Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:18 - ಕನ್ನಡ ಸಮಕಾಲಿಕ ಅನುವಾದ

18 ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮದ್ಯಪಾನಮಾಡಿ ಮತ್ತರಾಗಬೇಡಿ. ಅದು ಪಾಪಕೃತ್ಯಗಳಿಗೆ ಎಡೆಮಾಡುತ್ತದೆ. ಬದಲಿಗೆ ಪವಿತ್ರಾತ್ಮಭರಿತರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮದ್ಯಪಾನ ಮಾಡಿ ಮತ್ತರಾಗಬೇಡಿರಿ; ಅದರಿಂದ ಪಟಿಂಗತನವು ಹುಟ್ಟುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮದ್ಯಪಾನಮಾಡಿ ಮತ್ತರಾಗಬೇಡಿ, ಅದು ಪಾಪಕೃತ್ಯಗಳಿಗೆ ನಡೆಸುತ್ತದೆ, ಆದರೆ ಯಾವಾಗಲೂ ಪವಿತ್ರಾತ್ಮಭರಿತರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ವಾಯ್ನ್ ಫಿವ್ನ್ ಫಿದುಡೆ ಹೊವ್ನ್ ರಾವ್‍ನಕಾಸಿ ತೆ ತುಮ್ಕಾ ಚುಕೆಚ್ಯಾ ಕಾಮಾಕ್ನಿ ಚಲ್ವುತಾ ಖರೆ ಕನ್ನಾಬಿ ಪವಿತ್ರ್ ಆತ್ಮ್ಯಾನ್ ಭರುನ್ ರಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:18
33 ತಿಳಿವುಗಳ ಹೋಲಿಕೆ  

ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ; ಇವುಗಳಿಂದ ಮೋಸ ಹೋದವನು ಜ್ಞಾನಿಯಲ್ಲ.


ಪಕ್ಷತನ ಕುಡಿಕತನಗಳಲ್ಲಾಗಲಿ, ಕಾಮವಿಲಾಸ ನಿರ್ಲಜ್ಯ ಕೃತ್ಯಗಳಲ್ಲಾಗಲಿ, ಮತ್ಸರಗಳಲ್ಲಾಗಲಿ ನಿರತರಾಗಿರದೆ ಹಗಲಿನಲ್ಲಿರುವವರಂತೆ ಸಭ್ಯತೆಯಿಂದ ನಡೆದುಕೊಳ್ಳೋಣ.


ಅವನು ಕರ್ತದೇವರ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಕುಡಿಯುವುದಿಲ್ಲ, ಅವನು ತಾಯಿಯ ಗರ್ಭದಿಂದಲೇ ಪವಿತ್ರಾತ್ಮ ಭರಿತನಾಗಿರುವನು.


ಅಯ್ಯೋ, ದ್ರಾಕ್ಷಾರಸ ಕುಡಿಯುವುದರಲ್ಲಿ ಶೂರರೂ, ಮದ್ಯ ಸಾಹಸಿಗಳೂ,


ಆದರೆ ಸಹೋದರಿ ಅಥವಾ ಸಹೋದರನೆನಿಸಿಕೊಂಡವನು ಜಾರನಾದರೂ ಲೋಭಿಯಾದರೂ ವಿಗ್ರಹಾರಾಧಕನಾದರೂ ಪರನಿಂದಕನಾದರೂ ಕುಡುಕನಾದರೂ ಸುಲಿಗೆ ಮಾಡುವವನಾದರೂ ಆಗಿದ್ದರೆ, ಅಂಥವರ ಸಹವಾಸ ಮಾಡಬೇಡಿರಿ. ಅಂಥವರ ಸಂಗಡ ಊಟ ಮಾಡಲೂ ಬೇಡಿರಿ ಎಂದು ಈಗ ಬರೆಯುತ್ತಿದ್ದೇನೆ.


ಬಾರ್ನಬನು ಸತ್ಪುರುಷನೂ ಪವಿತ್ರಾತ್ಮಭರಿತನೂ ಪೂರ್ಣನಂಬಿಕೆಯುಳ್ಳವನೂ ಆಗಿದ್ದನು. ಅಲ್ಲಿ ಅನೇಕರು ಕರ್ತ ಯೇಸುವಿನ ಕಡೆಗೆ ಬಂದರು.


ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರೆ.


ಆದರೆ ಆ ಸೇವಕನು, ‘ನನ್ನ ಯಜಮಾನನು ಬರುವುದಕ್ಕೆ ತಡಮಾಡುತ್ತಾನೆ,’ ಎಂದು ತನ್ನ ಹೃದಯದಲ್ಲಿ ಭಾವಿಸಿಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆದು, ತಿಂದು ಕುಡಿದು ಮತ್ತನಾಗುವುದಕ್ಕೆ ಆರಂಭಿಸಿದರೆ,


ಹಾಗಾದರೆ ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತಮ್ಮನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮರನ್ನು ದಯಪಾಲಿಸುವರಲ್ಲವೇ!” ಎಂದು ನಾನು ನಿಮಗೆ ಹೇಳುತ್ತೇನೆ ಎಂದರು.


ಕಳ್ಳರು, ಲೋಭಿಗಳು, ಕುಡುಕರು, ಬೈಯ್ಯುವವರು, ಸುಲಿಗೆ ಮಾಡುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.


ಸಭೆಯ ಹಿರಿಯನು, ನಿಂದಾರಹಿತನೂ ಪತ್ನಿಗೆ ನಂಬಿಗಸ್ತನೂ ಆಗಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ದುರ್ಮಾಗಿಗಳು ಇಲ್ಲವೆ ತಿರುಗಿ ಬೀಳುವವರೂ ಎಂಬ ಆರೋಪವನ್ನು ಹೊಂದಿರಬಾರದು.


“ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ.


ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನೂ ಬರಲಿ. ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ. ಬನ್ನಿರಿ, ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡುಕೊಳ್ಳಿರಿ.


ಪಟ್ಟಣದ ಹಿರಿಯರಿಗೆ, “ಈ ನಮ್ಮ ಮಗನು ಮೊಂಡನೂ, ತಿರುಗಿ ಬೀಳುವವನೂ, ನಮ್ಮ ಮಾತು ಕೇಳದವನೂ, ಹೊಟ್ಟೆ ಬಾಕನೂ, ಕುಡುಕನೂ ಆಗಿದ್ದಾನೆ,” ಎಂದು ಹೇಳಬೇಕು.


ಏಕೆಂದರೆ, ಭೋಜನ ಮಾಡುವಾಗ, ಪ್ರತಿಯೊಬ್ಬನು ಇತರರಿಗಾಗಿ ಕಾಯದೇ, ತನ್ನ ಭೋಜನವನ್ನು ಮುಂಚಿತವಾಗಿ ಆರಂಭಿಸುತ್ತಾನೆ. ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದಿರುತ್ತಾನೆ.


ನನ್ನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗಲು ಅವಸರಪಡು! ಅರಸನು ನನ್ನನ್ನು ತನ್ನ ಕೊಠಡಿಯೊಳಗೆ ಕರೆದುಕೊಂಡು ಬರಲಿ. ನಾವು ನಿನ್ನಲ್ಲಿ ಉಲ್ಲಾಸಪಟ್ಟು, ಸಂತೋಷ ಪಡುತ್ತೇವೆ. ದ್ರಾಕ್ಷಾರಸಕ್ಕಿಂತ ಹೆಚ್ಚಾಗಿ ನಿನ್ನ ಪ್ರೀತಿಯನ್ನು ಹೊಗಳುತ್ತೇವೆ. ಅವರು ಯಥಾರ್ಥವಾಗಿ ನಿನ್ನನ್ನು ಮೆಚ್ಚುತ್ತಾರೆ!


ಅವನು ಅದರಿಂದ ಸ್ವಲ್ಪ ದ್ರಾಕ್ಷಾರಸವನ್ನು ಕುಡಿದು ಅಮಲೇರಿ, ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಮಲಗಿದ್ದನು.


“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ, ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.


ಸೇನಾಧೀಶ್ವರ ಯೆಹೋವ ದೇವರು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ ಕೊಬ್ಬಿದ ಔತಣವನ್ನೂ, ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸವನ್ನೂ ಸಿದ್ಧಮಾಡುವರು.


ಊರುಬಾಗಿಲಲ್ಲಿ ಕೂತುಕೊಳ್ಳುವವರು ಪರಿಹಾಸ್ಯ ಮಾಡುತ್ತಾರೆ. ನಾನು ಮದ್ಯಪಾನಿಗಳಿಗೆ ಗಾಯನ ವಿಷಯವಾಗಿದ್ದೇನೆ.


ತನ್ನ ಜೊತೆಯ ಸೇವಕರನ್ನು ಹೊಡೆಯುತ್ತಾ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸುವುದಾದರೆ,


ನಿನ್ನ ಬಾಯಿಯ ಮುದ್ದುಗಳು ಉತ್ತಮ ದ್ರಾಕ್ಷಾರಸದ ಹಾಗಿರಲಿ. ನನ್ನ ಪ್ರಿಯಕರನ ತುಟಿ, ಹಲ್ಲುಗಳಲ್ಲಿ ದ್ರಾಕ್ಷಾರಸವು ನೇರವಾಗಿ ಹರಿದು ಇಂಪಾಗಿ ರುಚಿಸಲಿ.


“ನೀನು ಸಾಯದಂತೆ ದೇವದರ್ಶನದ ಗುಡಾರಕ್ಕೆ ಬರುವಾಗ ನೀನೂ ಇಲ್ಲವೆ ನಿನ್ನ ಪುತ್ರರೂ ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಕುಡಿಯಬಾರದು. ಇದು ನಿಮ್ಮ ವಂಶಾವಳಿಯು ಇರುವವರೆಗೂ ಶಾಶ್ವತವಾಗಿರುವ ಕಟ್ಟಳೆಯಾಗಿದೆ.


“ಪ್ರತಿಯೊಬ್ಬನು ಉತ್ತಮ ದ್ರಾಕ್ಷಾರಸವನ್ನು ಮೊದಲು ತಂದಿಟ್ಟು ಜನರು ತುಂಬಾ ಕುಡಿದ ಮೇಲೆ ಸಾಧಾರಣವಾದದ್ದನ್ನು ಕೊಡುತ್ತಾರೆ, ನೀನಾದರೋ ಉತ್ತಮ ದ್ರಾಕ್ಷಾರಸವನ್ನು ಇನ್ನೂ ಇಟ್ಟುಕೊಂಡಿರುವೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು