Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:11 - ಕನ್ನಡ ಸಮಕಾಲಿಕ ಅನುವಾದ

11 ನೀವು ಪಿಶಾಚನ ತಂತ್ರಗಳನ್ನು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸೈತಾನನು ನಿಮಗೆ ಒಡ್ಡುವ ಕುತಂತ್ರಗಳ ವಿರುದ್ಧ ಅಚಲರಾಗಿ ನಿಲ್ಲಲು ನೀವು ಸಮರ್ಥರಾಗುವಂತೆ ದೇವರು ನೀಡುವ ಸಕಲ ಶಸ್ತ್ರಾಸ್ತ್ರಗಳನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. ಆಗ ಸೈತಾನನ ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಡಲು ನಿಮಗೆ ಸಾಧ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ದೆವಾಚಿ ಸಗ್ಳಿ ಹಾತಿಯಾರಾ ನೆಸುನ್ ಘೆವಾ, ತನ್ನಾ ಗಿರೊ ಕರ್ತಲ್ಯಾ ಕುತಂತ್ರಾಂಚ್ಯಾ ವಿರೊಧ್ ತುಮ್ಕಾ ಝಗ್ಡೊ ಕರುಕ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:11
30 ತಿಳಿವುಗಳ ಹೋಲಿಕೆ  

ನಾವು ಹೋರಾಡುವಾಗ ಉಪಯೋಗಿಸುವ ಆಯುಧಗಳು ಲೋಕದವುಗಳಲ್ಲ. ಅವುಗಳಿಗೆ ಕೋಟೆಗಳನ್ನೇ ಕೆಡವಿ ಹಾಕುವ ದೈವಿಕ ಶಕ್ತಿ ಇದೆ.


ರಾತ್ರಿಯು ಬಹಳಷ್ಟು ಕಳೆದು ಹಗಲು ಸಮೀಪಿಸಿದೆ. ಆದ್ದರಿಂದ ನಾವು ಕತ್ತಲೆಯ ಕೃತ್ಯಗಳನ್ನು ಎಸೆದು ಬೆಳಕಿನ ಆಯುಧಗಳನ್ನು ಧರಿಸಿಕೊಳ್ಳೋಣ.


ನಾವಾದರೋ ಹಗಲಿಗೆ ಸೇರಿದವರಾಗಿ ಇರುವುದರಿಂದ ನಂಬಿಕೆ ಹಾಗೂ ಪ್ರೀತಿಯನ್ನು ಕವಚವನ್ನಾಗಿಯೂ ರಕ್ಷಣೆಯ ನಿರೀಕ್ಷೆಯನ್ನು ಶಿರಸ್ತ್ರಾಣವನ್ನಾಗಿಯೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.


ಆದುದರಿಂದ ವೈರಿಯು ದಾಳಿಮಾಡುವ ದಿನವು ಬರುವಾಗ ನೀವು ಅವನನ್ನು ಎದುರಿಸಿ ನಿಲ್ಲುವಂತೆಯು, ಎಲ್ಲವನ್ನು ಜಯಿಸಿ ಮುಗಿಸಿದ ಮೇಲೆ ನಿಲ್ಲಲು ಶಕ್ತರಾಗುವಂತೆ, ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.


ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಸೈತಾನನು ನಮ್ಮನ್ನು ವಂಚಿಸಲು ಅವಕಾಶ ಕೊಡಬಾರದು. ಅವನ ಕುತಂತ್ರಗಳನ್ನು ನಾವು ಅರಿತವರಲ್ಲವೇ?


ಆಗ, ನಾವು ಚಿಕ್ಕಮಕ್ಕಳಂತೆ ಇರುವುದಿಲ್ಲ: ಮನುಷ್ಯರ ವಿವಿಧ ಬೋಧನೆಗಳಿಂದ ಗಾಳಿಯಿಂದ ತೂರಾಡಿಕೊಳ್ಳುವಂತಾಗುವುದಿಲ್ಲ. ಮನುಷ್ಯರ ಕುಯುಕ್ತಿಗೆ, ತಂತ್ರಕ್ಕೆ, ಒಳಸಂಚಿಗೆ ಒಳಗಾಗುವುದಿಲ್ಲ. ಅವರ ಪ್ರತಿಯೊಂದು ಬೋಧನೆಯ ಗಾಳಿಯಿಂದಲೂ ತೂರಾಡಿಕೊಂಡು ಅತ್ತಿತ್ತ ಅಲೆದಾಡುವ ಚಿಕ್ಕಮಕ್ಕಳಂತೆ ಇರಬಾರದು.


ಸೃಷ್ಟಿಕರ್ತನ ಸ್ವರೂಪವನ್ನು, ತಿಳುವಳಿಕೆಯಲ್ಲಿ ನವೀಕರಣ ಹೊಂದುತ್ತಿರುವ ಆ ನೂತನ ಸ್ವಭಾವವನ್ನೇ ಧರಿಸಿಕೊಂಡವರಾಗಿದ್ದೀರಲ್ಲಾ.


ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಧರಿಸಿಕೊಳ್ಳಿರಿ. ದೈಹಿಕ ಆಶೆಗಳನ್ನು ನೆರವೇರಿಸಲು ಯೋಚಿಸಬೇಡಿರಿ.


ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿಬಿದ್ದು, ಹೇಗೆ ಮೋಸ ಹೋದಳೋ, ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತ ಯೇಸುವಿನ ಮೇಲಿರಬೇಕಾದ ಯಥಾರ್ಥತೆಯನ್ನೂ ಶುದ್ಧ ಭಕ್ತಿಯನ್ನೂ ಬಿಟ್ಟುಹೋದೀತೆಂಬ ಭಯ ನನಗುಂಟು.


ಸತ್ಯಮಾತುಗಳಿಂದಲೂ, ದೇವರ ಶಕ್ತಿಯಿಂದಲೂ, ಎಡಬಲಗೈಗಳಲ್ಲಿ ನೀತಿಯ ಆಯುಧಗಳೂ


ಥುವತೈರದಲ್ಲಿರುವ ಉಳಿದವರಿಗೆ ನಾನು ಹೇಳುವುದೇನಂದರೆ: ಅವಳ ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ಸೈತಾನನ ಆಳವಾದ ರಹಸ್ಯ ಬೋಧನೆಗಳು ಎಂದು ಹೇಳುವ ಬೋಧನೆಯನ್ನು ನೀವು ಅವಲಂಬಿಸಲಿಲ್ಲ.


ಸತ್ಯವಾದ ನೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ದೇವರ ಹೋಲಿಕೆಯ ಪ್ರಕಾರವಾಗಿರಲು ಸೃಷ್ಟಿಸಲಾದ ಹೊಸ ಸ್ವಭಾವವನ್ನು ಧರಿಸಿಕೊಳ್ಳಿರಿ.


ಇದಲ್ಲದೆ ಯೇಸು ತಮ್ಮ ಮೂಲಕ ದೇವರ ಕಡೆ ಬರುವವರನ್ನು ಪರಿಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತರಾಗಿದ್ದಾರೆ. ಏಕೆಂದರೆ ಅವರಿಗೋಸ್ಕರ ಯೇಸು ವಿಜ್ಞಾಪನೆ ಮಾಡುವುದಕ್ಕಾಗಿ ಯಾವಾಗಲೂ ಬದುಕುವವರಾಗಿದ್ದಾರೆ.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವುದಕ್ಕೂ ತಮ್ಮ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ಅತ್ಯಂತ ಹರ್ಷದೊಡನೆ ನಿರ್ದೋಷಿಗಳನ್ನಾಗಿ ನಿಲ್ಲಿಸುವುದಕ್ಕೂ ಶಕ್ತರಾಗಿರುವ


ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು.


ಮನುಷ್ಯರಿಗಾಗುವ ಶೋಧನೆಯೇ ಹೊರತು, ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲ. ಆದರೆ ದೇವರು ನಂಬಿಗಸ್ತರು. ನಿಮ್ಮ ಶಕ್ತಿಗೆ ಮೀರಿದ ಶೋಧನೆಗಳನ್ನು ಅವರು ನಿಮ್ಮ ಮೇಲೆ ಬರುವಂತೆ ಮಾಡುವುದಿಲ್ಲ. ಆದರೆ ನಿಮಗೆ ಶೋಧನೆಗಳು ಬಂದಾಗ, ಅವುಗಳನ್ನು ಜಯಿಸುವುದಕ್ಕೆ ಶಕ್ತರಾಗುವಂತೆ, ಅವುಗಳಿಂದ ತಪ್ಪಿಸಿಕೊಳ್ಳುವ ಮಾರ್ಗವನ್ನು ಮಾಡುವರು.


ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು, ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.


ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.


ಹೀಗಿರಲಾಗಿ ದೇವರಿಗೆ ಅಧೀನವಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.


ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲಿನ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವುದಕ್ಕೂ ಯೆಹೋವ ದೇವರು ಉಳಿಸಿದ ಜನಾಂಗಗಳು ಯಾವುವೆಂದರೆ:


ಆದಕಾರಣ ನಾನು ಗೋಡೆಯ ಹಿಂದೆ ಇರುವ ತಗ್ಗಿನ ಸ್ಥಳಗಳಲ್ಲಿಯೂ, ಎತ್ತರವಾದ ಸ್ಥಳಗಳಲ್ಲಿಯೂ ಜನರನ್ನು ನಿಲ್ಲಿಸಿದೆನು. ತಮ್ಮ ಖಡ್ಗಗಳನ್ನೂ, ತಮ್ಮ ಈಟಿಗಳನ್ನೂ, ತಮ್ಮ ಬಿಲ್ಲುಗಳನ್ನೂ ಹಿಡಿದುಕೊಂಡಿರುವ ಜನರನ್ನು, ಅವರವರ ವಂಶಗಳ ಪ್ರಕಾರ ನಿಲ್ಲಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು