Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:5 - ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ಯಾವ ಜಾರನಾಗಲಿ, ಅಶುದ್ಧನಾಗಲಿ, ದೇವರಲ್ಲದವುಗಳನ್ನು ಪೂಜಿಸುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಹಕ್ಕುಬಾಧ್ಯತೆಯನ್ನು ಹೊಂದುವುದಿಲ್ಲವೆಂಬುದು ನಿಮಗೆ ಮನದಟ್ಟಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ವ್ಯಭಿಚಾರಿಗಳಿಗೂ ಅಶ್ಲೀಲ ಕೃತ್ಯಗಳಲ್ಲಿ ಭಾಗವಹಿಸುವವರಿಗೂ ಮತ್ತು ದುರಾಶೆಯುಳ್ಳವರಿಗೂ (ದುರಾಶೆ ವಿಗ್ರಹಾರಾಧನೆಯ ಒಂದು ರೂಪ) ಕ್ರಿಸ್ತಯೇಸುವಿನ ಮತ್ತು ದೇವರ ಸಾಮ್ರಾಜ್ಯದಲ್ಲಿ ಹಕ್ಕುಬಾಧ್ಯತೆ ಇಲ್ಲವೆಂದು ನಿಮಗೆ ಮನದಟ್ಟಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇವುಗಳನ್ನು ಬಿಟ್ಟು ದೇವರಿಗೆ ಉಪಕಾರಸ್ತುತಿ ಮಾಡುವದು ಉತ್ತಮ. ಜಾರರು ದುರಾಚಾರಿಗಳು ವಿಗ್ರಹಾರಾಧಕರಂತಿರುವ ಲೋಭಿಗಳು ಇವರಲ್ಲಿ ಒಬ್ಬರಿಗಾದರೂ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೇ ಇಲ್ಲವೆಂದು ನೀವು ಚೆನ್ನಾಗಿ ಬಲ್ಲಿರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇದು ನಿಮಗೆ ಚೆನ್ನಾಗಿ ತಿಳಿದಿರಲಿ: ಲೈಂಗಿಕ ಪಾಪಮಾಡುವವರಿಗೆ, ದುಷ್ಕೃತ್ಯಗಳನ್ನು ಮಾಡುವವರಿಗೆ, ಸ್ವಾರ್ಥಿಗಳಿಗೆ, ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಸ್ಥಳವೇ ಇಲ್ಲ. ಸ್ವಾರ್ಥತೆಯು ವಿಗ್ರಹಾರಾಧನೆಗೆ ಸಮಾನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹೆ ತುಮ್ಕಾ ಬರೆ ಕಳುನ್ ರ್‍ಹಾಂವ್ದಿತ್, ಲೈಂಗಿಕ್,ಬುರ್ಶಿಕಾಮಾ ಅನಿ, ಪೈಸ್ಯಾಚಿ ಅಸ್ಯಾ ಕರ್ತಲ್ಯಾಕ್ನಿ, ಕ್ರಿಸ್ತಾಚ್ಯಾ, ಅನಿ ದೆವಾಚ್ಯಾ ರಾಜ್ವಡ್ಕಿತ್ ಜಾಗೊಚ್ ನಾ ಸ್ವಾರ್ಥ್ ಪಾನ್ ಮುರ್ತಿಯಾಂಚಿ ಫುಜ್ಯಾ ಕರ್ತಲ್ಯಾಕ್ ಸಮಾ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:5
15 ತಿಳಿವುಗಳ ಹೋಲಿಕೆ  

ಮತ್ಸರ, ಕುಡಿಕತನ, ದುಂದೌತಣ ಈ ಮೊದಲಾದವುಗಳೇ. ಇಂಥ ಕೃತ್ಯಗಳನ್ನು ನಡೆಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ.


ಆದರೆ ನಿಮ್ಮೊಳಗೆ ಅನೈತಿಕತೆಯಾಗಲಿ, ಯಾವ ಅಶುದ್ಧತ್ವವಾಗಲಿ, ಇಲ್ಲವೆ ಲೋಭವಾಗಲಿ ಇರಲೇಬಾರದು. ಇವು ದೇವರ ಪರಿಶುದ್ಧರಿಗೆ ಯೋಗ್ಯವಲ್ಲ.


ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.


ಮಾಂಸಭಾವದ ಕೃತ್ಯಗಳು ಹೀಗೆ ಸ್ಪಷ್ಟವಾಗಿವೆ: ಜಾರತ್ವ, ಅಶುದ್ಧತ್ವ, ಸಡಿಲ ಜೀವನ,


ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.


ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಬೇರಾಗಿದೆ. ಕೆಲವರು ಹಣಕ್ಕಾಗಿ ಆತುರಪಟ್ಟು ನಂಬಿಕೆಯಿಂದ ದೂರಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.


ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು.


ನಿನ್ನ ನೆರೆಯವನ ಮನೆಯನ್ನು ಆಶಿಸಬೇಡ. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ.”


ನಾನು ಕೊಳ್ಳೆಯಲ್ಲಿ ಒಂದು ಶಿನಾರ್ ದೇಶದ ಒಳ್ಳೆಯ ವಸ್ತ್ರವನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಒಂದು ಬಂಗಾರದ ಗಟ್ಟಿಯನ್ನು ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ, ಬೆಳ್ಳಿಯೂ ಅದರ ಕೆಳಗೆ ಇದೆ,” ಎಂದನು.


ನಿನ್ನ ಹೃದಯವು ದೇವರ ದೃಷ್ಟಿಯಲ್ಲಿ ಸರಿಯಾಗಿಲ್ಲವಾದ್ದರಿಂದ ಈ ಸೇವೆಯಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ.


“ಆದಕಾರಣ ನಾನು ದೇವರಿಗೂ ಅವರ ಕೃಪಾವಾಕ್ಯಕ್ಕೂ ಈಗ ನಿಮ್ಮನ್ನು ಒಪ್ಪಿಸಿಕೊಡುತ್ತೇನೆ. ಆ ವಾಕ್ಯವು ನಿಮ್ಮಲ್ಲಿ ಭಕ್ತಿವೃದ್ಧಿ ಮಾಡಿ, ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಕೊಡಲು ಸಾಮರ್ಥ್ಯವುಳ್ಳದ್ದು.


ತಂದೆಯು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತಮ್ಮ ಪ್ರಿಯ ಪುತ್ರ ಕ್ರಿಸ್ತ ಯೇಸುವಿನ ರಾಜ್ಯದೊಳಗೆ ಸೇರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು