Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:26 - ಕನ್ನಡ ಸಮಕಾಲಿಕ ಅನುವಾದ

26 ಕ್ರಿಸ್ತ ಯೇಸು ತಮ್ಮ ಸಭೆಯನ್ನು ವಾಕ್ಯದ ನೀರಿನ ಸ್ನಾನದಿಂದ ಪವಿತ್ರಗೊಳಿಸಿ, ಶುದ್ಧಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆತನು ಅದನ್ನು ಪ್ರತಿಷ್ಠೆಪಡಿಸುವದಕ್ಕಾಗಿ ತನ್ನನ್ನು ಒಪ್ಪಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಕ್ರಿಸ್ತನು ಸಭೆಯನ್ನು ಪರಿಶುದ್ಧಗೊಳಿಸುವುದಕ್ಕಾಗಿ ಪ್ರಾಣಕೊಟ್ಟನು. ಸುವಾರ್ತೆಯನ್ನು ತಿಳಿಸುವುದರ ಮೂಲಕ ಜಲಸ್ನಾನವನ್ನು ಮಾಡಿಸಿ ಆತನು ಸಭೆಯನ್ನು ಶುದ್ಧಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ದೆವಾಚ್ಯಾ ಲೊಕಾಂಚೊ ತಾಂಡೊ ಪವಿತ್ರ್ ಕರುಚೆ ಮನುನ್ ಕ್ರಿಸ್ತಾನ್ ಅಪ್ಲೊ ಜಿವ್ ದಿಲ್ಯಾನ್, ಬರಿ ಖಬರ್ ಮನ್ತಲ್ಯಾ ಪಾನಿಯಾನ್ ಧುವ್ನ್ ತೆನಿ ಪವಿತ್ರ್ ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:26
35 ತಿಳಿವುಗಳ ಹೋಲಿಕೆ  

ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ.


ಆದಕಾರಣ ಅಪರಾಧ ಮನಸ್ಸಾಕ್ಷಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ಶುದ್ಧ ನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಸಮೀಪಕ್ಕೆ ಬರೋಣ.


ಯೇಸು ಅವನಿಗೆ, “ಯಾರು ನೀರಿನಿಂದಲೂ ಆತ್ಮದಿಂದಲೂ ಹುಟ್ಟುವದಿಲ್ಲವೋ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿರಿ. ದೇವರ ವಾಕ್ಯವೆಂಬ ಪವಿತ್ರಾತ್ಮರ ಖಡ್ಗವನ್ನು ಎತ್ತಿ ಹಿಡಿಯಿರಿ.


ಕ್ರಿಸ್ತ ಯೇಸುವೇ ನೀರಿನಿಂದಲೂ ರಕ್ತದಿಂದಲೂ ಬಂದವರು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದರು, ಇದಕ್ಕೆ ಸಾಕ್ಷಿಕೊಡುವವರು ಪವಿತ್ರಾತ್ಮ ದೇವರೇ, ಏಕೆಂದರೆ ಪವಿತ್ರಾತ್ಮ ದೇವರು ಸತ್ಯವಾಗಿದ್ದಾರೆ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


“ಆ ದಿವಸದಲ್ಲಿ ದಾವೀದನ ಮನೆತನದವರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಅವರ ಪಾಪದಿಂದ ಮತ್ತು ಅಶುದ್ಧತೆಯಿಂದ ಶುದ್ಧೀಕರಿಸಲು ಒಂದು ಬುಗ್ಗೆಯು ತೆರೆಯಲಾಗುವುದು.


ಹೀಗೆ ಒಂದೇ ಸಾರಿ ಎಲ್ಲಾ ಕಾಲಕ್ಕೂ ಕ್ರಿಸ್ತ ಯೇಸು ತಮ್ಮ ದೇಹವನ್ನು ಸಮರ್ಪಿಸಿದ್ದರ ಮೂಲಕ ದೇವರ ಚಿತ್ತವನ್ನು ನೆರವೇರಿಸಿ, ನಮ್ಮನ್ನು ಶುದ್ಧರನ್ನಾಗಿ ಮಾಡಿದ್ದಾರೆ.


ಈ ನೀರು ದೀಕ್ಷಾಸ್ನಾನವನ್ನು ಸೂಚಿಸುವಂತದ್ದಾಗಿದೆ. ಈ ದೀಕ್ಷಾಸ್ನಾನ ಕ್ರಿಸ್ತ ಯೇಸುವಿನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿಯು ಬೇಕೆಂದು ದೇವರನ್ನು ಬೇಡಿಕೊಳ್ಳುವಂಥದ್ದಾಗಿದೆ.


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


ಈಗ ನೀನು ತಡಮಾಡುವುದೇಕೆ? ಎದ್ದೇಳು, ಅವರ ಹೆಸರನ್ನು ಕರೆದು, ದೀಕ್ಷಾಸ್ನಾನವನ್ನು ಹೊಂದಿ ನಿನ್ನ ಪಾಪಗಳನ್ನು ತೊಳೆದುಕೋ,’ ಎಂದನು.


ಪವಿತ್ರಾತ್ಮ ದೇವರ ಕಾರ್ಯದಿಂದ ಪರಿಶುದ್ಧರಾಗಿ, ಯೇಸುಕ್ರಿಸ್ತರಿಗೆ ವಿಧೇಯರಾಗಲು ಅವರ ರಕ್ತದಿಂದ ಪ್ರೋಕ್ಷಿತರಾಗುವುದಕ್ಕೂ ನಮ್ಮ ತಂದೆ ದೇವರ ಪೂರ್ವಜ್ಞಾನಾನುಸಾರವಾಗಿ ಆಯ್ಕೆಯಾದವರಿಗೆ ಬರೆಯುವುದು: ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ಕ್ರಿಸ್ತ ಯೇಸುವಿನ ದಾಸನೂ ಯಾಕೋಬನ ಸಹೋದರನೂ ಆಗಿರುವ ಯೂದನು, ತಂದೆಯಾದ ದೇವರಿಗೆ ಪ್ರಿಯರಾದವವರಿಗೂ ಕ್ರಿಸ್ತ ಯೇಸು ಸುರಕ್ಷತೆಯನ್ನೂ ಅವರ ಕರೆಯುವಿಕೆಯನ್ನೂ ಹೊಂದಿದವರಿಗೆ ಬರೆಯುವ ಪತ್ರ:


ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.


ನೀವು ನನಗೆ ಕೊಟ್ಟಿದ್ದೆಲ್ಲವೂ ನಿಮ್ಮಿಂದಲೇ ಬಂದಿವೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ.


“ ‘ಆಮೇಲೆ ನಿನ್ನನ್ನು ನೀರಿನಿಂದ ತೊಳೆದೆನು; ನಿನ್ನ ರಕ್ತವನ್ನು ನಿನ್ನಿಂದ ತೊಳೆದೆನು, ನಿನಗೆ ಎಣ್ಣೆಯಿಂದ ಅಭಿಷೇಕ ಮಾಡಿದೆನು.


ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.


ನೀವು ಬಹಳ ಫಲಕೊಡುವುದರಿಂದಲೇ ನನ್ನ ಶಿಷ್ಯರಾಗಿರುವಿರಿ, ಇದರಿಂದ ನನ್ನ ತಂದೆಗೆ ಮಹಿಮೆಯಾಗುವುದು.


ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಕರೆದುಕೊಂಡು ಬಂದು, ಸ್ನಾನಮಾಡಿಸಿ,


ನೀವು ಯೆಹೋವ ದೇವರ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ, ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡುವನು.


ಯೇಸು ಅವನಿಗೆ, “ಸ್ನಾನಮಾಡಿಕೊಂಡವರು ತಮ್ಮ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು. ಅವರು ಸಂಪೂರ್ಣವಾಗಿ ಶುದ್ಧರಾಗಿದ್ದಾರೆ. ನೀವು ಸಹ ಶುದ್ಧರಾಗಿದ್ದೀರಿ. ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದರು.


ಆದರೆ ಇದು ಏನು ಹೇಳುತ್ತದೆ, “ತಕ್ಕ ವಾಕ್ಯವು ನಿನ್ನ ಬಳಿಯಲ್ಲಿ ಇದೆ, ಅದು ನಿನ್ನ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ.” ಅದೇ ನಾವು ಸಾರುವ ವಿಶ್ವಾಸದ ವಾಕ್ಯ.


ದೇವರು ನಿಮ್ಮ ವಿಷಯದಲ್ಲಿ ಅಸೂಯೆಪಡುವಂತೆ, ನಾನು ನಿಮ್ಮ ವಿಷಯದಲ್ಲಿ ಅಸೂಯೆಪಡುತ್ತಿದ್ದೇನೆ. ಹೇಗೆಂದರೆ, ನಿಮ್ಮನ್ನು ಶುದ್ಧ ಕನ್ನಿಕೆಯಾಗಿ ಕ್ರಿಸ್ತ ಯೇಸು ಎಂಬ ಒಬ್ಬರೇ ಪುರುಷನಿಗೆ ಒಪ್ಪಿಸಬೇಕೆಂದು ಆತನೊಂದಿಗೆ ನಾನು ನಿಶ್ಚಯ ಮಾಡಿದ್ದೆನಲ್ಲಾ.


ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.


ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ.


ಏಕೆಂದರೆ ಕ್ರಿಸ್ತ ಯೇಸುವು ಒಂದೇ ಬಲಿ ಅರ್ಪಣೆಯಿಂದ ಪವಿತ್ರವಾಗುವವರನ್ನು ನಿರಂತರ ಪರಿಪೂರ್ಣರನ್ನಾಗಿ ಮಾಡಿದ್ದಾರೆ.


ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ.


ಅದರಂತೆ ಯೇಸು ಸಹ ತಮ್ಮ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವುದಕ್ಕೋಸ್ಕರ ಊರ ಹೊರಗೆ ಬಾಧೆಪಟ್ಟರು.


ಆದರೆ ಈ ಗುಣಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಿನ ಪಾಪಗಳಿಂದ ಶುದ್ಧನಾದದ್ದನ್ನು ಮರೆತು ಬಿಟ್ಟಿದ್ದಾನೆ.


ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಯೆಹೋವ ದೇವರ ಮುಂದೆ ನಿಲ್ಲಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು