Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:17 - ಕನ್ನಡ ಸಮಕಾಲಿಕ ಅನುವಾದ

17 ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿರಿ. ದೇವರ ವಾಕ್ಯವೆಂಬ ಪವಿತ್ರಾತ್ಮರ ಖಡ್ಗವನ್ನು ಎತ್ತಿ ಹಿಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿ; ಪವಿತ್ರಾತ್ಮರ ಕೊಡುಗೆಯಾದ ದೇವರ ವಾಕ್ಯವು ನಿಮಗೆ ಖಡ್ಗವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದೇವರ ರಕ್ಷಣೆಯನ್ನು ಶಿರಸ್ತ್ರಾಣವನ್ನಾಗಿ ಧರಿಸಿಕೊಳ್ಳಿರಿ. ಪವಿತ್ರಾತ್ಮನ ಖಡ್ಗವನ್ನು ಅಂದರೆ ದೇವರ ವಾಕ್ಯವನ್ನು ತೆಗೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ದೆವಾಚಿ ರಾಕ್ವನ್ ಟಕ್ಲ್ಯಾಕ್ ಕವಚ್ ಕರುನ್ ನೆಸುನ್ ಘೆವಾ, ಪವಿತ್ರ್ ಆತ್ಮೊ ದಿತಲೊ ದೆವಾಚಿ ಗೊಸ್ಟಿಯಾ ಮನ್ತಲೊ ಮೊಟೊ ಚಾಕು ಧರುನ್ ಘೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:17
20 ತಿಳಿವುಗಳ ಹೋಲಿಕೆ  

ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ.


ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು. ಪ್ರತೀಕಾರದ ವಸ್ತ್ರಗಳನ್ನು ಹೊದಿಕೆಯಾಗಿ ಹೊದ್ದುಕೊಂಡು, ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.


ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.” ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ.


ನಾವಾದರೋ ಹಗಲಿಗೆ ಸೇರಿದವರಾಗಿ ಇರುವುದರಿಂದ ನಂಬಿಕೆ ಹಾಗೂ ಪ್ರೀತಿಯನ್ನು ಕವಚವನ್ನಾಗಿಯೂ ರಕ್ಷಣೆಯ ನಿರೀಕ್ಷೆಯನ್ನು ಶಿರಸ್ತ್ರಾಣವನ್ನಾಗಿಯೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.


ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ. ನನ್ನನ್ನು ಆತನು ನುಣುಪಾದ ಬಾಣವನ್ನಾಗಿ ರೂಪಿಸಿ, ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.


ಆದ್ದರಿಂದ ನೀನು ದೇವರ ಕಡೆಗೆ ತಿರುಗಿಕೋ! ಇಲ್ಲದಿದ್ದರೆ ನಾನು ಶೀಘ್ರವೇ ನಿನ್ನ ಬಳಿಗೆ ಬಂದು ನನ್ನ ಇಬ್ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧಮಾಡುವೆನು.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


ಆದ್ದರಿಂದ ನಾನು ನಿಮ್ಮ ಜನರನ್ನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು, ನನ್ನ ಬಾಯಿಮಾತುಗಳಿಂದ ಅವರನ್ನು ಸಂಹರಿಸಿದ್ದೇನೆ. ನನ್ನ ನ್ಯಾಯತೀರ್ಪುಗಳು ಸೂರ್ಯನ ಹಾಗೆ ಹೊರಟವು.


ಅವರು ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿದ್ದರು. ಅವರ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಅವರ ಮುಖವು ಸೂರ್ಯನ ತೇಜಸ್ಸಿನಂತೆ ಪ್ರಕಾಶಿಸುವಂತಿತ್ತು.


ಅದಕ್ಕೆ ಯೇಸು, “ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾನೆ,’” ಎಂದರು.


ಅದಕ್ಕೆ ಯೇಸು, “ ‘ನಿನ್ನ ದೇವರಾದ ಕರ್ತದೇವರನ್ನು ಪರೀಕ್ಷಿಸಬಾರದು’ ಎಂಬುದನ್ನು ಸಹ ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.


ಅವನ ತಲೆಯ ಮೇಲೆ ಕಂಚಿನ ಶಿರಸ್ತ್ರಾಣ ಇತ್ತು. ಪರೆಪರೆಯಾಗಿ ಜೋಡಿಸಲಾಗಿದ್ದ ಕವಚವನ್ನು ಅವನು ತೊಟ್ಟುಕೊಂಡಿದ್ದನು. ಆ ಕವಚವು ಸುಮಾರು ಐವತ್ತೇಳು ಕಿಲೋಗ್ರಾಂ ತೂಕವಾಗಿತ್ತು.


ಆಗ ಸೌಲನು, “ಯೌವನಸ್ಥನೇ, ನೀನು ಯಾರ ಮಗನು?” ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು, “ನಾನು ನಿನ್ನ ಸೇವಕನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು,” ಎಂದನು.


ನಿಮ್ಮ ರಕ್ಷಣೆಯ ಸಹಾಯವನ್ನು ನನಗೆ ಗುರಾಣಿಯನ್ನಾಗಿ ಮಾಡಿದ್ದೀರಿ, ನಿಮ್ಮ ಸಹಾಯವು ನನ್ನನ್ನು ಘನವಂತನನ್ನಾಗಿ ಮಾಡಿದೆ.


ಆಗ ಅವನು, “ಜೆರುಬ್ಬಾಬೆಲನಿಗೆ ಯೆಹೋವ ದೇವರ ವಾಕ್ಯವು ಇದೇ: ‘ಪರಾಕ್ರಮದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.


ಕ್ರಿಸ್ತ ಯೇಸು ತಮ್ಮ ಸಭೆಯನ್ನು ವಾಕ್ಯದ ನೀರಿನ ಸ್ನಾನದಿಂದ ಪವಿತ್ರಗೊಳಿಸಿ, ಶುದ್ಧಮಾಡಿ,


ದೇವರ ವಾಕ್ಯದ ಒಳ್ಳೆತನವನ್ನೂ ಬರುವ ಲೋಕದ ಶಕ್ತಿಯನ್ನೂ ರುಚಿ ನೋಡಿದವರು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು