Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:5 - ಕನ್ನಡ ಸಮಕಾಲಿಕ ಅನುವಾದ

5 ಸೇವಕರೇ, ಭಯಭಕ್ತಿಯಿಂದಲೂ ಸರಳ ಹೃದಯದಿಂದ ಕ್ರಿಸ್ತನಿಗೆ ವಿಧೇಯರಾಗುವ ಪ್ರಕಾರ ಲೌಕಿಕವಾಗಿ ನಿಮ್ಮ ಯಜಮಾನನಾಗಿರುವವರಿಗೆ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸೇವಕರೇ, ನೀವು ಮಾಡುತ್ತಿರುವುದು ಕ್ರಿಸ್ತಯೇಸುವಿನ ಸೇವೆಯನ್ನೇ ಎಂದು ಭಾವಿಸಿ, ನಿಮ್ಮ ಲೌಕಿಕ ಧಣಿಗಳಿಗೆ ಭಯಭಕ್ತಿಯಿಂದಲೂ ಏಕಮನಸ್ಸಿನಿಂದಲೂ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದಾಸತ್ವದಲ್ಲಿರುವವರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸೇವಕರೇ, ನಿಮ್ಮ ಇಹಲೋಕದ ಯಜಮಾನರಿಗೆ ಭಯದಿಂದಲೂ ಗೌರವದಿಂದಲೂ ವಿಧೇಯರಾಗಿರಿ. ನೀವು ಕ್ರಿಸ್ತನಿಗೆ ವಿಧೇಯರಾಗುವಂತೆ ಯಥಾರ್ಥವಾದ ಹೃದಯದಿಂದ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಗುಲಾಮಾನು, ತುಮ್ಚ್ಯಾ ಹ್ಯಾ ಜಗಾಚ್ಯಾ ಯಜಮಾನಾಕ್ನಿ ಭಿಂಯಾನ್, ಥರ್ತರುನ್ಗೆತ್ ಅನಿ ಮಾನ್ ದಿವ್ನ್ ಖಾಲ್ತಿ ಹೊವ್ನ್ ರಾವಾ, ತುಮಿ ಕ್ರಿಸ್ತಾಕ್ ಖಾಲ್ತಿ ಹೊಲ್ಯಾ ಸಾರ್ಕೆ ಸರಳ್ ಮನಾನ್ ಖಾಲ್ತಿ ಹೊವ್ನ್ ರಾವಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:5
27 ತಿಳಿವುಗಳ ಹೋಲಿಕೆ  

ಹೆಂಡತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.


“ಮಗನು ತಂದೆಯನ್ನೂ, ದಾಸನು ಯಜಮಾನನನ್ನೂ ಸನ್ಮಾನಿಸುತ್ತಾನೆ. ಹಾಗಾದರೆ ನಾನು ತಂದೆಯಾಗಿದ್ದರೆ ನನ್ನ ಸನ್ಮಾನವೆಲ್ಲಿ? ನಾನು ಯಜಮಾನನಾಗಿದ್ದರೆ ನನಗೆ ತೋರಿಸುವ ಭಯಭಕ್ತಿಯೆಲ್ಲಿ?” “ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರು ನೀವೇ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ನಿಮ್ಮ ಹೆಸರನ್ನು ಯಾವುದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆ?’ ಎಂದು ಕೇಳುತ್ತೀರಿ.”


ನೀವು ನಿರ್ಮಲರಾಗಿಯೂ ಭಯಭರಿತರಾಗಿಯೂ ನಡೆದುಕೊಳ್ಳುವದನ್ನು ಅವರು ನೋಡಲಿ.


ಇನ್ನು ಮೇಲೆ ಅವನು ದಾಸನಾಗದೆ, ದಾಸನಿಗಿಂತ ಮೇಲಾಗಿ ಪ್ರಿಯ ಸಹೋದರನಂತಾಗಬೇಕು. ಅವನು ವಿಶೇಷವಾಗಿ ನನಗೆ ಬಹು ಪ್ರಿಯನಾಗಿದ್ದಾನೆ. ಆದರೂ ಓನೇಸಿಮನು ನಿನಗೆ ಮಾನವ ರೀತಿಯಲ್ಲಿಯೂ ಕರ್ತ ಯೇಸುವಿನಲ್ಲಿಯೂ ಒಬ್ಬ ಸಹೋದರನಾಗಿ ಇನ್ನು ಎಷ್ಟೋ ಪ್ರಿಯನಾಗಿರಬೇಕಲ್ಲವೇ.


ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ.


ಯೆಹೋವ ದೇವರೇ, ನಿಮ್ಮ ಮಾರ್ಗವನ್ನು ನನಗೆ ಬೋಧಿಸಿರಿ. ಆಗ, ನಿಮ್ಮ ಸತ್ಯದಲ್ಲಿ ನಡೆದುಕೊಳ್ಳುವೆನು; ನಿಮ್ಮ ಹೆಸರಿಗೆ ಭಯಪಡುವಂತೆ ನನಗೆ ವಿಭಾಗವಿಲ್ಲದೆ ಹೃದಯವನ್ನು ದಯಪಾಲಿಸಿರಿ.


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ದೇವರು ಕರೆದಾಗ ಒಬ್ಬನು ದಾಸನಾಗಿದ್ದರೂ, ಅವನು ಕರ್ತ ದೇವರಲ್ಲಿ ಸ್ವತಂತ್ರನು. ಅದೇ ಪ್ರಕಾರ, ಒಬ್ಬನು ಸ್ವತಂತ್ರನಾಗಿದ್ದಾಗ ಕರ್ತದೇವರ ಕರೆಹೊಂದಿದ್ದರೆ, ಅವನು ಕ್ರಿಸ್ತನಿಗೆ ದಾಸನು.


ಏಕೆಂದರೆ ನಾನು ಸಹ ಮತ್ತೊಬ್ಬ ಅಧಿಕಾರಿಯ ಕೈಕೆಳಗಿರುವವನು, ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ, ‘ಹೋಗು’ ಎಂದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ, ‘ಬಾ’ ಎಂದರೆ ಅವನು ಬರುತ್ತಾನೆ. ನನ್ನ ಸೇವಕನಿಗೆ, ‘ಇದನ್ನು ಮಾಡು,’ ಎಂದರೆ ಅವನು ಮಾಡುತ್ತಾನೆ,” ಎಂದು ಹೇಳಿದನು.


“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.


ಯೆಹೋವ ದೇವರ ದೂತನು ಆಕೆಗೆ, “ನಿನ್ನ ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಆಕೆಗೆ ಅಧೀನಳಾಗಿರು,” ಎಂದನು.


ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಳಿದು ಹೋಗದ ಪ್ರೀತಿಯಿಂದ ಪ್ರೀತಿಸುವವರೆಲ್ಲರ ಮೇಲೆ ಕೃಪೆಯಿರಲಿ.


ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನು ನೋಡುವ ಪ್ರಕಾರ, ಮತ್ತು ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರು, ನಮ್ಮನ್ನು ಕರುಣಿಸುವವರೆಗೆ ನಿರೀಕ್ಷೆಯಿಂದ ನೋಡುತ್ತಿರುವುದು.


ನನ್ನ ದೇವರೇ, ನೀವು ಹೃದಯವನ್ನು ಪರಿಶೋಧಿಸಿ ಯಥಾರ್ಥತೆಯಲ್ಲಿ ಸಂತೋಷವಾಗಿದ್ದೀರಿ, ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಇಷ್ಟಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿರುವ ನಿಮ್ಮ ಜನರು ನಿಮಗೆ ಇಷ್ಟಪೂರ್ವಕವಾಗಿ ಅರ್ಪಿಸುವುದನ್ನು ಈಗ ಕಂಡು ಸಂತೋಷಿಸಿದೆನು.


“ಆದ್ದರಿಂದ ನೀವು ಈಗ ಯೆಹೋವ ದೇವರಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಅವರನ್ನು ಸೇವಿಸಿರಿ. ನಿಮ್ಮ ಪೂರ್ವಜರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಸೇವಿಸಿದ ದೇವರುಗಳನ್ನು ತೊರೆದುಬಿಟ್ಟು ಯೆಹೋವ ದೇವರನ್ನೇ ನೀವು ಸೇವಿಸಿರಿ.


ನೀವು ತೀತನ ಮಾತುಗಳಿಗೆ ವಿಧೇಯರಾಗಿದ್ದುದ್ದನ್ನೂ ಅವನನ್ನು ಭಯಭಕ್ತಿಯಿಂದಲೂ ನಡುಗುವಿಕೆಯಿಂದಲೂ ಸ್ವೀಕರಿಸಿದ್ದನ್ನೂ, ಅವನು ಜ್ಞಾಪಕಕ್ಕೆ ತಂದುಕೊಂಡಾಗ, ನಿಮ್ಮನ್ನು ಅತ್ಯಧಿಕವಾಗಿ ಪ್ರೀತಿಸುವವನಾಗಿದ್ದಾನೆ.


ನಾನು ನಿಮ್ಮ ಬಳಿಗೆ ಬಂದಾಗ ಬಲಹೀನನೂ ಬಹಳವಾಗಿ ಭಯಪಟ್ಟು ನಡುಗುವವನೂ ಆಗಿದ್ದೆನು.


ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು.


“ಕಣ್ಣು ದೇಹಕ್ಕೆ ದೀಪವಾಗಿದೆ. ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಬೆಳಕಾಗಿರುವುದು.


ನನ್ನ ಸ್ವಂತ ಜನರಾದ ನನ್ನ ಯೆಹೂದ್ಯ ಸಹೋದರರಿಗಾಗಿ, ಸಾಧ್ಯವಾದರೆ ನಾನೇ ಕ್ರಿಸ್ತ ಯೇಸುವಿನಿಂದ ದೂರಹೋಗಿ ಶಾಪಗ್ರಸ್ತನಾಗಲು ಸಿದ್ಧನಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು