಿಯೂ ಸಭೆಗೆ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು