Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:9 - ಕನ್ನಡ ಸಮಕಾಲಿಕ ಅನುವಾದ

9 “ಅವರು ಏರಿ ಹೋದರೆಂದು,” ಹೇಳಿದ್ದರ ಅರ್ಥವೇನು? ಭೂಮಿಯ ಭೂಗರ್ಭಕ್ಕೂ ಇಳಿದಿದ್ದರು ಎಂದೂ ಹೇಳಿದ ಹಾಗಾಯಿತಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಏರಿಹೋದನೆಂದು” ಹೇಳಿದ್ದರ ಅರ್ಥವೇನು? ಭೂಮಿಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ‘ಏರಿದನು’ ಎನ್ನುವುದರ ಅರ್ಥವಾದರೂ ಏನು? ಆತನು ಮೊದಲು ಭೂಗರ್ಭಕ್ಕೂ ಇಳಿದಿದ್ದನು ಎಂಬ ಅರ್ಥವನ್ನೂ ಒಳಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 (ಏರಿಹೋದನೆಂದು ಹೇಳಿದ್ದರಲ್ಲಿ ಭೂವಿುಯ ಅಧೋಭಾಗಕ್ಕೆ ಇಳಿದಿದ್ದನೆಂತಲೂ ಹೇಳಿದ ಹಾಗಾಯಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಆತನು ಉನ್ನತಸ್ಥಾನಕ್ಕೆ ಏರಿಹೋದನು” ಎಂದರೆ ಆತನು ಭೂಲೋಕಕ್ಕೆ ಇಳಿದುಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಸೆ ರಾತಾನಾ ತೊ ವೈಲ್ಯಾ ಜಾಗ್ಯಾರ್ ಗೆಲೊ ಮಟ್ಲ್ಯಾರ್, ಅರ್ಥ್ ಕಾಯ್? ತಸೆ ಮಟ್ಲ್ಯಾರ್ ಜಿಮ್ನಿಚ್ಯಾ ಖೊಲಾತ್ಲ್ಯಾ ಜಾಗಾರ್ ಗೆಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:9
22 ತಿಳಿವುಗಳ ಹೋಲಿಕೆ  

ಪರಲೋಕದಿಂದ ಇಳಿದು ಬಂದ ಮನುಷ್ಯಪುತ್ರನಾದ ನನ್ನನ್ನು ಹೊರತು ಯಾರೂ ಪರಲೋಕಕ್ಕೆ ಏರಿ ಹೋದವರಿಲ್ಲ.


ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ದೊಡ್ಡ ಮೀನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಪುತ್ರನಾದ ನಾನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭದಲ್ಲಿರುವೆನು.


ಪರಲೋಕದಿಂದ ಇಳಿದುಬಂದು ಲೋಕಕ್ಕೆ ಜೀವವನ್ನು ಕೊಡುವ ದೇವರ ರೊಟ್ಟಿಯು ನಾನೇ,” ಎಂದರು.


ಯಾರು ಸ್ವರ್ಗಕ್ಕೆ ಹೋಗಿ ಕೆಳಗಿಳಿದು ಬಂದಿದ್ದಾರೆ? ಯಾರ ಕೈಗಳು ಗಾಳಿಯನ್ನು ಒಟ್ಟುಗೂಡಿಸಿವೆ? ಯಾರು ತಮ್ಮ ವಸ್ತ್ರದಲ್ಲಿ ಸಾಗರಗಳನ್ನು ಮೂಟೆಕಟ್ಟಿಕೊಂಡಿದ್ದಾರೆ? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿದವರು ಯಾರು? ಅವರ ಹೆಸರೇನು? ಅವರ ಮಗನ ಹೆಸರೇನು? ಖಂಡಿತವಾಗಿಯೂ ನಿಮಗೆ ಗೊತ್ತಿರಬೇಕು!


ನನ್ನ ಪ್ರಾಣಕ್ಕೆ ಕೇಡು ಬಯಸುವವರು ತಾವೇ ನಾಶವಾಗುವರು ಅವರು ಭೂಮಿಯ ಆಳಕ್ಕೆ ಹೋಗುವರು.


ಆದರೂ ದೇವದೂತರಿಗಿಂತ ಸ್ವಲ್ಪಕಾಲ ಕಡಿಮೆಯಾಗಿ ಮಾಡಲಾದ ಆ ಒಬ್ಬಾತನು ಯೇಸುವೇ. ಈ ಯೇಸು ಬಾಧೆಪಟ್ಟು ಮೃತಪಟ್ಟಿದ್ದರಿಂದಲೇ ಮಹಿಮೆಯನ್ನೂ ಮಾನವನ್ನೂ ಕಿರೀಟವಾಗಿ ಹೊಂದಿದರೆಂದು ಎಂದು ನಾವು ಕಾಣುತ್ತೇವೆ. ದೇವರ ಕೃಪೆಯಿಂದಲೇ ಎಲ್ಲರಿಗೋಸ್ಕರ ಮರಣವನ್ನು ಈ ಯೇಸು ಅನುಭವಿಸಬೇಕಾಗಿತ್ತು.


ಯೇಸು ಆಕೆಗೆ, “ನನ್ನನ್ನು ಹಿಡಿಯಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಹೋಗಲಿಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವ ತಂದೆಯ ಬಳಿಗೆ ನಾನು ಹೋಗುತ್ತೇನೆ’ ಎಂದು ತಿಳಿಸು,” ಎಂದರು.


ನೀವು ಮನುಷ್ಯಪುತ್ರನನ್ನು ದೇವರಿಗಿಂತಲೂ ಸ್ವಲ್ಪ ಕಡಿಮೆ ಮಾಡಿ, ಮಹಿಮೆಯನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿಟ್ಟಿದ್ದೀರಿ.


ಜನರು ಕಟ್ಟುತ್ತಿದ್ದ ಪಟ್ಟಣವನ್ನೂ ಗೋಪುರವನ್ನೂ ನೋಡುವುದಕ್ಕೆ ಯೆಹೋವ ದೇವರು ಇಳಿದು ಬಂದರು.


ನೀನು ಆತನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದೆಯಲ್ಲಾ? ಮಹಿಮೆಯನ್ನೂ ಮಾನವನ್ನೂ ಆತನಿಗೆ ಕಿರೀಟವನ್ನಾಗಿ ಇಟ್ಟೆ.


ಯೇಸು ಅವರಿಗೆ, “ನಾನೇ ನನ್ನ ವಿಷಯವಾಗಿ ನಾನು ಸಾಕ್ಷಿ ನೀಡಿದರೂ ನನ್ನ ಸಾಕ್ಷಿ ಸತ್ಯವಾದದ್ದು. ಏಕೆಂದರೆ ನಾನು ಎಲ್ಲಿಂದ ಬಂದೆ ಮತ್ತು ಎಲ್ಲಿಗೆ ಹೋಗುತ್ತೇನೆಂದು ನನಗೆ ತಿಳಿದಿದೆ. ಆದರೆ ನಾನು ಎಲ್ಲಿಂದ ಬಂದೆ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನಿಮಗೆ ತಿಳಿಯದು.


ಹಾಗಾದರೆ ಮನುಷ್ಯಪುತ್ರನಾದ ನಾನು ಮೊದಲಿದ್ದ ಕಡೆಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?


ಪರಲೋಕದಿಂದ ಬಂದ ರೊಟ್ಟಿಯು ಇದೇ. ನಿಮ್ಮ ಪಿತೃಗಳು ‘ಮನ್ನಾ’ ತಿಂದರೂ ಸತ್ತರು. ಇದು ಹಾಗಲ್ಲ, ಈ ರೊಟ್ಟಿಯನ್ನು ತಿನ್ನುವವರು ಸದಾಕಾಲಕ್ಕೂ ಜೀವಿಸುವರು,” ಎಂದರು.


ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ,” ಎಂದರು.


“ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ,” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಯೇಸುವಿನ ವಿಷಯವಾಗಿ ಗೊಣಗುಟ್ಟಿ,


ನಾನು ನನ್ನ ಚಿತ್ತವನ್ನು ಮಾಡುವುದಕ್ಕಲ್ಲ. ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ಮಾಡುವುದಕ್ಕೆ ಪರಲೋಕದಿಂದ ಬಂದೆನು.


ಆಕಾಶಗಳೇ, ಹರ್ಷಧ್ವನಿಗೈಯಿರಿ. ಏಕೆಂದರೆ ಯೆಹೋವ ದೇವರು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಕೆಳಭಾಗವೇ ಆರ್ಭಟಿಸು. ಪರ್ವತಗಳೇ, ವನವೇ, ಅದರಲ್ಲಿರುವ ಎಲ್ಲಾ ಮರಗಳೇ ಉತ್ಸಾಹಧ್ವನಿ ಮಾಡಿರಿ. ಏಕೆಂದರೆ ಯೆಹೋವ ದೇವರು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.


ನೀವು ನನ್ನನ್ನು ಮರೆಯಲ್ಲಿ ರೂಪಿಸಿದಾಗಲೂ, ಭೂಗರ್ಭದಲ್ಲಿ ನನ್ನನ್ನು ರಚಿಸಿದಾಗಲೂ ನನ್ನ ಅಸ್ಥಿಪಂಜರವು ನಿಮಗೆ ಮರೆಯಾಗಿರಲಿಲ್ಲ.


ಯೆಹೋವ ದೇವರು ಸೀನಾಯಿ ಬೆಟ್ಟದ ತುದಿಯಲ್ಲಿ ಇಳಿದುಬಂದು ಮೋಶೆಯನ್ನು ಬೆಟ್ಟದ ತುದಿಗೆ ಕರೆದರು. ಮೋಶೆಯು ಮೇಲೆ ಹೋದನು.


ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ ಇರುವುದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವುವು. ಅವುಗಳಿಗೆ ಅಧೋಲೋಕವೇ ಗತಿಯಾಗುವುದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು